ವಿಶ್ವದ ಸಮಗ್ರ ಅಭಿವೃದ್ಧಿಗೆ ವಿಶ್ವಸಂಸ್ಥೆ ಕೊಡುಗೆ ಅನನ್ಯ

ಕಲಬುರಗಿ: ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆ ಕಾಪಾಡುವುದು, ಸಮಾನತೆ ಆಧಾರದ ಮೇಲೆ ವಿಶ್ವದಲ್ಲಿನ ರಾಷ್ಟ್ರಗಳ ಸ್ನೇಹ ಸಂಬಂಧ ಬೆಳೆಸುವುದು, ಅಂತಾರಾಷ್ಟ್ರೀಯ ಸಹಾಯಕ್ಕೆ ಬೆಂಬಲ ನೀಡಿ ವಿಶ್ವದಲ್ಲಿನ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಮಾನವೀಯ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಮತ್ತು ಮಾನವನ ಮೂಲಭೂತ ಹಕ್ಕುಗಳನ್ನು ಉತ್ತೇಜಿಸುವಂತಹ ಮುಂತಾದ ಕಾರ್ಯಗಳನ್ನು ಮಾಡುವ ಮೂಲಕ ವಿಶ್ವಸಂಸ್ಥೆ ವಿಶ್ವದ ಸಮಗ್ರ ಅಭಿವೃದ್ಧಿಗೆ ತನ್ನದೆಯಾದ ಕೊಡುಗೆ ನೀಡುತ್ತಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಶಿವಾ ವಿದ್ಯಾ […]

Continue Reading

ರಾಷ್ಟ್ರದ ಅಭಿವೃದ್ಧಿಯಲ್ಲಿ ಮಾಹಿತಿ, ಸಂವಹನದ ಪಾತ್ರ ಪ್ರಮುಖ

ಕಲಬುರಗಿ: ವಿಶ್ವದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಮಸ್ಯೆಗಳು ಮತ್ತು ಪರಿಹಾರೋಪಾಯಗಳ ಕುರಿತು ವಿಶ್ವದೆಲ್ಲೆಡೆ ಜನ ಜಾಗೃತಿ ಮೂಡಿಸಲು ಮತ್ತು ಅವುಗಳ ಪರಿಹರಿಸಲು ಅಂತರರಾಷ್ಟ್ರೀಯ ಸಹಕಾರ ಉತ್ತೇಜಿಸುವಲ್ಲಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನಗಳ ಪಾತ್ರ ಪ್ರಮುಖವಾಗಿದೆ. ಇವುಗಳ ಸದುಪಯೋಗದಿಂದ ರಾಷ್ಟ್ರ ಸೇರಿದಂತೆ ಜಾಗತಿಕ ಅಭಿವೃದ್ಧಿಗೆ ಸರ್ವರು ಕೈಜೋಡಿಸುವುದು ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಜೆ.ಆರ್ ನಗರದ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಮಾಹಿತಿ ಪ್ರಸಾರ […]

Continue Reading

ವಚನ ಸಂರಕ್ಷಣೆಯಲ್ಲಿ ಚನ್ನಬಸವಣ್ಣನವರ ಪಾತ್ರ ಪ್ರಮುಖ

ಕಲಬುರಗಿ: ವಿಶ್ವಗುರು ಬಸವಣ್ಣನವರ ನೇತೃತ್ವದಲ್ಲಿ 12ನೇ ಶತಮಾನದಲ್ಲಿ ಜರುಗಿದ ಸಾಮಾಜಿಕ ಚಳುವಳಿಯಲ್ಲಿ ಚನ್ನಬಸವಣ್ಣನವರು ಸಾಕಷ್ಟು ಶ್ರಮಿಸಿದ್ದಾರೆ. ಅಮೂಲ್ಯವಾದ ವಚನಗಳನ್ನು ರಚಿಸಿ, ರಕ್ಷಿಸಿ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ. ಅವಿರಳ ಜ್ಞಾನಿಯಾಗಿದ್ದ ಅವರ ಕೊಡುಗೆ ಅನನ್ಯವಾಗಿದೆ. ಅವರು ಪ್ರಮುಖ ವಚನಕಾರರಾಗಿದ್ದು, ಶರಣರ ಕ್ರಾಂತಿಯ ನಂತರ ವಚನಗಳನ್ನು ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಉಪನ್ಯಾಸಕ, ಶರಣ ಚಿಂತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ದೇವಿ ನಗರ ಕಮಾನ್ ಹತ್ತಿರದ ಬಿರಾದಾರ ಕಾಂಪೆಕ್ಸ್ ಆವರಣದಲ್ಲಿ ಬಸವೇಶ್ವರ ಸಮಾಜ […]

Continue Reading

ಬ್ರಿಟಿಷರಿಗೆ ಸಿಂಹಸ್ವಪ್ನವಾಗಿ ಕಾಡಿದ್ದ ಆಜಾದ್ ಹಿಂದ್ ಫೌಜ್: ಡಾ.ರಾಜಶೇಖರ ಪಾಟೀಲ

ಕಲಬುರಗಿ: ದೇಶಕ್ಕೆ ಸ್ವಾತಂತ್ರ ನೀಡಬೇಕು ಎಂದು ಪ್ರಬಲವಾಗಿ ವಾದಿಸಿದ ನೇತಾಜಿಯವರ ನೇತೃತ್ವದ ಆಜಾದ್ ಹಿಂದ್ ಫೌಜ್, ಬ್ರಿಟಿಷರ ಜೊತೆಗೆ ಹೋರಾಟ ಮಾಡಿತು ಎಂದು ಚಿಂತಕ ಡಾ.ರಾಜಶೇಖರ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಸಂಜೆ ಜರುಗಿದ ‘83ನೇ ಆಜಾದ್ ಹಿಂದ್ ಫೌಜ್’ನ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ವಿದೇಶಿಗಳಲ್ಲಿ ಬಂದಿತರಾಗಿದ್ದ ಭಾರತೀಯರನ್ನು ನೇತಾಜಿಯವರು ಒಗ್ಗೂಡಿಸಿ, ಬ್ರಿಟಿಷರ ವಿರುದ್ಧ ಹೋರಾಡಲು ಪ್ರೇರಣೆ ನೀಡಿದರು. ದೇಶದ ಸ್ವಾತಂತ್ರಕ್ಕಾಗಿ ನೇತಾಜಿಯವರ ಕೊಡುಗೆ […]

Continue Reading

ರಾಷ್ಟ್ರೀಯ ಕರಕುಶಲ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಶಿಲ್ಪಿಗೆ ಗೌರವ

ಕಲಬುರಗಿ: ಶಿಲ್ಪ ಕಲಾವಿದ, ಸಾಂಪ್ರದಾಯಿಕ ಕುಸುರಿ ಕೆತ್ತನೆಯ ಪರಿಣಿತ ಚಂದ್ರಶೇಖರ ವೈ.ಶಿಲ್ಪಿ ಅವರಿಗೆ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸತ್ಕರಿಸಿ, ಅಭಿನಂದಿಸಲಾಯಿತು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ನಿವಾಸಿ ಚಂದ್ರಶೇಖರ ವೈ.ಶಿಲ್ಪಿ ಅವರಿಗೆ ಕೇಂದ್ರ ಜವಳಿ ಸಚಿವಾಲಯದ 2024ನೇ ಸಾಲಿನ “ರಾಷ್ಟ್ರೀಯ ಕರಕುಶಲ ಪ್ರಶಸ್ತಿ” ದೊರೆತಿರುವ ಪ್ರಯುಕ್ತ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಸಂಜೆ ಶಿಲ್ಪಿಯವರಿಗೆ ಸತ್ಕರಿಸಿ, ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಬಳಗದ ಅಧ್ಯಕ್ಷ ಎಚ್.ಬಿ ಪಾಟೀಲ, ಸದಸ್ಯ ಅಸ್ಲಾಂ ಶೇಖ್, ಶಿಲ್ಪಿಯವರ ಕುಟುಂಬ […]

Continue Reading

ಅಭಿವೃದ್ಧಿಯಲ್ಲಿ ಅಂಕಿ-ಅಂಶಗಳ ಪಾತ್ರ ಪ್ರಮುಖ: ಎಚ್.ಬಿ ಪಾಟೀಲ

ಕಲಬುರಗಿ: ರಾಷ್ಟ್ರದ ಸಾಮಾಜಿಕ, ಆರ್ಥಿಕ ಸಮಸ್ಯೆಗಳಿಗೆ ನಿಖರವಾದ ಮಾಹಿತಿ ನೀಡುವ ಮೂಲಕ ಅವುಗಳಿಗೆ ಪರಿಹಾರ ದೊರಕಿಸಿಕೊಡುವಲ್ಲಿ ಅಂಕಿ-ಅಂಶಗಳು ಪ್ರಮುಖ ಪಾತ್ರ ನಿರ್ವಹಿಸುತ್ತವೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಸಂಖ್ಯಾಶಾಸ್ತ್ರ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂಖ್ಯಾಶಾಸ್ತ್ರ ರಾಷ್ಟ್ರದ ಸಂಪನ್ಮೂಲಗಳ ಸದ್ಬಳಕೆಯ ಬಗ್ಗೆ ವಿವರಣೆ ನೀಡುತ್ತದೆ. ಯುವಕರು ಸಂಖ್ಯಾಶಾಸ್ತ್ರದ […]

Continue Reading

ಡಾ.ಬರಗೂರು ರಾಮಚಂದ್ರಪ್ಪನವರು ಪ್ರಗತಿಪರ ಚಿಂತಕ, ಬಂಡಾಯ ಸಾಹಿತಿ: ಎಚ್.ಬಿ ಪಾಟೀಲ

ಕಲಬುರಗಿ: ಸಮಾಜದಲ್ಲಿರುವ ತಳಮಟ್ಟದ ಸಮುದಾಯ, ಅಸಹಾಯಕರು, ಧ್ವನಿಯಿಲ್ಲದವರ ಬಗ್ಗೆ ತಮ್ಮ ಆಳವಾದ ಚಿಂತನೆಯ ಸಾಹಿತ್ಯದ ಮೂಲಕ ಸಮಾಜವನ್ನು ಜಾಗೃತಗೊಳಿಸುತ್ತಿರುವ ಬಂಡಾಯ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪನವರು ಶ್ರೇಷ್ಠ ಚಿಂತಕ, ಲೇಖಕ, ಕಾದಂಬರಿಕಾರರಾಗಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್ ಸಮೀಪದ ಸನಲೈಟ್ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಡಾ.ಬರಗೂರು ರಾಮಚಂದ್ರಪ್ಪನವರ 79ನೇ ಜನ್ಮ ದಿನಾಚರಣೆ’ಯ ಪ್ರಯುಕ್ತ ಬರಗೂರ್‌ರ ಬದುಕು-ಬರಹ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, […]

Continue Reading

ವಚನಗಳ ಅಳವಡಿಕೆಯಿಂದ ಆಂತರಿಕ ಕತ್ತಲೆ ದೂರ

ಕಲಬುರಗಿ: ದೀಪಗಳು ಬೆಳಕನ್ನು ನೀಡಿ ಹೊರಗಿನ ಕತ್ತಲೆಯನ್ನು ಕಳೆಯುತ್ತವೆ. ಬಸವಾದಿ ಶರಣರು ರಚಿಸಿರುವ ವಚನಗಳ ಅಧ್ಯಯನ ಮಾಡಿ, ಅದರ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಅಜ್ಞಾನ, ಮೌಢ್ಯತೆ, ಕಂದಾಚಾರ, ಅಂಧಶೃದ್ಧೆ, ಶೋಷಣೆ, ಅಸಮಾನತೆ ಭಾವನೆ ಎಂಬ ಆಂತರಿಕ ಕತ್ತಲೆ ದೂರವಾಗಿ ಬದುಕು ಸುಂದರವಾಗುತ್ತದೆ ಎಂದು ಶರಣ ಚಿಂತಕ ರವೀಂದ್ರ ಶಾಬಾದಿ ಅಭಿಮತಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಿದ್ದ ‘ವಚನ-ದೀಪೋತ್ಸವ ವಿಶೇಷ ಕಾರ್ಯಕ್ರಮ’ದಲ್ಲಿ ವಿದ್ಯಾರ್ಥಿಗಳಿಗೆ ವಚನಗಳ ಪುಸ್ತಕ […]

Continue Reading

ಆಹಾರ ಪ್ರತಿಯೊಂದು ಜೀವಿಯ ಅಮೃತ: ಚಂದ್ರಶ್ಯಾ ಇಟಗಿ

ಸುದ್ದಿ ಸಂಗ್ರಹ ಕಲಬುರಗಿ ಪ್ರತಿಯೊಂದು ಜೀವಿಗೆ ಆಹಾರ ಅಮೃತವಿದ್ದಂತೆ ಎಂದು ಪ್ರಗತಿಪರ, ಸಾವಯುವ ರೈತ ಚಂದ್ರಶ್ಯಾ ಇಟಗಿ ಅಭಿಪ್ರಾಯಪಟ್ಟರು. ಆಳಂದ ರಸ್ತೆಯ ಟೋಲಗೇಟ್ ಸಮೀಪದ ತೋಟದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಆಹಾರ ದಿನಾಚರಣೆ’ ಗೌರವ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಮಾನವ ಸೇರಿ ಎಲ್ಲಾ ಜೀವಿಗಳಿಗೆ ಆಹಾರ ಅವಶ್ಯಕ. ಪ್ರತಿಯೊಬ್ಬ ಮನುಷ್ಯನಿಗೆ ಸದೃಢ ಮತ್ತು ಪೌಷ್ಠಿಕ ಆಹಾರ ದೊರೆಯಬೇಕು. ಆಹಾರ ಉತ್ಪಾದನೆಯ ಕಷ್ಟ ರೈತನಿಗೆ ಗೊತ್ತು. ಆಹಾರವನ್ನು ಅನಾವಶ್ಯಕವಾಗಿ ವ್ಯರ್ಥ […]

Continue Reading

ವೈದ್ಯಕೀಯ ಚಿಕಿತ್ಸೆಯಲ್ಲಿ ಅನಸ್ತೇಷಿಯಾ ಪಾತ್ರ ಪ್ರಮುಖ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಆಧುನಿಕತೆಯ ಒತ್ತಡದ ಬದುಕಿನಲ್ಲಿ ಮನುಷ್ಯನಿಗೆ ವಿವಿಧ ರೀತಿಯ ಹೊಸ-ಹೊಸ ಕಾಯಿಲೆಗಳು ಕಂಡುಬರುತ್ತಿವೆ. ಇದಲ್ಲದೆ ಅಪಘಾತ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಶಸ್ತ್ರಚಿಕಿತ್ಸೆ ಮಾಡುವುದು ಅಗತ್ಯವಾಗಿದೆ. ಆಗ ಅರವಳಿಕೆ ಅಥವಾ ಅನಸ್ತೇಷಿಯಾ ಮಾಡಿ, ಮುಂದಿನ ಚಿಕಿತ್ಸೆ ಮಾಡುವಲ್ಲಿ ಇದರ ಪಾತ್ರ ಪ್ರಮುಖವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ‘ವಿಶ್ವ ಅನಸ್ತೇಷಿಯಾ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಅಮೇರಿಕಾದ ದಂತವೈದ್ಯ […]

Continue Reading