ಶಹಾಬಾದ್: ಅವಧಿ ಮುಗಿದ ಎಣ್ಣೆ ಬಳಸಿ ಶಾಲಾ ಮಕ್ಕಳಿಗೆ ಬಿಸಿಯೂಟ ಸರಬರಾಜು

ಸುದ್ದಿ ಸಂಗ್ರಹ ಶಹಾಬಾದ್ಬಿಸಿಯೂಟದಲ್ಲಿ ಅವಧಿ ಮುಗಿದ ಅಡುಗೆ ಎಣ್ಣೆ ಬಳಸಿದ ಪರಿಣಾಮ ಶಹಾಬಾದ್ ಸರಕಾರಿ ಬಾಲಕರ ಪ್ರೌಢ ಶಾಲೆ ಮತ್ತು ಉರ್ದು ಶಾಲಾ ಮಕ್ಕಳಿಗೆ ಊಟ ಸರಬರಾಜು ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಆಹಾರ ಸೇವಿಸಿದ ವಿದ್ಯಾರ್ಥಿಗಳು ದುರಂತದಿಂದ ಪಾರಾಗಿದ್ದಾರೆ, ಆದರೆ ಈ ಬಗ್ಗೆ ಶಾಲಾ ಆಡಳಿತವು ನಿರ್ಲಕ್ಷ್ಯ ತೋರಿರುವುದು ಗಂಭೀರ ವಿಷಯವಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಶಹಬಾದ್ ಸರ್ಕಾರಿ ಬಾಲಕರ ಪ್ರೌಢ ಶಾಲೆ ಮತ್ತು ಉರ್ದು ಶಾಲೆಗೆ ಪತ್ರಕರ್ತರು ಭೇಟಿ ನೀಡಿದಾಗ ಈ ಸತ್ಯ ತಿಳಿದು […]

Continue Reading

ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್: ಸಚಿವ ಕೆ.ಎಚ್ ​ಮುನಿಯಪ್ಪ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ 7.76 ಲಕ್ಷ ಅಕ್ರಮ ಬಿಪಿಎಲ್ ಕಾರ್ಡ್​ಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ. ಅಕ್ರಮ ಬಿಪಿಎಲ್​ ಕಾರ್ಡ್​ಗಳ ಪರಿಷ್ಕರಣೆ ಕೆಲಸ ನಡೆಯುತ್ತಿದೆ. ಈಗಾಗಲೆ 50% ಪರಿಷ್ಕರಣೆ ಮಾಡಲಾಗಿದೆ. ಬಿಪಿಎಲ್​ನಲ್ಲಿದ್ದ 4,32,295 ಜನರನ್ನು ಎಪಿಎಲ್​ಗೆ ಸೇರಿಸಲಾಗಿದೆ. ಇನ್ನುಳಿದವರನ್ನು ಆದಷ್ಟು ಬೇಗ ಎಪಿಎಲ್​ಗೆ ಪರಿವರ್ತನೆ ಮಾಡ್ತೆವೆ ಎಂದು ಆಹಾರ ಸಚಿವ ಕೆ.ಎಚ್ ​ಮುನಿಯಪ್ಪ ಹೇಳಿದ್ದಾರೆ.‌ ಇನ್ನು ಬಿಪಿಎಲ್ ಕಾರ್ಡ್ ಎಪಿಎಲ್ ಆಗಿದ್ದರೆ, 15 ದಿನಗಳಲ್ಲಿ ಸರಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಜಿಲ್ಲಾಧಿಕಾರಿ, ತಹಸೀಲ್ದಾರ್‌ಗೆ 15 ದಿನದ ಸಮಯ ನೀಡಲಾಗಿದೆ ಎಂದು […]

Continue Reading

ಪತ್ರಕರ್ತರಿಂದ ಸಮಾಜದ ಕಣ್ತೆರೆಸುವ ಕೆಲಸ‌

ಸುದ್ದಿ ಸಂಗ್ರಹ ಶಹಾಬಾದ್ಎಲ್ಲ ಸಮಸ್ಯೆಗಳನ್ನು ಪತ್ರಿಕೆಯಲ್ಲಿ ಬರೆಯುವ ಮೂಲಕ ಸಮಾಜದ ಕಣ್ಣು ತೆರೆಸುವ ಕೆಲಸ ಪತ್ರಕರ್ತರು ಮಾಡುತ್ತಾರೆ ಎಂದು ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ್ ಹೇಳಿದರು. ನಗರದ ಪಾರ್ವತಿ ಸಭಾಗೃಹದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಬುಧವಾರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ, ಛಾಯಾಚಿತ್ರ ಪ್ರದರ್ಶನ ಮತ್ತು ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಶಹಾಬಾದ್​ ಪತ್ರಕರ್ತರು ರಾಜಕೀಯ ರಹಿತ ವರದಿ ಮಾಡುವ ಮೂಲಕ ಸಮಾಜದ ಅಭಿವೃದ್ಧಿಗೆ ಕೈಜೋಡಿಸುತ್ತಿದ್ದಾರೆ. ಪತ್ರಕರ್ತರು ಸ್ಥಳವನ್ನು ಗುರುತಿಸಿದರೆ, ಪತ್ರಿಕಾ […]

Continue Reading

ಜೈಲು ಅಧೀಕ್ಷಕ ಸೇರಿ 8 ಮಂದಿ ಅಧಿಕಾರಿ, ಸಿಬ್ಬಂದಿ ಅಮಾನತು

ಸುದ್ದಿ ಸಂಗ್ರಹ ಕಲಬುರಗಿನಗರದ ಹೊರವಲಯದ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕ ರಾಕೇಶ ಕಾಂಬಳೆ ಸೇರಿದಂತೆ ಎಂಟು ಅಧಿಕಾರಿ, ಸಿಬ್ಬಂದಿಯನ್ನು ಕಾರಾಗೃಹಗಳ ಇಲಾಖೆ ಅಮಾನತುಗೊಳಿಸಿದೆ. ಜೈಲು ಅಧೀಕ್ಷಕ ರಾಕೇಶ ಕಾಂಬಳೆ ಜೊತೆಗೆ ಸಹಾಯಕ ಜೈಲು ಅಧೀಕ್ಷಕ ಸುರೇಶ ಬಿ. ಜೈಲರ್‌ ಶ್ರೀಮಂತಗೌಡ ಪಾಟೀಲ, ಹೆಡ್‌ ವಾರ್ಡರ್‌ಗಳಾದ ನಿಂಗಣ್ಣ ಬಂದರಬಟ್ಟಿ ಮತ್ತು ಯಮನಪ್ಪ ಕುರುಬರ, ವಾರ್ಡರ್‌ಗಳಾದ ಬಸವರಾಜ ಮೇತ್ರಿ, ಸಾವಿತ್ರಿ ತಳಕೇರಿ, ಅಜಿಮ್‌ ಎನ್‌.ಎಸ್‌. ಅಮಾನತುಗೊಂಡಿದ್ದಾರೆ. ಬೆಂಗಳೂರು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೃಷ್ಣಕುಮಾರ ಅವರನ್ನು […]

Continue Reading

ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಫಾರ್ಮ್‌ ವಿತರಣೆಗೆ ಆ. 8ರ ವರೆಗೆ ಅವಕಾಶ

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕ, ದೆಹಲಿ, ಪಂಜಾಬ್‌ ಮತ್ತು ತೆಲಂಗಾಣದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಕೆಲವು ದಿನಗಳವರೆಗೆ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ಹಿನ್ನೆಲೆ ರಾಜ್ಯದಲ್ಲೂ ಫಾರ್ಮ್‌ (ನಮೂನೆ) ಹಿಂದಿರುಗಿಸಲು ಅವಧಿ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ತಿಂಗಳ ಅಂತ್ಯದ ವರೆಗೆ ಬಿಎಲ್‌ಒಗಳಿಗೆ (BLOs) ಎಸ್‌ಐಆರ್‌ ನಮೂನೆ ವಿಸ್ತರಣೆಗೆ ಸಮಯ ಇತ್ತು. ಇದೀಗ ಆಗಸ್ಟ್‌ 8ರ ಅವಧಿ ವಿಸ್ತರಿಸಲಾಗಿದೆ. ಬಿಎಲ್‌ಒಗಳು ಮನೆ ಮನೆಗೆ ತೆರಳಿ […]

Continue Reading

ಕಲಬುರಗಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಕೈದಿ ಕಾಲಿಗೆ ಗುಂಡೇಟು, ಬಂಧನ

ಸುದ್ದಿ ಸಂಗ್ರಹ ಕಲಬುರಗಿನಗರದ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಶಿಕ್ಷೆಗೊಳಗಾದ ಕೈದಿಗಳ ಪೈಕಿ ಒಬ್ಬನನ್ನು ಪೊಲೀಸರು ಬುಧವಾರ ಬೆಳಗ್ಗೆ ಪತ್ತೆಹಚ್ಚಿದ್ದು, ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ‌ ದಾಳಿ ಮಾಡಿದ್ದರಿಂದ ಖಾಕಿಪಡೆವರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಸಂತೋಷ ಮೇತ್ರೆ ಗುಂಡೇಟು ತಿಂದು ಗಾಯಗೊಂಡಿದ್ದು, ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡು ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈತ ಔರಾದ ತಾಲೂಕಿನ ಸಂತಪುರ ಗ್ರಾಮದವ. ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ಈ ಕುರಿತು ನಗರ ಪೊಲೀಸ್ […]

Continue Reading

ಕಲಬುರಗಿ ಸೆಂಟ್ರಲ್ ‌ಜೈಲಿನಿಂದ‌ ಕೈದಿಗಳು ಪರಾರಿ: ಪತ್ತೆಗೆ ಮೂರು ತಂಡ ರಚನೆ

ಸುದ್ದಿ ಸಂಗ್ರಹ ಕಲಬುರಗಿನಗರದ ಹೊರವಲಯದ ಸೆಂಟ್ರಲ್ ಜೈಲಿನಿಂದ ಮಂಗಳವಾರ ನಸುಕಿನಲ್ಲಿ ಪರಾರಿಯಾಗಿರುವ ಮೂವರು ಅಪರಾಧಿಗಳ ಪತ್ತೆಗೆ ಮೂರು ತಂಡಗಳು ರಚಿಸಲಾಗಿದೆ ಎಂದು ಕಲಬುರಗಿ ನಗರ ಪೊಲೀಸ್‌ ಕಮಿಷನರ್ ಶರಣಪ್ಪ ಎಸ್‌.ಡಿ ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಿಗ್ಗೆ 4.30ರ ಹೊತ್ತಿಗೆ ಕೈದಿಗಳು ಪರಾರಿಯಾಗಿರುವ ಮಾಹಿತಿ ಸಿಕ್ಕಿದೆ. ಮೂವರು ಬೇರೆ–ಬೇರೆ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾದ ಅಪರಾಧಿಗಳಾಗಿದ್ದಾರೆ. ಅವರ ಪತ್ತೆಗೆ ಕಾನೂನು ಮತ್ತು ಸುವವಸ್ಥೆ ವಿಭಾಗದ ಡಿಸಿಪಿ ಶಾಲೂ ನೇತೃತ್ವದಲ್ಲಿ ಮೂವರು ಎಸಿಪಿಗಳ ನೇತೃತ್ವದ […]

Continue Reading

ಕಲಬುರಗಿ: ಸೆಂಟ್ರಲ್ ‌ಜೈಲಿನಿಂದ‌ ಮೂವರು ಸಜಾ‌ ಕೈದಿಗಳು ಪರಾರಿ

ಸುದ್ದಿ ಸಂಗ್ರಹ ಕಲಬುರಗಿನಗರದ ಹೊರವಲಯದ ಹೆದ್ದಾರಿಯಲ್ಲಿರುವ ಕೇಂದ್ರ ಕಾರಾಗೃಹದಿಂದ (ಸೆಂಟ್ರಲ್ ಜೈಲು) ಮೂವರು ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಘಟನೆ ಮಂಗಳವಾರ ನಸುಕಿ‌ನ ಜಾವ 4 ಗಂಟೆ ಸುಮಾರಿಗೆ ನಡೆದಿದೆ. ಮಸ್ತಾನ್, ಸಂತೋಷ್ ಮತ್ತು ಸಾಗರ್ ಪರಾರಿಯಾದ ಕೈದಿಗಳು. ಬೀದರ್‌ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈ ಮೂವರು ಶಿಕ್ಷೆಗೆ ಒಳಪಟ್ಟಿದ್ದರು. ಮಧ್ಯರಾತ್ರಿ 3 ಗಂಟೆಗೆ ಜೈಲಿನ ಕಂಪೌಡ್ ಹಾರಿ ಈ ಮೂವರು ಪರಾರಿಯಾಗಿದ್ದಾರೆ. ಕೈದಿಗಳು ಪರಾರಿಯಾಗಲು ಜೈಲು ಸಿಬ್ಬಂದಿಯೇ ಸಹಕಾರ ನೀಡಿದ್ದಾರೆ ಎಂಬ ಶಂಕೆ ಕೂಡ ವ್ಯಕ್ತವಾಗಿದೆ. […]

Continue Reading

ಶಹಾಬಾದ್: ಜು.15ರಂದು ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ

ಸುದ್ದಿ ಸಂಗ್ರಹ ಶಹಾಬಾದ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಜು.15ರಂದು ಪತ್ರಿಕಾ ದಿನಾಚರಣೆ, ಛಾಯಾಚಿತ್ರ ಪ್ರದರ್ಶನ ಮತ್ತು ಎಸ್‌ಎಸ್‌ಎಲ್’ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಲಾಗಿದೆ ಎಂದು ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಲೋಹಿತ ಕಟ್ಟಿ ತಿಳಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.15 ರಂದು ಬೆಳಗ್ಗೆ 11 ಗಂಟೆಗೆ ಲಕ್ಷ್ಮಿಗಂಜನ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ, ಶಾಸಕ ಬಸವರಾಜ ಮತ್ತಿಮೂಡ್ […]

Continue Reading

ಜು.12ರಂದು ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಣೆ: ಇಲಾಖೆ ಮಾಹಿತಿ

ಸುದ್ದಿ ಸಂಗ್ರಹ ಬೆಂಗಳೂರುಜು.12ರ ಭಾನುವಾರದಂದು ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಮಾಹಿತಿ ನೀಡಿದೆ. ರಾಜ್ಯಾದ್ಯಂತ ಇರುವ ಎಲ್ಲಾ ಉಪನೋಂದಣಿ ಕಚೇರಿಗಳು ಜು.12 ರಂದು ರವಿವಾರ ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ. ಸಾರ್ವಜನಿಕ ರಜಾ ದಿನವಾಗಿದ್ದರೂ ಸಹ, ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರ್ಯದೊತ್ತಡ ನಿವಾರಣೆಗಾಗಿ ಎಂದಿನಂತೆ ತೆರೆದಿದ್ದು, ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ. ​ಈ ದಿನದಂದು ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ ಖರೀದಿ ಮತ್ತು ಇಲಾಖೆಗೆ ಸಂಬಂಧಿಸಿದ […]

Continue Reading