ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಕೆ ಕಡ್ಡಾಯ, ಏನೇನು ದಾಖಲೆ ಕೊಡಬೇಕು ?

ಸುದ್ದಿ ಸಂಗ್ರಹ ಬೆಂಗಳೂರುಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚು ಪ್ರಖ್ಯಾತಿ ಪಡೆದಿದ್ದ ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಲ್ಲಿ ಮೇಜರ್ ಸರ್ಜರಿಗೆ ರಾಜ್ಯ ಸರ್ಕಾರ ಮುಂದಾಗಿದೆ.‌ ಎರಡು ಯೋಜನೆಗಳಲ್ಲಿ ನಕಲಿ ಫಲಾನುಭವಿಗಳನ್ನು ಪತ್ತೆ ಹಚ್ಚುವುದಕ್ಕಾಗಿ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಕೆ ಮಾಡುವದಕ್ಕೆ ಕಡ್ಡಾಯ ಮಾಡಿದೆ. ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಫಲಾನುಭವಿಗಳು ಸೌಲಭ್ಯ ಪಡೆಯಬೇಕಾದರೆ ಅರ್ಜಿ ಸಲ್ಲಿಕೆ ಮಾಡುವುದು ಕಡ್ಡಾಯವಾಗಿದೆ. ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಮಾಡುವದಕ್ಕೆ ಕಾರಣ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಯಲ್ಲಿ ನಕಲಿ ಫಲಾನುಭವಿಗಳು ಇದ್ದಾರೆ ಎಂಬುದು […]

Continue Reading

ಶಹಾಬಾದ್: ಆಸ್ತಿಗಾಗಿ ಅತ್ತೆಯ ಮಗನನ್ನು ಕೊಂದ ವ್ಯಕ್ತಿ

ಸುದ್ದಿ ಸಂಗ್ರಹ ಶಹಾಬಾದ್ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಶಹಾಬಾದ್ ಮರಗೋಳ ಕಾಲೇಜ್ ಹತ್ತಿರದ ಬೀರಲಿಂಗೇಶ್ವರ ದೇವಸ್ಥಾನ ಮಹಾದ್ವಾರದ ಮುಂದೆ ಶುಕ್ರವಾರ ಸಂಜೆ ನಡೆದಿದೆ. ನಾಗರಾಜ (40) ಕೊಲೆಯಾದವರಾಗಿದ್ದು, ತಿರುಪತಿ ದೇವಕರ ಕೊಲೆ ಆರೋಪಿಯಾಗಿದ್ದು. ತಿರುಪತಿ, ತನ್ನ ಸೋದರತ್ತೆಯ ಆಸ್ತಿಗಾಗಿ ಜೇವರ್ಗಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದ. ಆದರೆ ಇದಕ್ಕೆ ಅತ್ತೆಯ ಮಗ ನಾಗರಾಜ ಅಡ್ಡಿಯಾಗಿದ್ದ. ಇದರಿಂದ ಇತ್ತೀಚೆಗೆ ತೀವ್ರ ಕುಪಿತಗೊಂಡಿದ್ದ ತಿರುಪತಿ ನಾಗರಾಜನನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು […]

Continue Reading

ಕಲಬುರಗಿ ಜಿಲ್ಲೆಯಲ್ಲಿ ಮೇ, ಜೂನ್ ತಿಂಗಳ ಪಡಿತರ ಜೂನ್ ತಿಂಗಳಲ್ಲೆ ವಿತರಣೆ

ಸುದ್ದಿ ಸಂಗ್ರಹ ಕಲಬುರಗಿಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಪಡಿತರ ಚೀಟಿದಾರರಿಗೆ ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಯನ್ನು ಜೂನ್ ತಿಂಗಳಲ್ಲೆ ವಿತರಣೆ ಮಾಡಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ತಿಳಿಸಿದ್ದಾರೆ. ಮೇ ಮತ್ತು ಜೂನ್ ತಿಂಗಳ ಹೆಚ್ಚುವರಿ 5 ಕೆ.ಜಿ ಅಕ್ಕಿಯನ್ನು ಹಂಚಿಕೆ ನೀಡಲಾಗಿದ್ದು, ಒಟ್ಟು 10 ಕೆ.ಜಿ ಅಕ್ಕಿಯನ್ನು ಜೂನ್ ತಿಂಗಳಲ್ಲಿ ಒಂದೆ ಬಯೋಮೇಟ್ರಿಕ್ ದೃಢೀಕರಣದ ಮೂಲಕ ಪಡೆಯಬಹುದಾಗಿದೆ. ಯಾವುದೆ ಪಡಿತರ ಚೀಟಿದಾರರು ಯಾವುದೆ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ನ್ಯಾಯಬೆಲೆ […]

Continue Reading

ಪಾಠ ಕೇಳುವಾಗಲೆ ವಿದ್ಯಾರ್ಥಿನಿಯರ ಮೇಲೆ ಕುಸಿದ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್: ತಪ್ಪಿದ ಭಾರಿ ಅನಾಹುತ

ಸುದ್ದಿ ಸಂಗ್ರಹ ಕಲಬುರಗಿಪಾಠ ಕೇಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್​​ ಕುಸಿದಿರುವ ಆಘಾತಕಾರಿ ಘಟನೆ ಕಲಬುರಗಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಘಟನೆ ವೇಳೆ 80ಕ್ಕೂ ಅಧಿಕ ಯುವತಿಯರು ಕೊಠಡಿಯಲ್ಲಿದ್ದರು ಎನ್ನಲಾಗಿದ್ದು, ಅದೃಷ್ಟವಶಾತ್​​ ಸಂಭವನೀಯ ಭಾರಿ ಅನಾಹುತವೊಂದು ತಪ್ಪಿದೆ. ಐವರು ವಿದ್ಯಾರ್ಥಿಗಳಿಗೆ ಈ ವೇಳೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಕಾಲೇಜಿನಲ್ಲಿ ಸುಮಾರು 2 ಸಾವಿರ ಜನ ವಿದ್ಯಾರ್ಥಿನಿಯರಿದ್ದು, ಬಹುತೇಕ ಗ್ರಾಮೀಣ ಭಾಗದ ಹೆಣ್ಣು ಮಕ್ಕಳೇ ಕಾಲೇಜಿನಲ್ಲಿ […]

Continue Reading

ಕಾಡುಗೋಡಿ ಮಗು ಕೊಲೆ ಕೇಸ್‌: ಮೂವರು ಪೊಲೀಸರ ತಲೆದಂಡ

ಸುದ್ದಿ ಸಂಗ್ರಹ ಬೆಂಗಳೂರುಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲಕಿ ವೆನ್ನಿಲಾ ಕೊಲೆ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದಡಿ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅಮಾನತುಗೊಂಡವರಲ್ಲಿ ಕಾಡುಗೋಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಂಗಸ್ವಾಮಿ, ಪಿಎಸ್‌ಐ ನಿಂಗರಾಜು ಮತ್ತು ಸಿಬ್ಬಂದಿ ಹಾಲೇಶ್ ನಾಯ್ಕ್ ಸೇರಿದ್ದಾರೆ. ಇನ್ನು ಪ್ರಿಯಕರನೊಂದಿಗೆ ತನ್ನ ಐದೂವರೆ ವರ್ಷದ ಮಗಳು ವೆನ್ನಿಲಾಳನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ಪ್ರಿಯಾಂಕಾ, ಎಫ್‌ಐಆರ್‌ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದಳು. ಆದರೆ ಇದೀಗ ಪೊಲೀಸರು ಆಕೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. […]

Continue Reading

ಕಲಬುರಗಿ: ಬಾರ್‌ನಲ್ಲಿ ಅಗ್ನಿ ಅವಘಡ – ತಪ್ಪಿದ ಅನಾಹುತ

ಸುದ್ದಿ ಸಂಗ್ರಹ ಕಲಬುರಗಿನಗರದ ಸರ್ಧಾರ್ ವಲ್ಲಭಭಾಯಿ ಪಟೇಲ್ (ಎಸ್‌ವಿಪಿ) ವೃತ್ತದಲ್ಲಿರುವ ಬಾರ್ & ರೆಸ್ಟೋರೆಂಟ್ ಒಂದರ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಾರ್‌ನ ಮೇಲಂತಸ್ತಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೆ ಜ್ವಾಲೆಗಳು ವ್ಯಾಪಿಸಿ ಕಟ್ಟಡದ ಮೇಲ್ಭಾಗ ಧಗಧಗನೆ ಹೊತ್ತಿ ಉರಿದಿದೆ. ವಿಷಯ ತಿಳಿಯುತ್ತಿದ್ದಂತೆ ಎರಡು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ. ಅಗ್ನಿಶಾಮಕ ಸಿಬ್ಬಂದಿ ಸಮಯೋಚಿತವಾಗಿ ಕಾರ್ಯಾಚರಣೆ ನಡೆಸಿದ ಪರಿಣಾಮ ಬೆಂಕಿ ಅಕ್ಕಪಕ್ಕದ ಕಟ್ಟಡಗಳಿಗೆ ವ್ಯಾಪಿಸದಂತೆ ತಡೆಗಟ್ಟಲಾಯಿತು. […]

Continue Reading

ಶಹಾಬಾದ್: ನಗರದ ವಿವಿಧ ಬಡಾವಣೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಸುದ್ದಿ ಸಂಗ್ರಹ ಶಹಾಬಾದ್ನಗರದ ಎಸ್-4 ಟೌನ್ ಫೀಡರ್ ವ್ಯಾಪ್ತಿಯಲ್ಲಿ ತುರ್ತು ವಿದ್ಯುತ್ ವಾಹಕ ಬದಲಾವಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ, ಜೂನ್ 12 ರಂದು ಶುಕ್ರವಾರ ಬೆಳಗ್ಗೆ 8:30 ರಿಂದ ಸಂಜೆ 5:30 ರವರೆಗೆ ನಗರದ ಪ್ರಮುಖ ಬಡಾವಣೆಯಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ ಎಂದು ಶಹಾಬಾದ ಜೆಸ್ಕಾಂ ಎಇಇ ಅಧಿಕಾರಿ ಸೈಯದ ಯೂನೂಸ್ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜೂನ್ 12 ರಂದು ನಗರದ ಲಕ್ಷ್ಮಿ ಗಂಜ, ಶಾಸ್ತ್ರಿ ಚೌಕ, ನಾಲಾ ಟೇಕ್, ಅಪ್ಪರ ಮಡ್ಡಿ, […]

Continue Reading

ಇಂಗಳಗಿ ಅಂಗನವಾಡಿ ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

ಸುದ್ದಿ ಸಂಗ್ರಹ ಶಹಾಬಾದ್ಇಂಗಳಗಿ ಅಂಗನವಾಡಿ ಕಾರ್ಯಕರ್ತೆ ಶೇಖಮ್ಮ ಕುರಿ ಕರ್ತವ್ಯಕ್ಕೆ ಹಾಜರಾಗದೆ ಸತತ ಗೈರು ಇದ್ದು, ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ನಗರದ ಸಿಡಿಪಿಒ ಕಚೇರಿ ಎದುರು ಇಂಗಳಗಿ ಗ್ರಾಮ ಅಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇಂಗಳಗಿ ಗ್ರಾಮದ ಅಂಗನವಾಡಿ ಕೇಂದ್ರ-1ರ ಕಾರ್ಯಕರ್ತೆ ಶೇಖಮ್ಮ ಕುರಿ ಕೇಂದ್ರಕ್ಕೆ ಹೋಗುವುದಿಲ್ಲ. ಮಕ್ಕಳಿಗೆ ಸರಿಯಾಗಿ ಪೌಷ್ಟಿಕ ಆಹಾರ ವಿತರಣೆ ಮಾಡುವುದಿಲ್ಲ. ಕಳೆದ 15 ವರ್ಷಗಳಿಂದ ರಾಜಕೀಯ ಪ್ರಭಾವ ಬೀರಿ, ಅಂಗನವಾಡಿ ಕೇಂದ್ರದ ಕೆಲಸ ಮಾಡದೆ ಅಕ್ರಮವಾಗಿ […]

Continue Reading

ಮುಯ್ ಥಾಯ್ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಎಎಸ್‌ಐ ಪುತ್ರ

ಸುದ್ದಿ ಸಂಗ್ರಹ ಬೆಂಗಳೂರುಬನಶಂಕರಿ ಸಂಚಾರ ಠಾಣೆಯ ಎಎಸ್‌ಐ ಕಾಂತರಾಜು ಅವರ ಪುತ್ರ ಶ್ರೀಹರ್ಷ ಬಿ.ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ರಾಜ್ಯದ ಕೀರ್ತಿ ಹೆಚ್ಚಿಸಿದ್ದಾರೆ. ಶ್ರೀಲಂಕಾದ ನೆಗೊಂಬೋದಲ್ಲಿ ನಡೆದ ಇಂಟರ್‌ನ್ಯಾಷನಲ್ ಅಂಡ್ ಥಾಯ್ ಮಾರ್ಷಲ್ ಆರ್ಟ್ಸ್ ಏಷ್ಯನ್ ಗೇಮ್ಸ್-2026 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಶ್ರೀಹರ್ಷ, ಸ್ಪರ್ಧೆಯ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಆಟಗಾರನ ವಿರುದ್ಧ ಸೋಲಿಸಿ ಅವರು ಗೆಲುವು ಸಾಧಿಸಿದ್ದಾರೆ. ಈ ಮೂಲಕ ಭಾರತಕ್ಕೆ ಚಿನ್ನದ ಪದಕ […]

Continue Reading

ಶಹಾಬಾದ್: ಎಸ್.ಎಸ್ ಮರಗೋಳ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

ಸುದ್ದಿ ಸಂಗ್ರಹ ಶಹಾಬಾದ್ಸಸಿ ನೆಟ್ಟು ಬೆಳೆಸುವ ಕಾರ್ಯ ಕೇವಲ ಪರಿಸರ ದಿನಕ್ಕೆ ಸೀಮಿತವಾಗದೆ ಪ್ರತಿಯೊಬ್ಬರು ಮನೆಗೊಂದು ಮರ ಬೆಳೆಸಿ ಪರಿಸರ ಸಮತೋಲನಕ್ಕೆ ಸಹಕಾರ ನೀಡಬೇಕು ಎಂದು ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಬಸವರಾಜ ಹಿರೇಮಠ ಹೇಳಿದರು. ನಗರದ ಎಸ್.ಎಸ್ ಮರಗೋಳ ಪದವಿ ಪೂರ್ವ ಮತ್ತು ಪದವಿ ಮಹಾವಿದ್ಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮೆಲ್ಲರ ಆರೋಗ್ಯಕರ ಬದುಕು ಮರಗಿಡಗಳ ಸಂರಕ್ಷಣೆ ಮೇಲೆ ಅವಲಂಬಿತವಾಗಿದೆ ಎಂಬುದನ್ನು ಮರೆಯಬಾರದು […]

Continue Reading