ಜು.12ರಂದು ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಣೆ: ಇಲಾಖೆ ಮಾಹಿತಿ

ಸುದ್ದಿ ಸಂಗ್ರಹ ಬೆಂಗಳೂರುಜು.12ರ ಭಾನುವಾರದಂದು ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಮಾಹಿತಿ ನೀಡಿದೆ. ರಾಜ್ಯಾದ್ಯಂತ ಇರುವ ಎಲ್ಲಾ ಉಪನೋಂದಣಿ ಕಚೇರಿಗಳು ಜು.12 ರಂದು ರವಿವಾರ ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ. ಸಾರ್ವಜನಿಕ ರಜಾ ದಿನವಾಗಿದ್ದರೂ ಸಹ, ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರ್ಯದೊತ್ತಡ ನಿವಾರಣೆಗಾಗಿ ಎಂದಿನಂತೆ ತೆರೆದಿದ್ದು, ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ. ​ಈ ದಿನದಂದು ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ ಖರೀದಿ ಮತ್ತು ಇಲಾಖೆಗೆ ಸಂಬಂಧಿಸಿದ […]

Continue Reading

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ವಾಕಿಂಗ್‌ಗೆ ಬಂದಿದ್ದವರಿಗೆ ದರ್ಶನ, ಪಾರ್ಕ್‌ನಿಂದ ಎದ್ನೋ ಬಿದ್ನೋ ಅಂತ ಓಡಿದ ಜನ

ಸುದ್ದಿ ಸಂಗ್ರಹ ಬೆಂಗಳೂರುಸಿಲಿಕಾನ್‌ ಸಿಟಿಯಲ್ಲಿ ಹೆಚ್ಚುತ್ತಿರುವ ನಗರೀಕರಣದಿಂದಾಗಿ ಕೆಲವೊಮ್ಮೆ ಕಾಡು ಪ್ರಾಣಿಗಳು ನಾಡಿಗೆ ಪ್ರವೇಶಿಸುತ್ತವೆ. ವಿಶೇಷವಾಗಿ ದಕ್ಷಿಣ ಬೆಂಗಳೂರು ಹಾಗೂ ಮಾಗಡಿ ರಸ್ತೆಯಂತಹ ಪ್ರದೇಶಗಳಲ್ಲಿ ಚಿರತೆಗಳು ಆಗಾಗ್ಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ನಿದರ್ಶನಗಳಿವೆ. ಇಂತಹ ಸಂದರ್ಭಗಳಲ್ಲಿ ಅರಣ್ಯ ಇಲಾಖೆಯು ಸ್ಥಳದಲ್ಲೇ ಬೋನುಗಳು ಇರಿಸಿ ಪ್ರಾಣಿಗಳನ್ನು ಸೆರೆಹಿಡಿಯುವ ಕಾರ್ಯಾಚರಣೆ ನಡೆಸುತ್ತದೆ. ಸದ್ಯ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳ ನಿದ್ದೆಗೆಡಿಸಿರುವುದು ತಾಜಾ ಉದಾಹರಣೆಯಾಗಿದೆ. ಬೆಂಗಳೂರಿನ ಬ್ಯಾಡ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಇಎಲ್ ಲೇಔಟ್ ನಲ್ಲಿ ನಿನ್ನೆ […]

Continue Reading

ಕಲಬುರಗಿ ನಗರದಲ್ಲಿ ನಡುರಾತ್ರಿ ಲಘು ಭೂಕಂಪ: ಭಯಗೊಂಡ ಜನತೆ

ಸುದ್ದಿ ಸಂಗ್ರಹ ಕಲಬುರಗಿ ನಗರ ಸೇರಿದಂತೆ ಕೆಲವು ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ನಸುಕಿನ 1.30ರ ವೇಳೆ ಕೆಲ ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ. ಇದರಿಂದಾಗಿ ಜನ ಭಯಗೊಂಡು ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. ಭೂಮಿ ಕಂಪಿಸುತ್ತಿದ್ದಂತೆ ಹಲವು ಮನೆಗಳಲ್ಲಿ ಕಿಟಕಿ, ಬಾಗಿಲುಗಳು ಸದ್ದು ಮಾಡಿವೆ ಮತ್ತು ಮೇಲ್ಮಟ್ಟದಲ್ಲಿ ಇಟ್ಟಿದ್ದ ವಸ್ತುಗಳು ನೆಲಕ್ಕುರುಳಿ ಬಿದ್ದಿದ್ದು, ಆಗ ಜನರಿಗೆ ಇದು ಭೂಕಂಪ ಎಂಬುದು ಗೊತ್ತಾಗಿದೆ. ಇದರಿಂದಾಗಿ ಭಯಗೊಂಡು ಮನೆಯಿಂದ ಹೊರಗಡೆ ಓಡಿಬಂದು ರಕ್ಷಣೆ ಪಡೆದಿದ್ದಾರೆ ಎಂದು ಮೂಲಗಳು […]

Continue Reading

ಜು.11ರಂದು ಬೆಂಗಳೂರಿನಲ್ಲಿ ನಮ್ಮ ಅಭಿಮಾನದ ಅಭಿನಂದನೆ: ಬಸವರಾಜ ಬಳೂಂಡಗಿ

ಸುದ್ದಿ ಸಂಗ್ರಹ ಕಲಬುರಗಿರಾಜ್ಯ ಸರ್ಕಾರಿ ನೌಕರರ ಸಂಘವು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌, ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರಿಗೆ ಜುಲೈ 11ರಂದು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಹಳೆ ಪಿಂಚಣಿ ಯೋಜನೆ ಮರು ಜಾರಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಅಂದು ಮನವಿ ಸಲ್ಲಿಸಲಾಗುವುದು ಎಂದು ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ‘ನಮ್ಮಭಿಮಾನದ ಅಭಿನಂದನೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 11 ಗಂಟೆಗೆ […]

Continue Reading

ಶರಣಬಸವೇಶ್ವರ ದೇವಸ್ಥಾನ, ಕೆಬಿಎನ್ ದರ್ಗಾ ದರ್ಶನ ಪಡೆದ ಸಿಎಂ ಡಿ.ಕೆ ಶಿವಕುಮಾರ್

ಸುದ್ದಿ ಸಂಗ್ರಹ ಕಲಬುರಗಿಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ ಈ ಭಾಗದ ಸೌಹಾರ್ದ ಪರಂಪರೆಯ ಎರಡು ಕಣ್ಣುಗಳಂತಿರುವ ಶರಣಬಸವೇಶ್ವರರ ‌ದೇವಸ್ಥಾನ ಹಾಗೂ ಸೂಫಿ ಸಂತ ಖಾಜಾ ಬಂದಾನವಾಜ್ ದರ್ಗಾಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಗರದ ಐವಾನ್ ಎ ಶಾಹಿ ಅತಿಥಿ ಗೃಹದಲ್ಲಿ ‌ಸಾರ್ವಜನಿಕರ ಅಹವಾಲು ಆಲಿಸಿದ ಮುಖ್ಯಮಂತ್ರಿ ‌ಶಿವಕುಮಾರ್, ಮೊದಲಿಗೆ ವೈದ್ಯಕೀಯ ‌ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲರ ಮನೆಗೆ ಸೌಜನ್ಯಯುತ ಭೇಟಿ ನೀಡಿದರು. ಅಲ್ಲಿಯೆ ಉಪಾಹಾರ ಸ್ವೀಕರಿಸಿದರು. ನಂತರ ಈ ಭಾಗದ ಪ್ರಸಿದ್ಧ ಶರಣಬಸವೇಶ್ವರ ದೇವಸ್ಥಾನಕ್ಕೆ […]

Continue Reading

ಪೊಲೀಸ್ ವಾಹನದಲ್ಲಿ ಶೂಟ್‌: ಕಲಬುರಗಿ ಪೇದೆ ಆತ್ಮಹತ್ಯೆ

ಸುದ್ದಿ ಸಂಗ್ರಹ ಕಲಬುರಗಿನಗರದ ಹೃದಯಭಾಗವಾದ ಜಗತ್ ವೃತ್ತದಲ್ಲಿ ಸಾರ್ವಜನಿಕರು ಬೆಚ್ಚಿಬೀಳುವಂತಹ ಘಟನೆ ಸಂಭವಿಸಿದೆ. ಕರ್ತವ್ಯ ನಿರತರಾಗಿದ್ದ ಪೊಲೀಸ್ ಪೇದೆಯೊಬ್ಬರು ತಮಗೆ ನೀಡಲಾಗಿದ್ದ ಸರ್ಕಾರಿ ರೈಫಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೇವರ್ಗಿ ತಾಲೂಕಿನ ಮಾವನೂರ ಗ್ರಾಮದ ಶಿವಕುಮಾರ ಶಿವಶರಣಪ್ಪ ನರಿಬೋಳ (32) ಮೃತರು. ಅವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ.‌ ಜಗತ್‌ ವೃತ್ತದಲ್ಲಿ ಮಂಗಳವಾರ ಕರ್ತವ್ಯದ ಅವಧಿಯಲ್ಲೆ ಶಿವಕುಮಾರ್ ರಾತ್ರಿ 9 ಗಂಟೆಗೆ ಪೊಲೀಸ್ ವಾಹನದಲ್ಲಿ ಕುಳಿತಿದ್ದಾಗ ತಮ್ಮ ಬಳಿಯಿದ್ದ ಸರ್ಕಾರಿ ರೈಫಲ್’ನಿಂದ ಶೂಟ್ ಮಾಡಿಕೊಂಡಿದ್ದಾರೆ. ಗುಂಡಿನ […]

Continue Reading

ಗುಳೆ ತಡೆದು ಊರಿನಲ್ಲೆ ಜನಕ್ಕೆ ಉದ್ಯೋಗ ನೀಡಲು ಕ್ರಮವಹಿಸಿ: ಡಿಸಿಎಂ ಪರಮೇಶ್ವರ

ಸುದ್ದಿ ಸಂಗ್ರಹ ಕಲಬುರಗಿಸೂಪರ್ ಎಲ್‌ ನಿನೋ ಪರಿಣಾಮದಿಂದ ಉಂಟಾಗಿರುವ ಪ್ರಕೃತಿ ವಿಕೋಪವನ್ನು ಸಮರ್ಥವಾಗಿ ನಿಭಾಯಿಸಬೇಕು. ಈ ನಿಟ್ಟಿನಲ್ಲಿ ಕಲ್ಯಾಣ‌ ಕರ್ನಾಟಕ ಭಾಗದ ಜನರ ಜೀವನೋಪಾಯಕ್ಕೆ ಮತ್ತು ಜಾನುವಾರುಗಳಿಗೆ ಯಾವುದೆ ರೀತಿಯ ಸಮಸ್ಯೆಯಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಕಂದಾಯ ಸಚಿವ ಜಿ.ಪರಮೇಶ್ವರ್‌ ಹೇಳಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಸಭಾಂಗಣದ‌ ಡಾ.ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಕಲಬುರಗಿ ಕಂದಾಯ ವಿಭಾಗದ ವಿವಿಧ ಇಲಾಖೆಗಳ ಹಾಗೂ ಪ್ರಕೃತಿ ವಿಕೋಪ ನಿರ್ವಹಣೆ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, […]

Continue Reading

ಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ: ಸಿಎಂ ಡಿಕೆಶಿ ಎಚ್ಚರಿಕೆ

ಸುದ್ದಿ ಸಂಗ್ರಹ ಕಲಬುರಗಿರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಸಿದರು. ನಗರದ ಹೊರ‌ ವಲಯದ ಗುಲಬರ್ಗಾ ವಿವಿಯ ಡಾ.ಬಿ.ಆರ್ ಅಂಬೇಡ್ಕರ್ ‌ಸಭಾಂಗಣದಲ್ಲಿ ಮಂಗಳವಾರ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಬರ ಸನ್ನದ್ಧತೆ ಕುರಿತು ಅಧಿಕಾರಿಗಳ ‌ಸಭೆ ನಡೆಸಿ ಮಾತನಾಡಿದ ಅವರು, ಸರ್ವರನ್ನೂ ಒಳಗೊಂಡ ಪರಿಶುದ್ಧ ಆಡಳಿತ, ಅಭಿವೃದ್ಧಿ ಮತ್ತು ಕಟ್ಟಕಡೆಯ ವ್ಯಕ್ತಿಗೂ ಅವರ ನಾಗರಿಕ ಹಕ್ಕುಗಳನ್ನು ತಲುಪಿಸುವುದು ನನ್ನ ಸರ್ಕಾರದ ಪ್ರಮುಖ ಗುರಿ. […]

Continue Reading

ಪಿಚ್ಚರ್ ಅಭಿ ಬಾಕಿ ಹೈ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಕಲಬುರಗಿಆರ್‌ಎಸ್‌ಎಸ್‌ಗೆ ಬರೆದ ಪತ್ರಕ್ಕೆ ಇನ್ನೂ ಉತ್ತರ ಬಂದಿಲ್ಲ. ಬರಲಿ ಬಿಡಿ ಅವಸರವೇಕೆ ? ಪಿಚ್ಚರ್ ಅಭಿ ಬಾಕಿ ಹೈ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಲವಾರು ಪ್ರಶ್ನೆಗಳನ್ನು ಹಾಕಿ ಆರ್‌ಎಸ್‌ಎಸ್‌ಗೆ ಪತ್ರ ಬರೆದಿದ್ದೆನೆ. ಇನ್ನೂ ಉತ್ತರ ನೀಡಿಲ್ಲ. ನೀಡಲಿ ಬಿಡಿ ಅವಸರವೇಕೆ, ಅಭೀ ಪಿಚ್ಚರ್ ಬಾಕಿ ಹೈ ಅವರೂ ಕೂಡಾ ನನ್ನ ಹಾಗೂ ಕುಟುಂಬದ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿದ್ದಾರೆ, […]

Continue Reading

ಗೃಹ‌ ಸಚಿವ‌ರಾದ ಬಳಿಕ ಕಲಬುರಗಿಗೆ ಭೇಟಿ: ಪ್ರಿಯಾಂಕ್‌ ಖರ್ಗೆಗೆ ಅದ್ದೂರಿ ಸ್ವಾಗತ

ಸುದ್ದಿ ಸಂಗ್ರಹ ಕಲಬುರಗಿರಾಜ್ಯದ ಗೃಹ ಸಚಿವರಾದ ಬಳಿಕ‌ ಇದೆ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ‌ ಸಚಿವ ‌ಪ್ರಿಯಾಂಕ್ ಖರ್ಗೆ ಅವರನ್ನು ‌ಕಾಂಗ್ರೆಸ್ ಪಕ್ಷದ ನಾಯಕರು, ಮುಖಂಡರು ಮತ್ತು ಅಭಿಮಾನಿಗಳು ‌ಅದ್ದೂರಿಯಾಗಿ ಭರಮಾಡಿಕೊಂಡರು. ನಗರದ ನೆಹರೂ ಗಂಜ್ ಪ್ರದೇಶದ ನಗರೇಶ್ವರ ಶಾಲೆಯ ಎದುರು ಬಂದಿಳಿದ ಕಲಬುರಗಿ, ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಪ್ರಿಯಾಂಕ್ ಖರ್ಗೆ ಅವರನ್ನು ಮೊದಲಿಗೆ ತೆರೆದ ಕಾರಿನಲ್ಲಿ, ನಂತರ ಸಿಂಗರಿಸಿದ ಲಾರಿಯ ಮೇಲೆ ಏರಿಸಿ‌ ಮೆರವಣಿಗೆ ಮಾಡಲಾಯಿತು. ಬಗೆಬಗೆಯ ಪುಷ್ಪಗಳ ವೃಷ್ಟಿಗೈದು ಸಂಭ್ರಮಿಸಿದರು. ದಾರಿಯುದ್ದಕ್ಕೂ […]

Continue Reading