ಶಹಾಬಾದ್: ಮಹರ್ಷಿ ಭಗೀರಥ ಜಯಂತಿ ಆಚರಣೆ

ಸುದ್ದಿ ಸಂಗ್ರಹ ಶಹಾಬಾದ್ನಗರದ ತಹಸೀಲ್ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಮಹರ್ಷಿ ಭಗೀರಥ ಜಯಂತಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರೇಡ್ -2 ತಹಸೀಲ್ದಾರ್ ಗುರುರಾಜ ಸಂಗಾವಿ, ಅಧಿಕಾರಿಗಳಾದ ಅಣವೀರಪ್ಪಾ, ವೀರಭದ್ರಪ್ಪ, ಉಪ್ಪಾರ ಸಮಾಜದ ಅಧ್ಯಕ್ಷ ವಸಂತ ಚೂರಿ, ಪ್ರಮುಖರಾದ ಹಣಮಂತ ಶಾಲಿ, ಪ್ರಕಾಶ ಗೋಗಿ, ಚಂದ್ರಶೇಖರ ನೀಡಲ್ ಸೇರಿದಂತೆ ಅನೇಕರು ಇದ್ದರು.

Continue Reading

ಪುಸ್ತಕಗಳು ದೇಶ ಕಟ್ಟುವ ಸಾಧನಗಳು: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಶಹಾಬಾದ್ಪುಸ್ತಕಗಳು ಕೇವಲ ಅಕ್ಷರಗಳ ಗುಚ್ಛವಲ್ಲ, ಅವು ಜ್ಞಾನ, ಮೌಲ್ಯ ಮತ್ತು ಸಂಸ್ಕೃತಿಯ ವಾಹಕಗಳು. ನಾಗರಿಕತೆ ಮತ್ತು ಬ್ರಹ್ಮಾಂಡದ ಅರಿವು ಮೂಡಿಸುವ ಮೂಲಕ ಸದೃಢ ಮಾನವ ಸಂಪನ್ಮೂಲ ನಿರ್ಮಿಸಿ, ದೇಶವನ್ನು ಕಟ್ಟುವ ಶಕ್ತಿ ಪುಸ್ತಕಗಳಿಗಿದೆ ಎಂದು ಉಪನ್ಯಾಸಕ ಹಾಗೂ ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವಿಜಯ ಕಂಪ್ಯೂಟರ್ ಶಿಕ್ಷಣ ಕೇಂದ್ರ, ಹಾಗೂ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ವಿಶ್ವ ಪುಸ್ತಕ ದಿನಾಚರಣೆ” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ […]

Continue Reading

ಶಹಾಬಾದ: ವಿಶ್ವ ಭೂಮಿ ದಿನ ಆಚರಣೆ

ಸುದ್ದಿ ಸಂಗ್ರಹ ಶಹಾಬಾದ ನಗರದ ಹೈ.ಕ ಶಿ‌ಕ್ಷಣ ಸಂಸ್ಥೆಯ ಎಸ್.ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ವಿಶ್ವ ಭೂಮಿ ದಿನ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಬಸವರಾಜ ಹಿರೇಮಠ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ.ಲಕ್ಷ್ಮಣ ರಾಠೋಡ, ಡಾ.ಎಚ್.ವಿ ಸೇಡಂಕರ್, ಡಾ.ಸುರೇಖಾ ನಾಟೇಕರ್, ಡಾ.ಕಾವೇರಿ, ಜ್ಯೋತಿ ಗಂಟಿಮಠ, ನಾಗರಾಜ ದೇವತ್ಕಲ್, ಸಾಯಿರಾಮ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Continue Reading

ಬಿಜೆಪಿ ಕಚೇರಿಯಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಆಚರಣೆ‌

ಸುದ್ದಿ ಸಂಗ್ರಹ ಶಹಾಬಾದ್ನಗರದ ತಾಲೂಕು ಬಿಜೆಪಿ ಕಚೇರಿಯಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 893ನೇ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ನಿಂಗಪ್ಪ ಹುಳಗೊಳಕರ, ಅ.ಭಾ ವೀರಶೈವ ಮಹಾಸಭಾದ ಅಧ್ಯಕ್ಷ ಭೀಮಾಶಂಕರ ಕುಂಬಾರ, ಮುಖಂಡರಾದ ದೇವದಾಸ ಜಾಧವ, ಅರುಣ ಪಟ್ಟಣಕರ, ಭಿಮರಾವ ಸಾಳೂಂಕೆ, ಗಿರಿಮಲ್ಲಪ್ಪ ವಳಸಂಗ ಸೇರಿದಂತೆ ಬಿಜೆಪಿ ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Continue Reading

ಶಹಾಬಾದ್: ಸರ್ಕಲ್‌ಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ಮನವಿ 

ಶಹಾಬಾದ: ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ನಗರದ ಪ್ರಮುಖ ಸರ್ಕಲ್‌ಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ನಗರಸಭೆ ಆಯುಕ್ತರಿಗೆ ಎಸ್’ಯುಸಿಐ(ಸಿ) ಪಕ್ಷದ ಶಹಾಬಾದ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.      ಈ ಸಂದರ್ಭದಲ್ಲಿ ಕಾ.ಗಣಪತಿರಾವ್ ಮಾನೆ, ಕಾ.ರಾಘವೇಂದ್ರ ಎಂ.ಜಿ, ಕಾ.ಜಗನ್ನಾಥ್ ಎಸ್.ಎಚ್, ಕಾ.ತಿಮ್ಮಣ್ಣ ಮಾನೆ, ಕಾ.ನೀಲಕಂಠ ಹುಲಿ, ರಮೇಶ ಇದ್ದರು.

Continue Reading

ಕಲಬುರಗಿ: ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು

ಸುದ್ದಿ ಸಂಗ್ರಹ ಕಲಬುರಗಿವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್‌ ಕಾನ್‌ಸ್ಟೆಬಲ್‌ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬೂರ್ (ಬಿ) ಗ್ರಾಮದ ಬಳಿ ನಡೆದಿದೆ. ಧರೆಪ್ಪ ಅಂಜುಟಗಿ (26) ಮೃತ KSRP ಪೇದೆ. ಧರೆಪ್ಪ ಕಲಬುರಗಿಯಿಂದ ಶಿರವಾಳ್ ಗ್ರಾಮಕ್ಕೆ ಹೊರಟಿದ್ದರು. ಗೊಬ್ಬರ (ಬಿ) ಗ್ರಾಮದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಪೊಲೀಸ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ತಮ್ಮರಾಯ ಪಾಟೀಲ್, ಸಿಪಿಐ ಲಖನ್ ಮಸಗಪ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. […]

Continue Reading

ರಾಷ್ಟ್ರದ ಅಭಿವೃದ್ಧಿಗೆ ರೈಲು ಸಾರಿಗೆಯ ಕೊಡುಗೆ ಅನನ್ಯ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿಕೃಷಿ ಮತ್ತು ಕೈಗಾರಿಕೆಗಳ ಅಭಿವೃದ್ಧಿ, ವ್ಯಾಪಾರ-ವ್ಯವಹಾರಗಳ ವಿಸ್ತರಣೆ, ಉದ್ಯೋಗಾವಕಾಶಗಳ ಹೆಚ್ಚಳ, ಸರ್ಕಾರಕ್ಕೆ ಆದಾಯ, ಪ್ರವಾಸೋದ್ಯಮಕ್ಕೆ ಉತ್ತೇಜನ ಸೇರಿದಂತೆ ಮುಂತಾದ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾಗಿ ಸೇವೆ ಸಲ್ಲಿಸುವ ಮೂಲಕ ರೈಲು ಸಾರಿಗೆಯು ರಾಷ್ಟ್ರದ ಅಭಿವೃದ್ಧಿಗೆ ತನ್ನದೆಯಾದ ಅನನ್ಯ ಕೊಡುಗೆ ನೀಡುತ್ತಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಬಳಿಯಿರುವ ರಿಪಬ್ಲಿಕ್ ಇಂಗ್ಲೀಷ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಭಾರತೀಯ ರೈಲು […]

Continue Reading

ದೇಶದ ಸಂಸ್ಕೃತಿ, ಸಂಪ್ರದಾಯ ಉಳಿಸಿ, ಬೆಳೆಸುವುದು ಅಗತ್ಯ: ಡಾ.ಡಿ.ಬಿ ಬಿರಾದಾರ

ಸುದ್ದಿ ಸಂಗ್ರಹ ಕಲಬುರಗಿವಿವಿಧತೆಯಲ್ಲಿ ಏಕತೆ ಸಾರುವ ನಮ್ಮ ದೇಶದ ಹಿರಿಮೆ, ಉಡುಗೆ-ತೊಡುಗೆ, ಆಚಾರ-ವಿಚಾರ, ಸಂಸ್ಕೃತಿ, ಸಂಪ್ರದಾಯ ಉಳಿಸಿ, ಬೆಳೆಸುವುದು ಅಗತ್ಯವಾಗಿದೆ ಎಂದು ನಿವೃತ್ತ ಪ್ರಾಧ್ಯಾಪಕ ಡಾ.ಡಿ.ಬಿ ಬಿರಾದಾರ ಹೇಳಿದರು. ನಗರದ ಹೊಸ ಜೇವರ್ಗಿ ರಸ್ತೆಯ ಗೆಟ್ಸ್ ವಿಜ್ಞಾನ ಮತ್ತು ವಾಣಿಜ್ಯ ಡಿಗ್ರಿ ಕಾಲೇಜಿನಲ್ಲಿ ಗುರುವಾರ ಜರುಗಿದ ಎಥ್ನಿಕ್ ಡೇ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶದ ಸಂಸ್ಕೃತಿ, ಸಂಪ್ರದಾಯ ಇಡಿ ವಿಶ್ವದಲ್ಲೇ ಶ್ರೇಷ್ಟವಾಗಿದೆ. ವಿದೇಶಿ ಸಂಸ್ಕೃತಿಗೆ ಮಾರುಹೋಗಿ ನಮ್ಮತನ ಮರೆಯಬಾರದು ಎಂದರು. ಚಿಂತಕ ಡಾ.ರಾಜಶೇಖರ ಪಾಟೀಲ […]

Continue Reading

ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿದ ಬಸವಣ್ಣ: ಡಾ.ಭಾಗಿರತಿ ಎಚ್

ಸುದ್ದಿ ಸಂಗ್ರಹ ಕಲಬುರಗಿ ವಿಶ್ವಗುರು ಬಸವಣ್ಣನವರು 800 ವರ್ಷಗಳ ಹಿಂದೆಯೇ ಅನುಭವ ಮಂಟಪ ಸ್ಥಾಪಿಸಿ, ಮಹಿಳೆಯರಿಗೆ ಸ್ವಾತಂತ್ರ್ಯ, ಸಮಾನ ಅವಕಾಶ, ಹಕ್ಕುಗಳು, ಆತ್ಮಗೌರವ ನೀಡುವುದು, ಲಿಂಗ ಸಮಾನತೆ, ಜಾತಿ ಪದ್ಧತಿಯ ನಿರ್ಮೂಲನೆಯಂತಹ ಕ್ರಾಂತಿಕಾರಕ ಕಾರ್ಯಗಳನ್ನು ಮಾಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿದ್ದಾರೆ ಎಂದು ಪ್ರಗತಿಪರ ಮಹಿಳಾ ಚಿಂತಕಿ ಡಾ.ಭಾಗಿರತಿ ಎಚ್ ಗುಡ್ಡೆವಾಡಿ  ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್ ಎದುರುಗಡೆಯ ಶಾರದಾ ವಿವೇಕ ಮಹಿಳಾ‌ ಪದವಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ […]

Continue Reading

ಸಂವಿಧಾನ ಮುಸ್ಲಿಮರಿಗೆ ರಕ್ಷಾ ಕವಚವಾಗಿ ನಿಂತಿದೆ: ಡಾ.ಫಾರುಕ್ ಮಣ್ಣೂರ

ಸುದ್ದಿ ಸಂಗ್ರಹ ಶಹಾಬಾದ ಡಾ.ಬಿ.ಆರ್ ಅಂಬೇಡ್ಕರ್ ಅವರು ರೂಪಿಸಿದ ಭಾರತದ ಸಂವಿಧಾನ ದೇಶದ ಅಲ್ಪಸಂಖ್ಯಾತರಿಗೆ ಕೇವಲ ಒಂದು ಕಾನೂನಿನ ಪುಸ್ತಕವಲ್ಲ, ಅದು ಅವರ ಹಕ್ಕುಗಳ ಭದ್ರಕೋಟೆಯಾಗಿ ಮತ್ತು ರಕ್ಷಣಾ ಕವಚವಾಗಿ ನಿಂತಿದೆ ಎಂದು ಮಣ್ಣೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ.ಫಾರುಕ್ ಮಣ್ಣೂರ ಹೇಳಿದರು. ನಗರದ ವಾರ್ಡ ನಂ.27 ಬಡಾವಣೆಯ ಜಯಂತ್ಯೋತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ರವರ 135ನೇ ಜಯಂತಿಯ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ 25ರಿಂದ 28ನೇ ವಿಧಿಯ ಪ್ರಕಾರ ಪ್ರತಿಯೊಬ್ಬ ನಾಗರಿಕನಿಗೂ […]

Continue Reading