ರಾಷ್ಟ್ರದ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರವಾಸೋದ್ಯಮದ ಪಾತ್ರ ಅನನ್ಯ: ಎಚ್.ಬಿ ಪಾಟೀಲ

ಕಲಬುರಗಿ: ದೇಶ ಸುತ್ತು, ಕೋಶ ಓದು ಎಂಬ ಮಾತಿನಂತೆ ಸುಕ್ಷೇತ್ರಗಳು, ಸ್ಮಾರಕಗಳು, ನೈಸರ್ಗಿಕ ತಾಣಗಳು, ಐತಿಹಾಸಿಕ ಸ್ಥಳಗಳಿಗೆ ತೆರಳಿ ವೀಕ್ಷಣೆ ಮಾಡುವುದರಿಂದ ನಮ್ಮ ಇತಿಹಾಸ, ಪರಂಪರೆ, ಕಲೆ, ಸಾಹಿತ್ಯ, ಸಂಸ್ಕೃತಿ ತಿಳಿಯುತ್ತದೆ. ಪ್ರವಾಸೋದ್ಯಮದಿಂದ ಪ್ರತ್ಯಕ್ಷ ಹಾಗೂ ಪರೋಕ್ಷ ಉದ್ಯೋಗಗಳನ್ನು ದೊರೆಯುತ್ತವೆ. ರಾಷ್ಟ್ರದ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರವಾಸೋದ್ಯಮದ ಪಾತ್ರ ಮಹತ್ವದ್ದಾಗಿದೆ ಎಂದು ಅರ್ಥಶಾಸ್ತ್ರದ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ನಾಕಾ ಸಮೀಪದ ಐತಿಹಾಸಿಕ ಹಾಗೂ ಬಹು ಪುರಾತನ ಸ್ಥಂಬ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ಸಮಾಜ ಸೇವಾ […]

Continue Reading

ಸುರಕ್ಷಿತ ಗರ್ಭನಿರೋಧಕ ಆಯ್ಕೆಗಳ ಬಗ್ಗೆ ಜಾಗೃತಿ ಅಗತ್ಯ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಜನನ ನಿಯಂತ್ರಣದಲ್ಲಿ ಸುರಕ್ಷಿತ ಗರ್ಭನಿರೋಧಕ ಆಯ್ಕೆಗಳು ಮತ್ತು ವಿಧಾನಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿನ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಕೇಂದ್ರ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ “ವಿಶ್ವ ಗರ್ಭನಿರೋಧಕ/ಜನನ ನಿಯಂತ್ರಣ ದಿನಾಚರಣೆ”ಯಲ್ಲಿ ಮಾತನಾಡಿದ ಅವರು,ಜನಸಂಖ್ಯಾ ಸ್ಪೋಟದಿಂದ ತತ್ತರಿಸಿರುವ ವಿಶ್ವದ ಬಹುತೇಕ ರಾಷ್ಟ್ರಗಳಿಗೆ ಜನನ ನಿಯಂತ್ರಣ, ಕುಟುಂಬ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಅಗತ್ಯವಾಗಿದೆ ಎಂದರು‌. ಅನಪೇಕ್ಷಿತ ಗರ್ಭಧಾರಣೆಗಳನ್ನು […]

Continue Reading

ಪರಿಸರದ ಆರೋಗ್ಯ ಕಾಪಾಡುವುದು ಅಗತ್ಯ: ಎಚ್.ಬಿ ಪಾಟೀಲ

ಕಲಬುರಗಿ: ಪರಿಸರ ಸ್ವಚ್ಛತೆ ಕಾಪಾಡುವುದು, ವ್ಯಾಪಕವಾಗಿ ಗಿಡಗಳನ್ನು ನೆಟ್ಟು ಪೋಷಿಸುವುದು, ಮಾಲಿನ್ಯ ನಿಯಂತ್ರಿಸಿ ಪರಿಸರದ ಆರೋಗ್ಯ ಕಾಪಾಡುವುದು ಅಗತ್ಯವಾಗಿದೆ ಎಂದು ಉಪನ್ಯಾಸಕ, ಪರಿಸರ ಪ್ರೇಮಿ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ವಿಶ್ವ ಪರಿಸರ ಆರೋಗ್ಯ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿನ ಸಕಲ ಜೀವರಾಶಿಗಳು ಉಳಿದು, ಸಮೃದ್ಧವಾಗಿ ಬೆಳವಣಿಗೆಯಾಗಬೇಕಾದರೆ ಪರಿಸರದ ಪಾತ್ರ ಪ್ರಮುಖವಾಗಿದೆ ಎಂದರು. ವಿವಿಧ […]

Continue Reading

ನಿಸ್ವಾರ್ಥ ಸೇವೆಯಿಂದ ಸಮಾಜ ಪರಿವರ್ತಿಸಲು ಸಾಧ್ಯ

ಸುದ್ದಿ ಸಂಗ್ರಹ ಶಹಬಾದ ಸಮಾಜದಲ್ಲಿ ಪ್ರತಿಯೊಬ್ಬರು ನಿಸ್ವಾರ್ಥ ಸೇವೆ ಸಲ್ಲಿಸಿದಾಗ ಮಾತ್ರ ಸಮಾಜ ಪರಿವರ್ತಿಸಲು ಸಾಧ್ಯ ಎಂದು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಹನುಮಂತಪ್ಪ ಬಿ ಸೇಡಂಕರ ಹೇಳಿದರು. ನಗರದ ಹೈ.ಕ ಶಿಕ್ಷಣ ಸಂಸ್ಥೆಯ ಎಸ್.ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಇಂದು ತೆಗೆದುಕೊಳ್ಳುವ ನಿರ್ಧಾರ, ನಾಳೆ ಸಮಾಜ ಪರಿವರ್ತಿಸುವ ಶಕ್ತಿ ಹೊಂದಿದೆ. ಸೇವಾ ಮನೋಭಾವವು ಬದುಕನ್ನು ಶ್ರೀಮಂತಗೊಳಿಸುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹೈ.ಕ ಶಿಕ್ಷಣ ಸಂಸ್ಥೆಯ […]

Continue Reading

ಆರ್ಥಿಕ ಬೆಳವಣಿಗೆಗೆ ಮೇಕ್ ಇನ್ ಇಂಡಿಯಾ ಪೂರಕ

ಕಲಬುರಗಿ:  ಭಾರತದಲ್ಲಿ ವಿನ್ಯಾಸ, ತಯಾರಿಕೆ ಮತ್ತು ಜೋಡಣೆಯನ್ನು ಉತ್ತೇಜಿಸಲು, ವ್ಯಾಪಾರ-ವ್ಯವಹಾರ ವೃದ್ಧಿಗೆ  ಭಾರತ ಸರ್ಕಾರವು ಪ್ರಾರಂಭಿಸಿದ ಮೇಕ್ ಇನ್ ಇಂಡಿಯಾ ಯೋಜನೆ ಪೂರಕವಾಗಿದೆ ಎಂದು ಜಿಲ್ಲಾ ಸಣ್ಣ ಕೈಗಾರಿಕೆಗಳ ಮಾಲೀಕರ ಸಂಘದ ಅಧ್ಯಕ್ಷ ಭೀಮಾಶಂಕರ ಪಾಟೀಲ ಹೇಳಿದರು. ನಗರದ ಹೊಸ ಜೇವರ್ಗಿ ರಸ್ತೆಯ ಗೆಟ್ಸ್ ಡಿಗ್ರಿ ಕಾಲೇಜಿನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ಮೇಕ್ ಇನ್ ಇಂಡಿಯಾದ ದಶಮಾನೋತ್ಸವ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ಉತ್ಪಾದನೆಯಲ್ಲಿ ಹೂಡಿಕೆ ಹೆಚ್ಚಿಸುವುದು, […]

Continue Reading

ಅತಿವೃಷ್ಟಿ ಪೀಡಿತ ಪ್ರದೇಶ ಘೋಷಣೆಗೆ ಆಗ್ರಹ

ಸುದ್ದಿ ಸಂಗ್ರಹ ಶಹಾಬಾದ ಅತಿಯಾದ ಮಳೆಯಿಂದ ರೈತರು ಬೆಳೆದ ತೊಗರಿ, ಹೆಸರು, ಉದ್ದು ಸೇರಿದಂತೆ ಇತರ ಎಲ್ಲಾ ಬೆಳೆಗಳು ಸಂಪೂರ್ಣ ನಷ್ಟವಾಗಿದೆ, ಹೀಗಾಗಿ ಕಲಬುರಗಿ ಜಿಲ್ಲೆಯು ಅತಿವೃಷ್ಟಿ ಪೀಡಿತ ಜಿಲ್ಲೆ ಎಂದು ಘೋಷಿಸಿ ಪರಿಹಾರ ನೀಡಬೇಕು ಎಂದು ಶಹಾಬಾದ್ ಮಂಡಲ ಅಧ್ಯಕ್ಷ ನಿಂಗಣ್ಣ ಹುಳುಗೋಳ್ಕರ್ ಆಗ್ರಹಿಸಿದರು.  ನಗರದ ಬಸವೇಶ್ವರ ವೃತ್ತದಲ್ಲಿ ಬುಧುವಾರ ಬಿಜೆಪಿ ಪಕ್ಷ, ರೈತ ಮೋರ್ಚಾದ ವತಿಯಿಂದ ಅತಿವೃಷ್ಟಿ ಪೀಡಿತ ಪ್ರದೇಶ ಘೋಷಣೆಗೆ ಆಗ್ರಹಿಸಿ ಪ್ರತಿಭಟನೆಯಲ್ಲಿ ಮಾತನಾಡಿ, ರೈತರಿಗೆ ಸೇರಬೇಕಾದ ಹಳೆಯ ಪರಿಹಾರ ಬಾಕಿಯನ್ನು ಬಿಡುಗಡೆ […]

Continue Reading

ಆಯುರ್ವೇದ ಸಮಗ್ರ ಆರೋಗ್ಯ ಪದ್ದತಿ: ಡಾ.ಸದಾನಂದ ಪಾಟೀಲ

ಕಲಬುರಗಿ: ಸರ್ವ ಕಾಯಿಲೆಗೆ ಮದ್ದನ್ನು ನೀಡುವ ಆಯುರ್ವೇದ ಪದ್ಧತಿ ಸಮಗ್ರ ಆರೋಗ್ಯ ವ್ಯವಸ್ಥೆಯಾಗಿದ್ದು, ಎಲ್ಲರು ಆಯುರ್ವೇದ ಪದ್ಧತಿಯತ್ತ ಮುಖ ಮಾಡಬೇಕಾದದ್ದು ಇಂದಿನ ಅಗತ್ಯವಾಗಿದೆ ಎಂದು ಖ್ಯಾತ ಆಯುರ್ವೇದ ತಜ್ಞ ವೈದ್ಯ ಡಾ.ಸದಾನಂದ ಪಾಟೀಲ ಅಭಿಮತ ವ್ಯಕ್ತಪಡಿಸಿದರು. ನಗರದ ಶಹಾಬಾದ್ ರಿಂಗ್ ರಸ್ತೆಯ ಸಮೀಪದ ಚರಕ ಆಯುರ್ವೇದ ಆಸ್ಪತ್ರೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಜರುಗಿದ ‘10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ’ ಮತ್ತು ‘ಧನ್ವಂತರಿ ಜಯಂತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಆಧುನಿಕ ಒತ್ತಡ […]

Continue Reading

ಪೌರ ಕಾರ್ಮಿಕರಿಗೆ ಸೇವಾ ಭದ್ರತೆಯ ಸೌಲಭ್ಯಗಳು ದೊರೆಯಲಿ

ಕಲಬುರಗಿ: ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವುದು, ಸೂಕ್ತ ವೇತನ, ಸರ್ಕಾರಿ ಸೌಲಭ್ಯಗಳು ದೊರೆಯಬೇಕು ಎಂದು ಹಿರಿಯ ಪೌರ ಕಾರ್ಮಿಕ ತಾರಾಚಂದ ರಾಠೋಡ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಏರ್ಪಡಿಸಲಾಗಿದ್ದ ‘ರಾಜ್ಯ ಪೌರ ಕಾರ್ಮಿಕರ ದಿನಾಚರಣೆ’ಯಲ್ಲಿ ಗೌರವ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಕಸ ವಿಲೇವಾರಿ, ಸ್ವಚ್ಚತೆ ಮಾಡುವ ಕಾರ್ಯ ನಿರ್ವಹಿಸುತ್ತಿರುವ ಕಾಯಕ ಜೀವಿಗಳಾದ ಪೌರ ಕಾರ್ಮಿಕರು ಸ್ವಚ್ಚತೆಯ ರಾಯಭಾರಿಗಳು. ಅವರ […]

Continue Reading

ಆಲ್ಝೈಮರ್ಸ್ ಕಾಯಿಲೆ ಬಗ್ಗೆ ಜಾಗೃತಿ ಅಗತ್ಯ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಆಲ್ಝೈಮರ್ಸ್ ಕಾಯಿಲೆ ಎಂದರೆ ಮೆದುಳಿನ ನರದ ವ್ಯವಸ್ಥೆಯಲ್ಲಿನ ಅಸ್ವಸ್ಥತೆಯಾಗಿದ್ದು, ಇದು ಕ್ರಮೇಣ ನೆನಪಿನ ಶಕ್ತಿ, ಆಲೋಚನೆ ಮತ್ತು ತಿಳುವಳಿಕೆಯ ಸಾಮರ್ಥ್ಯವನ್ನು ನಾಶಪಡಿಸುತ್ತದೆ. ಇದು ಅಂತಿಮವಾಗಿ ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹದಗೆಡಿಸುತ್ತದೆ. ಈ ಕಾಯಿಲೆಗೆ ಪ್ರಸ್ತುತ ಯಾವುದೆ ಚಿಕಿತ್ಸೆ ಇಲ್ಲ. ಆದರೆ ರೋಗ ಲಕ್ಷಣಗಳನ್ನು ನಿರ್ವಹಿಸಲು ಔಷಧಿ ಮತ್ತು ಆರೈಕೆ ಲಭ್ಯವಿದೆ. ಇದರ ಬಗ್ಗೆ ಜಾಗೃತಿ ಅಗತ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿರುವ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ […]

Continue Reading

ಆರೋಗ್ಯಕರ ಜೀವನ ಶೈಲಿಯಿಂದ ಕಾಯಿಲೆಗಳು ದೂರ: ಡಾ.ಅಂಕಿತ್ ಕದರ್ಗಿ

ಕಲಬುರಗಿ: ಎಲ್ಲರು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಂಡರೆ ಕಾಯಿಲೆಗಳಿಂದ ದೂರವಿರಬಹುದಾಗಿದೆ. ಆರೋಗ್ಯವೇ ಮನುಷ್ಯನ ದೊಡ್ಡ ಸಂಪತ್ತಾಗಿದ್ದು, ಅದನ್ನು ಕಾಪಾಡಿಕೊಳ್ಳಬೇಕು ಎಂದು ತಜ್ಞ ವೈದ್ಯ ಡಾ.ಅಂಕಿತ್ ಆರ್ ಕದರ್ಗಿ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಕೆ.ಎಚ್.ಬಿ ಗ್ರೀನ್ ಪಾರ್ಕನ ಹನುಮಾನ ದೇವಸ್ಥಾನದ ಆವರಣದಲ್ಲಿ ಆಯುಸಿಂಕ್ ಮೆಡಿಕಲ್ ಕಂಪನಿ ಮತ್ತು ಬಡಾವಣೆಯ ಜಂಟಿ ಆಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ಒಂದು ದಿನದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಆರೋಗ್ಯ ಕಳೆದುಕೊಂಡು ಬೇರೆಲ್ಲಾ ಸಂಪತ್ತು ಗಳಿಸಿದರೂ ವ್ಯರ್ಥ. ಪ್ರಸ್ತುತ ದಿನಗಳಲ್ಲಿ […]

Continue Reading