ಜಲ ಸಂರಕ್ಷಣೆ ರಾಷ್ಟ್ರೀಯ ಆಂದೋಲನ, ಪ್ರತ್ಯೇಕ ಪಠ್ಯವಾಗಲಿ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಜಲ ಸಂರಕ್ಷಣೆಯ ಕಾರ್ಯ ರಾಷ್ಟ್ರೀಯ ಆಂದೋಲನದ ರೂಪದಲ್ಲಿ ಜರುಗುವುದರ ಜೊತೆಗೆ ಪ್ರತ್ಯೇಕ ಪಠ್ಯವಾಗಬೇಕಾಗಿದೆ ಎಂದು ಉಪನ್ಯಾಸಕ, ಸಮಾಜ ಸೇವಕ ಎಚ್.ಬಿ ಪಾಟೀಲ ಮಾರ್ಮಿಕವಾಗಿ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್‌ನ ರಿಪಬ್ಲಿಕ್ ಇಂಗ್ಲೀಷ್ ಸಂವಹನ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಜಲ ದಿನಾಚರಣೆ’ಯಲ್ಲಿ ಜಲ ಸಂರಕ್ಷಣೆ ಜಾಗೃತಿಯ ಕರಪತ್ರ ವಿತರಿಸಿ, ಮಾತನಾಡಿದ ಅವರು, ಜಲ ಎಂಬುದು ಕೇವಲ ಎರಡು ಅಕ್ಷರದ ಶಬ್ದವಲ್ಲ, ಅದು […]

Continue Reading

ಸಂಭ್ರಮದಿಂದ ಜರುಗಿದ ರಮಣಾದೇವಿ ರಥೋತ್ಸವ

ಸುದ್ದಿ ಸಂಗ್ರಹ ಶಹಾಬಾದ್ನಗರದ ಹಳೆ ಶಹಾಬಾದ್ ಬಡಾವಣೆಯ ಶ್ರೀ ರಮಣಾದೇವಿಯ ಜಾತ್ರಾ ಮಹೋತ್ಸವ ನಿಮಿತ್ತ ಶನಿವಾರ ಸಂಜೆ ಭಕ್ತರ ಜಯಘೋಷಗಳ ಮಧ್ಯೆ ಭವ್ಯ ರಥೋತ್ಸವ ಜರುಗಿತು. ವಿವಿಧ ರಾಜ್ಯದಿಂದ ಆಗಮಿದ ಭಕ್ತರು ರಥಕ್ಕೆ ಉತ್ತತ್ತಿ, ಹೂವು ಎರಚಿ ಕೃತಾರ್ಥರಾದರು. ರಥೋತ್ಸವದಲ್ಲಿ ಶ್ರೀ ರಾಚೋಟೇಶ್ವರ ಸಂಸ್ಥಾನದ ಪೂಜ್ಯ ಶಂಕರಯ್ಯ ಸ್ವಾಮಿ ಹಿರೇಮಠ, ಶಾಸಕ ಬಸವರಾಜ ಮತ್ತಿಮೂಡ ಸೇರಿದಂತೆ ದೇವಸ್ಥಾನದ ಪದಾಧಿಕಾರಿಗಳು, ಭಕ್ತರು ಪಾಲ್ಗೊಂಡಿದ್ದರು.

Continue Reading

ಅಲ್ಲಮಪ್ರಭುಗಳ ವಚನಗಳು ಮನೆ-ಮನ ತಲುಪಲಿ: ಡಾ.ರಾಜಶೇಖರ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿಪ್ರಸ್ತುತ ದಿನಗಳಲ್ಲಿಯೂ ಕೂಡಾ ಕಂಡು ಬರುತ್ತಿರುವ ಜಾತಿಯತೆ, ಮೂಡನಂಬಿಕೆ, ಕಂದಾಚಾರ, ಅಂಧಶೃದ್ಧೆಯಂತಹ ಮುಂತಾದ ಸಾಮಾಜಿಕ ಸಮಸ್ಯೆಗಳ ನಿರ್ಮೂಲನೆಗೆ ಬಸವಣ್ಣನವರ ಜೊತೆಗೂಡಿ 950 ವರ್ಷಗಳ ಹಿಂದೆ ಹೋರಾಡಿದ, ಸಾಮಾಜಿಕ ಸಮಾನತೆಯ ನಿರ್ಮಾಣಕ್ಕೆ ಶ್ರಮಿಸಿದ ಶರಣ ಅಲ್ಲಮಪ್ರಭು ದೇವರು ವಿಶ್ವದ ಪ್ರಥಮ ಮೊದಲ ಸಂಸತ್ತಿನ ಅಧ್ಯಕ್ಷರಾಗಿ ಅನನ್ಯವಾದ ಕೊಡುಗೆ ನೀಡಿದ್ದಾರೆ, ಎಲ್ಲರ ಮನೆಯಲ್ಲಿ ಅವರ ಭಾವಚಿತ್ರ ಇಡುವುದು ಮತ್ತು ಅವರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಶರಣ ಚಿಂತಕ ಡಾ.ರಾಜಶೇಖರ ಪಾಟೀಲ ಹೆಬಳಿ ಅಭಿಪ್ರಾಯಪಟ್ಟರು. ನಗರದ […]

Continue Reading

ಮಾನವೀಯ ಮೌಲ್ಯಗಳೇ ನಿಜವಾದ ಧರ್ಮ

ಸುದ್ದಿ ಸಂಗ್ರಹ ಶಹಾಬಾದಪ್ರತಿಯೊಂದು ಕೆಲಸದಲ್ಲಿ ದೇವರನ್ನು ಕಾಣುವದು ನಿಜವಾದ ಧರ್ಮವಾಗಿದ್ದು, ಮಾನವನ ಮಾನವೀಯ ಮೌಲ್ಯಗಳೆ ನಿಜವಾ ಧರ್ಮ ಎಂದು ಕಲಬುರಗಿ ಚರ್ಚ್ ಫಾದರ್ ಪ್ರವೀಣ್ ಹೇಳಿದರು. ನಗರದ ಲಕ್ಷ್ಮಿ ಗಂಜನಲ್ಲಿರುವ ಸಂತ್ ತೋಮಾಸ್ ಚರ್ಚಿನಲ್ಲಿ ರಂಜಾನ್ ನಿಮಿತ್ತ ನಡೆದ ಸೌಹಾರ್ದ ಇಫ್ತಿಯಾರ್ ಕೂಟದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರ ಪರಸ್ಪರ ಸಹಕಾರ, ಸಹ ಬಾಳ್ವೆಯಿಂದ ಜೀವನ ನಡೆಸಬೇಕು, ಪ್ರತಿಯೊಂದು ಕೆಲಸದಲ್ಲಿ ದೇವರನ್ನು ಕಾಣುವದು ನಿಜವಾದ ಧರ್ಮವಾಗಿದೆ ಎಂದರು. ಜಾಮೀಯಾ ಮಜೀದ್ ಸಮಿತಿಯ ಅಧ್ಯಕ್ಷ ಮತೀನ್ ಸೇಠ್ ಮಾತನಾಡಿ, ಚರ್ಚಿನ […]

Continue Reading

ಬರೆದಂತೆ ಬದುಕಿದ ಆಧುನಿಕ ಸರ್ವಜ್ಞ ಡಿವಿಜಿ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿಬರೆದಂತೆ ಬದುಕಿದ ಅಪರೂಪದ ಸಾಹಿತಿ ಡಿವಿಜಿಯವರು ಆಧುನಿಕ ಸರ್ವಜ್ಞರಾಗಿದ್ದಾರೆ. ಬರವಣಿಗೆ ಮತ್ತು ಬದುಕಿನಲ್ಲಿ ಸಾಮ್ಯತೆಯಿರುವವರು ಬೆರಳಣಿಕೆಯಷ್ಟು ಜೀವನದ ನೈಜತೆ, ಮೌಲ್ಯಗಳು, ಮೇರು ಸಂದೇಶ ಡಿವಿಜಿಯವರು ತಮ್ಮ ಅನುಭಾವದ ಸಾಹಿತ್ಯ ಮೂಲಕ ಸಾರಿದ್ದಾರೆ. ‘ಕಗ್ಗ ಕವಿ’ ಎಂದೆ ಖ್ಯಾತಿ ಪಡೆದಿರುವ ಡಿವಿಜಿಯವರು ಬಹುಮುಖ ವ್ಯಕ್ತಿತ್ವವದ ಮೇರು ಸಾಹಿತಿಯಾಗಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಜರುಗಿದ ಕನ್ನಡದ […]

Continue Reading

ವೃದ್ಧಾಶ್ರಮಕ್ಕೂ ತಟ್ಟಿದ ಸಿಲಿಂಡರ್ ಎಫೆಕ್ಟ್: ಆಹಾರಕ್ಕೆ ವೃದ್ಧರ ಪರದಾಟ

ಸುದ್ದಿ ಸಂಗ್ರಹ ಕಲಬುರಗಿ ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ ಕಲಬುರಗಿಯ ಕಾಕಡೆ ಚೌಕ್ ಬಳಿಯ ವೃದ್ಧಾಶ್ರಮಕ್ಕೂ ತಟ್ಟಿದ್ದು, ಸಿಲಿಂಡರ್ ಅಭಾವ ಉಂಟಾಗಿದೆ. ಸಿಲಿಂಡರ್ ಸಿಗದ ಹಿನ್ನೆಲೆ ಸೌದೆ ಮೇಲೆ ಅಡುಗೆ ಮಾಡಲಾಗುತ್ತಿದೆ. ಬಿರು ಬಿಸಿಲಿನಲ್ಲಿ ಕೂತು ಸಿಬ್ಬಂದಿ ಅಡುಗೆ ತಯಾರಿಸಲು ಕಷ್ಟಪಡುತ್ತಿದ್ದಾರೆ. ಆಶ್ರಮದ ವೃದ್ಧರು ಆಹಾರಕ್ಕಾಗಿ ಪರದಾಡುವಂತಾಗಿದೆ. ಎಲ್‌ಪಿಜಿ ಸಿಗದ ಹಿನ್ನೆಲೆಯಲ್ಲಿ ವೃದ್ಧಾಶ್ರಮದಲ್ಲಿರುವ 15ಕ್ಕೂ ಹೆಚ್ಚು ವೃದ್ಧರಿಗೆ ಸಮಸ್ಯೆಯಾಗಿದೆ.

Continue Reading

ಶಹಾಬಾದ್‌: ಡಾ.ಫಾರೂಕ್ ಮಣ್ಣೂರರಿಂದ ಸೌಹಾರ್ದ ಇಫ್ತಾರ್ ಕೂಟ

ಸುದ್ದಿ ಸಂಗ್ರಹ ಶಹಾಬಾದಪ್ರೀತಿ, ಭಾಂದವ್ಯ, ಭ್ರಾತೃತ್ವ ಭಾವನೆ ಮೂಡಿಸಲು ಮತ್ತು ಸಾಮಾಜಿಕ ಜೀವನದಲ್ಲಿ ಸೌಹಾರ್ದಯುತ ಬದುಕು ಕಲಿತುಕೊಳ್ಳುವುದೆ ಇಫ್ತಾರ್ ಕೂಟದ ಉದ್ದೇಶವಾಗಿದೆ ಎಂದು ಕಲಬುರಗಿಯ ಮಣ್ಣೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಹಾಗೂ ಸಮಾಜ ಸೇವಕ ಡಾ.ಫಾರೂಕ್ ಮಣ್ಣೂರ ಹೇಳಿದರು. ನಗರದ ಜಾಮಿಯಾ ಮಸ್ಜೀದ್ ಫಂಗ್ಶನ್ ಹಾಲ್’ನಲ್ಲಿ ಡಾ.ಫಾರೂಕ್ ಮಣ್ಣೂರ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಇಫ್ತಾರ್ ಕೂಟದಲ್ಲಿ ಮಾತನಾಡಿದ ಅವರು, ಪವಿತ್ರ ರಂಜಾನ್ ಹಬ್ಬದ ನಿಮಿತ್ಯ ಒಂದು ತಿಂಗಳುಗಳ ಕಾಲ ನಡೆಯುವ ಉಪವಾಸ ವ್ರತದ ಇಫ್ತಿಯಾರ್ ಕೂಟದಲ್ಲಿ ಹಿಂದು-ಮುಸ್ಲಿಂ […]

Continue Reading

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಸುದ್ದಿ ಸಂಗ್ರಹ ಶಹಾಬಾದಮೂಲಭೂತ ಸೌಲಭ್ಯ ಮತ್ತು ಸಾರ್ವಜನಿಕರ ಕುಂದು ಕೊರತೆಗೆ ಪೌರಾಯುಕ್ತರು ಸ್ಪಂದನೆ ಮಾಡಬೇಕು ಎಂದು ದಸಂಸ(ಅಂಬೇಡ್ಕರವಾದ)ದ ತಾಲೂಕಿನ ಸಂಚಾಲಕ ಸುಭಾಷ ಸಾಕ್ರೆ ಒತ್ತಾಯಿಸಿದರು. ನಗರದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ ಪ್ರತಿಭಟನಾ ಸತ್ಯಾಗ್ರಹ ಉದ್ದೇಶಿಸಿ ಮಾತನಾಡಿದ ಅವರು, ನಗರ ಸಭೆಯ ವಾರ್ಡ್ ನಂ.11,12,13 ಮತ್ತು 14ರ ಬಡಾವಣೆಯ ಕೊಳವೆ ಬಾವಿ ಕೆಟ್ಟು ಹೋಗಿವೆ, ಬೇಸಿಗೆ ಕಾಲವಾಗಿದರಿಂದ ಮೋಟರ್ ಮತ್ತು ಪೈಪ್ ಲೈನ್ ಅಳವಡಿಸಿ ತಕ್ಷಣವೆ ದುರಸ್ತಿ ಮಾಡಿಸಬೇಕು ಎಂದು ಒತ್ತಾಯಿಸಿದರು. […]

Continue Reading

ಎಲ್ಲ ಕ್ಷೇತ್ರದಲ್ಲೂ ಮಹಿಳೆಯರ ಸಾಧನೆ ಗಮನಾರ್ಹ

ಸುದ್ದಿ ಸಂಗ್ರಹ ಶಹಾಬಾದ್ಮಹಿಳೆಯರ ಬುದ್ಧಿಶಕ್ತಿ, ತಾಳ್ಮೆ ಮತ್ತು ವಿಶ್ಲೇಷಣಾ ಸಾಮರ್ಥ್ಯದಿಂದ ಕುಟುಂಬದಿಂದ ಬಾಹ್ಯಾಕಾಶದವರೆಗೂ ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ ಎಂದು ಅರ್ಥಶಾಸ್ತ್ರ ಮುಖ್ಯಸ್ಥೆ ಡಾ.ಸುರೇಖಾ ನಾಟೆಕರ್ ಹೇಳಿದರು. ನಗರದ ಎಸ್’ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಯುಗದಲ್ಲಿ ಮಹಿಳೆಯರು ಸಂಪ್ರದಾಯಗಳ ಸಂಕೋಲೆಯಿಂದ ಮುಕ್ತಗೊಂಡು ಜಾಗತಿಕ ಮನ್ನಣೆ ಪಡೆಯುವಂತಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಬಸವರಾಜ್ ಹಿರೇಮಠ್ ಮಾತನಾಡಿ, […]

Continue Reading

ಕುಟುಂಬದಿಂದ ಬಾಹ್ಯಾಕಾಶದವರೆಗೆ ಮಹಿಳೆಯರ ಸಾಧನೆ ಗಮನಾರ್ಹ: ಜ್ಯೋತಿ ಮರಗೋಳ

ಸುದ್ದಿ ಸಂಗ್ರಹ ಶಹಾಬಾದ್ಮಹಿಳೆಯ ಬುದ್ಧಿಶಕ್ತಿ, ತಾಳ್ಮೆ ಮತ್ತು ವಿಶ್ಲೇಷಣಾ ಸಾಮರ್ಥ್ಯದಿಂದ ಕುಟುಂಬದಿಂದ ಬಾಹ್ಯಾಕಾಶದವರೆಗೂ ಗಮನಾರ್ಹ ಸಾಧನೆ ಮಾಡುತ್ತಿದ್ದು, ಸಂಪ್ರದಾಯಗಳ ಸಂಕೋಲೆಯಿಂದ ಮುಕ್ತಗೊಂಡು ಜಾಗತಿಕ ಮನ್ನಣೆ ಪಡೆಯುವಂತಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಿಳಾ ಮಹಾಸಭಾದ ಜಿಲ್ಲಾಧ್ಯಕ್ಷೆ ಜ್ಯೋತಿ ಮರಗೋಳ ಹೇಳಿದರು. ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಮಹಿಳಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮಾನತೆಯ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಕೊಡುಗೆ ಅಪಾರ, ಮಹಿಳೆಯರು […]

Continue Reading