ವೃಕ್ಷಮಾತೆ, ಸಾಲುಮರದ ತಿಮ್ಮಕ್ಕನವರಿಗೆ ಗೌರವಪೂರ್ವಕ ಶೃದ್ಧಾಂಜಲಿ

ಕಲಬುರಗಿ: ಶುಕ್ರವಾರ ನಿಧನರಾದ ವೃಕ್ಷಮಾತೆ, ಸಾಲುಮರದ ತಿಮ್ಮಕ್ಕನವರಿಗೆ ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗೌರವಪೂರ್ವಕವಾಗಿ ಮಾತೆಯವರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು. ನುಡಿನಮನ ಸಲ್ಲಿಸಿದ ಉಪನ್ಯಾಸಕ ಎಚ್.ಬಿ ಪಾಟೀಲ್, ಸಾಲುಮರದ ತಿಮ್ಮಕ್ಕನವರು ಕನ್ನಡ ನೆಲದ ಅಪರೂಪದ, ಮಾದರಿಯ ಸಾಧಕಿಯಾಗಿದ್ದಾರೆ. ಅವರೊಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೆ ತಮ್ಮ ಮಕ್ಕಳಂತೆ ಭಾವಿಸಿ ಬೆಳೆಸಿದವರು. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ […]

Continue Reading

ಸೈಡ್‌ ಬಿಡದಿದ್ದಕ್ಕೆ ಕಿರಿಕ್: ಕಾರಿನಿಂದ ಗುದ್ದಿಸಿ ಬೈಕ್‌ನಲ್ಲಿದ್ದ ಮೂವರ ಕೊಲೆಗೆ ಯತ್ನಿಸಿದ ಟೆಕ್ಕಿ

ಬೆಂಗಳೂರು: ರಸ್ತೆಯಲ್ಲಿ ಸೈಡ್‌ ಬಿಡದಿದ್ದಕ್ಕೆ ಕಾರು ಗುದ್ದಿಸಿ ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊಲೆಗೆ ಯತ್ನಿಸಿದ ಸಾಫ್ಟ್‌ವೇರ್ ಇಂಜಿನಿಯರ್ ಸುಕೃತ್ ಕೇಶವ್‌ನನ್ನು ಸದಾಶಿವ ನಗರ ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 26 ರಂದು ಅಪಘಾತವೆಂದು ಕೇಸ್ ದಾಖಲಾಗಿತ್ತು. ತನಿಖೆ ನಂತರ ಉದ್ದೇಶಪೂರ್ವಕ ಕೊಲೆಯತ್ನ ಎಂದು ಗೊತ್ತಾಗಿದೆ. ರಾಮಯ್ಯ ಸಿಗ್ನಲ್‌ನಲ್ಲಿ ಫ್ರೀ ಲೆಫ್ಟ್ ಬ್ಲಾಕ್ ಮಾಡಲಾಗಿತ್ತು. ಈ ವೇಳೆ ಹಿಂದಿನಿಂದ ಬಂದ ಕಾರಿನ ಚಾಲಕ ಹಾರ್ನ್ ಮಾಡಿದಾಗ ಬೈಕ್ ಸವಾರ ಸಿಗ್ನಲ್ ಲೆಫ್ಟ್ ಫ್ರೀ ಟರ್ನ್ ಇಲ್ಲ ಎಂದಿದ್ದಾನೆ. […]

Continue Reading

ಶಹಾಬಾದ: ನ.15 ರಂದು ಉಚಿತ ನೇತ್ರ ತಪಾಸಣೆ ಮತ್ತು ಔಷಧ ವಿತರಣಾ ಶಿಬಿರ

ಸುದ್ದಿ ಸಂಗ್ರಹ ಶಹಬಾದನಗರದ ಹೈ.ಕ ಶಿಕ್ಷಣ ಸಂಸ್ಥೆಯ ಎಸ್.ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ನವೆಂಬರ್ 15 ರಂದು ಶನಿವಾರ ಉಚಿತ ನೇತ್ರ ತಪಾಸಣೆ ಮತ್ತು ಔಷಧಿ ವಿತರಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಐಕ್ಯೂಎಸ್‌ಸಿ, ಎನ್.ಎಸ್.ಎಸ್ ಘಟಕ ಮತ್ತು ಸಿದ್ದರಾಮೇಶ್ವರ ಕಣ್ಣಿನ ಆಸ್ಪತ್ರೆ ಕಲಬುರ್ಗಿ ಇವರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಔಷಧಿ ವಿತರಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಎಸ್.ಎಸ್ ಮರಗೋಳ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಬಸವರಾಜ್ ಹಿರೇಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಬಹುಮುಖ ವ್ಯಕ್ತಿತ್ವದ ಮೇರು ಸಾಹಿತಿ ಡಾ.ಗಿರೀಶ್ ಕಾರ್ನಾಡ: ಎಚ್.ಬಿ ಪಾಟೀಲ

ಕಲಬುರಗಿ: ಗಿರೀಶ್ ಕಾರ್ನಾಡ ನಾಟಕಕಾರ, ರಂಗಕರ್ಮಿ, ಲೇಖಕ, ಸಿನಿಮಾ ನಟ, ನಿರ್ದೇಶಕ, ಚಿಂತಕ, ಹೋರಾಟಗಾರ, ವಿಮರ್ಶಕರಾಗಿ ಬಹುಮುಖ ವ್ಯಕ್ತಿತ್ವದ ಮಹಾನ ಸಾಧಕ. ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟ ಅವರ ಕೊಡುಗೆ ಅನನ್ಯ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಮತ್ತು ಶಿವಾ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರಾಜ್ಯೋತ್ಸವ ಮಾಸಾಚರಣೆ ಪ್ರಯುಕ್ತ ಸರಣಿ ಉಪನ್ಯಾಸ ಕಾರ್ಯಕ್ರಮ-12 ಮತ್ತು ಬಳಗದ 5999ನೇ ಕಾರ್ಯಕ್ರಮ ‘ಕನ್ನಡಕ್ಕೆ ಡಾ.ಗಿರೀಶ್ ಕಾರ್ನಾಡ್‌ರ […]

Continue Reading

ಕನ್ನಡವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಲು ಶ್ರಮಿಸಿದ ಗೋಕಾಕ್: ಎಚ್.ಬಿ ಪಾಟೀಲ

ಕಲಬುರಗಿ: ಕವಿ, ಕಾದಂಬರಿಕಾರ, ವಾಗ್ಮಿ, ವಿಮರ್ಶಕ, ಶಿಕ್ಷಣ ತಜ್ಞ, ಪ್ರಾಂಶುಪಾಲ, ಉಪ ಕುಲಪತಿ, ಸಾಂಸ್ಕೃತಿಕ ರಾಯಭಾರಿ, ಕನ್ನಡಪರ ಚಳುವಳಿಗಾರರಾಗಿ ಹೀಗೆ ಹಲವು ವಿಧಗಳಲ್ಲಿ ಕನ್ನಡಕ್ಕಾಗಿ ಸೇವೆ ಸಲ್ಲಿಸಿ, ಕನ್ನಡವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಲು ಶ್ರಮಿಸಿದ ಡಾ.ವಿ.ಕೃ ಗೋಕಾಕ್‌ರ ಕೊಡುಗೆ ಅಮೋಘವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ಡಬರಾಬಾದ ಕ್ರಾಸ್ ಸಮೀಪದ ಅಲ್ಲಮ ಪ್ರಭು ನಗರದಲ್ಲಿರುವ ನೀಲಕಂಠೇಶ್ವರ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ರಾಜ್ಯೋತ್ಸವ ಮಾಸಾಚರಣೆಯ ಸರಣಿ ಉಪನ್ಯಾಸ-11ರಲ್ಲಿ ‘ಕನ್ನಡಕ್ಕೆ ಗೋಕಾಕರ […]

Continue Reading

ವಿದ್ಯಾರ್ಥಿಗಳು ಪಠ್ಯದ ಜೊತೆ ಆಟೋಟಗಳಲ್ಲಿ ಭಾಗವಹಿಸಿ: ಅಲ್ಲಮ ಪ್ರಭು ಪಾಟೀಲ್

ಕಲಬುರಗಿ: ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗಬಾರದು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆ, ಆಟೋಟಗಳಲ್ಲಿ ಭಾಗವಹಿಸಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ವ್ಯಾಯಾಮ ದೊರೆಯುತ್ತದೆ ಎಂದು ಶಾಸಕ ಅಲ್ಲಮ ಪ್ರಭು ಪಾಟೀಲ್ ಹೇಳಿದರು. ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಬಾಲಕರ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಭಾಗವಹಿಸಿ, ನಮ್ಮ ನಾಡು, ದೇಶದ ಕೀರ್ತಿ ತರಬೇಕು ಎಂದರು. ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲವು […]

Continue Reading

ನಾಡು-ನುಡಿಗೆ ಡಾ.ಕೆ.ಶಿವರಾಮ ಕಾರಂತರ ಕೊಡುಗೆ ಅಪಾರ

ಸುದ್ದಿ ಸಂಗ್ರಹ ಕಲಬುರಗಿ ಕಾದಂಬರಿಕಾರ, ಪರಿಸರವಾದಿ, ಪ್ರಗತಿಶೀಲ ಚಿಂತಕ, ಯಕ್ಷಗಾನ ತಜ್ಞ, ಸ್ವಾತಂತ್ರ್ಯ ಹೋರಾಟಗಾರ, ಚಿತ್ರ ನಿರ್ದೇಶಕ ಹೀಗೆ ಹತ್ತು ಹಲವು ಕ್ಷೇತ್ರಗಳ ಮೂಲಕ ಜ್ಞಾನಪೀಠ ಪ್ರಶಸ್ತಿ ಪುರಷ್ಕೃತ ಮೇರು ಸಾಹಿತಿ ಡಾ.ಕೆ.ಶಿವರಾಮ ಕಾರಂತ ಅವರು ನಾಡಿಗೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ್ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಕನ್ನಡ ರಾಜ್ಯೋತ್ಸವ ಮಾಸಾಚರಣೆ ಸರಣಿ […]

Continue Reading

ಕಲಬುರಗಿ: ವಿವಿಧ ಸಂಘಟಕರಿಗೆ ಗೌರವ ಸತ್ಕಾರ

ಕಲಬುರಗಿ: ನಗರದ ಎಸ್.ಎಂ ಪಂಡಿತ ರಂಗ ಮಂದಿರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಕಲಿಕಾ ಸ್ನೇಹಿ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರುಗಿತು. ನಗರದ ಎಸ್.ಎಂ ಪಂಡಿತ ರಂಗ ಮಂದಿರದಲ್ಲಿ ಸುಜಯ್ ಎಜುಕೇಶನಲ್ & ವೆಲ್ಪೇರ್ ಸೊಸೈಟಿ’ ವತಿಯಿಂದ ರವಿವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ‘ಕಲಿಕಾ ಸ್ನೇಹಿ ಶಿಕ್ಷಕ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಯವರಾದ ಎಚ್.ಬಿ ಪಾಟೀಲ್, ನರಸಪ್ಪ ಬಿರಾದಾರ ದೇಗಾಂವ, ನರಸಪ್ಪ ರಂಗೋಲಿ, ಎಂ.ಬಿ ನಿಂಗಪ್ಪ, ದೇವೇಂದ್ರಪ್ಪ ಗಣಮುಖಿ, ಅಪ್ಪಾಸಾಬ ತೀರ್ಥೆ, ಭಾನುಕುಮಾರ ಗಿರೇಗೋಳ್ […]

Continue Reading

ಕಲಬುರಗಿ ಕಾರ್ಯನಿರತ ಪತ್ರಕರ್ತರ ಸಂಘ: 4ನೇ ಬಾರಿಗೆ ಜಿಲ್ಲಾಧ್ಯಕ್ಷರಾಗಿ ಬಾಬುರಾವ್ ಯಡ್ರಾಮಿ ಆಯ್ಕೆ

ಕಲಬುರಗಿ: ಕಾರ್ಯನಿರತ ಪತ್ರಕರ್ತರ ಸಂಘದಚುನಾವಣೆಯಲ್ಲಿ ಬಾಬುರಾವ್ ಯಡ್ರಾಮಿ 4ನೇ ಬಾರಿಗೆ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. 170 ಮತಗಳನ್ನು ಪಡೆಯುವ ಮೂಲಕ ಬಾಬುರಾವ್‌ ಯಡ್ರಾಮಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ ರಾಜು ಉದನೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಭೀಮಾಶಂಕರ್ ಫಿರೋಜಾಬಾದ, ಜಿಲ್ಲಾ ಉಪಾಧ್ಯಕ್ಷರಾಗಿಅರುಣಕುಮಾರ್ ಕದಂ, ಶಿವರಂಜನ್ ಸತ್ಯಂಪೇಟೆ,ಹನಮಂತರಾವ್ ಭೈರಮಡಗಿ, ಜಿಲ್ಲಾ ಕಾರ್ಯದರ್ಶಿಯಾಗಿ ವಾಸುದೇವ್ ಚವ್ಹಾಣ, ಅನೀಲ್ ಸ್ವಾಮಿ, ಬಾಬುರಾವ್‌ ಕೋಬಾಳ ಮತ್ತು ಜಿಲ್ಲಾ ಖಜಾಂಚಿಯಾಗಿ ಅಶೋಕ ಕಪನೂರ ಆಯ್ಕೆಯಾಗಿದ್ದಾರೆ. ಜಿಲ್ಲಾ ಕಾರ್ಯಕಾರಣಿ ಸದಸ್ಯರಾಗಿ […]

Continue Reading

ವಿಜ್ಞಾನ ಕ್ಷೇತ್ರದಲ್ಲಿ ಬೆಳಕು ಮೂಡಿಸಿದ ರಾಮನ್: ಎಚ್.ಬಿ ಪಾಟೀಲ

 ಕಲಬುರಗಿ: ರಾಮನ್ ಅವರು ವಿಜ್ಞಾನ ಕ್ಷೇತ್ರದಲ್ಲಿ ‘ಬೆಳಕು’ ಮೂಡಿಸುವ ಮೂಲಕ ದೇಶದ ಕೀರ್ತಿ ವಿಶ್ವದೆಲ್ಲೆಡೆ ಪಸರಿಸಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು.‌    ನಗರದ ಆಳಂದ ರಸ್ತೆಯ ಖಾದ್ರಿ ಚೌಕ್ ನ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಬೆಳಿಗ್ಗೆ ಏರ್ಪಡಿಸಿದ್ದ ‘ಸರ್ ಸಿ‌.ವಿ ರಾಮನ್’ರ 137ನೇ ಜನ್ಮ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮನ್ ಅವರು ‘ಭಾರತ ರತ್ನ’ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಭಾರತದಲ್ಲಿ ವಿಜ್ಞಾನದ ಬೆಳವಣಿಗೆಗೆ […]

Continue Reading