ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಫಾರ್ಮ್‌ ವಿತರಣೆಗೆ ಆ. 8ರ ವರೆಗೆ ಅವಕಾಶ

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕ, ದೆಹಲಿ, ಪಂಜಾಬ್‌ ಮತ್ತು ತೆಲಂಗಾಣದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಕೆಲವು ದಿನಗಳವರೆಗೆ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ಹಿನ್ನೆಲೆ ರಾಜ್ಯದಲ್ಲೂ ಫಾರ್ಮ್‌ (ನಮೂನೆ) ಹಿಂದಿರುಗಿಸಲು ಅವಧಿ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ತಿಂಗಳ ಅಂತ್ಯದ ವರೆಗೆ ಬಿಎಲ್‌ಒಗಳಿಗೆ (BLOs) ಎಸ್‌ಐಆರ್‌ ನಮೂನೆ ವಿಸ್ತರಣೆಗೆ ಸಮಯ ಇತ್ತು. ಇದೀಗ ಆಗಸ್ಟ್‌ 8ರ ಅವಧಿ ವಿಸ್ತರಿಸಲಾಗಿದೆ. ಬಿಎಲ್‌ಒಗಳು ಮನೆ ಮನೆಗೆ ತೆರಳಿ […]

Continue Reading

ಕಲಬುರಗಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಕೈದಿ ಕಾಲಿಗೆ ಗುಂಡೇಟು, ಬಂಧನ

ಸುದ್ದಿ ಸಂಗ್ರಹ ಕಲಬುರಗಿನಗರದ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಶಿಕ್ಷೆಗೊಳಗಾದ ಕೈದಿಗಳ ಪೈಕಿ ಒಬ್ಬನನ್ನು ಪೊಲೀಸರು ಬುಧವಾರ ಬೆಳಗ್ಗೆ ಪತ್ತೆಹಚ್ಚಿದ್ದು, ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ‌ ದಾಳಿ ಮಾಡಿದ್ದರಿಂದ ಖಾಕಿಪಡೆವರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಸಂತೋಷ ಮೇತ್ರೆ ಗುಂಡೇಟು ತಿಂದು ಗಾಯಗೊಂಡಿದ್ದು, ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡು ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈತ ಔರಾದ ತಾಲೂಕಿನ ಸಂತಪುರ ಗ್ರಾಮದವ. ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ಈ ಕುರಿತು ನಗರ ಪೊಲೀಸ್ […]

Continue Reading

ಕಲಬುರಗಿ ಸೆಂಟ್ರಲ್ ‌ಜೈಲಿನಿಂದ‌ ಕೈದಿಗಳು ಪರಾರಿ: ಪತ್ತೆಗೆ ಮೂರು ತಂಡ ರಚನೆ

ಸುದ್ದಿ ಸಂಗ್ರಹ ಕಲಬುರಗಿನಗರದ ಹೊರವಲಯದ ಸೆಂಟ್ರಲ್ ಜೈಲಿನಿಂದ ಮಂಗಳವಾರ ನಸುಕಿನಲ್ಲಿ ಪರಾರಿಯಾಗಿರುವ ಮೂವರು ಅಪರಾಧಿಗಳ ಪತ್ತೆಗೆ ಮೂರು ತಂಡಗಳು ರಚಿಸಲಾಗಿದೆ ಎಂದು ಕಲಬುರಗಿ ನಗರ ಪೊಲೀಸ್‌ ಕಮಿಷನರ್ ಶರಣಪ್ಪ ಎಸ್‌.ಡಿ ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಿಗ್ಗೆ 4.30ರ ಹೊತ್ತಿಗೆ ಕೈದಿಗಳು ಪರಾರಿಯಾಗಿರುವ ಮಾಹಿತಿ ಸಿಕ್ಕಿದೆ. ಮೂವರು ಬೇರೆ–ಬೇರೆ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾದ ಅಪರಾಧಿಗಳಾಗಿದ್ದಾರೆ. ಅವರ ಪತ್ತೆಗೆ ಕಾನೂನು ಮತ್ತು ಸುವವಸ್ಥೆ ವಿಭಾಗದ ಡಿಸಿಪಿ ಶಾಲೂ ನೇತೃತ್ವದಲ್ಲಿ ಮೂವರು ಎಸಿಪಿಗಳ ನೇತೃತ್ವದ […]

Continue Reading

ಕಲಬುರಗಿ: ಸೆಂಟ್ರಲ್ ‌ಜೈಲಿನಿಂದ‌ ಮೂವರು ಸಜಾ‌ ಕೈದಿಗಳು ಪರಾರಿ

ಸುದ್ದಿ ಸಂಗ್ರಹ ಕಲಬುರಗಿನಗರದ ಹೊರವಲಯದ ಹೆದ್ದಾರಿಯಲ್ಲಿರುವ ಕೇಂದ್ರ ಕಾರಾಗೃಹದಿಂದ (ಸೆಂಟ್ರಲ್ ಜೈಲು) ಮೂವರು ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಘಟನೆ ಮಂಗಳವಾರ ನಸುಕಿ‌ನ ಜಾವ 4 ಗಂಟೆ ಸುಮಾರಿಗೆ ನಡೆದಿದೆ. ಮಸ್ತಾನ್, ಸಂತೋಷ್ ಮತ್ತು ಸಾಗರ್ ಪರಾರಿಯಾದ ಕೈದಿಗಳು. ಬೀದರ್‌ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈ ಮೂವರು ಶಿಕ್ಷೆಗೆ ಒಳಪಟ್ಟಿದ್ದರು. ಮಧ್ಯರಾತ್ರಿ 3 ಗಂಟೆಗೆ ಜೈಲಿನ ಕಂಪೌಡ್ ಹಾರಿ ಈ ಮೂವರು ಪರಾರಿಯಾಗಿದ್ದಾರೆ. ಕೈದಿಗಳು ಪರಾರಿಯಾಗಲು ಜೈಲು ಸಿಬ್ಬಂದಿಯೇ ಸಹಕಾರ ನೀಡಿದ್ದಾರೆ ಎಂಬ ಶಂಕೆ ಕೂಡ ವ್ಯಕ್ತವಾಗಿದೆ. […]

Continue Reading

ಶಹಾಬಾದ್: ಜು.15ರಂದು ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ

ಸುದ್ದಿ ಸಂಗ್ರಹ ಶಹಾಬಾದ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಜು.15ರಂದು ಪತ್ರಿಕಾ ದಿನಾಚರಣೆ, ಛಾಯಾಚಿತ್ರ ಪ್ರದರ್ಶನ ಮತ್ತು ಎಸ್‌ಎಸ್‌ಎಲ್’ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಲಾಗಿದೆ ಎಂದು ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಲೋಹಿತ ಕಟ್ಟಿ ತಿಳಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.15 ರಂದು ಬೆಳಗ್ಗೆ 11 ಗಂಟೆಗೆ ಲಕ್ಷ್ಮಿಗಂಜನ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ, ಶಾಸಕ ಬಸವರಾಜ ಮತ್ತಿಮೂಡ್ […]

Continue Reading

ಜು.12ರಂದು ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಣೆ: ಇಲಾಖೆ ಮಾಹಿತಿ

ಸುದ್ದಿ ಸಂಗ್ರಹ ಬೆಂಗಳೂರುಜು.12ರ ಭಾನುವಾರದಂದು ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಮಾಹಿತಿ ನೀಡಿದೆ. ರಾಜ್ಯಾದ್ಯಂತ ಇರುವ ಎಲ್ಲಾ ಉಪನೋಂದಣಿ ಕಚೇರಿಗಳು ಜು.12 ರಂದು ರವಿವಾರ ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ. ಸಾರ್ವಜನಿಕ ರಜಾ ದಿನವಾಗಿದ್ದರೂ ಸಹ, ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರ್ಯದೊತ್ತಡ ನಿವಾರಣೆಗಾಗಿ ಎಂದಿನಂತೆ ತೆರೆದಿದ್ದು, ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ. ​ಈ ದಿನದಂದು ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ ಖರೀದಿ ಮತ್ತು ಇಲಾಖೆಗೆ ಸಂಬಂಧಿಸಿದ […]

Continue Reading

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ವಾಕಿಂಗ್‌ಗೆ ಬಂದಿದ್ದವರಿಗೆ ದರ್ಶನ, ಪಾರ್ಕ್‌ನಿಂದ ಎದ್ನೋ ಬಿದ್ನೋ ಅಂತ ಓಡಿದ ಜನ

ಸುದ್ದಿ ಸಂಗ್ರಹ ಬೆಂಗಳೂರುಸಿಲಿಕಾನ್‌ ಸಿಟಿಯಲ್ಲಿ ಹೆಚ್ಚುತ್ತಿರುವ ನಗರೀಕರಣದಿಂದಾಗಿ ಕೆಲವೊಮ್ಮೆ ಕಾಡು ಪ್ರಾಣಿಗಳು ನಾಡಿಗೆ ಪ್ರವೇಶಿಸುತ್ತವೆ. ವಿಶೇಷವಾಗಿ ದಕ್ಷಿಣ ಬೆಂಗಳೂರು ಹಾಗೂ ಮಾಗಡಿ ರಸ್ತೆಯಂತಹ ಪ್ರದೇಶಗಳಲ್ಲಿ ಚಿರತೆಗಳು ಆಗಾಗ್ಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ನಿದರ್ಶನಗಳಿವೆ. ಇಂತಹ ಸಂದರ್ಭಗಳಲ್ಲಿ ಅರಣ್ಯ ಇಲಾಖೆಯು ಸ್ಥಳದಲ್ಲೇ ಬೋನುಗಳು ಇರಿಸಿ ಪ್ರಾಣಿಗಳನ್ನು ಸೆರೆಹಿಡಿಯುವ ಕಾರ್ಯಾಚರಣೆ ನಡೆಸುತ್ತದೆ. ಸದ್ಯ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳ ನಿದ್ದೆಗೆಡಿಸಿರುವುದು ತಾಜಾ ಉದಾಹರಣೆಯಾಗಿದೆ. ಬೆಂಗಳೂರಿನ ಬ್ಯಾಡ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಇಎಲ್ ಲೇಔಟ್ ನಲ್ಲಿ ನಿನ್ನೆ […]

Continue Reading

ಕಲಬುರಗಿ ನಗರದಲ್ಲಿ ನಡುರಾತ್ರಿ ಲಘು ಭೂಕಂಪ: ಭಯಗೊಂಡ ಜನತೆ

ಸುದ್ದಿ ಸಂಗ್ರಹ ಕಲಬುರಗಿ ನಗರ ಸೇರಿದಂತೆ ಕೆಲವು ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ನಸುಕಿನ 1.30ರ ವೇಳೆ ಕೆಲ ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ. ಇದರಿಂದಾಗಿ ಜನ ಭಯಗೊಂಡು ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. ಭೂಮಿ ಕಂಪಿಸುತ್ತಿದ್ದಂತೆ ಹಲವು ಮನೆಗಳಲ್ಲಿ ಕಿಟಕಿ, ಬಾಗಿಲುಗಳು ಸದ್ದು ಮಾಡಿವೆ ಮತ್ತು ಮೇಲ್ಮಟ್ಟದಲ್ಲಿ ಇಟ್ಟಿದ್ದ ವಸ್ತುಗಳು ನೆಲಕ್ಕುರುಳಿ ಬಿದ್ದಿದ್ದು, ಆಗ ಜನರಿಗೆ ಇದು ಭೂಕಂಪ ಎಂಬುದು ಗೊತ್ತಾಗಿದೆ. ಇದರಿಂದಾಗಿ ಭಯಗೊಂಡು ಮನೆಯಿಂದ ಹೊರಗಡೆ ಓಡಿಬಂದು ರಕ್ಷಣೆ ಪಡೆದಿದ್ದಾರೆ ಎಂದು ಮೂಲಗಳು […]

Continue Reading

ಜು.11ರಂದು ಬೆಂಗಳೂರಿನಲ್ಲಿ ನಮ್ಮ ಅಭಿಮಾನದ ಅಭಿನಂದನೆ: ಬಸವರಾಜ ಬಳೂಂಡಗಿ

ಸುದ್ದಿ ಸಂಗ್ರಹ ಕಲಬುರಗಿರಾಜ್ಯ ಸರ್ಕಾರಿ ನೌಕರರ ಸಂಘವು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌, ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರಿಗೆ ಜುಲೈ 11ರಂದು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಹಳೆ ಪಿಂಚಣಿ ಯೋಜನೆ ಮರು ಜಾರಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಅಂದು ಮನವಿ ಸಲ್ಲಿಸಲಾಗುವುದು ಎಂದು ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ‘ನಮ್ಮಭಿಮಾನದ ಅಭಿನಂದನೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 11 ಗಂಟೆಗೆ […]

Continue Reading

ಶರಣಬಸವೇಶ್ವರ ದೇವಸ್ಥಾನ, ಕೆಬಿಎನ್ ದರ್ಗಾ ದರ್ಶನ ಪಡೆದ ಸಿಎಂ ಡಿ.ಕೆ ಶಿವಕುಮಾರ್

ಸುದ್ದಿ ಸಂಗ್ರಹ ಕಲಬುರಗಿಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ ಈ ಭಾಗದ ಸೌಹಾರ್ದ ಪರಂಪರೆಯ ಎರಡು ಕಣ್ಣುಗಳಂತಿರುವ ಶರಣಬಸವೇಶ್ವರರ ‌ದೇವಸ್ಥಾನ ಹಾಗೂ ಸೂಫಿ ಸಂತ ಖಾಜಾ ಬಂದಾನವಾಜ್ ದರ್ಗಾಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಗರದ ಐವಾನ್ ಎ ಶಾಹಿ ಅತಿಥಿ ಗೃಹದಲ್ಲಿ ‌ಸಾರ್ವಜನಿಕರ ಅಹವಾಲು ಆಲಿಸಿದ ಮುಖ್ಯಮಂತ್ರಿ ‌ಶಿವಕುಮಾರ್, ಮೊದಲಿಗೆ ವೈದ್ಯಕೀಯ ‌ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲರ ಮನೆಗೆ ಸೌಜನ್ಯಯುತ ಭೇಟಿ ನೀಡಿದರು. ಅಲ್ಲಿಯೆ ಉಪಾಹಾರ ಸ್ವೀಕರಿಸಿದರು. ನಂತರ ಈ ಭಾಗದ ಪ್ರಸಿದ್ಧ ಶರಣಬಸವೇಶ್ವರ ದೇವಸ್ಥಾನಕ್ಕೆ […]

Continue Reading