302 ಗ್ರಾಂ ಗಾಂಜಾ ಜಪ್ತಿ: ಆರೋಪಿ ಬಂಧನ

ಸುದ್ದಿ ಸಂಗ್ರಹ ಕಲಬುರಗಿಇಲ್ಲಿನ ತಾಜನಗರ 2ನೇ ಕ್ರಾಸ್ ಮನೆಯೊಂದರ ಮೇಲೆ ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ, 302 ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ. ಅಬ್ದುಲ್‌ ರಜಾಕ್‌ ಬಂಧಿತ ಆರೋಪಿ, ಅಬಕಾರಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಸಣ್ಣದಾದ 90 ಪ್ಲಾಸ್ಟಿಕ್‌ ಪೌಚ್‌ಗಳು ದೊರೆತಿವೆ. ಅದರಲ್ಲಿ ಹೂ, ಬೀಜ ಮತ್ತು ಎಲೆಗಳಿಂದ ಕೂಡಿದ ಒಣ ಗಾಂಜಾ ಇದೆ. ಆರೋಪಿಯು ವ್ಯಸನಿಗಳಿಗೆ ಮಾರುವ ಉದ್ದೇಶದಿಂದ ಗಾಂಜಾ ಸಂಗ್ರಹಿಸಿದ್ದ ಎಂದು ಮೂಲಗಳು ಹೇಳಿವೆ. ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ಅಧೀಕ್ಷಕ ಮಲ್ಲಿಕಾರ್ಜುನ ದೊಡ್ಡಮನಿ, […]

Continue Reading

ಬೆಂಗಳೂರಲ್ಲಿ ಅತಿದೊಡ್ಡ ಚಿನ್ನ ಲೂಟಿ: ಹೋಲ್‌ಸೇಲ್ ಖರೀದಿ ನೆಪದಲ್ಲಿ 1 ಕೆಜಿ 850 ಗ್ರಾಂ ಚಿನ್ನ ಕಳ್ಳತನ

ಸುದ್ದಿ ಸಂಗ್ರಹ ಬೆಂಗಳೂರುಹೋಲ್‌ಸೇಲ್ ಚಿನ್ನ ಖರೀದಿಸುವುದಾಗಿ ನಂಬಿಸಿ 3 ಕೋಟಿ ರೂ. ಮೌಲ್ಯದ 1 ಕೆಜಿ 850 ಗ್ರಾಂ ಚಿನ್ನಾಭರಣ ಕಳವು ಮಾಡಿ ಪರಾರಿಯಾದ ಘಟನೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ನಡೆದಿದೆ. ಪರೇಶ್ ಸೋನಿ, ಶ್ಯಾಮ್ ಮತ್ತು ಚಂದ್ರಶೇಖರ್ ರಾವ್ ಕಳ್ಳತನ ಮಾಡಿದ ಆರೋಪಿಗಳು. ನಗರ್ತಪೇಟೆಯ ಮೆಹ್ತಾ ಗೋಲ್ಡ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಸೇಲ್ಸ್ ಮ್ಯಾನೇಜರ್ ಆಗಿರುವ ಮಹೇಂದ್ರಕುಮಾರ್ ಜೈನ್ ನೀಡಿದ ದೂರಿನ ಮೇರೆಗೆ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌. ಪರೇಶ್ ಸೋನಿ ಎಂಬಾತ ತಾನು ಹೋಲ್‌ಸೇಲ್ ಚಿನ್ನದ […]

Continue Reading

ಕಲಬುರಗಿ ಜಿ.ಪಂ ಸಿಇಒ ಆಗಿ ಸಂಕನೂರ ನೇಮಕ

ಸುದ್ದಿ ಸಂಗ್ರಹ ಕಲಬುರಗಿಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್‌ ಸಿಂಗ್ ಮೀನಾ ಅವರು ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ರಾಹುಲ್‌ ಸಂಕನೂರ ನೇಮಕಗೊಂಡಿದ್ದಾರೆ. 2017ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್‌ ಅಧಿಕಾರಿಯಾಗಿರುವ ಭಂವರ್‌ ಸಿಂಗ್‌ ಅವರನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ. 2019ರ ಬ್ಯಾಚ್‌ನ ಕರ್ನಾಟಕ ಕೇಡರ್‌ ಐಎಎಸ್‌ ಅಧಿಕಾರಿಯಾದ ರಾಹುಲ್‌ ಅವರು ಸದ್ಯ ಐಟಿ- ಬಿಟಿ ಇಲಾಖೆಯ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಭಂವರ್‌ ಸಿಂಗ್‌ ಮೀನಾ ಅವರನ್ನು 2023ರ ಜೂನ್‌ನಿಂದ ಕಲಬುರಗಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿ […]

Continue Reading

ಶಹಾಬಾದ್: ರಸ್ತೆ ಅಪಘಾತದಲ್ಲಿ ಬೈಕ್ ಹಿಂಬದಿ ಸವಾರನ ಸಾವು

ಸುದ್ದಿ ಸಂಗ್ರಹ ಶಹಾಬಾದ್ರಾವೂರಯಿಂದ ಶಹಾಬಾದ್ ಕಡೆಗೆ ಬರುವಾಗ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್’ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕ್‌ ಹಿಂಬದಿ ಸವಾರ ಮೃತಪಟ್ಟಿದ್ದಾರೆ. ರಾವೂರ ಮತ್ತು ಮಾಲಗತ್ತಿಯ ರಾಜ್ಯ ಹೆದ್ದಾರಿ–150ರಲ್ಲಿ ಘಟನೆ ಜರುಗಿದೆ. ಹಳೆಯ ಶಹಾಬಾದ್ ನಿವಾಸಿ ಮಹ್ಮದ್ ಕಾಸಿಂ ತಂದೆ ಮಹ್ಮದ್ ಇಬ್ರಾಹಿಂ (22) ಮೃತರು. ಕಾಸಿಂ ಅವರು ತನ್ನ ಸ್ನೇಹಿತ ಅಬ್ದುಲ್ ಹಕೀಮ್ ಜೊತೆ ಸೇರಿ ಬೈಕ್‌ನಲ್ಲಿ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಬೈಕ್ ನಡೆಸುತ್ತಿದ್ದ ಅಬ್ದುಲ್ ಹಕೀಮ್ ಎಂಬಾತನಿಗೆ […]

Continue Reading

ಕಲಬುರಗಿಯಲ್ಲಿ ರೌಡಿಗಳ ಪರೇಡ್‌: ಮತ್ತೆ ಬಾಲ ಬಿಚ್ಚಿದ್ರೆ ಹುಷಾರ್‌

ಸುದ್ದಿ ಸಂಗ್ರಹ ಕಲಬುರಗಿನಗರದಲ್ಲಿ ಶನಿವಾರ 327 ರೌಡಿಗಳ ಪರೇಡ್‌ ನಡೆಸಿದ ಪೊಲೀಸ್‌ ಕಮಿಷನರ್‌ ಶರಣಪ್ಪ ಎಸ್‌.ಡಿ ಅವರು, ಮತ್ತೆ ಬಾಲ ಬಿಚ್ಚಿದ್ರೆ ಹುಷಾರ್‌, ಇನ್ಮುಂದೆ ಒಂದೆ ಒಂದು ಸಣ್ಣ ಕೇಸ್‌ನಲ್ಲಿ ಭಾಗಿಯಾದ್ರೂ ಕಠಿಣ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ನಗರದ ಸಿಎಆರ್‌ ಪರೇಡ್ ಮೈದಾನದಲ್ಲಿ ಈ ರೌಡಿಗಳ ಪರೇಡ್‌ ನಡೆಯಿತು. ನಗರ ಪೊಲೀಸ್‌ ಆಯುಕ್ತಾಲಯ ವ್ಯಾಪ್ತಿಯಲ್ಲಿನ 10 ಪೊಲೀಸ್‌ ಠಾಣೆಗಳ ಇನ್‌ಸ್ಪೆಕ್ಟರ್‌ಗಳು ಹಾಗೂ ಸಿಬ್ಬಂದಿ ಶನಿವಾರ ಬೆಳ್ಳಂಬೆಳಗ್ಗೆ ರೌಡಿಗಳ ಮನೆ ತಪಾಸಣೆ ನಡೆಸಿದರು. ಬೆಳಕು […]

Continue Reading

ಕಲಬುರಗಿ: ಕಬ್ಬಿಣದ ರಾಡ್‌ನಿಂದ ಹೊಡೆದು ಸೆಕ್ಯುರಿಟಿ ಗಾರ್ಡ್ ಹತ್ಯೆ

ಸುದ್ದಿ ಸಂಗ್ರಹ ಕಲಬುರಗಿನಗರದ ರಾಮ ಮಂದಿರದ ಬಳಿ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಭದ್ರತಾ ಸಿಬ್ಬಂದಿಯೊಬ್ಬರನ್ನು ಶನಿವಾರ ತಡರಾತ್ರಿ 1 ಗಂಟೆ ಸುಮಾರಿಗೆ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ​ಆಳಂದ ತಾಲೂಕಿನ ಹಡಲಗಿ ಗ್ರಾಮದ ನಿವಾಸಿ ರವಿಚಂದ್ರ ಖೇಡ್ (45) ಕೊಲೆಯಾದ ದುರ್ದೈವಿ. ಹಾಲಿ ನಗರದ ರಾಣೇಶಪೀರ್ ದರ್ಗಾ ಪ್ರದೇಶದಲ್ಲಿ ನೆಲೆಸಿದ್ದರು. ರವಿಚಂದ್ರ ಕಳೆದ ನಾಲ್ಕು ವರ್ಷಗಳ ಹಿಂದಷ್ಟೆ ಬಿಎಸ್‌ಎಫ್‌ನಿಂದ್‌ ನಿವೃತ್ತರಾಗಿದ್ದರು. ಸದ್ಯ ಕಲಬುರಗಿಯ ಇಂಡಿಯನ್ ಆಯಿಲ್ ಡಿಪೊದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಒಂದು ದಿನದ […]

Continue Reading

ಕಲಬುರಗಿ: ವರ್ಗಾವಣೆಯಾದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ಗೆ ಆತ್ಮೀಯ ಬೀಳ್ಕೊಡುಗೆ

ಸುದ್ದಿ ಸಂಗ್ರಹ ಕಲಬುರಗಿಜಿಲ್ಲೆಯಲ್ಲಿ ಹೊಸ ತಹಸೀಲ್ದಾರ್‌ ಕಚೇರಿಗಳ ಆರಂಭ, 4 ಹೊಸ ಪ್ರಜಾಸೌಧ ಕಾಮಗಾರಿಗಳಿಗೆ ಚಾಲನೆ, ಸಕಾಲ ಸೇವೆಯಲ್ಲಿ ನಂ.1, 364 ಕಂದಾಯ ಗ್ರಾಮ ಘೋಷಣೆ, ಹಕ್ಕು ಪತ್ರ ವಿತರಣೆ, ಕಲಬುರಗಿ ರೊಟ್ಟಿಗೆ ಅಂತರರಾಷ್ಟ್ರೀಯ ಮಾನ್ಯತೆ, ಕಾರ್ಮಿಕರ ಆಶ್ರಯ ತಂಗುದಾಣ, ಅನಾಥ ಮಕ್ಕಳ ದತ್ತು ಕಾರ್ಯ, ರಾಜಿ ಇಲ್ಲದ ಕೆಲಸ ಜಿಲ್ಲಾಧಿಕಾರಿಯಾಗಿ ಬಿ.ಫೌಜಿಯಾ ತರನ್ನುಮ್‌ ಅವರು ತಮ್ಮ ಆಡಳಿತ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಅಧಿಕಾರಿಗಳು ಬಿಚ್ಚಿಟ್ಟ ಯಾದಿ ಇದು. ವರ್ಗಾವಣೆಯಾದ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್‌ ಅವರಿಗೆ […]

Continue Reading

ಶಾಲಾ-ಕಾಲೇಜುಗಳಲ್ಲಿ ಹಿಜಬ್‌ಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ – ಕೇಸರಿ ಶಾಲಿಗಿಲ್ಲ ಅವಕಾಶ 

ಸುದ್ದಿ ಸಂಗ್ರಹ ಬೆಂಗಳೂರು ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ರಾಜ್ಯ ಸರ್ಕಾರ ಮತ್ತೆ ಅವಕಾಶ ಕಲ್ಪಿಸಿದೆ. ಎಲ್ಲಾ ಧರ್ಮಗಳ ಧಾರ್ಮಿಕ, ಸಾಂಪ್ರದಾಯಿಕ ವಸ್ತುಗಳಿಗೆ ಅವಕಾಶ ಕೊಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಶೈಕ್ಷಣಿಕ ವರ್ಷದಿಂದಲೇ ಆದೇಶ ಜಾರಿಗೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.  ಸರ್ವಶಿಕ್ಷಣ ಕಚೇರಿಯಲ್ಲಿ ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್ ಅವರೊಂದಿಗೆ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಹಿಜಬ್‌ ನಿರ್ಬಂಧಿಸಿ 2022ರಲ್ಲಿ ಬಿಜೆಪಿ ಸರ್ಕಾರ […]

Continue Reading

ಕಲಬುರಗಿ ನೂತನ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಸುದ್ದಿ ಸಂಗ್ರಹ ಕಲಬುರಗಿಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರ್‌ನ 2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಇಕ್ರಮ್ ಶರೀಫ್ (ಮೊಹಮ್ಮದ್ ಇಕ್ರಮುಲ್ಲಾ ಶರೀಫ್) ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಹೂಗುಚ್ಛ ನೀಡಿ ಶುಭ ಕೋರಿದರು. ಸರ್ಕಾರ ಇತ್ತೀಚೆಗೆ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧೀನದ ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಿತ್ತು. ಅವರ ಸ್ಥಾನಕ್ಕೆ ಹಣಕಾಸು ಇಲಾಖೆಯ […]

Continue Reading

ಸರ್ಕಾರಿ ನೌಕರರಿಗೆ ಶೇ.1.5 ತುಟ್ಟಿಭತ್ಯೆ ಹೆಚ್ಚಳ: ಬಳೂಂಡಗಿ ಹರ್ಷ

ಸುದ್ದಿ ಸಂಗ್ರಹ ಕಲಬುರಗಿ ರಾಜ್ಯದ ಸರಕಾರಿ ನೌಕರರ ದೀರ್ಘಾಕಾಲದ ಬೇಡಿಕೆಯಾಗಿದ್ದ ತುಟ್ಟಿಭತ್ಯೆ ಹೆಚ್ಚಳಕ್ಕೆ ಮುಖ್ಯಮಂತ್ರಿ ಅಧಿಕೃತವಾಗಿ ಅನುಮೋದನೆ ನೀಡಿ ಮೂಲ ವೇತನದ ಶೇ.1.5 ರಷ್ಟು ತಟ್ಟಿಭತ್ಯೆ ಹೆಚ್ಚಳವು ಜನೆವರಿ 1 ರಿಂದ ಪೂರ್ವಾನ್ವಯವಾಗುವಂತೆ ಇತ್ತೀಚೆಗೆ ಆರ್ಥಿಕ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದಕ್ಕೆ  ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಹರ್ಷ ವ್ಯಕ್ತಪಡಿಸಿದ್ದಾರೆ.  ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರಕಾರಿ ನೌಕರರ ಸಂಘದ ರಾಜಾಧ್ಯಕ್ಷ ಸಿ.ಎಸ್ ಷಡಾಕ್ಷರಿ ನೇತೃತ್ವದ ಪದಾಧಿಕಾರಿಗಳ ನಿಯೋಗ ಡಿ.ಎ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿಗೆ […]

Continue Reading