ಯಶಸ್ಸಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಡಿಸಿ

ಸುದ್ದಿ ಸಂಗ್ರಹ ಕಲಬುರಗಿಚಿತ್ತಾಪುರ ಪಟ್ಟಣದಲ್ಲಿ ಮಾ.8ರಂದು ಸಾವಿರಾರು ಕೋಟಿ ರೂ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಕಾರ್ಯಕ್ರಮ ಯಶಸ್ಸಿಗೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ತಾಲೂಕು ಆಡಳಿತದೊಂದಿಗೆ ಸಮನ್ವಯ ಸಾಧಿಸಿ ಕಾರ್ಯಕ್ರಮ ಯಶಸ್ಸಿಗೆ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು. ಶುಕ್ರವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನೊಳಗೊಂಡು ರಚಿಸಲಾದ ವಿವಿಧ ಸಮಿತಿ ಸದಸ್ಯರೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ರಾಜ್ಯಸಭೆಯ ವಿರೋಧ […]

Continue Reading

ಪಂಡಿತ ಡಾ.ಪುಟ್ಟರಾಜ ಗವಾಯಿಗಳ ಕೊಡುಗೆ ಅವಿಸ್ಮರಣೀಯ

ಸುದ್ದಿ ಸಂಗ್ರಹ ಕಲಬುರಗಿ ತ್ರಿಕಾಲ ಜ್ಞಾನಿ, ಸಾಹಿತಿ, ಸಮಾಜಕ್ಕೆ ಆದರ್ಶ ಗುರು, ಸಮಾಜ ಸುಧಾರಕರಾಗಿ ವಿವಿಧ ಆಯಾಮಗಳಿಂದ ಅವರು ನೀಡಿರುವ ಕೊಡುಗೆ ಅವಿಸ್ಮರಣೀಯ ಎಂದು ಹಿರಿಯ ಸಂಗೀತ ಕಲಾವಿದ ಹಣಮಂತರಾಯ ಮಂಗಾಣೆ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದಲ್ಲಿನ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ಗಾನಯೋಗಿ ಪಂಡಿತ ಡಾ.ಪುಟ್ಟರಾಜ ಗವಾಯಿಗಳ 112ನೇ ಜಯಂತ್ಯುತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾವು ಎರಡು ವರ್ಷದವರಿದ್ದಾಗ ಕಣ್ಣುಗಳ ಕಳೆದುಕೊಂಡ ಪಂಡಿತ ಡಾ.ಪುಟ್ಟರಾಜ ಗವಾಯಿಗಳು […]

Continue Reading

ಮಾರುಕಟ್ಟೆಗಾಗಿ ಪ್ರಪಂಚ ಸ್ಮಶಾನ ಮಾಡುತ್ತಿರುವ ಅಮೆರಿಕ-ಇಸ್ರೇಲ್: ಎಂ ಶಶಿಧರ

ಸುದ್ದಿ ಸಂಗ್ರಹ ಶಹಾಬಾದವಿಶ್ವದ ತೈಲ ಮಾರುಕಟ್ಟೆಯನ್ನು ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಳ್ಳಲು ಅಮೆರಿಕ ಹುನ್ನಾರ ನಡೆಸುತ್ತಿದೆ. ತೈಲ ನಿಕ್ಷೇಪ ಹೊಂದಿರುವ ರಾಷ್ಟ್ರಗಳನ್ನು ಕುತಂತ್ರದಿಂದ ತನ್ನ ಅಂಕೆಯಲ್ಲಿಟ್ಟುಕೊಳ್ಳಲು ಪ್ರಯತ್ನಿಸುತಿದೆ. ಅದು ಸಾಧ್ಯವಾಗದಿದ್ದರೆ ಇಲ್ಲಸಲ್ಲದ ಕಾರಣ ನೀಡಿ ಸಾರ್ವಭೌಮ ರಾಷ್ಟ್ರಗಳ ಮೇಲೆ ಮಿಲಿಟರಿ ದಾಳಿ ಮಾಡುವುದರ ಮೂಲಕ ಅಮೆರಿಕ ಮತ್ತು ಇಸ್ರೇಲ್ ಸಾಮ್ರಾಜ್ಯಶಾಹಿಗಳು ಪ್ರಪಂಚವನ್ನು ಸ್ಮಶಾನ ಮಾಡುತ್ತಿವೆ. ಅವರಿಗೆ ನಮ್ಮ ಧಿಕ್ಕಾರವಿದೆ ಎಂದು ಎಸ್’ಯುಸಿಐ (ಸಿ)ನ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ಎಮ್ ಶಶಿಧರ ಆಕ್ರೋಶ ವ್ಯಕ್ತಪಡಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ […]

Continue Reading

ಶಾಸಕ ಮತ್ತಿಮೂಡ್ ಜನ್ಮದಿನ: ಬೈಕ್ ಸವಾರರಿಗೆ ಹೆಲ್ಮೆಟ್, ಆಟೋ ಚಾಲಕರಿಗೆ ಏಫ್ರಾನ್ ವಿತರಣೆ

ಸುದ್ದಿ ಸಂಗ್ರಹ ಶಹಾಬಾದ್ಪಕ್ಷಬೇಧ ಮಾಡದೆ ಸರ್ವರಿಗೂ ಗೌರವ ಕೊಡುತ್ತಾ ಸದಾ ಹಸನ್ಮುಖಿಯಾಗಿರುವ ಶಾಸಕ ಬಸವರಾಜ ಮತ್ತಿಮೂಡ್ ಅವರ ಜನ್ಮ ದಿನದ ಪ್ರಯುಕ್ತ ಆಟೋ ಚಾಲಕರಿಗೆ ಏಫ್ರಾನ್ ಮತ್ತು ಬೈಕ್ ಸವಾರರಿಗೆ ಹೆಲ್ಮೆಟ್ ವಿತರಣೆ ಮಾಡಲಾಯಿತು ಎಂದು ಬಿಜೆಪಿ ಅಧ್ಯಕ್ಷ ನಿಂಗಣ್ಣ ಹುಳಗೋಳಕರ್ ಹೇಳಿದರು. ನಗರದ ಶ್ರೀರಾಮ ಚೌಕಿನಲ್ಲಿ ಶಾಸಕ ಬಸವರಾಜ ಮತ್ತಿಮೂಡ್ ಅವರ 46ನೇ ಜನ್ಮದಿನದಂದು ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ, ನಂತರ ಬೈಕ್ ಸವಾರರಿಗೆ ಹೆಲ್ಮೆಟ್ ಹಾಗೂ ಆಟೋ ಚಾಲಕರಿಗೆ ಏಫ್ರಾನ್ ವಿತರಣಾ ಕಾರ್ಯಕ್ರಮ […]

Continue Reading

ಶಾಂತಿ-ಸೌಹಾರ್ದತೆಯಿಂದ ಹಬ್ಬ ಆಚರಿಸಿ: ಡಿವೈಎಸ್ಪಿ ಶಂಕರಗೌಡ ಪಾಟೀಲ

ಸುದ್ದಿ ಸಂಗ್ರಹ ಶಹಾಬಾದರಂಜಾನ್‌ ಮತ್ತು ಹೋಳಿ ಹಬ್ಬ ಶಾಂತಿ- ಸೌಹಾರ್ದತೆಯ ಸಂಕೇತವಾಗಿದ್ದು, ಹಬ್ಬಗಳು ಸಂತೋಷದಿಂದ ಆಚರಿಸಿ, ಯುವಕರು, ಮಕ್ಕಳು ಮಾಡುವ ಸಣ್ಣಪುಟ್ಟ ಸಮಸ್ಯೆಗಳನ್ನು ಅಲ್ಲಿಯೆ ಪರಿಹರಿಸುವ ಮೂಲಕ ಹಬ್ಬಗಳಲ್ಲಿ ಶಾಂತಿ- ಸೌಹಾರ್ದತೆ ಕಾಪಾಡಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ನಗರ ಪೊಲೀಸ್ ಠಾಣೆಯಲ್ಲಿ ಸೋಮವಾರ ರಂಜಾನ್‌ ಮತ್ತು ಹೋಳಿ ಹಬ್ಬದ ಪ್ರಯುಕ್ತ ಕರೆಯಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ 3-4 ದಿನದಲ್ಲಿ ಬಿಸಿಲಿನ ಝಳ ಹೆಚ್ಚಲಿದ್ದು, ಜನರು ಈ ವಾತಾವರಣಕ್ಕೆ ಹೊಂದಿಕೊಳ್ಳುವದು ಅಗತ್ಯವಾಗಿದೆ, ಆರೋಗ್ಯದ […]

Continue Reading

ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು: ಡಾ.ಬಸವರಾಜ ಹಿರೇಮಠ

ಸುದ್ದಿ ಸಂಗ್ರಹ ಶಹಾಬಾದ್ಮೂಡನಂಬಿಕೆ ತೊಲಗಿಸಬೇಕಾದರೆ ವೈಜ್ಞಾನಿಕ ಮನೋಭಾವನೆ ಅಗತ್ಯ, ವಿದ್ಯಾರ್ಥಿಗಳು ಜೀವನದಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಎಸ್’ಎಸ್ ಮರಗೋಳ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಬಸವರಾಜ ಹಿರೇಮಠ ಹೇಳಿದರು. ನಗರದ ಎಸ್’ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ಶನಿವಾರ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮವನ್ನು ಡಾ ಸಿ.ವಿ ರಾಮನ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ವೈಜ್ಞಾನಿಕವಾಗಿ ಭಾರತ ದೇಶ ಬೆಳೆದು ನಿಂತಿರುವುದು ತುಂಬಾ ಹೆಮ್ಮೆಪಡುವ ವಿಷಯ ಯುದ್ಧಕ್ಕೆ ಸಜ್ಜಾಗುವ ಪ್ರಕ್ರಿಯೆ, ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಭಾರತ ದೇಶ […]

Continue Reading

ಮಾ.3ರಂದು ಮಲ್ಲಿಕಾರ್ಜುನ ತರುಣ ಸಂಘದ 29ನೇ ವಾರ್ಷಿಕೋತ್ಸವ: ಶಿವರಾಜ ಅಂಡಗಿ

ಸುದ್ದಿ ಸಂಗ್ರಹ ಕಲಬುರಗಿ ನಗರದ ಸೇಡಂ ರಸ್ತೆಯ ಬಸವೇಶ್ವರ ಆಸ್ಪತ್ರೆ ಎದುರುಗಡೆಯ ವಿದ್ಯಾನಗರದಲ್ಲಿ ವೆಲ್‌ಫೆರ್ ಸೊಸೈಟಿ ವತಿಯಿಂದ ಮಾರ್ಚ್ 3 ರಂದು ಸಂಜೆ 7.30ಕ್ಕೆ ಮಲ್ಲಿಕಾರ್ಜುನ ಸಮುದಾಯ ಭವನದ ಆವರಣದಲ್ಲಿ ಮಲ್ಲಿಕಾರ್ಜುನ ತರುಣ ಸಂಘದ 29ನೇ ವಾರ್ಷಿಕೋತ್ಸವ ಮತ್ತು ಕಾಮದಹನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತರುಣ ಸಂಘದ ಅಧ್ಯಕ್ಷ ಶಿವರಾಜ ಅಂಡಗಿ ತಿಳಿಸಿದ್ದಾರೆ. ಇಂದಿನ ಯುವ ಪೀಳಿಗೆಗೆ ಹೋಳಿ ಹಬ್ಬ ಎಂದರೆ ಮೈಮೇಲಿನ ಬಟ್ಟೆ ಹರಿದುಕೊಳ್ಳುವುದು, ಘಟಾರ ನೀರು ಎರಚುವುದು, ವಾಹನಗಳ ಸೈಲೆನ್ಸರ್ ತೆಗೆದು ಜೋರಾದ ಶಬ್ದದೊಂದಿಗೆ […]

Continue Reading

ಇಂದಿರಾ ಕ್ಯಾಂಟಿನ್‌ ಸ್ಥಳ ಅತಿಕ್ರಮಣ: ಡಬ್ಬಿ ತೆರವಿಗೆ ಬಿಜೆಪಿ ಆಗ್ರಹ‌

ಸುದ್ದಿ ಸಂಗ್ರಹ ಶಹಾಬಾದಇಂದಿರಾ ಕ್ಯಾಂಟಿನ್‌ ಕಾಂಪೌಂಡ್ ಆವರಣದಲ್ಲಿ ಅಕ್ರಮವಾಗಿ ಇರಿಸಲಾಗಿದ್ದ ಡಬ್ಬಿ ತಕ್ಷಣ ತೆರೆವು ಗೊಳಿಸಬೇಕು ಎಂದು ಬಿಜೆಪಿ ಮಂಡಲದ ಅಧ್ಯಕ್ಷ ನಿಂಗಪ್ಪ ಹುಳಗೋಳಕರ್ ಆಗ್ರಹಿಸಿದ್ದಾರೆ.‌ ನಗರದ ಇಂದಿರಾ ಕ್ಯಾಂಟಿನಗಾಗಿ ಸರಕಾರಿ ಆಸ್ಪತ್ರೆಯ ಆವರಣದ ಗೋಡೆ ತೆರೆವುಗೊಳಿಸುವಾಗ ಒಳಗಡೆ ಯಾವುದೆ ತರಹದ ಡಬ್ಬದ ಅಂಗಡಿ ಇರಲಿಲ್ಲ, ಕಾಮಗಾರಿ ಪ್ರಾರಂಭಿಸಿದ ತಕ್ಷಣ ನಗರದ ಪ್ರಭಾವಿ ನಾಯಕರು ಮತ್ತು ನಗರ ಸಭೆ ಅಧಿಕಾರಿಗಳ ಬೆಂಬಲದಿಂದ ಪ್ರಭಾವಿ ವ್ಯಕ್ತಿಯೊಬ್ಬ ಕ್ಯಾಂಟಿನ್‌ ಉಧ್ಘಾಟನೆ ಮುಂಚೆ ಅಕ್ರಮವಾಗಿ ಡಬ್ಬಿ ತಂದು ಇರಿಸಿದ್ದು ಕಂಡುಬಂದಿದೆ ಎಂದರು. […]

Continue Reading

ಭೂಸ್ವಾಧೀನ ಪ್ರಕರಣದಲ್ಲಿ ಪರಿಹಾರ ವಿಳಂಬ: ಜಿಲ್ಲಾಧಿಕಾರಿ ಕಾರು ಜಪ್ತಿ‌‌

ಸುದ್ದಿ ಸಂಗ್ರಹ ಕಲಬುರಗಿನಂದಿಕೂರ ಬಳಿಯಿರುವ ಚರಂಡಿ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ಸ್ಥಾಪನೆ ಭೂಸ್ವಾಧೀನ ಪ್ರಕರಣದಲ್ಲಿ ನ್ಯಾಯಾಲಯದ ಆದೇಶದಂತೆ ಪರಿಹಾರ ವಿತರಿಸುವಲ್ಲಿ ವಿಳಂಬ ಮಾಡಿದ್ದಕ್ಕೆ ಕಲಬುರಗಿ ಜಿಲ್ಲಾಧಿಕಾರಿ ಕಾರನ್ನು ನ್ಯಾಯಾಲಯದ ಸಿಬ್ಬಂದಿ ಗುರುವಾರ ಜಪ್ತಿ ಮಾಡಿದ್ದಾರೆ. ಬಳಿಕ ಪರಿಹಾರ ವಿತರಣೆ ಭರವಸೆ ಬಳಿಕ ಕಾರನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲಾ ಕೋರ್ಟ್‌ನ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶಕೆ.ಎಸ್ ರೊಟ್ಟೇರ್ ಅವರು ಭೂಸ್ವಾಧೀನ ಪರಿಹಾರ ವಿಳಂಬ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಕಾರು (ಕೆಎ 32 ಜಿ 9990) ಜಪ್ತಿ ಮಾಡುವಂತೆ ಆದೇಶಿಸಿದ್ದರು. […]

Continue Reading

ಬೆಂಕಿ ಅವಘಡ: ‍50 ಲಕ್ಷ ಮೌಲ್ಯದ ವಸ್ತುಗಳಿದ್ದ ಎಲೆಕ್ಟ್ರಿಕಲ್ ಅಂಗಡಿ ಭಸ್ಮ

ಸುದ್ದಿ ಸಂಗ್ರಹ ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ನಗರದ ರಾಮ ಮಂದಿರ ಸರ್ಕಲ್‌ ಸಮೀಪದ ಎಲೆಕ್ಟ್ರಿಕಲ್ ಅಂಗಡಿಗೆಯೊಂದರಲ್ಲಿ ಬುಧವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದೆ. ಅಶೋಕ ಪ್ರಜಾಪತಿ ಅವರಿಗೆ ಸೇರಿದ ಅಂಗಡಿಯಲ್ಲಿ ಬೆಳಿಗ್ಗೆ 4 ಗಂಟೆ ಸುಮಾರಿಗೆ ಸಂಭವಿಸಿದ ದುರಂತದಲ್ಲಿ 20 ಲಕ್ಷ ಮೌಲ್ಯದ ಎಲೆಕ್ಟ್ರಿಕ್ ಸಾಮಾನುಗಳು ಸೇರಿದಂತೆ 50 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ. ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಬೆಂಕಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕೀಟ್ […]

Continue Reading