ಬೆಂಗಳೂರಲ್ಲಿ ಮತ್ತೆ ಕೋವಿಡ್ ಆತಂಕ: ನಾಲ್ವರಿಗೆ ಕೊರೊನಾ ಪಾಸಿಟಿವ್‌

ಸುದ್ದಿ ಸಂಗ್ರಹ ಬೆಂಗಳೂರುರಾಜಧಾನಿಯಲ್ಲಿ ಮತ್ತೆ ಕೋವಿಡ್-‌19 ಆತಂಕ ಎದುರಾಗಿದೆ, ನಾಲ್ವರಿಗೆ ಕೊರೊನಾ ಪಾಸಿಟಿವ್‌ ಬಂದಿದೆ. ನಾಲ್ವರಿಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಂಧ್ರ ಪ್ರದೇಶದಲ್ಲಿ ಮತ್ತೆ ಮಹಾಮಾರಿ ಕೊರೊನಾ ಅಬ್ಬರ ಹೆಚ್ಚುತ್ತಿದ್ದು, ಕೋವಿಡ್ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಿದೆ. ಇತ್ತ ರಾಜ್ಯದ ಗಡಿಭಾಗದಲ್ಲೂ ಕೊರೋನಾ ಭೀತಿ ಸೃಷ್ಟಿಯಾಗಿದೆ. ಪಕ್ಕದ ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಿರುವುದರಿಂದ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ಗಡಿಯಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಿದೆ. ಪಾವಗಡ ಮತ್ತು ಆಂಧ್ರದ 8 ಗಡಿ ಮಾರ್ಗಗಳಲ್ಲಿ ಕೋವಿಡ್ ತಪಾಸಣೆ ಮಾಡಲಾಗುತ್ತಿದ್ದು, ಅಗತ್ಯ […]

Continue Reading

3 ತಿಂಗಳಾದ ಮೇಲೆ ಈ ಸರ್ಕಾರ ಕುಂಭಕರ್ಣ ನಿದ್ದೆಯಿಂದ ಎದ್ದಿದೆ: ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಬೆಂಗಳೂರುನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಮೂರು ತಿಂಗಳ ಬಳಿಕ ಎಚ್ಚೆತ್ತುಕೊಂಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ತಡವಾಗಿ ತೆಗೆದುಕೊಂಡ ನಿರ್ಧಾರ ಎಂದರು. ಮೇ 4ರಂದೇ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ಮಾಹಿತಿ ಬಂದಿತ್ತು. ಜೂನ್‌ನಲ್ಲಿ ಮರು ಪರೀಕ್ಷೆ ನಡೆಸಿ, ಜುಲೈನಲ್ಲಿ ಫಲಿತಾಂಶ ಪ್ರಕಟಿಸಲಾಯಿತು. ಈ ನಡುವೆ ಅನೇಕ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣದ ಕನಸನ್ನು ಬಿಟ್ಟು ಇಂಜಿನಿಯರಿಂಗ್ ಸೇರಿದಂತೆ ಬೇರೆ ಕೋರ್ಸ್‌ಗಳನ್ನು ಆಯ್ಕೆ […]

Continue Reading

ಕಲಬುರಗಿ: ಲಾಠಿ ಚಾರ್ಜ್ ಖಂಡಿಸಿ ಬೀದಿಗಿಳಿದ ವಿದ್ಯಾರ್ಥಿಗಳು

ಸುದ್ದಿ ಸಂಗ್ರಹ ಕಲಬುರಗಿನೀಟ್ ಅಕ್ರಮಕ್ಕೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಿದ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ನೂರಾರು ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ‍ಪ್ರಜಾಸತ್ತಾತ್ಮಕ ಚಿಂತನ ವೇದಿಕೆ ನೇತೃತ್ವದಲ್ಲಿ ವಿವಿಧ ವಿದ್ಯಾರ್ಥಿ ಸಂಘಟನೆಗಳು, ರೈತ, ದಲಿತ, ಮಹಿಳಾ ಸಂಘಟನೆಗಳು ಜಂಟಿಯಾಗಿ ಆಯೋಜಿಸಿದ್ದ ಈ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿ ಸಂಘಟನೆಗಳೊಂದಿಗೆ ಹೋರಾಟಗಾರರು, […]

Continue Reading

ಕಲಬುರಗಿಯಲ್ಲಿ ಜುಲೈ 24 ರಂದು ನೇರ ಸಂದರ್ಶನ ಆಯೋಜನೆ

ಸುದ್ದಿ ಸಂಗ್ರಹ ಕಲಬುರಗಿಜುಲೈ 24ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ಸರಕಾರಿ ಐಟಿಐ ಕಾಲೇಜು ಹಿಂದೆ ಇರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ವಿದ್ಯಾಭ್ಯಾಸದ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್, ಭಾವಚಿತ್ರಗಳು ಮತ್ತು ಆಧಾರ್‌ ಕಾರ್ಡ್‌ನೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಕಚೇರಿ ದೂರವಾಣಿ ಸಂಖ್ಯೆ 08472–274846, ಮೊಬೈಲ್ ಸಂಖ್ಯೆ 9036069143 […]

Continue Reading

ನಿರಂತರ 24 ಗಂಟೆ ಕನ್ನಡ ಬೋಧನೆ ಮಾಡಿದ ಶಿಕ್ಷಕ ಸಂಗಮೇಶ ರೋಣದ್

ಸುದ್ದಿ ಸಂಗ್ರಹ ಕಲಬುರಗಿಕನ್ನಡ ಭಾಷೆಯ ಅಭಿವೃದ್ದಿ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳಿಗೆ ಗುಣಮಟ್ಟದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕಲಬುರಗಿ ನಗರದ ಶೃಂಗೇರಿ ಅಕಾಡೆಮಿಯಲ್ಲಿ ಶಿಕ್ಷಕ ಸಂಗಮೇಶ ರೋಣದ್ ನಿರಂತರ 24 ಗಂಟೆಗಳ ಕಾಲ ಕನ್ನಡ ವ್ಯಾಕರಣ ಮತ್ತು ಕನ್ನಡ ಸಾಹಿತ್ಯ ಬೋಧನೆ ಕಾರ್ಯ ಯಶಸ್ವಿಯಾಗಿ ನಡೆಸಿದ್ದಾರೆ. ಜುಲೈ 15ರಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾದ ವಿಶೇಷ ತರಗತಿಯು ಜುಲೈ 16ರ ಬೆಳಗ್ಗೆ 8 ಗಂಟೆಯವರೆಗೆ ಯಾವುದೆ ವಿರಾಮವಿಲ್ಲದೆ ನಡೆಯಿತು. ಈ ಅವಧಿಯಲ್ಲಿ ಕಡ್ಡಾಯ ಕನ್ನಡ ಪತ್ರಿಕೆಗೆ ಸಂಬಂಧಿಸಿದ […]

Continue Reading

ಗೃಹಲಕ್ಷ್ಮಿ ಯೋಜನೆಗೆ ಡಿಕೆಶಿ ಬಿಗ್ ಅಪ್ಡೇಟ್: 2,000 ರೂ.ಬೇಕು ಅಂದ್ರೆ ಈ ನಿಯಮಗಳು ಪಾಲಿಸಬೇಕು

ಸುದ್ದಿ ಸಂಗ್ರಹ ಬೆಂಗಳೂರುಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಇಂದು (ಜುಲೈ 19) ರಂದು ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ಚರ್ಚೆ ಆಗಿದೆ. ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆ ನಡೆಸಲು ಸರ್ಕಾರ ಸಜ್ಜಾಗಿದ್ದು, ಗೃಹಲಕ್ಷ್ಮಿ ಹಣಕ್ಕೆ ಬಯೋಮೆಟ್ರಿಕ್ ಕಡ್ಡಾಯಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿಯೊಂದು ಕುಟುಂಬದ ಯಜಮಾನಿಗೆ 2000 ರೂ. ಆರ್ಥಿಕ ನೆರವು ನೀಡುವ ಯೋಜನೆಯೇ ಗೃಹಲಕ್ಷ್ಮಿ. ಆದ್ರೆ ಅನರ್ಹರು ಕೂಡ ಯೋಜನೆಯ ಲಾಭ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದ […]

Continue Reading

15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಅನುಮೋದನೆ

ಸುದ್ದಿ ಸಂಗ್ರಹ ಬೆಂಗಳೂರುಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿರುವುದಾಗಿ ಸಿಎಂ ಡಿಕೆ ಶಿವಕುಮಾರ ತಿಳಿಸಿದರು. ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹತ್ವದ ನಿರ್ಧಾರಗಳನ್ನೂ ಪ್ರಕಟಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಿರುವುದಾಗಿ ಮಾಹಿತಿ ನೀಡಿದರು. ಜೊತೆಗೆ ಹಾಸ್ಟೆಲ್ ಗಳ ಬೆಡ್‌ಕಾಟ್ ಖರೀದಿಗೆ 30 ಕೋಟಿ ಕೊಡುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಅಲೆಮಾರಿ ಜನಾಂಗಕ್ಕೆ ಮನೆ ಕಟ್ಟಲು […]

Continue Reading

ದೇವೆಗೌಡರ ಪ್ರತಿ ಯಶಸ್ಸಿನ‌ ಹಿಂದೆ ನಿಂತಿದ್ದವರು ಚೆನ್ನಮ್ಮ: ಸಿಎಂ ಡಿಕೆಶಿ ತೀವ್ರ ಸಂತಾಪ‌

ಸುದ್ದಿ ಸಂಗ್ರಹ ಬೆಂಗಳೂರುಮಾತೃ ಸ್ವರೂಪಿ ಚೆನ್ನಮ್ಮ ದೇವೆಗೌಡ ಅವರ ನಿಧನಕ್ಕೆ ಸಿಎಂ ಡಿ.ಕೆ ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದರು. ಅಪಾರ ಧೈವಭಕ್ತೆಯಾಗಿದ್ದ ಚನ್ನಮ್ಮನವರು ಕುಟುಂಬವನ್ನು ಸಾಕಿ ಸಲಹಿದ ಮಹಾನ್ ತಾಯಿ. ದೇವೆಗೌಡರು, ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಅವರ ಕುಟುಂಬ ಸದಸ್ಯರ ರಾಜಕೀಯ ಮತ್ತು ಬದುಕಿನ ಏಳ್ಗೆಯ ಹಿಂದೆ ಚನ್ನಮ್ಮನವರ ಪರಿಶ್ರಮ ಅಡಗಿದೆ. ಅವರು ಆಸ್ಪತ್ರೆಯಿಂದ ಗುಣಮುಖರಾಗಿ ವಾಪಸ್ ಬರುತ್ತಾರೆ ಎಂದು ಎಲ್ಲರೂ ನಂಬಿಕೆ ಇಟ್ಟಿದ್ದರು. ಆ ನಂಬಿಕೆ ಸುಳ್ಳಾಗಿರುವುದಕ್ಕೆ ಬಹಳ ಬೇಸರವಾಗಿದೆ ಎಂದು ದುಃಖತಪ್ತರಾದರು. ಯಶಸ್ವಿ ಪುರುಷನ […]

Continue Reading

ಕಲಬುರಗಿ: ಸೀರೆ, ಪ್ಯಾಂಟ್‌, ಶೂ ಬೇಡಿದ ಎಪಿಪಿ

ಸುದ್ದಿ ಸಂಗ್ರಹ ಕಲಬುರಗಿಹಲ್ಲೆ ಪ್ರಕರಣವೊಂದರ ಸಂಬಂಧ ಕೋರ್ಟ್‌ನಲ್ಲಿ ರಾಜಿ ಅರ್ಜಿ ದಾಖಲಿಸಲು ಲಂಚ ಪಡೆದ ಸಹಾಯಕ ಸರ್ಕಾರಿ ಅಭಿಯೋಜಕರೊಬ್ಬರು (ಎಪಿಪಿ) ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹಲ್ಲೆ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ರಾಜಿ ಅರ್ಜಿ ಸಲ್ಲಿಕೆಗೆ ಹೈದರಾಬಾದ್ ಮೂಲದ ಬಟ್ಟೆ ವ್ಯಾಪಾರಿ ರಾಹುಲ್‌ ಮಾರಾಜೋ ಮುಂದಾಗಿದ್ದರು. ಅದಕ್ಕೆ 10 ಸಾವಿರ ನಗದು, 9 ಸೀರೆಗಳು, 4 ಶರ್ಟ್‌ಗಳು, 4 ಲಂಡನ್ ಜೀನ್ಸ್ ಪ್ಯಾಂಟ್, ಒಂದು ಜೊತೆ ಶೂ, ಮಹಿಳೆಯರ ನಾಲ್ಕು ಉಡುಗೆಗಳು, ಮಹಿಳೆಯರ 6 ಜೋಡಿ ಚಪ್ಪಲಿಗಳಿಗೆ […]

Continue Reading

ಕಲಬುರಗಿ: ನೀಟ್ ಪರೀಕ್ಷೆಯಲ್ಲಿ 190ನೇ ರ‍್ಯಾಂಕ್ ಪಡೆದ ಚನ್ನಬಸವ ಕೊರಳ್ಳಿ

ಸುದ್ದಿ ಸಂಗ್ರಹ ಕಲಬುರಗಿ ವೈದ್ಯಕೀಯ ಶಿಕ್ಷಣದ ಕೋರ್ಸ್‌ ಪ್ರವೇಶಾತಿಗೆ ನಡೆಸುವ ನೀಟ್‌ ಪರೀಕ್ಷೆಯಲ್ಲಿ ನಗರದ ಎಸ್‌ಬಿಆರ್‌ ಪದವಿ ಪೂರ್ವ ಕಾಲೇಜಿನ ಚನ್ನಬಸವ ಕೊರಳ್ಳಿ 190ನೇ ರ‍್ಯಾಂಕ್ ಪಡೆಯುವ ಮೂಲಕ ಅಮೋಘ ಸಾಧನೆ ತೋರಿದಕ್ಕೆ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಳಂದ ತಾಲೂಕಿನಲ್ಲಿ ಸರಕಾರಿ ಪ್ರೌಢ ಶಾಲಾ ಶಿಕ್ಷಕ ಧರ್ಮರಾಯ ಕೊರಳ್ಳಿ ಅವರ ಸುಪುತ್ರ ಚನ್ನಬಸವ ಕೊರಳ್ಳಿ 720ಕ್ಕೆ 685 ಅಂಕ ಗಳಿಸಿ ಕಾಲೇಜು […]

Continue Reading