ಖಾತೆ ಹಂಚಿಕೆ ಬೆನ್ನಲ್ಲೆ ಭುಗಿಲೆದ್ದ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರ ರಾಮಲಿಂಗಾ ರೆಡ್ಡಿ ?

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸಂಪುಟದ ಎಲ್ಲಾ 13 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಪ್ರಕ್ರಿಯೆಯಲ್ಲಿ ಅನೇಕ ಸಚಿವರಿಗೆ ತಾವು ಬಯಸಿದ ಖಾತೆ ಸಿಗದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಬೆಂಗಳೂರು ನಗರಾಭಿವೃದ್ಧಿ (ಜಿಬಿಎ) ಇಲಾಖೆ ಕೈತಪ್ಪಿದ ಹಿನ್ನೆಲೆ ಸಚಿವ ರಾಮಲಿಂಗಾ ರೆಡ್ಡಿ ಅವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗ್ತಿದೆ. ‌ಬೆಂಗಳೂರು ನಗರಾಭಿವೃದ್ಧಿ ಕೈತಪ್ಪಿದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಖಾತೆ […]

Continue Reading

ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್‌

ಸುದ್ದಿ ಸಂಗ್ರಹ ಬೆಂಗಳೂರುಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಭೇಟಿಯ ಬೆನ್ನಲ್ಲೆ, ಇಂದು ಸಂಜೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೊಡ್ಡಗೌಡರ ಅಧಿಕೃತ ನಿವಾಸಕ್ಕೆ ಖುದ್ದಾಗಿ ಆಗಮಿಸಿದ ಡಿ.ಕೆ ಶಿವಕುಮಾರ್, ಹಿರಿಯ ಮುತ್ಸದ್ದಿ ನಾಯಕನಿಗೆ ಗೌರವ ಸಲ್ಲಿಸಿದರು. ಹೆಚ್.ಡಿ ದೇವೇಗೌಡರನ್ನು ಭೇಟಿಯಾದ ಡಿ.ಕೆ ಶಿವಕುಮಾರ್, ಅವರ ಕಾಲಿಗೆ ಬಿದ್ದು ನಮಸ್ಕಾರ ಮಾಡಿ […]

Continue Reading

ಬಿಎಸ್‌ವೈ ನಿವಾಸಕ್ಕೆ ಭೇಟಿ: ಕಾರ್ಯಕ್ರಮಕ್ಕೆ ಬರುವಂತೆ ಡಿಕೆಶಿ ಆಹ್ವಾನ

ಸುದ್ದಿ ಸಂಗ್ರಹ ಬೆಂಗಳೂರುಇನ್ನೇನು ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿಯಾಗಿ ಗದ್ದುಗೆಗೇರಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನವೇ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಅಧಿಕೃತ ನಿವಾಸ ‘ಧವಳಗಿರಿ’ಗೆ ಆಗಮಿಸಿದ ಡಿ.ಕೆ ಶಿವಕುಮಾರ್ ಪ್ರೀತಿಯಿಂದ ಪ್ರಮಾಣವಚನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ಇದೆ ವೇಳೆ ರಾಜ್ಯದಲ್ಲಿ ಹೊಸ ಸರ್ಕಾರವನ್ನು ಯಶಸ್ವಿಯಾಗಿ ನಡೆಸಲು ಮತ್ತು ರಾಜ್ಯದ ಅಭಿವೃದ್ಧಿಗೆ ವಿರೋಧ ಪಕ್ಷದ […]

Continue Reading

ನಾಳೆ ಬೆಳಗ್ಗೆ 10 ಗಂಟೆಗೆ ಸಚಿವ ಸಂಪುಟ ಪಟ್ಟಿ ರಿಲೀಸ್: ಡಿಕೆಶಿ

ಸುದ್ದಿ ಸಂಗ್ರಹ ಬೆಂಗಳೂರುನಾಳೆ ಬೆಳಗ್ಗೆ 10 ಗಂಟೆಗೆ ಸಚಿವ ಸಂಪುಟ ಪಟ್ಟಿ ಬಿಡುಗಡೆ ಆಗಲಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ ಶಿವಕುಮಾರ ತಿಳಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಗ್ಗೆ 10ಕ್ಕೆ ಕ್ಯಾಬಿನೆಟ್ ಫೈನಲ್ ಮಾಡ್ತಾರೆ. ಮಾಧ್ಯಮದಲ್ಲಿ ಸಂಭಾವ್ಯ ಸಚಿವರ ಹೆಸರು ಬರ್ತಿರೋದು ಅಧಿಕೃತವಲ್ಲ. ನಾಳೆ 10 ಗಂಟೆಗೆ ದೆಹಲಿಯಿಂದ ಲಿಸ್ಟ್ ಕಳಿಸ್ತಾರೆ. ಅದನ್ನ ನಾವೇ ಬಿಡುಗಡೆ ಮಾಡುತ್ತೆವೆ ಎಂದು ಮಾಹಿತಿ ನೀಡಿದರು. ಅಲ್ಲದೆ ಯಾರಿಗೆಲ್ಲಾ ಆಹ್ವಾನ […]

Continue Reading

ಪ್ರಧಾನಿ ಮೋದಿ ಮಾತಿನ ಮಲ್ಲ, ಅವರಿಗೆ ಜನರ ಕಾಳಜಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ಸುದ್ದಿ ಸಂಗ್ರಹ ಕಲಬುರಗಿಪ್ರಧಾನಿ ನರೇಂದ್ರ‌ ಮೋದಿ ಬರಿ ಮಾತಿನ‌ ಮಲ್ಲ, ಅವರಿಗೆ ಜನರ ಕಾಳಜಿ ಇಲ್ಲ. ಕೇಂದ್ರ ಸರ್ಕಾರ ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ‌ಖರ್ಗೆ ಟೀಕಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್‌, ಸಿಲಿಂಡರ್ ದರ ದಿನದಿಂದ ದಿನಕ್ಕೆ ಜಾಸ್ತಿ ಮಾಡುತ್ತಿದ್ದಾರೆ. ದರ ಏರಿಕೆಯಿಂದ ಜನರ ಮೇಲೆ ಹೊರೆಯಾಗುತ್ತಿದೆ. ಜನ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಆದರೆ ದೇಶದ ಬಗ್ಗೆ ಅವರಿಗೆ ಕಾಳಜಿ ಇಲ್ಲ. ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. […]

Continue Reading

ಡಿಕೆಶಿ ನೇತೃತ್ವದಲ್ಲಿ ಹೊಸ ಸಚಿವ ಸಂಪುಟ ರಚನೆ: ಖರ್ಗೆ ಹೇಳಿದ್ದಿಷ್ಟು

ಸುದ್ದಿ ಸಂಗ್ರಹ ಕಲಬುರಗಿನಿಯೋಜಿತ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆ ಕುರಿತು ಯಾವುದೆ ಪ್ರಸ್ತಾವನೆ ಈವರೆಗೆ ಕೇಂದ್ರ ನಾಯಕತ್ವದ ಮುಂದೆ ಬಂದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರವಿವಾರ ಹೇಳಿದ್ದಾರೆ. ಜೂನ್ 3ರಂದು ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದ ನಂತರ ಸಮಾಲೋಚನೆ ನಡೆಸಿ, ಸಚಿವರು, ಉಪ ಮುಖ್ಯಮಂತ್ರಿಗಳು ಮತ್ತು ಪ್ರಮುಖ ನೇಮಕಾತಿಗಳ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಸರ್ಕಾರ ರಚನೆ ಪ್ರಕ್ರಿಯೆಯ ವಿವಿಧ ಅಂಶಗಳ ಕುರಿತು ಚರ್ಚೆಗಳು ನಡೆಯುತ್ತಿವೆ. […]

Continue Reading

ಸಮಾಜದ ಕೆಡುಕು ತಿದ್ದುವ ಶಕ್ತಿ ಶಿಕ್ಷಣಕ್ಕಿದೆ: ಜ್ಞಾನಪ್ರಕಾಶ ಸ್ವಾಮೀಜಿ

ಸುದ್ದಿ ಸಂಗ್ರಹ ಶಹಾಬಾದ್ಸಮಾಜದಲ್ಲಿನ ಕೆಡುಕು ತಿದ್ದುವ ಶಕ್ತಿ ಶಿಕ್ಷಣಕ್ಕಿದೆ, ಗುಡಿ–ಗುಂಡಾರಗಳಿಗಿಲ್ಲ. ಅವು ನಮ್ಮನ್ನು ಕಣ್ಣು ಮುಚ್ಚಿಸುತ್ತವೆ ಗ್ರಂಥಾಲಯ ನಮ್ಮ ಕಣ್ಣನ್ನು ತೆರೆಯುತ್ತದೆ ಎಂದು ಮೈಸೂರಿನ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. ನಗರದ ರಾಯಲ್ ಫಂಕ್ಷನ್‌ ಹಾಲ್‌ನಲ್ಲಿ ಮಂಗಳವಾರ ಡಾ.ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿ ನಿಮಿತ್ತ ಆಯೋಜಿಸಲಾಗಿದ್ದ ‘ಅಂಬೇಡ್ಕರ್‌ ಹಬ್ಬ’ದಲ್ಲಿ ಭಾಗವಹಿಸಿ ಮಾತನಾಡಿದರು. ಉಪನ್ಯಾಸಕರಾಗಿ ಆಗಮಿಸಿದ ವಿಜಯಕುಮಾರ ಸಾಲಿಮನಿ ಮಾತನಾಡಿ, ಜಗತ್ತು ಅಂಬೇಡ್ಕರ್‌ ಅವರ ಜ್ಞಾನವನ್ನು ನೋಡುತ್ತಿದೆ. ಆದರೆ, ನಮ್ಮ ಭಾರತದಲ್ಲಿ ಅವರ ಜಾತಿಯನ್ನು ನೋಡುತ್ತಿರುವುದು ಬದಲಾಗಬೇಕು ಎಂದರು. […]

Continue Reading

ಶಹಾಬಾದ್: ಡಾ.ಅಂಬೇಡ್ಕರ್ ಹಬ್ಬ ನಾಳೆ

ಸುದ್ದಿ ಸಂಗ್ರಹ ಶಹಾಬಾದ್ಸಂವಿದಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ರವರ 135ನೇ ಜಯಂತ್ಯೋತ್ಸವವನ್ನು ಅಂಬೇಡ್ಕರ್ ಹಬ್ಬ ಎಂದು ಮೇ.26 ರಂದು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ದಲಿತ ಮುಖಂಡ ಮರಿಯಪ್ಪ ಹಳ್ಳಿ ಮತ್ತು ಸಮಿತಿಯ ಅಧ್ಯಕ್ಷ ರಾಜೇಶ ಯನಗುಂಟಿಕರ ಹೇಳಿದರು. ನಗದದ ಪ್ರವಾಸಿ ಮಂದಿರದಲ್ಲಿ ಡಾ.ಬಿ.ಆರ ಅಂಬೇಡ್ಕರ್ 135ನೇ ಜಯಂತ್ಯೋತ್ಸವ ಸಮಿತಿ ವತಿಯಿಂದ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಮಧ್ಯಾಹ್ನ 2 ಗಂಟಗೆ ಬಸವೇಶ್ವರರ ವೃತ್ತದಿಂದ ಹೈ ಸ್ಕೂಲ್ ಮೈದಾನದವರೆಗೆ (ಡಿ.ಜೆ ಹೊರತುಪಡಿಸಿ) ಸಾಂಸ್ಕೃತಿಕ ಕಲಾ ತಂಡದಿಂದ […]

Continue Reading

ಕೊರೋನಾ ಬಳಿಕ ಎಬೋಲಾ ಆತಂಕ: ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಸುದ್ದಿ ಸಂಗ್ರಹ ಬೆಂಗಳೂರುವಿಶ್ವದಾದ್ಯಂತ ಕೊರೋನಾ ಬಳಿಕ ಇದೀಗ ಎಬೋಲಾ ಆತಂಕ ಎದುರಾಗಿದ್ದು, ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಎಬೋಲಾ ಆತಂಕದ ಹಿನ್ನೆಲೆ ವಿಶ್ವಸಂಸ್ಥೆ ತುರ್ತು ಆರೋಗ್ಯ ಪರಿಸ್ಥಿತಿ ಘೋಷಣೆ ಮಾಡಿದೆ. ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಎಚ್ಚರಿಕೆ ಸಂದೇಶ ರವಾನಿದೆ. ಈ ನಿಟ್ಟಿನಲ್ಲಿ ಕೇಂದ್ರದ ಸೂಚನೆ ಮೇರೆಗೆ ರಾಜ್ಯ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಬಿಡುಗಡೆ ಮಾಡಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಎಬೋಲಾ ಭಾದಿತ ದೇಶಗಳಿಂದ ಬರುವ ಜನರ ಮೇಲೆ […]

Continue Reading

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರಿ ಅವಘಡ: ರನ್‌ವೇಗೆ ತಾಗಿದ ಏರ್ ಇಂಡಿಯಾ ವಿಮಾನದ ಹಿಂಭಾಗ

ಸುದ್ದಿ ಸಂಗ್ರಹ ಬೆಂಗಳೂರುದೆಹಲಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಬಾಲವು ನೆಲಕ್ಕೆ ಅಪ್ಪಳಿಸಿದ್ದು, ಭಾರಿ ಅವಘಡ ತಪ್ಪಿದೆ. ಇಂದು ಬೆಳಿಗ್ಗೆ (ಮೆ.21) 181 ಪ್ರಯಾಣಿಕರನ್ನು ಹೊತ್ತು ದೆಹಲಿಯಿಂದ ಆಗಮಿಸುತ್ತಿದ್ದ ಏರ್ ಇಂಡಿಯಾ AI2651 ವಿಮಾನವು ಬೆಂಗಳೂರಿನಲ್ಲಿ ಲ್ಯಾಂಡಿಂಗ್ ಆಗುತ್ತಿತ್ತು. ಈ ವೇಳೆ ಇನ್ನೊಂದು ವಿಮಾನ ಅದೆ ರನ್‌ವೇಯಿಂದ ಟೇಕ್-ಆಫ್ ಆಗುತ್ತಿತ್ತು. ಇದರಿಂದಾಗಿ ಗಾಳಿಯಲ್ಲಿ ಅಸಮತೋಲನ ಉಂಟಾದಂತೆ ಕಂಡುಬಂದಿದೆ. ಕೂಡಲೆ ಪೈಲಟ್ ಮುನ್ನೆಚ್ಚರಿಕೆ ಕ್ರಮವಾಗಿ ಲ್ಯಾಂಡಿಂಗ್ ಕೈಬಿಟ್ಟು ವಿಮಾನವನ್ನು ಮತ್ತೆ ಟೇಕ್ ಆಫ್ […]

Continue Reading