ಹಿರಿಯರನ್ನು ಗೌರವಿಸುವ ಸಂಸ್ಕೃತಿ ಬೆಳೆಯಲಿ

ಕಲಬುರಗಿ: ಪಾಶ್ಯಾತ್ಯ ಸಂಸ್ಕೃತಿಯ ಪ್ರಭಾವದಿಂದ ಹಿರಿಯರಿಗೆ ಗೌರವ ನೀಡುವ, ಆರೈಕೆ ಮಾಡುವ ಜವಾಬ್ದಾರಿ ಕಡಿಮೆಯಾಗುತ್ತಿರುವದು ವಿಷಾದನೀಯ ಸಂಗತಿ ಎಂದು ನಿವೃತ್ತ ಕೃಷಿ ಅಧಿಕಾರಿ ಹಾಗೂ ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆ ಮತ್ತು ಶಿವಾ ಮಂದಿರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ‘ವಿಶ್ವ ಹಿರಿಯ ನಾಗರಿಕರ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸದೃಢ ರಾಷ್ಟ್ರ ನಿರ್ಮಾಣಕ್ಕೆ ಹಿರಿಯರ ಸಲಹೆ, ಸೂಚನೆ, ಮಾರ್ಗದರ್ಶನ ತುಂಬಾ […]

Continue Reading

ರಾಷ್ಟ್ರದ ಅಭಿವೃದ್ಧಿಯಲ್ಲಿ ಛಾಯಾಗ್ರಾಹಕರ ಕೊಡುಗೆ ಅನನ್ಯ

ಕಲಬುರಗಿ: ಛಾಯಾಗ್ರಾಹಕರು ಅಲ್ಲಿನ ಸ್ಥಿತಿ-ಗತಿಯ ನೈಜ ಚಿತ್ರಣ ನೀಡುವ ಕಾರ್ಯ ನಿರ್ವಹಿಸುವ ಕೊಡುಗೆ ರಾಷ್ಟ್ರದ ಅಭಿವೃದ್ಧಿಗೆ ಅನನ್ಯವಾಗಿದೆ ಎಂದು ಹಿರಿಯ ಛಾಯಾಗ್ರಾಹಕ ಬಸವರಾಜ ವೈ ತೊನಸಳ್ಳಿ ಹೇಳಿದರು. ನಗರದ ನೆಹರು ಗಂಜ್‌ನ ಬಸ್ ನಿಲ್ದಾಣ ಸಮೀಪದ ನ್ಯೂ ದೇವಿ ಫೋಟೋ ಸ್ಟುಡಿಯೋದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಐತಿಹಾಸಿಕ 5,500ನೇ ಕಾರ್ಯಕ್ರಮ ಜರುಗಿದ ‘188ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆ’ಯಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಒಂದು ಚಿತ್ರ ಸಾವಿರ ಶಬ್ದಗಳಿಗೆ ಸಮಾನ. ವ್ಯಕ್ತಿ ಹಾಗೂ ವರ್ಣಿಸಲಾಗದ ದೃಶ್ಯವನ್ನು […]

Continue Reading

ರುದ್ರಾಕ್ಷಿ ಧಾರಣೆಯಿಂದ ಆಧ್ಯಾತ್ಮಿಕ, ಭೌತಿಕ ಲಾಭ: ಚರಲಿಂಗ ಶ್ರೀ

ಕಲಬುರಗಿ: ರುದ್ರಾಕ್ಷಿ ಪವಿತ್ರ ವಸ್ತುವಾಗಿದ್ದು, ಇದನ್ನು ಧರಿಸುವುದರಿಂದ ಆಧ್ಯಾತ್ಮಿಕ ಮತ್ತು ಭೌತಿಕ ಪ್ರಯೋಜನ ಪಡೆಯಬಹುದು, ರಕ್ತದೊತ್ತಡ ಮತ್ತು ಚರ್ಮದ ಸಮಸ್ಯೆಗಳಿಗೆ ಪರಿಹಾರ ಇದರಲ್ಲಿದೆ. ಇದು ಆಧ್ಯಾತ್ಮಿಕ ಪ್ರಗತಿಗೆ ಸಹಾಯ ಮಾಡುತ್ತದೆ‌ ಎಂದು ಗದ್ದುಗೆ ಮಠದ ಪೂಜ್ಯ ಚರಲಿಂಗ ಮಹಾಸ್ವಾಮಿಗಳು ಹೇಳಿದರು. ನಗರದ ಬಿಲಗುಂದಿ ಪೆಟ್ರೋಲ್ ಪಂಪ್ ಎದುರುಗಡೆಯ ಬಡೆಪೂರ ಕಾಲೋನಿಯ ಭಕ್ತರ ಮನೆಗಳಿಗೆ ಹೋಗಿ ರುದ್ರಾಕ್ಷಿ ಧಾರಣೆ ಕಾರ್ಯಕ್ರಮ ಮತ್ತು ಸದ್ಭಾವನ ಪಾದಯಾತ್ರೆ ಪ್ರಾರಂಭಿಸಿ ಮಾತನಾಡಿದ ಅವರು, ಧ್ಯಾನ ಮತ್ತು ಪ್ರಾರ್ಥನೆಗಳಿಗೆ ರುದ್ರಾಕ್ಷಿ ಬಳಸಲಾಗುತ್ತದೆ. ನಕರಾತ್ಮಕ ಶಕ್ತಿಗಳಿಂದ […]

Continue Reading

ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಅವರಿಗೆ ಶರಣಾಂಜಲಿ

ಕಲಬುರಗಿ: ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಅವರಿಗೆ ಭಕ್ತಿಯ ಶರಣಾಂಜಲಿ ಸಲ್ಲಿಸಲಾಯಿತು. ನಂತರ ಮಾತನಾಡಿದ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ ಪಾಟೀಲ, ಪೂಜ್ಯ ಅಪ್ಪಾಜಿ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಹುಟ್ಟು ಹಾಕಿ, ದೇಶಕ್ಕೆ ಮಾದರಿಯಾದ ಶಿಕ್ಷಣವನ್ನು ನೀಡುವ ಮೂಲಕ ಶೈಕ್ಷಣಿಕ ಕ್ರಾಂತಿಯನ್ನು ಮಾಡಿದ್ದಾರೆ. ಕೋಟ್ಯಾಂತರ ವಿದ್ಯಾರ್ಥಿಗಳ ಬದುಕನ್ನು ಕಟ್ಟಿಕೊಟ್ಟಿದ್ದಾರೆ. ಅವರು ವಿದ್ಯಾ […]

Continue Reading

ಕರವೇ ತಾಲೂಕು ಗೌರವ ಅಧ್ಯಕ್ಷರಾಗಿ ಮಸ್ತಾನ್ ಸಾಬ್ ಕೊರವಿ ಆಯ್ಕೆ

ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾಳಗಿ ತಾಲೂಕು ಘಟಕದ ಗೌರವ ಅಧ್ಯಕ್ಷರಾಗಿ ಮಸ್ತಾನ್ ಸಾಬ್ ತಂದೆ ಇಬ್ರಾಹಿಂ ಸಾಬ್ ಕೊರವಿ ಅವರನ್ನು ನೇಮಕ ಮಾಡಲಾಯಿತು. ನಗರದ ಒಕ್ಸ್ ಎಲೈಟ್ ಹೋಟೆಲ್’ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮಾಸಿಕ ಸಭೆಯಲ್ಲಿ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಕಾಶಿ ಮತ್ತು ಕರವೇ ಜಿಲ್ಲಾಧ್ಯಕ್ಷ ಆನಂದ ದೊಡ್ಡಮನಿ ಅವರು ಕಾಳಗಿ ತಾಲೂಕು ಘಟಕದ ಗೌರವ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸರ್ವ ತಾಲೂಕು […]

Continue Reading

ದೇಶದ ಸ್ವಾತಂತ್ರ್ಯಕ್ಕಾಗಿ ಅಸಂಖ್ಯಾತ ಜನರು ಹುತಾತ್ಮರಾದರು

ಕಲಬುರಗಿ: ಎರಡು ಶತಮಾನಕ್ಕಿಂತ ಹೆಚ್ಚಿನ ಕಾಲ ಆಡಳಿತ ನಡೆಸಿದ ಬ್ರಿಟಿಷರ ಆಡಳಿತ ಕೊನೆಗಾಣಿಸಿ, ನಮ್ಮ ದೇಶದ ಸ್ವಾತಂತ್ರ್ಯ ಪಡೆಯಲು ಅಸಂಖ್ಯಾತ ಮಹನೀಯರು ಪ್ರಾಣ ನೀಡಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಗುರುವಾರ ಏರ್ಪಡಿಸಿದ್ದ ‘ಭಾರತ ಸ್ವಾತಂತ್ರ್ಯದ ಯಶೋಗಾಥೆ’ ಎಂಬ ವಿಶೇಷ ಉಪನ್ಯಾಸ ನೀಡಿದ ಅವರು, ಹೋರಾಟದ ಪ್ರತಿಫಲವಾಗಿ ನಾವಿಂದು ಸ್ವಾತಂತ್ರ್ಯಯುತ ಜೀವನ ಸಾಗಿಸುತ್ತಿದ್ದು, […]

Continue Reading

ಕಲಬುರಗಿಯ ಮಹಾ ದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ

ಕಲಬುರಗಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಲಬುರಗಿಯ ಮಹಾ ದಾಸೋಹಿ ಶರಣಬಸಪ್ಪ ಅಪ್ಪ (92) ಅವರಿಂದು ಲಿಂಗೈಕ್ಯರಾಗಿದ್ದಾರೆ. ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿಯಾಗಿರುವ ಶರಣಬಸಪ್ಪ ಅಪ್ಪ ಅವರು ದಾಸೋಹ ಮಹಾ ಮನೆಯಲ್ಲಿ ಲಿಂಗೈಕ್ಯರಾಗಿದ್ದು, ಕುಟುಂಬಸ್ಥರು, ಅಪಾರ ಬಂಧು ಬಳಗ ಹಾಗೂ ಅನುಯಾಯಿಗಳನ್ನು ಅಗಲಿದ್ದಾರೆ. ಅನಾರೋಗ್ಯದಿಂದ ಅಸ್ವಸ್ಥರಾಗಿದ್ದ ಶರಣಬಸಪ್ಪ ಅಪ್ಪ ಅವರನ್ನು ಖಾಸಗಿ ಆಸ್ಪತ್ರೆಯಿಂದ ಮಠಕ್ಕೆ ಶಿಫ್ಟ್‌ ಮಾಡಲಾಗಿತ್ತು. ಮಠದಲ್ಲೇ ಆರೈಕೆಗೆ ಕುಟುಂಬಸ್ಥರು ನಿರ್ಧರಿಸಿದ್ದರು. ಕೆಲ ದಿನಗಳಿಂದೀಚೆಗೆ ಮಠದಲ್ಲೇ ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು […]

Continue Reading

ಅರಜಂಬಗಾ: ಕರವೇ ಗ್ರಾಮ ಘಟಕದ ಅಧ್ಯಕ್ಷರಾಗಿ ಲಾಲ್ ಪಟೇಲ್ ಆಯ್ಕೆ

ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಅರಜಂಬಗಾ ಗ್ರಾಮ ಘಟಕದ ಅಧ್ಯಕ್ಷರಾಗಿ ಲಾಲ್ ಪಟೇಲ್ ತಂದೆ ಮಕಬೂಲ್ ಪಟೇಲ್ ಅವರನ್ನು ನೇಮಕ ಮಾಡಲಾಯಿತು. ನಗರದ ಒಕ್ಸ್ ಎಲೈಟ್ ಹೋಟೆಲ್’ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮಾಸಿಕ ಸಭೆಯಲ್ಲಿ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಕಾಶಿ ಮತ್ತು ಕರವೇ ಜಿಲ್ಲಾಧ್ಯಕ್ಷ ಆನಂದ್ ದೊಡ್ಮನಿ ಅವರು ಕಾಳಗಿ ತಾಲೂಕಿನ ಅರಂಬಗಾ ಗ್ರಾಮ ಘಟಕದ ಅಧ್ಯಕ್ಷರನ್ನು ನೇಮಕ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸರ್ವ ತಾಲೂಕು ಅಧ್ಯಕ್ಷರು, […]

Continue Reading

ಅಂಗಾಂಗ ದಾನ ಜೀವದಾನಕ್ಕೆ ಸಮಾನ: ಡಾ.ರಾಜಶೇಖರ ಪಾಟೀಲ

ಕಲಬುರಗಿ: ರಕ್ತದಾನ, ಅಂಗಾಂಗ ದಾನ, ದೇಹ ದಾನ ಮಾಡುವುದರಿಂದ ಮತ್ತೊಬ್ಬರ ಜೀವ ಉಳಿಯುವುದರ ಜೊತೆಗೆ ದಾನಿ ಸತ್ತ ನಂತರವು ದಾನ ಮಾಡಿದ ಅಂಗಾಂಗಳ ಮೂಲಕ ಬದುಕಬಹುದಾಗಿದೆ, ಅಂಗಾಂಗ ದಾನಿಗಳಿಗೆ ಸಾವಿಲ್ಲ ಎಂದು ಖ್ಯಾತ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ಜೆ.ಆರ್ ನಗರದಲ್ಲಿನ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದಿಂದ ಬುಧವಾರ ಸಂಜೆ ಜರುಗಿದ ‘ವಿಶ್ವ ಅಂಗಾಂಗ ದಾನ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, […]

Continue Reading

ಜನಪದದಿಂದ ಬದುಕಿಗೆ ಬಲ, ಬೆಲೆ, ಸತ್ವ ಮತ್ತು ಮಹತ್ವ ಬರಲು ಸಾಧ್ಯ

ಕಲಬುರಗಿ: ನಮ್ಮತನ, ಹೃದಯ ಶ್ರೀಮಂತಿಕೆ, ಮಾನವೀಯ ಮೌಲ್ಯಗಳು, ಸಾಮಾಜಿಕ ಕಾಳಜಿ, ಕೌಟುಂಬಿಕ ಸಾಮರಸ್ಯ ಸೇರಿದಂತೆ ಬದುಕಿನ ಶ್ರೀಮಂತಿಕೆ ಕಟ್ಟಿಕೊಡುವ, ನಮ್ಮ ದೇಶದ ಮೂಲ ಸಂಸ್ಕೃತಿ, ಪರಂಪರೆಯಾದ ಜನಪದದ ಅಳವಡಿಕೆಯಿಂದ ಬದುಕಿಗೆ ಬಲ, ಬೆಲೆ, ಸತ್ವ ಮತ್ತು ಮಹತ್ವ ಬರಲು ಸಾಧ್ಯ ಎಂದು ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಡಾ.ಸ್ವಾಮಿರಾವ ಕುಲಕರ್ಣಿ ಅಭಿಮತಪಟ್ಟರು. ನಗರದ ಹೊಸ ಜೇವರ್ಗಿ ರಸ್ತೆಯಲ್ಲಿನ ಗೆಟ್ಸ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜ್’ನಲ್ಲಿ ಕನ್ನಡ ಜಾನಪದ ಪರಿಷತ್’ನ ಜಿಲ್ಲಾ ಘಟಕದಿಂದ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಬುಡಕಟ್ಟು […]

Continue Reading