ಆಟವಾಡುತ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು: ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ

ಸುದ್ದಿ ಸಂಗ್ರಹ ಬೆಂಗಳೂರು ಆಟವಾಡುತ್ತಾ ಮೂರನೇ ಮಹಡಿಯಿಂದ ಬಿದ್ದು ಒಂದೂವರೆ ವರ್ಷದ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ನಾಯಂಡಳ್ಳಿಯಲ್ಲಿ ನಡೆದಿದೆ. ಆಟವಾಡುತ್ತಾ ಮಗು ಕೆಳಗೆ ಬಿದ್ದ ಎದೆ ಝಲ್ ಎನ್ನುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಏ.6ರಂದು ಈ ಘಟನೆ ನಡೆದಿದೆ. ಮಗು ಕೆಳಗೆ ಬಿದ್ದ ತಕ್ಷಣ ಅದರ ತಲೆಗೆ ತೀವ್ರ ಪೆಟ್ಟಾಗಿದ್ದು, ರಕ್ತಸ್ರಾವವಾಗಿದೆ. ವಿಷಯ ತಿಳಿದ ಕೂಡಲೆ ಓಡಿ ಬಂದ ತಾಯಿ ಮಗುವಿನ ಸ್ಥಿತಿ ಕಂಡು ರಸ್ತೆ ಮಧ್ಯೆಯೇ ಮೂರ್ಛೆ ಹೋಗಿದ್ದಾರೆ. ಕೂಡಲೆ ಕುಟುಂಬದವರು ಮಗುವನ್ನು […]

Continue Reading

ಶಹಾಬಾದ: ಡಾ.ಬಾಬು ಜಗಜೀವನರಾಮ್ ಜಯಂತಿ ಆಚರಣೆ

ಸುದ್ದಿ ಸಂಗ್ರಹ ಶಹಾಬಾದಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರ 119ನೇ ಜನ್ಮದಿನವನ್ನು ನಗರದ ತಾಲೂಕು ಆಡಳಿತ ಕಚೇರಿಯಲ್ಲಿ ಆಚರಿಸಲಾಯಿತು. ಡಾ.ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ತಹಸೀಲ್ದಾರ್ ನೀಲಪ್ರಭಾ ಬಬಲಾದ ಮತ್ತು ನಿವೃತ್ತ ಅಧಿಕಾರಿ ಎಸ್.ಎಸ್ ದಿವಾಕರ್ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು.‌ ಈ ಸಂದರ್ಭದಲ್ಲಿ ಗ್ರೇಡ್- 2 ತಹಸೀಲ್ದಾರ್ ಗುರುರಾಜ ಸಂಗಾವಿ, ಅಂಬೇಡ್ಕರ್ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ರಾಜೇಶ ಯನಗುಂಟಿ, ನೌಕರರ ಸಂಘದ ಅಧ್ಯಕ್ಷ ಶಿವಪುತ್ರ ಕರಣಿಕ, ಪ್ರಮುಖರಾದ ಅಣವೀರಪ್ಪ, ಶಿವರಾಜ […]

Continue Reading

ಶ್ರೀರಾಮ ನವಮಿ: ಭವ್ಯ ಶೋಭಾಯಾತ್ರೆ

ಸುದ್ದಿ ಸಂಗ್ರಹ ಶಹಾಬಾದ್ಶ್ರೀರಾಮ ನವಮಿ ಅಂಗವಾಗಿ ಶ್ರೀರಾಮ ನವಮಿ ಉತ್ಸವ ಸಮಿತಿ ವತಿಯಿಂದ ನಗರದಲ್ಲಿ ಭವ್ಯ ಶೋಭಾಯಾತ್ರೆ‌ ನಡೆಯಿತು. ಈ ಸಂದರ್ಭದಲ್ಲಿ ರಾವೂರಿನ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು, ಬಿಜೆಪಿ ಅಧ್ಯಕ್ಷ ನಿಂಗಪ್ಪ ಹುಳಗೋಳ, ಮುಖಂಡರಾದ ಗೋರಖನಾಥ ಶಾಖಾಪೂರ, ದಿವ್ಯಾ ಹಾಗರಗಿ, ಉದ್ಯಮಿ ಅಣವೀರ ಇಂಗಿನಶೆಟ್ಟಿ ಮತ್ತು ರವಿ ರಾಠೋಡ ಸೇರಿದಂತೆ ಅನೇಕರು ಇದ್ದರು.

Continue Reading

ಬಿಸಿಲು: ಕೋರ್ಟ್ ಸಮಯ ಬದಲು

ಸುದ್ದಿ ಸಂಗ್ರಹ ಕಲಬುರಗಿಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲು ದಿನೆ ದಿನೆ ಹೆಚ್ಚುತ್ತಿದ್ದು, ಕಲಬುರಗಿ ಹೈಕೋರ್ಟ್‌ ಪೀಠ ಸೇರಿದಂತೆ ಈ ಭಾಗದ ಎಲ್ಲ ನ್ಯಾಯಾಲಯಗಳ ಕಚೇರಿ ಅವಧಿ ಮತ್ತು ಕಲಾಪದ ಅವಧಿಯ ಸಮಯ ಬದಲಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಬೇಸಿಗೆ ಹಿನ್ನೆಲೆಯಲ್ಲಿ ಏಪ್ರಿಲ್ 1ರಿಂದ ಅನ್ವಯಿಸುವಂತೆ ಎರಡು ತಿಂಗಳ ಅವಧಿಗೆ ಸರ್ಕಾರಿ ಕಚೇರಿಗಳ ಸಮಯ ಬದಲಾಯಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇದರ ಬೆನ್ನಲ್ಲೆ ಹೈಕೋರ್ಟ್‌ನ ಈ ಅದೇಶ ಹೊರಬಿದ್ದಿದೆ. ಕಲಬುರಗಿ ಹೈಕೋರ್ಟ್‌ ಪೀಠ ಹಾಗೂ ಜಿಲ್ಲೆಗಳ ಎಲ್ಲ ನ್ಯಾಯಾಲಯಗಳ […]

Continue Reading

ಶಹಾಬಾದ್: ಶ್ರದ್ಧೆ ಭಕ್ತಿಯಿಂದ ಹನುಮ ಜಯಂತಿ ಆಚರಣೆ

ಸುದ್ದಿ ಸಂಗ್ರಹ ಶಹಾಬಾದ್ನಗರದ ವಿವಿಧ ಆಂಜನೇಯ ದೇವಸ್ಥಾನಗಳಲ್ಲಿ ಶ್ರದ್ಧಾ ಭಕ್ತಿಯಿಂದ ಹನುಮ ಜಯಂತಿ ಆಚರಿಸಲಾಯಿತು. ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೆ ಹನುಮಾನ್ ದೇವರ ಮೂರ್ತಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ವಿವಿಧ ಪೂಜೆ ಭಕ್ತರಿಂದ ನಡೆಯಿತು. ಆಂಜನೇಯನ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಕುಟುಂಬ ಸಮೇತರಾಗಿ ದೇವಾಲಯಗಳಿಗೆ ಬಂದು ಸ್ವಾಮಿಯ ದರ್ಶನ ಪಡೆದರು. ಹಲವು ದೇವಸ್ಥಾನಗಳಲ್ಲಿ ಭಕ್ತರಿಗೆ ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ದೇವಸ್ಥಾನದ ಅರ್ಚಕರಾದ ರವೀಂದ್ರ ಜೋಶಿ, ಯುವಕರಾದ ವೀರಭದ್ರಯ್ಯ ಸ್ವಾಮಿ, ವೆಂಕಟೇಶ ಕೆ, ಮಹೇಶ, ವಿಶ್ವರಾಧ್ಯ ಗೌಡ, […]

Continue Reading

ಬೇಸಿಗೆಯಲ್ಲಿ ಆರೋಗ್ಯದ ಮುಂಜಾಗ್ರತೆ ವಹಿಸಿ: ಡಾ.ಅನುಪಮಾ ಕೇಶ್ವಾರ

ಸುದ್ದಿ ಸಂಗ್ರಹ ಕಲಬುರಗಿ ಈಗಾಗಲೆ ಬಿಸಿಲಿನ ತಾಪ ಹೆಚ್ಚಾಗಿದೆ, ಬೇಸಿಗೆ ದಿನಗಳಲ್ಲಿ ವಾತಾವರಣ ಸಾಕಷ್ಟು ಬದಲಾವಣೆಯಾಗಿ, ಉಷ್ಣಾಂಶದಲ್ಲಿ ಏರಿಕೆಯಾಗುವುದರಿಂದ ಮಾನವನ ದೇಹದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಆದ್ದರಿಂದ ಆರೋಗ್ಯದಲ್ಲಿ ಏರು-ಪೇರುಗಳಾಗುವದರಿಂದ ಪ್ರತಿಯೊಬ್ಬರು ಮುನ್ನೆಚ್ಚರಿಕೆ ವಹಿಸಿಕೊಂಡು, ದೇಹದ ರಕ್ಷಣೆ ಮಾಡಿಕೊಳ್ಳಬೇಕೆಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಸಲಹೆ ನೀಡಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಏರ್ಪಡಿಸಿದ್ದ ‘ಬೇಸಿಗೆ ಕಾಲದ ಆರೋಗ್ಯದ ಮುಂಜಾಗ್ರತೆ ಕಾರ್ಯಕ್ರಮ’ದಲ್ಲಿ ಮಾತನಾಡಿದ ಅವರು, […]

Continue Reading

ಸರಕಾರಿ ಕಚೇರಿಗಳ ಸಮಯ ಬದಲಾವಣೆಗೆ ಸ್ವಾಗತ: ಬಸವರಾಜ ಬಳೂಂಡಗಿ

ಸುದ್ದಿ ಸಂಗ್ರಹ ಕಲಬುರಗಿ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳು ಮತ್ತು ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಏಪ್ರಿಲ್, ಮೇ ಯಲ್ಲಿ ಸರಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಿ ಆದೇಶ ಹೊರಡಿಸಿರುವುದಕ್ಕೆ ಸರಕಾರಿ ನೌಕರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೌಕರರ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1-30ರವರಿಗೆ ಕಚೇರಿ ಸಮಯ ಬದಲಾವಣೆಗೆ […]

Continue Reading

ಜಾನಪದದಲ್ಲಿದೆ ಬದುಕಿನ ಸಾರ: ನಿರಗುಡಿ

ಸುದ್ದಿ ಸಂಗ್ರಹ ಕಲಬುರಗಿ ಜಾನಪದ ಸಂಸ್ಕೃತಿ, ಪರಂಪರೆ ದೇಶದ ಮೂಲವಾಗಿದೆ. ಇದನ್ನು ಮರೆತರೆ  ನಮಗೆ ಉಳಿಗಾಲವಿಲ್ಲ. ಜಾನಪದ ಕನ್ನಡದ ತಾಯಿ ಬೇರಾಗಿದೆ. ಜಾನಪದದಲ್ಲಿದೆ ಬದುಕಿನ ಸಾರ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಎಚ್ ನಿರಗುಡಿ ಹೇಳಿದರು. ನಗರದ ಶೆಟ್ಟಿ ಕಾಂಪ್ಲೆಕ್ಸ್ ಎದುರುಗಡೆಯ ಶಾರದಾ ವಿವೇಕ ಮಹಿಳಾ ಪದವಿ ಕಾಲೇಜ್’ನಲ್ಲಿಂದು ಏರ್ಪಡಿಸಿದ್ದ  ‘ಕನ್ನಡ ಜಾನಪದ ಪರಿಷತ್ತಿನ 11ನೇ  ಸಂಸ್ಥಾಪನಾ ದಿನಾಚರಣೆ’  ಉದ್ಘಾಟಿಸಿ, ಮಾತನಾಡಿದರು. ಕಾಲೇಜಿನ ಪ್ರಾಚಾರ್ಯೆ ಡಾ.ಭಾಗಿರತಿ ಎಚ್. ಗುಡ್ಡೇವಾಡಿ ಮಾತನಾಡಿ, ಆಹಾರ, ಆಚಾರ, ವಿಚಾರ ಸೇರಿದಂತೆ  […]

Continue Reading

ಹಿಂದೂ-ಮುಸ್ಲಿಮರ ಭಾವೈಕ್ಯ ತಾಣ ತೊನಸನಳ್ಳಿ

ಸುದ್ದಿ ಸಂಗ್ರಹ ಶಹಾಬಾದ್​ ತೊನಸನಳ್ಳಿ ಮಠ ಭಕ್ತರಿಗೆ ಬೇಡಿದ್ದನ್ನು ಕೊಡುವ ಹಾಗೂ ಭಾವೈಕ್ಯತೆಯ ಸ್ಥಾನವಾಗಿದೆ. ಇಲ್ಲಿ ಎಲ್ಲ ಧರ್ಮದವರು ಭಕ್ತರಾಗಿದ್ದು, ಜಿಲ್ಲೆಯಲ್ಲಿ ಒಂದು ವಿಶಿಷ್ಟ ಭಾವೈಕ್ಯತೆಯ ಸ್ಥಾನವಾಗಬೇಕು ಎಂದು 10ನೇ ಪೀಠಾಧಿಪತಿ ಡಾ.ಮಲ್ಲಣ್ಣಪ್ಪ ಸ್ವಾಮಿಗಳು ಹೇಳಿದರು. ತೊನಸನಳ್ಳಿ (ಎಸ್​) ಗ್ರಾಮದ ಸದ್ಗುರು ಮಲ್ಲಣ್ಣಪ್ಪ ಮಹಾರಾಜ, ಶ್ರೀ ಅಲ್ಲಮಪ್ರಭು ಹಾಗೂ ಹಜರತ್​ ಸುಲ್ತಾನ್​ ಅಹ್ಮದ್​ ಶಾಹವಲಿ ಅವರ ಜಾತ್ರೋತ್ಸವ ನಿಮಿತ್ತ ಶನಿವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಧರ್ಮಸಭೆಯಲ್ಲಿ ನೇತೃತ್ವ ವಹಿಸಿ ಆಶೀರ್ವಚನ ನೀಡಿದ ಅವರು, ಇಲ್ಲಿ ರಾತ್ರಿ ಗಂಧೋತ್ಸವ ನಡೆಯುತ್ತದೆ, […]

Continue Reading

ಕ್ಷಯರೋಗ ಮುಕ್ತ ಭಾರತ-2030ಕ್ಕೆ ಸಹಕಾರ ಅಗತ್ಯ: ಡಾ.ಅನುಪಮಾ ಕೇಶ್ವಾರ

ಸುದ್ದಿ ಸಂಗ್ರಹ ಕಲಬುರಗಿ ‘ಕ್ಷಯರೋಗ ಮುಕ್ತ ಭಾರತ-2030’ಕ್ಕೆ ಆರೋಗ್ಯ ಇಲಾಖೆಯ ಜೊತೆಗೆ ಸಮುದಾಯದ ಸಹಕಾರ ಅಗತ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿನ ಶಹಾಬಜಾರ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಮಂಗಳವಾರ ಜರುಗಿದ ‘ವಿಶ್ವ ಕ್ಷಯರೋಗ ನಿರ್ಮಲನಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಜಾಗೃತಿಯ ಕರಪತ್ರ ವಿತರಿಸಿ, ಮಾತನಾಡಿದ ಅವರು, ಎರಡು ವಾರ ಅಥವಾ ಹೆಚ್ಚಿನ ಅವಧಿಯ ಕೆಮ್ಮು, ಕಫದ ಜೊತೆಗೆ ರಕ್ತ ಕಾಣಿಸುವುದು, ವಿಶೇಷವಾಗಿ ರಾತ್ರಿ ವೇಳೆಯಲ್ಲಿ ಜ್ವರ […]

Continue Reading