ಉತ್ತಮ ಸಮಾಜ ನಿರ್ಮಾಣಕ್ಕೆ ಗುರು-ಹಿರಿಯರ ಮಾರ್ಗದರ್ಶನ ಅಗತ್ಯ: ಡಾ.ಸದಾನಂದ ಪೆರ್ಲ

ಸುದ್ದಿ ಸಂಗ್ರಹ ಕಲಬುರಗಿಹಿರಿಯ ನಾಗರಿಕರ ಅನುಭವ ಮತ್ತು ಆದರ್ಶಗಳು ಭವಿಷ್ಯದ ಬಾಳಿಗೆ ದಾರಿ ದೀಪವಾಗುತ್ತದೆ‌. ಉತ್ತಮ ಸಮಾಜ ನಿರ್ಮಾಣಕ್ಕೆ ಗುರು ಹಿರಿಯರ ಮಾರ್ಗ ದರ್ಶನ ಅಗತ್ಯ ಎಂದು ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ನಿರ್ವಾಹಕ ಡಾ.ಸದಾನಂದ ಪೆರ್ಲ ಹೇಳಿದರು. ನಗರದ ದನಗರ ಗಲ್ಲಿಯ ಕೋರಿ ಮಠದ ರೇವಣಸಿದ್ದೇಶ್ವರ ಪ್ರೌಢ ಶಾಲೆಯಲ್ಲಿ ಶುಕ್ರವಾರ ಜರುಗಿದ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, 1988ರಲ್ಲಿ ಅಮೆರಿಕದ ಅಧ್ಯಕ್ಷರಾದ ರೊನಾಲ್ಡ್ ರೇಗನ್ […]

Continue Reading

ಕಲಬುರಗಿ: ಕರ್ತವ್ಯ ಲೋಪ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ ಅಮಾನತು

ಸುದ್ದಿ ಸಂಗ್ರಹ ಕಲಬುರಗಿನಗರದ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿ ಕಾಣೆಯಾದ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಇಬ್ಬರು ಪೊಲೀಸ್‌ ಕಾನ್‌ಸ್ಟೆಬಲ್‌ಗಳನ್ನು ನಗರ ಪೊಲೀಸ್‌ ಕಮಿಷನರ್‌ ಶರಣಪ್ಪ ಎಸ್‌.ಡಿ ಅಮಾನತುಗೊಳಿಸಿ ಆದೇಶಿಸಿದ್ದಾರೆ. ನೀಲಕಂಠ ಪಾಟೀಲ ಮತ್ತು ಚಂದ್ರಶೇಖರ ಅಮಾನತುಗೊಂಡವರು. ಅಫಜಲಪುರ ತಾಲೂಕಿನ ಹಾವನೂರು ಗ್ರಾಮದ ಶಿವಕುಮಾರ ಹೊಸಮನಿ ಜೂನ್ 30ರಂದು ಡಿಎಪಿ ರಸಗೊಬ್ಬರ ತರಲು ಕಲಬುರಗಿ ನಗರಕ್ಕೆ ಬಂದಿದ್ದರು. ರಾತ್ರಿಯಾದರೂ ಮನೆಗೆ ಮರಳಿರಲಿಲ್ಲ. ಕುಟುಂಬಸ್ಥರು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಬಳಿಕ […]

Continue Reading

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಮೇಲೆ ಇಡಿ ದಾಳಿ

ಸುದ್ದಿ ಸಂಗ್ರಹ ಬೆಂಗಳೂರು ಕೆಪಿಎಸ್‌ಸಿ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಕೋಟ್ಯಂತರ ಅವ್ಯಹಾರ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆಸಿದೆ. 13 ಕಡೆಯಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ನೇಮಕಾತಿಯಲ್ಲಿ ಇದ್ದ ಮಧ್ಯವರ್ತಿಗಳ ಮನೆಯ ಮೇಲೂ ದಾಳಿ ನಡೆದಿದೆ. APS ಪಶುವೈದ್ಯಾಧಿಕಾರಿಗಳ ಹುದ್ದೆಗೆ ಅಂತಿಮ ಆಯ್ಕೆ ಪಟ್ಟಿಗೆ ಮಧ್ಯವರ್ತಿಗಳು 80 ಲಕ್ಷ ಡಿಮ್ಯಾಂಡ್ ಮಾಡಿದ್ದರು. ಟಾಪ್ ಲಿಸ್ಟ್ನಲ್ಲಿ ಅಮಾನತಾಗಿದ್ದ […]

Continue Reading

ಯೋಧರ ಸೇವೆ, ತ್ಯಾಗ ಪ್ರತಿಯೊಬ್ಬರು ಅರಿಯಬೇಕು: ಡಾ.ಸಂತೋಷ ಪಾಟೀಲ

ಸುದ್ದಿ ಸಂಗ್ರಹ ಶಹಾಬಾದ್ದೇಶದ ಗಡಿಗಳಲ್ಲಿ ಹಗಲು ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸುತ್ತಿರುವ ಯೋಧರ ಸೇವೆ ಮತ್ತು ತ್ಯಾಗವನ್ನು ಪ್ರತಿಯೊಬ್ಬರು ಅರಿಯಬೇಕು, ಗೌರವಿಸಬೇಕು ಎಂದು ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ.ಸಂತೋಷ ಪಾಟೀಲ್ ಹೇಳಿದರು. ನಗರದ ಚವ್ಹಾಣ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಎನ್‌ಸಿ ಇಂಗಿನಶೆಟ್ಟಿ ಶಾಲೆಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕೆ ಅನೇಕ ಮಹನೀಯರು ತಮ್ಮ ಜೀವನವನ್ನೆಮುಡುಪಾಗಿಟ್ಟು ಹೋರಾಡಿದ್ದಾರೆ, ಅವರ ತ್ಯಾಗ- ಬಲಿದಾನದ ಫಲವಾಗಿ ಇಂದು […]

Continue Reading

ಟ್ರಾಫಿಕ್‌ ಪೊಲೀಸ್‌ ಮೇಲೆ ಜೆಡಿಎಸ್‌ ನಾಯಕನ ದರ್ಪ

ಸುದ್ದಿ ಸಂಗ್ರಹ ಬೆಂಗಳೂರುನಗರದಲ್ಲಿ ಟ್ರಾಫಿಕ್‌ ಪೊಲೀಸ್‌ ಮೇಲೆ ಜೆಡಿಎಸ್‌ ನಾಯಕ ಗೊಟ್ಟಿಗೆರೆ ಮಂಜ ದರ್ಪ ತೋರಿರುವ ಘಟನೆ ನಡೆದಿದೆ. ನನ್ನ ಗಾಡಿಯನ್ನೆ ಸ್ಟಾಪ್‌ ಮಾಡ್ತಿಯಾ ಅಂತ ಟ್ರಾಫಿಕ್‌ ಪೊಲೀಸ್‌ ಮೇಲೆ ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜ ಹಲ್ಲೆಗೆ ಯತ್ನಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಸಿಬ್ಬಂದಿಯ ಕೊರಳ ಪಟ್ಟಿ ಹಿಡಿದು ಜಗಳ ಮಾಡುತ್ತಿರುವ ದೃಶ್ಯ ವೀಡಿಯೋದಲ್ಲಿ ಹರಿದಾಡಿದೆ. ಗೊಟ್ಟಿಗೆರೆ ಬಳಿ ಟ್ರಾಫಿಕ್ ಸಿಬ್ಬಂದಿ ನಿಂತಿದ್ದರು. ಆ ಸಂದರ್ಭದಲ್ಲಿ ಕೊಟ್ಟಿಗೆರೆ ಮಂಜ ಎಂಬವರ ವಾಹನವನ್ನು ಪೊಲೀಸ್ ಸಿಬ್ಬಂದಿ ಸ್ಟಾಪ್ ಮಾಡಿದ್ದಾರೆ. […]

Continue Reading

ದೇಶದ ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿ‌

ಸುದ್ದಿ ಸಂಗ್ರಹ ಶಹಾಬಾದ್ವಿದ್ಯಾರ್ಥಿಗಳು ಮತ್ತು ಯುಜನತೆಯಲ್ಲಿ ದೇಶ ಮೊದಲು ಎಂಬ ಭಾವನೆ ಮೂಡಿಸಿ ದೇಶದ ಸರ್ವತೋಮುಖ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬರು ತಮ್ಮ ಜವಾಬ್ದಾರಿ ನಿರ್ವಹಿಸುವಂತಾಗಬೇಕು ಎಂದು ಶಾಲೆಯ ಮುಖ್ಯಗುರು ಸಿಸ್ಟರ್ ಲೋವಿಟಾ ಹೇಳಿದರು.‌ ನಗರದ ಎಮ್‌ಸಿಸಿ ಕಾನ್ವೆಂಟ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ಕೆಲವು ದಶಕಗಳ ಕಾಲ, ಬಡತನ, ಆರೋಗ್ಯ ಸಂಬಂಧಿತ ಸಮಸ್ಯೆ, ವೈಜ್ಞಾನಿಕ- ತಂತ್ರಜ್ಞಾನದ ಕೊರತೆ ಮತ್ತು ಆಹಾರದ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳಿಂದ ಹಿಂದುಳಿದ ದೇಶವಾಗಿತ್ತು. ಆದರೆ ಇಂದು […]

Continue Reading

ಸೋಷಿಯಲ್‌ ಮೀಡಿಯಾ ಮೂಲಕ ಪಾಕ್ ಜೊತೆ ಸಂಪರ್ಕ ಶಂಕೆ: ಇಬ್ಬರು ವಶಕ್ಕೆ

ಸುದ್ದಿ ಸಂಗ್ರಹ ಕಲಬುರಗಿಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ ಹೊಂದಿದ್ದಾರೆ ಎನ್ನಲಾದ ಇಬ್ಬರನ್ನು ಉತ್ತರ ಪ್ರದೇಶದ ಆ್ಯಂಟಿ ಟೆರರ್ ಸ್ಕ್ವಾಡ್ ಮತ್ತು ಕಲಬುರಗಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆಯಿಂದ ಬಂದ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆದಿದೆ ಎನ್ನಲಾಗಿದೆ. ಉತ್ತರ ಪ್ರದೇಶ ಮೂಲದ ಸಮೀರ್ ಮತ್ತು ಸಲ್ಮಾನ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರೂ ಉತ್ತರ ಪ್ರದೇಶದ ನಿವಾಸಿ ವಿಳಾಸ ಹೊಂದಿದ್ದಾರೆ. ವಾಟ್ಸ್‌ಆಪ್ ಕಾಲ್ ಮತ್ತು ಫೇಸ್‌ಬುಕ್ ಮೂಲಕ ಪಾಕಿಸ್ತಾನದ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿದ್ದರು […]

Continue Reading

ಜೊಮ್ಯಾಟೊ ಹೈಫರ್‌ಪ್ಯೂರ್ ಘಟಕದ ಮೇಲೆ ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳ ದಾಳಿ

ಸುದ್ದಿ ಸಂಗ್ರಹ ಬೆಂಗಳೂರುಜೊಮ್ಯಾಟೊ ಹೈಫರ್‌ಪ್ಯೂರ್ ಘಟಕದ ಮೇಲೆ ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಆಹಾರ ಉತ್ಪನ್ನಗಳ ಪರಿಶೀಲನೆ ನಡೆಸಿರುವುದಾಗಿ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲ್ಯಾಖೆಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ, ಆಹಾರ ಸುರಕ್ಷತಾ ವಿಭಾಗದ ವತಿಯಿಂದ ಬೆಂಗಳೂರಿನಲ್ಲಿ ಕೈಗೊಂಡ ತಪಾಸಣೆ ವೇಳೆ ಆಹಾರ ಪದಾರ್ಥಗಳು, ಮಾಂಸ ಮತ್ತು ಮೀನನ್ನು ನಗರದ ಜೊಮ್ಯಾಟೊ ಹೈಫರ್‌ಪ್ಯೂರ್ ಘಟಕದಿಂದ ಸರಬರಾಜು ಆಗಿರುವುದು ತಿಳಿದು ಬಂದ ಹಿನ್ನೆಲೆಯಲ್ಲಿ ಆಗಸ್ಟ್ 11 ರಂದು […]

Continue Reading

ಕಲಬುರಗಿಯಲ್ಲಿ ಬಿರುಸಿನ ಮಳೆ: ವಾಹನ ಸವಾರರ ಪರದಾಟ

ಸುದ್ದಿ ಸಂಗ್ರಹ ಕಲಬುರಗಿನಗರ‌ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ಸಂಜೆ ಧಾರಾಕಾರ‌ ಮಳೆ‌ ಸುರಿಯಿತು. ಕಾದಿದ್ದ ವಾತಾವರಣಕ್ಕೆ ತಂಪೆರೆಯಿತು. ನಗರದಲ್ಲಿ ದಿನವಿಡಿ ಬಿಸಿಲಿನ ವಾತಾವರಣ ಇತ್ತು, ಸಂಜೆ ಹೊತ್ತಿಗೆ ಆಗಸದಲ್ಲಿ ಮೋಡಗಳು ದಟ್ಟೈಸಿ ಧಾರಾಕಾರವಾಗಿ ಮಳೆ‌ ಸುರಿಸಿದವು. ಬೇಸಿಗೆಯಂಥ ಸೆಕೆಯಿಂದ ಬಳಲಿದ್ದ ಜನರ ಮೊಗದಲ್ಲಿ ಮಂದಹಾಸ ಮೂಡಿಸಿತು. ಕೆಲವೇ ನಿಮಿಷಗಳ ಮಳೆಯಿಂದ ರಸ್ತೆಗಳ ಮೇಲೆ ನೀರು ಹರಿಯಿತು. ತಗ್ಗು ಪ್ರದೇಶಗಳಲ್ಲಿ ನೀರು ಜಮಾಯಿಸಿ, ವಾಹನಗಳ‌ ಸವಾರರು ಪರದಾಡಿದರು. ಜಿಲ್ಲೆಯ ಚಿತ್ತಾಪುರ ಮತ್ತು ಕಾಳಗಿ ತಾಲೂಕಿನಲ್ಲೂ ಉತ್ತಮ ಮಳೆ […]

Continue Reading

ಸಿಎಂ ಒತ್ತಡಕ್ಕೆ ಸಭಾಪತಿ ಹೊರಟ್ಟಿ ರಾಜೀನಾಮೆ: ಅಂಗೀಕರಿಸದಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

ಸುದ್ದಿ ಸಂಗ್ರಹ ಬೆಂಗಳೂರುಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಕೊಡಿಸಲಾಗಿದೆ. ಹೊರಟ್ಟಿ ರಾಜೀನಾಮೆಯನ್ನು ಅಂಗೀಕರಿಸಬಾರದು ಎಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ. ಛಲವಾದಿ ನಾರಾಯಣಸ್ವಾಮಿ, ಶರವಣ ನೇತೃತ್ವದಲ್ಲಿ ಲೋಕಭವನಕ್ಕೆ ತೆರಳಿದ ಬಿಜೆಪಿ-ಜೆಡಿಎಸ್ ನಿಯೋಗ, ಹೊರಟ್ಟಿ ಅವರ ರಾಜೀನಾಮೆ ಅಂಗೀಕರಿಸದಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದೆ. ಸದನ ನಡಾವಳಿ ಪ್ರಕಾರ ರಾಜೀನಾಮೆ ಸಲ್ಲಿಕೆ ಆಗಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದೆ. ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಸಭಾಧ್ಯಕ್ಷ, ಸಭಾಪತಿಗಳ ಹೆಸರುಗಳ ಆಯ್ಕೆ ಬಗ್ಗೆಯೂ ರಾಜ್ಯಪಾಲರಿಗೆ ನಿಯೋಗ […]

Continue Reading