ಭಕ್ತಿ, ಶಕ್ತಿಯ ಸಾಂಕೇತಿಕ ನೃತ್ಯಗಳೆ ಗರ್ಬಾ, ದಾಂಡಿಯಾ ನೃತ್ಯ

ಕಲಬುರಗಿ: ಯಾವುದೆ ಉಪಕರಣವಿಲ್ಲದೃ ಕೈ ಚಲನೆಯ ಮೂಲಕ ಮಾಡುವ ಗರ್ಬಾ ನೃತ್ಯ ಭಕ್ತಿಯ ಸಾಂಕೇತಿಕವಾದರೆ, ಎರಡು ಕೋಲುಗಳಿಂದ ಮಾಡುವ ಶಕ್ತಿಯ ಸಂಕೇತ ತೋರಿಸುವುದು ದಾಂಡಿಯಾ ನೃತ್ಯವಾಗಿದೆ. ಇದು ದುರ್ಗಾ ದೇವಿಯು ಮಹಿಷಾಸುರನ ಮೇಲೆ ವಿಜಯ ಸಾಧಿಸಿದ ಪೌರಾಣಿಕ ಹಿನ್ನೆಲೆಯೇ ಈ ನವರಾತ್ರಿ ಉತ್ಸವದ ವಿಶೇಷ ಎಂದು ಅಂಡಗಿ ಪ್ರತಿಷ್ಠಾನ ಕಾರ್ಯದರ್ಶಿ ರೇಖಾ ಅಂಡಗಿ ಹೇಳಿದರು. ನಗರದ ಬಸವೇಶ್ವರ ಆಸ್ಪತ್ರೆಯ ಎದುರುಗಡೆಯ ವಿದ್ಯಾನಗರ ಕಾಲೋನಿಯ ರಾಜ್ವಿಕಾ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ದಾಂಡಿಯಾ ಮತ್ತು ಗರ್ಬಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ […]

Continue Reading

ವೈದ್ಯಕೀಯ ಕ್ಷೇತ್ರದಲ್ಲಿ ಫಾರ್ಮಸಿಸ್ಟ್‌ ಪಾತ್ರ ಅನನ್ಯ

ಕಲಬುರಗಿ: ನಾಗರಿಕರ ಆರೋಗ್ಯದ ಬಗ್ಗೆ ಕಾಳಜಿ ಮತ್ತು ಸುರಕ್ಷತೆ ಜೊತೆಗೆ ಔಷಧಗಳ ಬಗ್ಗೆ ಸಲಹೆ-ಸೂಚನೆ ನೀಡುವ ಔಷಧ ತಜ್ಞರು ಆರೋಗ್ಯ ರಕ್ಷಕರಾಗಿ ಕಾರ್ಯನಿರ್ವಹಿಸುತ್ತಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಫಾರ್ಮಸಿಸ್ಟ್‌ ಕೊಡುಗೆ ಅನನ್ಯವಾಗಿದೆ ಎಂದು ಫಾರ್ಮಸಿಸ್ಟ್‌ ಶಿವರಾಜ ಲೋಹಾರ್ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ಬಸವಗಂಗಾ ಮೆಡಿಕಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಫಾರ್ಮಸಿಸ್ಟ್‌ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಕರೋನಾದ ಸಂದಿಗ್ಧ ಪರಿಸ್ಥಿಯಲ್ಲಿ ಕರೋನಾ ರೋಗಿಗಳು ಮತ್ತು ಸಾಮಾನ್ಯ […]

Continue Reading

ಶಹಾಬಜಾರ: ಯುಪಿಎಚ್‌ಸಿಯಲ್ಲಿ ವಿಶ್ವ ರೇಬಿಸ್ ದಿನಾಚರಣೆ

ಕಲಬುರಗಿ: ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ‘ವಿಶ್ವ ರೇಬಿಸ್ ದಿನಾಚರಣೆ’ ಜರುಗಿತು. ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಮಾತನಾಡಿ, ರೇಬಿಸ್ ಕಾಯಿಲೆಯು ಪ್ರಾಣಿಗಳಿಂದ ಮಾನವರಿಗೆ ಬರುವ ಕಾಯಿಲೆಯಾಗಿದೆ. ಜ್ವರ, ಆಯಾಸ, ತುರಿಕೆ, ಕೆಮ್ಮು, ಗಂಟಲು ನೋವು, ನರಗಳಲ್ಲಿ ನೋವು, ವಾಂತಿ ಇವು ಕಾಯಿಲೆಯ ಲಕ್ಷಣಗಳಾಗಿವೆ. ಇದು ತೊಂದರೆ ಉಂಟುಮಾಡುತ್ತದೆ. ಇದಕ್ಕೆ ಸೂಕ್ತ ಚಿಕಿತ್ಸೆ ಪಡೆಯಬೇಕು ಮತ್ತು ಮುಂಜಾಗ್ರತೆ ವಹಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಹಾಗೂ […]

Continue Reading

ರಾಷ್ಟ್ರದ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರವಾಸೋದ್ಯಮದ ಪಾತ್ರ ಅನನ್ಯ: ಎಚ್.ಬಿ ಪಾಟೀಲ

ಕಲಬುರಗಿ: ದೇಶ ಸುತ್ತು, ಕೋಶ ಓದು ಎಂಬ ಮಾತಿನಂತೆ ಸುಕ್ಷೇತ್ರಗಳು, ಸ್ಮಾರಕಗಳು, ನೈಸರ್ಗಿಕ ತಾಣಗಳು, ಐತಿಹಾಸಿಕ ಸ್ಥಳಗಳಿಗೆ ತೆರಳಿ ವೀಕ್ಷಣೆ ಮಾಡುವುದರಿಂದ ನಮ್ಮ ಇತಿಹಾಸ, ಪರಂಪರೆ, ಕಲೆ, ಸಾಹಿತ್ಯ, ಸಂಸ್ಕೃತಿ ತಿಳಿಯುತ್ತದೆ. ಪ್ರವಾಸೋದ್ಯಮದಿಂದ ಪ್ರತ್ಯಕ್ಷ ಹಾಗೂ ಪರೋಕ್ಷ ಉದ್ಯೋಗಗಳನ್ನು ದೊರೆಯುತ್ತವೆ. ರಾಷ್ಟ್ರದ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರವಾಸೋದ್ಯಮದ ಪಾತ್ರ ಮಹತ್ವದ್ದಾಗಿದೆ ಎಂದು ಅರ್ಥಶಾಸ್ತ್ರದ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ನಾಕಾ ಸಮೀಪದ ಐತಿಹಾಸಿಕ ಹಾಗೂ ಬಹು ಪುರಾತನ ಸ್ಥಂಬ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ಸಮಾಜ ಸೇವಾ […]

Continue Reading

ಸುರಕ್ಷಿತ ಗರ್ಭನಿರೋಧಕ ಆಯ್ಕೆಗಳ ಬಗ್ಗೆ ಜಾಗೃತಿ ಅಗತ್ಯ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಜನನ ನಿಯಂತ್ರಣದಲ್ಲಿ ಸುರಕ್ಷಿತ ಗರ್ಭನಿರೋಧಕ ಆಯ್ಕೆಗಳು ಮತ್ತು ವಿಧಾನಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿನ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಕೇಂದ್ರ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ “ವಿಶ್ವ ಗರ್ಭನಿರೋಧಕ/ಜನನ ನಿಯಂತ್ರಣ ದಿನಾಚರಣೆ”ಯಲ್ಲಿ ಮಾತನಾಡಿದ ಅವರು,ಜನಸಂಖ್ಯಾ ಸ್ಪೋಟದಿಂದ ತತ್ತರಿಸಿರುವ ವಿಶ್ವದ ಬಹುತೇಕ ರಾಷ್ಟ್ರಗಳಿಗೆ ಜನನ ನಿಯಂತ್ರಣ, ಕುಟುಂಬ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಅಗತ್ಯವಾಗಿದೆ ಎಂದರು‌. ಅನಪೇಕ್ಷಿತ ಗರ್ಭಧಾರಣೆಗಳನ್ನು […]

Continue Reading

ಪರಿಸರದ ಆರೋಗ್ಯ ಕಾಪಾಡುವುದು ಅಗತ್ಯ: ಎಚ್.ಬಿ ಪಾಟೀಲ

ಕಲಬುರಗಿ: ಪರಿಸರ ಸ್ವಚ್ಛತೆ ಕಾಪಾಡುವುದು, ವ್ಯಾಪಕವಾಗಿ ಗಿಡಗಳನ್ನು ನೆಟ್ಟು ಪೋಷಿಸುವುದು, ಮಾಲಿನ್ಯ ನಿಯಂತ್ರಿಸಿ ಪರಿಸರದ ಆರೋಗ್ಯ ಕಾಪಾಡುವುದು ಅಗತ್ಯವಾಗಿದೆ ಎಂದು ಉಪನ್ಯಾಸಕ, ಪರಿಸರ ಪ್ರೇಮಿ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ವಿಶ್ವ ಪರಿಸರ ಆರೋಗ್ಯ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿನ ಸಕಲ ಜೀವರಾಶಿಗಳು ಉಳಿದು, ಸಮೃದ್ಧವಾಗಿ ಬೆಳವಣಿಗೆಯಾಗಬೇಕಾದರೆ ಪರಿಸರದ ಪಾತ್ರ ಪ್ರಮುಖವಾಗಿದೆ ಎಂದರು. ವಿವಿಧ […]

Continue Reading

ನಿಸ್ವಾರ್ಥ ಸೇವೆಯಿಂದ ಸಮಾಜ ಪರಿವರ್ತಿಸಲು ಸಾಧ್ಯ

ಸುದ್ದಿ ಸಂಗ್ರಹ ಶಹಬಾದ ಸಮಾಜದಲ್ಲಿ ಪ್ರತಿಯೊಬ್ಬರು ನಿಸ್ವಾರ್ಥ ಸೇವೆ ಸಲ್ಲಿಸಿದಾಗ ಮಾತ್ರ ಸಮಾಜ ಪರಿವರ್ತಿಸಲು ಸಾಧ್ಯ ಎಂದು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಹನುಮಂತಪ್ಪ ಬಿ ಸೇಡಂಕರ ಹೇಳಿದರು. ನಗರದ ಹೈ.ಕ ಶಿಕ್ಷಣ ಸಂಸ್ಥೆಯ ಎಸ್.ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಇಂದು ತೆಗೆದುಕೊಳ್ಳುವ ನಿರ್ಧಾರ, ನಾಳೆ ಸಮಾಜ ಪರಿವರ್ತಿಸುವ ಶಕ್ತಿ ಹೊಂದಿದೆ. ಸೇವಾ ಮನೋಭಾವವು ಬದುಕನ್ನು ಶ್ರೀಮಂತಗೊಳಿಸುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹೈ.ಕ ಶಿಕ್ಷಣ ಸಂಸ್ಥೆಯ […]

Continue Reading

ಆರ್ಥಿಕ ಬೆಳವಣಿಗೆಗೆ ಮೇಕ್ ಇನ್ ಇಂಡಿಯಾ ಪೂರಕ

ಕಲಬುರಗಿ:  ಭಾರತದಲ್ಲಿ ವಿನ್ಯಾಸ, ತಯಾರಿಕೆ ಮತ್ತು ಜೋಡಣೆಯನ್ನು ಉತ್ತೇಜಿಸಲು, ವ್ಯಾಪಾರ-ವ್ಯವಹಾರ ವೃದ್ಧಿಗೆ  ಭಾರತ ಸರ್ಕಾರವು ಪ್ರಾರಂಭಿಸಿದ ಮೇಕ್ ಇನ್ ಇಂಡಿಯಾ ಯೋಜನೆ ಪೂರಕವಾಗಿದೆ ಎಂದು ಜಿಲ್ಲಾ ಸಣ್ಣ ಕೈಗಾರಿಕೆಗಳ ಮಾಲೀಕರ ಸಂಘದ ಅಧ್ಯಕ್ಷ ಭೀಮಾಶಂಕರ ಪಾಟೀಲ ಹೇಳಿದರು. ನಗರದ ಹೊಸ ಜೇವರ್ಗಿ ರಸ್ತೆಯ ಗೆಟ್ಸ್ ಡಿಗ್ರಿ ಕಾಲೇಜಿನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ಮೇಕ್ ಇನ್ ಇಂಡಿಯಾದ ದಶಮಾನೋತ್ಸವ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ಉತ್ಪಾದನೆಯಲ್ಲಿ ಹೂಡಿಕೆ ಹೆಚ್ಚಿಸುವುದು, […]

Continue Reading

ಅತಿವೃಷ್ಟಿ ಪೀಡಿತ ಪ್ರದೇಶ ಘೋಷಣೆಗೆ ಆಗ್ರಹ

ಸುದ್ದಿ ಸಂಗ್ರಹ ಶಹಾಬಾದ ಅತಿಯಾದ ಮಳೆಯಿಂದ ರೈತರು ಬೆಳೆದ ತೊಗರಿ, ಹೆಸರು, ಉದ್ದು ಸೇರಿದಂತೆ ಇತರ ಎಲ್ಲಾ ಬೆಳೆಗಳು ಸಂಪೂರ್ಣ ನಷ್ಟವಾಗಿದೆ, ಹೀಗಾಗಿ ಕಲಬುರಗಿ ಜಿಲ್ಲೆಯು ಅತಿವೃಷ್ಟಿ ಪೀಡಿತ ಜಿಲ್ಲೆ ಎಂದು ಘೋಷಿಸಿ ಪರಿಹಾರ ನೀಡಬೇಕು ಎಂದು ಶಹಾಬಾದ್ ಮಂಡಲ ಅಧ್ಯಕ್ಷ ನಿಂಗಣ್ಣ ಹುಳುಗೋಳ್ಕರ್ ಆಗ್ರಹಿಸಿದರು.  ನಗರದ ಬಸವೇಶ್ವರ ವೃತ್ತದಲ್ಲಿ ಬುಧುವಾರ ಬಿಜೆಪಿ ಪಕ್ಷ, ರೈತ ಮೋರ್ಚಾದ ವತಿಯಿಂದ ಅತಿವೃಷ್ಟಿ ಪೀಡಿತ ಪ್ರದೇಶ ಘೋಷಣೆಗೆ ಆಗ್ರಹಿಸಿ ಪ್ರತಿಭಟನೆಯಲ್ಲಿ ಮಾತನಾಡಿ, ರೈತರಿಗೆ ಸೇರಬೇಕಾದ ಹಳೆಯ ಪರಿಹಾರ ಬಾಕಿಯನ್ನು ಬಿಡುಗಡೆ […]

Continue Reading

ಆಯುರ್ವೇದ ಸಮಗ್ರ ಆರೋಗ್ಯ ಪದ್ದತಿ: ಡಾ.ಸದಾನಂದ ಪಾಟೀಲ

ಕಲಬುರಗಿ: ಸರ್ವ ಕಾಯಿಲೆಗೆ ಮದ್ದನ್ನು ನೀಡುವ ಆಯುರ್ವೇದ ಪದ್ಧತಿ ಸಮಗ್ರ ಆರೋಗ್ಯ ವ್ಯವಸ್ಥೆಯಾಗಿದ್ದು, ಎಲ್ಲರು ಆಯುರ್ವೇದ ಪದ್ಧತಿಯತ್ತ ಮುಖ ಮಾಡಬೇಕಾದದ್ದು ಇಂದಿನ ಅಗತ್ಯವಾಗಿದೆ ಎಂದು ಖ್ಯಾತ ಆಯುರ್ವೇದ ತಜ್ಞ ವೈದ್ಯ ಡಾ.ಸದಾನಂದ ಪಾಟೀಲ ಅಭಿಮತ ವ್ಯಕ್ತಪಡಿಸಿದರು. ನಗರದ ಶಹಾಬಾದ್ ರಿಂಗ್ ರಸ್ತೆಯ ಸಮೀಪದ ಚರಕ ಆಯುರ್ವೇದ ಆಸ್ಪತ್ರೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಜರುಗಿದ ‘10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ’ ಮತ್ತು ‘ಧನ್ವಂತರಿ ಜಯಂತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಆಧುನಿಕ ಒತ್ತಡ […]

Continue Reading