ವಚನಗಳ ಅಳವಡಿಕೆಯಿಂದ ಆಂತರಿಕ ಕತ್ತಲೆ ದೂರ

ಕಲಬುರಗಿ: ದೀಪಗಳು ಬೆಳಕನ್ನು ನೀಡಿ ಹೊರಗಿನ ಕತ್ತಲೆಯನ್ನು ಕಳೆಯುತ್ತವೆ. ಬಸವಾದಿ ಶರಣರು ರಚಿಸಿರುವ ವಚನಗಳ ಅಧ್ಯಯನ ಮಾಡಿ, ಅದರ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಅಜ್ಞಾನ, ಮೌಢ್ಯತೆ, ಕಂದಾಚಾರ, ಅಂಧಶೃದ್ಧೆ, ಶೋಷಣೆ, ಅಸಮಾನತೆ ಭಾವನೆ ಎಂಬ ಆಂತರಿಕ ಕತ್ತಲೆ ದೂರವಾಗಿ ಬದುಕು ಸುಂದರವಾಗುತ್ತದೆ ಎಂದು ಶರಣ ಚಿಂತಕ ರವೀಂದ್ರ ಶಾಬಾದಿ ಅಭಿಮತಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಿದ್ದ ‘ವಚನ-ದೀಪೋತ್ಸವ ವಿಶೇಷ ಕಾರ್ಯಕ್ರಮ’ದಲ್ಲಿ ವಿದ್ಯಾರ್ಥಿಗಳಿಗೆ ವಚನಗಳ ಪುಸ್ತಕ […]

Continue Reading

ಆಹಾರ ಪ್ರತಿಯೊಂದು ಜೀವಿಯ ಅಮೃತ: ಚಂದ್ರಶ್ಯಾ ಇಟಗಿ

ಸುದ್ದಿ ಸಂಗ್ರಹ ಕಲಬುರಗಿ ಪ್ರತಿಯೊಂದು ಜೀವಿಗೆ ಆಹಾರ ಅಮೃತವಿದ್ದಂತೆ ಎಂದು ಪ್ರಗತಿಪರ, ಸಾವಯುವ ರೈತ ಚಂದ್ರಶ್ಯಾ ಇಟಗಿ ಅಭಿಪ್ರಾಯಪಟ್ಟರು. ಆಳಂದ ರಸ್ತೆಯ ಟೋಲಗೇಟ್ ಸಮೀಪದ ತೋಟದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಆಹಾರ ದಿನಾಚರಣೆ’ ಗೌರವ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಮಾನವ ಸೇರಿ ಎಲ್ಲಾ ಜೀವಿಗಳಿಗೆ ಆಹಾರ ಅವಶ್ಯಕ. ಪ್ರತಿಯೊಬ್ಬ ಮನುಷ್ಯನಿಗೆ ಸದೃಢ ಮತ್ತು ಪೌಷ್ಠಿಕ ಆಹಾರ ದೊರೆಯಬೇಕು. ಆಹಾರ ಉತ್ಪಾದನೆಯ ಕಷ್ಟ ರೈತನಿಗೆ ಗೊತ್ತು. ಆಹಾರವನ್ನು ಅನಾವಶ್ಯಕವಾಗಿ ವ್ಯರ್ಥ […]

Continue Reading

ವೈದ್ಯಕೀಯ ಚಿಕಿತ್ಸೆಯಲ್ಲಿ ಅನಸ್ತೇಷಿಯಾ ಪಾತ್ರ ಪ್ರಮುಖ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಆಧುನಿಕತೆಯ ಒತ್ತಡದ ಬದುಕಿನಲ್ಲಿ ಮನುಷ್ಯನಿಗೆ ವಿವಿಧ ರೀತಿಯ ಹೊಸ-ಹೊಸ ಕಾಯಿಲೆಗಳು ಕಂಡುಬರುತ್ತಿವೆ. ಇದಲ್ಲದೆ ಅಪಘಾತ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಶಸ್ತ್ರಚಿಕಿತ್ಸೆ ಮಾಡುವುದು ಅಗತ್ಯವಾಗಿದೆ. ಆಗ ಅರವಳಿಕೆ ಅಥವಾ ಅನಸ್ತೇಷಿಯಾ ಮಾಡಿ, ಮುಂದಿನ ಚಿಕಿತ್ಸೆ ಮಾಡುವಲ್ಲಿ ಇದರ ಪಾತ್ರ ಪ್ರಮುಖವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ‘ವಿಶ್ವ ಅನಸ್ತೇಷಿಯಾ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಅಮೇರಿಕಾದ ದಂತವೈದ್ಯ […]

Continue Reading

ಪರಧರ್ಮ ಸಹಿಷ್ಣುತೆಯೇ ಮಾನವೀಯತೆ: ಮೊಹಸಿನ್ ಬಾಬಾ

ಕಲಬುರಗಿ: ಮಾನವರೆಲ್ಲರೂ ಹುಟ್ಟುತ್ತಾ ಒಂದೆಯಾಗಿದ್ದು, ನಂತರ ಧರ್ಮ, ಜಾತಿ ಸಂಕೋಲೆಗಳಲ್ಲಿ ಸಿಲುಕಿ ಸಣ್ಣ ವ್ಯಕ್ತಿಯಾಗುತ್ತಿದ್ದಾರೆ. ಹುಟ್ಟಿದ ಧರ್ಮ, ಜಾತಿಗಳ ಆಧಾರದ ಮೇಲೆ ಮೇಲು-ಕೀಳು ಮಾಡದೆ ನಾವೆಲ್ಲರು ಒಂದೆ ಎಂಬ ಮನೋಭಾವನೆ ಮೈಗೂಡಿಸಿಕೊಳ್ಳಬೇಕು ಎಂದು ಇಸ್ಲಾಂ ಧಾರ್ಮಿಕ ಮುಖಂಡ, ಪೂಜ್ಯ ಸೈಯದ್ ಷಾ ಮಜರ್‌ಖಾದ್ರಿ ಅಲ್ಮಾರೋ ಮೊಹಸಿನ್ ಬಾಬಾ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ಹಜರತ್ ಸೈಯದ್ ಷಾ ಹಸನ್‌ಖಾದ್ರಿ ದರ್ಗಾದ 40ನೇ ಉರುಸ್ ನಿಮಿತ್ಯ ಖಾದ್ರಿ ದರ್ಗಾ ಸಮಿತಿ ವತಿಯಿಂದ ಜರುಗಿದ ಗಂಧ ಲೇಪನ, […]

Continue Reading

ವರ್ಣಿಸಲು ಸಾಧ್ಯವಾಗದ ಮೇರು ವ್ಯಕ್ತಿತ್ವ ಕಲಾಂರದು: ಎಚ್.ಬಿ ಪಾಟೀಲ

ಕಲಬುರಗಿ: ವಿಜ್ಞಾನಿಯಾಗಿ, ರಾಷ್ಟ್ರಪತಿಯಾಗಿ, ತತ್ವಜ್ಞಾನಿಯಾಗಿ, ಶಿಕ್ಷಣ ತಜ್ಞರಾಗಿ, ಕ್ಷಿಪಣಿಯ ರೂವಾರಿಯಾಗಿ, ಧೀಮಂತ ಧುರಿಣರಾಗಿ, ಯುವ ಜನತೆಯ ದಾರಿದೀಪವಾಗಿ, ರಾಷ್ಟ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಕೊಡುಗೆ ಅಪಾರ. ಅವರ ಮೇರು ವ್ಯಕ್ತಿತ್ವ ಶಬ್ದಗಳಲ್ಲಿ ವರ್ಣಿಸಲು ಅಸಾಧ್ಯವಾದದ್ದು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಜರುಗಿದ ಡಾ.ಎ.ಪಿ.ಜೆ ಅಬ್ದುಲ್ ಕಲಾಂರ 94ನೇ […]

Continue Reading

ಕಣ್ಣು ಅಮೂಲ್ಯ ಅಂಗ, ಸಂರಕ್ಷಣೆ ಮಾಡಿಕೊಳ್ಳಬೇಕು

ಕಲಬುರಗಿ: ಕಣ್ಣು ಮಾನವನ ಅಮೂಲ್ಯ ಅಂಗವಾಗಿದ್ದು, ಎಲ್ಲರು ಕಣ್ಣಿನ ಆರೋಗ್ಯ ಬಗ್ಗೆ ಕಾಳಜಿ, ಮುಂಜಾಗ್ರತೆ ವಹಿಸಿ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದು ನೇತ್ರಾಧಿಕಾರಿ ಡಾ.ದಸ್ತಗಿರ್ ಸಲಹೆ ನೀಡಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನ ಜ್ಯೋತಿ ಐ ಕೇರ್ ಕಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಸಂಜೆ ಜರುಗಿದ “ನೇತ್ರ ಮಾಸಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಮತ್ತು ಕಂಪ್ಯೂಟರ್ ಬಳಕೆ ಹೆಚ್ಚಾಗಿರುವುದರಿಂದ ಕಣ್ಣಿನ ಮೇಲೆ ಪರಿಣಾಮ ಬೀರುತ್ತಿದೆ. ಇದರಿಂದ ಕಣ್ಣಿನ ಪೊರೆ, […]

Continue Reading

ಸಮೀಕ್ಷೆಯಲ್ಲಿ ಅಪಘಾತಕ್ಕೀಡಾದ ಸಿಬ್ಬಂದಿಗಳಿಗೆ ಸರ್ಕಾರದಿಂದ ಪರಿಹಾರ ನೀಡಲು ಒತ್ತಾಯ

ಕಲಬುರಗಿ: ಜಿಲ್ಲೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ತೊಡಗಿರುವಾಗ ಅಪಘಾತವಾಗಿ ಆಸ್ಪತ್ರೆಗೆ ದಾಖಲಾಗಿರುವ ಸಿಬ್ಬಂದಿಗಳಿಗೆ ಸರ್ಕಾರದಿಂದ ವಿನಾಯಿತಿ ನೀಡಬೇಕು ಮತ್ತು ಚಿಕಿತ್ಸಾ ವೆಚ್ಚ ಭರಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಮನವಿ ಪತ್ರ ಸಲ್ಲಿಸಿದೆ. ಕ.ರಾ.ಸ.ನೌ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೊಂಡಗಿ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಅಪಘಾತಕ್ಕಿಡಾದ ಸಿಬ್ಬಂದಿಗಳಿಗೆ ಸಮೀಕ್ಷಾ ಕಾರ್ಯದಿಂದ ವಿನಾಯಿತಿ ನೀಡಬೇಕು ಮತ್ತು ಅವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಬೇಕು ಎಂದು ಒತ್ತಾಯಿಸಲಾಯಿತು. […]

Continue Reading

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಪಾಲಿಗೆ ವರ: ಶಿವಕುಮಾರ ಇಂಗಿನಶೆಟ್ಟಿ

ಸುದ್ದಿ ಸಂಗ್ರಹ ಶಹಾಬಾದ್ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರ ಪಾಲಿಗೆ ವರವಾಗಿದೆ ಎಂದು ಉದ್ಯಮಿ ಶಿವಕುಮಾರ ಇಂಗಿನಶೆಟ್ಟಿ ಹೇಳಿದರು. ನಗರದ ಲಕ್ಷ್ಮಿಗಂಜ ಬಡಾವಣೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಶಾಲೆಯ ಸಭಾಗೃಹದಲ್ಲಿ ನಡೆದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾಯಕ್ರಮದಲ್ಲಿ ಮಾತನಾಡಿದ ಅವರು, ಜ್ಞಾನ ವಿಕಾಸ ಕೇಂದ್ರವು ಮಹಿಳೆಯರಿಗೆ ತುಂಬಾ ಉಪಯೋಗಿಯಾಗಿದ್ದು, ಎಲ್ಲರು ಉತ್ತಮ ರೀತಿಯಲ್ಲಿ ಸಮಾಜದಲ್ಲಿ ಸ್ವಾವಲಂಬಿಯಾಗಿ ಬೆಳೆಯಬೇಕು ಎಂದರು. ಧರ್ಮಸ್ಥಳ ಜನಜಾಗೃತಿ ವೇದಿಕೆಯ ಸದಸ್ಯ ವಾಸುದೇವ ಚವ್ಹಾಣ್ ಮಾತನಾಡಿ, ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡಲು ಸಾಲ ಸೌಲಭ್ಯ […]

Continue Reading

ಪ್ರತಿಯೊಬ್ಬರು ಕಣ್ಣಿನ ಆರೋಗ್ಯದ ಬಗ್ಗೆ ಕಾಳಜಿ, ಮುಂಜಾಗ್ರತೆ ವಹಿಸಿ

ಕಲಬುರಗಿ: ಇತ್ತೀಚಿನ ದಿನಗಳಲ್ಲಿ ಅತಿಯಾದ ಮೊಬೈಲ್ ಮತ್ತು ಕಂಪ್ಯೂಟರ್ ಬಳಕೆಯಿಂದ ಕಣ್ಣಿನ ದೃಷ್ಟಿಯ ಮೇಲೆ ಪರಿಣಾಮ ಬೀರುತ್ತಿದೆ. ಇದರಿಂದ ಕಣ್ಣಿನ ಪೊರೆ, ಗ್ಲುಕೋಮಾ, ಡಯಾಬಿಟಿಕ್ ರೆಟಿನೋಪತಿ ಸೇರಿದಂತೆ ಇತರ ದೀರ್ಘಕಾಲದ ಕಣ್ಣಿನ ಅಸ್ವಸ್ಥತೆಗಳು ಹೆಚ್ಚಾಗುತ್ತಿದೆ. ಆದ್ದರಿಂದ ಇವುಗಳ ಬಳಕೆ ಮಿತಗೊಳಿಸಬೇಕು. ಪ್ರತಿಯೊಬ್ಬರು ಕಣ್ಣಿನ  ಆರೋಗ್ಯ ಬಗ್ಗೆ ಕಾಳಜಿ, ಮುಂಜಾಗ್ರತೆ ವಹಿಸಬೇಕು ಎಂದು ನೇತ್ರಾಧಿಕಾರಿ ಡಾ.ದಸ್ತಗಿರ್ ಸಲಹೆ ನೀಡಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ […]

Continue Reading

ಯುವಕರು ಸೃಜನಶೀಲತೆ, ಕ್ರೀಯಾಶೀಲತೆ, ಪ್ರಬಲ ಇಚ್ಛಾಶಕ್ತಿ ಬೆಳೆಸಿಕೊಳ್ಳಿ

ಕಲಬುರಗಿ: ಪ್ರಸ್ತುತ ದಿನಗಳಲ್ಲಿ ತೀರ್ವ ಸ್ಪರ್ಧೆ ಎದುರಿಸ ಬೇಕಾಗಿರುವುದರಿಂದ ಯುವಕರು ಪದವಿ ಜೊತೆಗೆ ಸೃಜನಶೀಲ ಗುಣ, ಕ್ರೀಯಾಶೀಲತೆ, ಸಾಧಿಸುವ ಪ್ರಭಲ ಇಚ್ಛಾಶಕ್ತಿ ಮೈಗೂಡಿಸಿಕೊಳ್ಳಬೇಕು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರ್ಮೆ ಹೇಳಿದರು. ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್ ಎದುರುಗಡೆಯ ಶಾರದಾ ವಿವೇಕ ಮಹಿಳಾ ಪದವಿ ಕಾಲೇಜ್’ನಲ್ಲಿ ಕಲಬುರಗಿಯ ಮೇರಾ ಯುವ ಭಾರತ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಕೇಂದ್ರ ಸಂವಹನ ಇಲಾಖೆ, ಶಾರದಾ ವಿವೇಕ ಮಹಿಳಾ ಪದವಿ ಕಾಲೇಜ್, ಸ್ವಾಮಿ […]

Continue Reading