ಕರಾಳ ಲೇಬರ್ ಕೋಡ್ ಹಿಂಪಡೆಯಲು ಕಾರ್ಮಿಕರಿಂದ ಬೃಹತ ಪ್ರತಿಭಟನೆ

ಸುದ್ದಿ ಸಂಗ್ರಹ ಶಹಾಬಾದ್ಕಾರ್ಮಿಕ ವಿರೋಧಿ ಕರಾಳ ಕಾರ್ಮಿಕ ಸಹಿತೆ ಲೇಬರ್ ಕೋಡ್ ದುಡಿಯುವ ವರ್ಗದ ಮರಣ ಶಾಸನವಾಗಿವೆ ಕೂಡಲೆ ಕೇಂದ್ರ ಸರ್ಕಾರ ಇದನ್ನು ವಾಪಸ್ಸು ಪಡೆಯಬೇಕೆಂದು ಎಐಯುಟಿಯುಸಿ ಜಿಲ್ಲಾ ಉಪಾಧ್ಯಕ್ಷ ರಾಘವೇಂದ್ರ ಎಂ‌.ಜಿ ಆಗ್ರಹಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಗುರುವಾರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ನಡೆದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಉದ್ದೇಶಿಸಿ ಮಾತನಾಡಿದ ಅವರು, ಕೃಷಿ ಕೂಲಿ ಕಾರ್ಮಿಕರು ಮತ್ತು ಕಾರ್ಮಿಕರ ಕಾಯ್ದೆಗಳಾದ ವಿದ್ಯುತ್ ಕಾಯ್ದೆ ತಿದ್ದುಪಡಿ, ಬೀಜ ಕಾಯ್ದೆ, ಭೂಸ್ವಾಧೀನ ಕಾಯ್ದೆ […]

Continue Reading

ಫೆ.15 ರಂದು ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದೀಪೋತ್ಸವ, ಸಂಗೀತೋತ್ಸವ

ಸುದ್ದಿ ಸಂಗ್ರಹ ಕಲಬುರಗಿಶಿವರಾತ್ರಿ ನಿಮಿತ್ಯ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಫೆ.15 ರಂದು ದೀಪೋತ್ಸವ ಮತ್ತು ಸಂಗೀತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸೊಸೈಟಿಯ ಕಾರ್ಯದರ್ಶಿ ಶಿವರಾಜ ಅಂಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಗರದ ಬಸವೇಶ್ವರ ಆಸ್ಪತ್ರೆಯ ಎದುರುಗಡೆಯ ವಿದ್ಯಾನಗರದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿದ್ಯಾನಗರ ವೆಲ್‌ಫೇರ್ ಸೊಸೈಟಿ ವತಿಯಿಂದ ಫೆಬ್ರವರಿ 15ರಂದು ಸಂಜೆ 6 ಗಂಟೆಗೆ ದೀಪೋತ್ಸವ ಹಾಗೂ ಜನಪದ, ತತ್ವಪದಗಳ ಸಂಗೀತೋತ್ಸವ ಮತ್ತು ಅಂತ್ಯಾಕ್ಷರಿ ವಿಶೇಷ ಕಾರ್ಯಕ್ರಮ ಜರುಗುವುದು ಎಂದರು. ದೀಪೋತ್ಸವ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ ಅಲಂಖಾನ್ ಮತ್ತು […]

Continue Reading

ನೇತಾಜಿ ಸುಭಾಷ್ ಚಂದ್ರ ಬೋಸ್’ರ ವಿಚಾರ, ಆದರ್ಶ ಮೌಲ್ಯಗಳು ಎತ್ತಿ ಹಿಡಿಯುವದು ಅವಶ್ಯಕ: ಡಾ.ರಮೇಶ ಲಂಡನಕರ್

ಸುದ್ದಿ ಸಂಗ್ರಹ ಶಹಾಬಾದನೇತಾಜಿಯವರ ವಿಚಾರ, ಆದರ್ಶ ಮೌಲ್ಯಗಳು ಎತ್ತಿ ಹಿಡಿಯುವುದು ಅವಶ್ಯಕ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಡಾ.ರಮೇಶ ಲಂಡನಕರ್ ಹೇಳಿದರು. ನಗರದ ಸಿದ್ದರಾಮೇಶ್ವರ ಶಾಲಾ ಮೈದಾನದಲ್ಲಿ ಎಐಡಿಎಸ್‌ಓ ಎಐಡಿವೈಓ ಮತ್ತು ಎಐಎಂಎಸ್‌ಎಸ್‌ ಸಂಘಟನೆಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇತಾಜಿ ಸುಭಾಷ ಚಂದ್ರ ಬೋಸ್’ರ 129ನೇ ಜನ್ಮದಿನದ ನಿಮಿತ್ಯ ನಡೆದ 13ನೇ ಸಾಂಸ್ಕೃತಿಕ ಜನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು, ಭಾರತ ದೇಶ ಸ್ವಾತಂತ್ರಗೊಳಿಸುವುದಷ್ಟೆ ಅಲ್ಲ, ಸಮಗ್ರ ಸಮಾನತೆಯ ಸ್ವಾತಂತ್ರ್ಯ ಮತ್ತು ಶೋಷಣೆ ಇಲ್ಲದ ಸಮಾಜ ನಿರ್ಮಿಸಬೇಕು. […]

Continue Reading

ಮೂರ್ಛೆ ರೋಗದ ಬಗ್ಗೆ ಎಚ್ಚರವಿರಲಿ: ಡಾ.ಅನುಪಮಾ

ಸುದ್ದಿ ಸಂಗ್ರಹ ಕಲಬುರಗಿ ಮೆದುಳಿನ ಅಸಹಜ ಚಟುವಟಿಕೆಯಿಂದ ಮೂರ್ಛೆ ರೋಗ ಬರುತ್ತದೆ. ಪ್ರಜ್ಞಾರಹಿತ ಕೈಕಾಲುಗಳ ಸೆಳೆತ, ತಲೆತಿರುಗುವಿಕೆ ಮತ್ತು ಕಣ್ಣು ಗುಡ್ಡೆ ಮೇಲ್ಮುಖವಾಗಿ ತಿರುಗುವ ಲಕ್ಷಣ ಕಂಡುಬಂದರೆ ತಜ್ಞ ವೈದ್ಯರಿಗೆ ಭೇಟಿಯಾಗಿ ತಪಾಸಣೆ ನಡೆಸಿ, ಚಿಕಿತ್ಸೆ ಪಡೆಯಬೇಕು. ಇದರ ಬಗ್ಗೆ ಎಚ್ಚರ ವಹಿಸುವುದು ಅಗತ್ಯ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ವಿಶ್ವ ಮೂರ್ಛೆ ರೋಗ ಜಾಗೃತಿ ದಿನಾಚರಣೆ”ಯಲ್ಲಿ […]

Continue Reading

ಶಹಾಬಾದ್: ಡಯಾಲಿಸಿಸ್ ಘಟಕ ಮತ್ತು ರಕ್ತದಾನ ಘಟಕ ಉದ್ಘಾಟನೆ

ಸುದ್ದಿ ಸಂಗ್ರಹ ಶಹಾಬಾದ್ರಕ್ತದಾನ ಘಟಕ ಮತ್ತು ಡಯಾಲಿಸಿಸ್ ಕೇಂದ್ರ ಪ್ರಾರಂಭಿಸಿದ್ದು ತುಂಬಾ ಸಂತೋಷದ ವಿಷಯ ಎಂದು ಶಾಸಕ ಬಸವರಾಜ ಮತ್ತಿಮೂಡ ಹೇಳಿದರು. ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶನಿವಾರ ಡಯಾಲಿಸಿಸ್ ಕೇಂದ್ರ ಮತ್ತು ರಕ್ತದಾನ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಘೋಷಣೆಯಾದ ನಂತರ ಆಸ್ಪತ್ರೆಯಲ್ಲಿ ಅತಿ ಹೆಚ್ಚು ಸೌಲಭ್ಯ ದೊರೆಯುವಂತೆ ಗಮನ ಹರಿಸುತ್ತಿದ್ದೆನೆ, ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ, ಮಾತ್ರೆಗಳ ಮತ್ತು ಔಷಧಿಗಳ ಅವಶ್ಯಕತೆ ಇರುವಷ್ಟು ಪೂರೈಕೆ ಆಗದಿರುವುದು ಅನೇಕ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ನನ್ನ ಗಮನಕ್ಕೆ ತಂದಿದ್ದಾರೆ, […]

Continue Reading

ಶಿಕ್ಷಣ ಮಕ್ಕಳ ವಿದ್ಯಾರ್ಜನೆಗೆ ಸೀಮಿತವಾಗದೆ ಸಮಗ್ರ ವಿಕಾಸಕ್ಕೆ ಕಾರಣವಾಗಲಿ: ಮರಿಯಪ್ಪ ಹಳ್ಳಿ

ಸುದ್ದಿ ಸಂಗ್ರಹ ಶಹಾಬಾದ್ಶಿಕ್ಷಣ ಮಕ್ಕಳ ವಿದ್ಯಾರ್ಜನೆಗೆ ಮಾತ್ರ ಸೀಮಿತವಾಗದೆ ಅವರಲ್ಲಿನ ಪ್ರತಿಭೆ ಹೊರಹಾಕಿ ವಿಕಾಸ ಹೊಂದಲು ಸಹಾಯ ಮಾಡುವುದು ಶಿಕ್ಷಣದ ಮಹತ್ತರ ಉದ್ದೇಶವಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಹೇಳಿದರು. ನಗರದ ಇಂಗಿನಶೆಟ್ಟಿ ಸಭಾಗೃಹದಲ್ಲಿ ನಡೆದ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟ ಶಾಲೆ, ನಂದಗೋಕುಲ ಶಾಲೆ, ವಿಜಯ ಕಂಪ್ಯೂಟರ್ ತರಬೇತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಹಬ್ಬ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ […]

Continue Reading

ಫೆ‌‌.9 ರಿಂದ ಶಹಾಬಾದ್ ಸಾಂಸ್ಕೃತಿಕ ಜನೋತ್ಸವ

ಸುದ್ದಿ ಸಂಗ್ರಹ ಶಹಾಬಾದ್ನೇತಾಜಿ ಸುಭಾಷ್ ಚಂದ್ರ ಬೋಸ್’ರ 129ನೇ ಜನ್ಮ ದಿನಾಚರಣೆ ಅಂಗವಾಗಿ 13ನೇ ಸಾಂಸ್ಕೃತಿಕ ಜನೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಎಐಎಂಎಸ್ಎಸ್ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಗುಂಡಮ್ಮ ಮಡಿವಾಳ ಹೇಳಿದರು. ಹನುಮಾನ ನಗರ ಸಂಘಟನಾ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಡಿವೈಓ, ಎಐಡಿಎಸ್ಓ ಮತ್ತು ಎಐಎಂಎಸ್ಎಸ್ ವತಿಯಿಂದ ಸಿದ್ದರಾಮೇಶ್ವರ ಶಾಲಾ ಆವರಣದಲ್ಲಿ ಫೆ.9 ಮತ್ತು 10ರಂದು ಸಂಜೆ 5:30ಕ್ಕೆ ಸಂಸ್ಕೃತಿಕ ಜನೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು. ಸಂಸ್ಕೃತಿಕ ನಾಟಕ, ನೃತ್ಯ, ಜಾನಪದ ಗೀತೆ, ಕೋಲಾಟ, ಡೊಳ್ಳಿನ […]

Continue Reading

ಕಲಬುರಗಿ: ಸರಕಾರಿ ನೌಕರರ ಭವನದ ನಿವೇಶನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಸುದ್ದಿ ಸಂಗ್ರಹ ಕಲಬುರಗಿನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದ ನಿವೇಶನಕ್ಕೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಶುಕ್ರವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಕಂದಾಯ ಇಲಾಖೆಯಿಂದ ಗುತ್ತಿಗೆ ಅವಧಿ ವಿಸ್ತರಣೆ ಹಿನ್ನಲೆಯಲ್ಲಿ ವಿಧಿ‌ಸಲಾದ 2.ಕೋಟಿ 3.7 ಲಕ್ಷ ರೂ ಗುತ್ತಿಗೆ ಶುಲ್ಕ ಭರಿಸಲು ಆದೇಶಿಸಲಾಗಿದೆ. ಆದರೆ ಸರ್ಕಾರಿ ನೌಕರರ ಸಂಘಕ್ಕೆ ಯಾವುದೆ ಆದಾಯ ಮೂಲಗಳಿಲ್ಲ ಹೀಗಾಗಿ ವಿಧಿಸಲಾದ ಗುತ್ತಿಗೆ ಶುಲ್ಕ ಭರಿಸಲು ತೊಂದರೆಯಾಗುತ್ತಿದೆ, ಅದಕ್ಕಾಗಿ ವಿಧಿಸಲಾದ ಗುತ್ತಿಗೆ ಶುಲ್ಕ ಸಂಪೂರ್ಣವಾಗಿ ವಿನಾಯಿತಿಗೊಳಿಸಲು ಸರ್ಕಾರಕ್ಕೆ ತಾವು ಪ್ರಸ್ತಾವನೆ […]

Continue Reading

ಮಾನವನ ಎರಡನೆ ತಾಯಿ ಗೋಮಾತೆ, ಗೋ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಿವರಾಜ ಅಂಡಗಿ

ಸುದ್ದಿ ಸಂಗ್ರಹ ಕಲಬುರಗಿಒಂದು ಹಸುವಿಗೆ ಆಹಾರ ನೀಡಿದರೆ ಮುಕ್ಕೋಟಿ ದೇವರಿಗೆ ನೈವೇದ್ಯ ನೀಡಿದ ಸಮ, ತಾಯಿ ಹಾಲಿಗಿಂತ ಹೆಚ್ಚು ಗೋವಿನ ಹಾಲು ಕುಡಿದ ನಾವು ಗೋ ಸಂರಕ್ಷಣೆ ಕರ್ತವ್ಯ ನಿರ್ವಹಿಸಬೇಕು ಎಂದು ಟೆಂಗಳಿ ಅಂಡಗಿ ಪ್ರತಿಷ್ಠಾನದ ಅಧ್ಯಕ್ಷ ಶಿವರಾಜ ಅಂಡಗಿ ಹೇಳಿದರು. ಗೋ ಮಾತೆ ಪೂಜೆಗೆ ಸಂಗ್ರಹಿಸುವ ಕಾರ್ಯಕ್ಕೆ ಮುಂದಾದ ಮಕ್ತಂಪುರ ಮಠದಲ್ಲಿ ಗೋಶಾಲೆ ನಿರ್ಮಾಣ ಮಾಡಿದ ಪೂಜ್ಯ ಚರಲಿಂಗ ಮಹಾಸ್ವಾಮಿಗಳಿಗೆ ಕೋಟಿ ಪ್ರಣಾಮ ಸಲ್ಲಿಸಿ ಗದ್ದುಗೆ ಮಠದ ಚರಲಿಂಗ ಮಹಾಸ್ವಾಮಿಗಳಿಗೆ ಟೆಂಗಳಿ ಅಂಡಗಿ ಪ್ರತಿಷ್ಠಾನದ ಅಧ್ಯಕ್ಷ […]

Continue Reading

ಮಾಜಿ ಸಚಿವ ಅರವಿಂದ್‌ ಲಿಂಬಾವಳಿ ಹುಟ್ಟು ಹಬ್ಬದ ಪ್ರಯುಕ್ತ ಅನ್ನದಾಸೋಹ, ಸ್ವಚ್ಛತಾ ಕಾರ್ಯಕ್ರಮ

ಸುದ್ದಿ ಸಂಗ್ರಹ ಶಹಾಬಾದಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ 59ನೇ ಹುಟ್ಟು ಹಬ್ಬದ ಪ್ರಯುಕ್ತ ತಾಲೂಕಿನ ಭಾರತ ಚೌಕ್ ನಲ್ಲಿ ಅಭಿಮಾನಿ ಬಳಗದ ವತಿಯಿಂದ ಅನ್ನದಾಸೋಹ ಮತ್ತು ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ನಿಂಗಪ್ಪ ಹುಳಗೋಳ, ದೇವದಾಸ ಜಾಧವ, ಶರಣು ಪಗಲಾಪುರ, ಉಮೇಶ ನಿಂಬಾಳಕರ, ಕೃಷ್ಣ ಮಾನೆ, ಪ್ರಕಾಶ ಮಾನೆ, ಸಾಗರ, ಸುಧಾಕರ, ಸಂಜೀವ ದಂಡಗುಲ್ಕರ್, ಕೃಷ್ಣ ರ್‍ಯಾಪನೂರ, ಶ್ರೀನಿವಾಸ ದಂಡಗುಂಡ, ದೇವಕರ, ಮಹೇಶ, ಸತೀಶ, ಕಾರ್ತಿಕ, ರಾಜು ಸೇರಿದಂತೆ ಸ್ನೇಹಿತರ ಬಳಗ […]

Continue Reading