ದೆಹಲಿಯಲ್ಲಿ 2,300ರ ಗಡಿ ದಾಟಿದ ಹಂದಿ ಜ್ವರ ಪ್ರಕರಣ, ಶಾಲೆಗಳಿಗೆ ಸರ್ಕಾರ ಕಟ್ಟೆಚ್ಚರ: ಸಿಎಂ ತುರ್ತು ಸಭೆ

ಸುದ್ದಿ ಸಂಗ್ರಹ ನವದೆಹಲಿರಾಷ್ಟ್ರ ರಾಜಧಾನಿ ದೆಹಲಿಯಲ್ಲಿ H1N1 (ಹಂದಿ ಜ್ವರ) ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಇಂದು ತುರ್ತು ಪರಿಶೀಲನಾ ಸಭೆ ಕರೆದಿದ್ದಾರೆ ಎಂದು ಆರೋಗ್ಯ ಸಚಿವ ಪಂಕಜಕುಮಾರ್ ಸಿಂಗ್ ತಿಳಿಸಿದ್ದಾರೆ. ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ, ನವದೆಹಲಿ ಮುನ್ಸಿಪಲ್ ಕೌನ್ಸಿಲ್ ಮತ್ತು ದೆಹಲಿ ಕ್ಯಾಂಟೋನ್ಮೆಂಟ್ ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ದೆಹಲಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಅಗತ್ಯ ಪ್ರಮಾಣದಲ್ಲಿ ವೈದ್ಯರು, ಸಿಬ್ಬಂದಿ ಹಾಗೂ ಔಷಧಿಗಳು ಲಭ್ಯವಿವೆ […]

Continue Reading

ಹೊಸ ಸಿಮ್ ಪಡೆಯಲು ಇನ್ನುಮುಂದೆ ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯ

ಸುದ್ದಿ ಸಂಗ್ರಹ ನವದೆಹಲಿಹೊಸ ಸಿಮ್ ಕಾರ್ಡ್ ಪಡೆಯಲು ಇನ್ನುಮುಂದೆ ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಕೇಂದ್ರದ ಆದೇಶದ ಹಿನ್ನೆಲೆ ಹೊಸ ಸಿಮ್ ಕಾರ್ಡ್‌ ಪಡೆಯುವ ಮುನ್ನ ಗ್ರಾಹಕರು ಬಯೋಮೆಟ್ರಿಕ್ ಪರಿಶೀಲಿಸಬೇಕು. ಗ್ರಾಹಕರ ಮಾಹಿತಿ ಅಪ್‌ಡೇಟ್ ಮತ್ತು ಮರುಪರಿಶೀಲನೆ ಸಂದರ್ಭದಲ್ಲೂ ಬಯೋಮೆಟ್ರಿಕ್ ವೆರಿಫಿಕೇಶನ್ ಅಗತ್ಯ ಎಂದು ಸೂಚಿಸಿದೆ. ಸಿಮ್ ಕಾರ್ಡ್‌ ಸ್ಥಗಿತಗೊಳಿಸುವ ಪ್ರಕ್ರಿಯೆಯಲ್ಲೂ ಗುರುತು ಪರಿಶೀಲನೆ ನಿಯಮ ಅನ್ವಯವಾಗಲಿದೆ. ಸೈಬರ್ ವಂಚನೆ ಹಾಗೂ ನಕಲಿ ಸಿಮ್ ಕಾರ್ಡ್ ಕನೆಕ್ಷನ್‌ಗಳಿಗೆ ಕಡಿವಾಣ ಹಾಕಲು ಕೇಂದ್ರ ಈ ಕ್ರಮ […]

Continue Reading

SBI ಗ್ರಾಹಕರಿಗೆ ಶಾಕ್: ಅ.1 ರಿಂದ 4ಕ್ಕಿಂತ ಹೆಚ್ಚು ಬಾರಿ ಕ್ಯಾಶ್ ವಿತ್‌ಡ್ರಾ ಮಾಡಿದ್ರೆ 15 ರೂ. ಶುಲ್ಕ

ಸುದ್ದಿ ಸಂಗ್ರಹ ನವದೆಹಲಿಭಾರತೀಯ ಸ್ಟೇಟ್‌ ಬ್ಯಾಂಕ್‌ ತನ್ನ ಮೂಲ ಉಳಿತಾಯ ಬ್ಯಾಂಕ್ ಠೇವಣಿ ಖಾತೆಗಳಿಗೆ ಅನ್ವಯವಾಗುವ ನಗದು ಹಿಂಪಡೆಯುವ (ಕ್ಯಾಶ್ ವಿತ್‌ಡ್ರಾ) ಶುಲ್ಕದಲ್ಲಿ ಪರಿಷ್ಕರಣೆ ಮಾಡಿದೆ. ಈ ಪರಿಷ್ಕೃತ ಶುಲ್ಕವು ಅಕ್ಟೋಬರ್ 1 ರಿಂದಲೇ ಜಾರಿಗೆ ಬರಲಿದೆ. ಈ ಬಗ್ಗೆ ಭಾರತೀಯ ಸ್ಟೇಟ್‌ ಬ್ಯಾಂಕ್‌ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ATM ಗಳಲ್ಲಿ ತಿಂಗಳಿಗೆ 4 ಬಾರಿ ಮಾತ್ರ ನಗದು ಹಿಂಪಡೆಯುವ ವ್ಯವಹಾರಗಳು ಉಚಿತವಾಗಿರಲಿವೆ. 4ಕ್ಕಿಂತ ಹೆಚ್ಚು ಬಾರಿ ಹಣ ತೆಗೆದರೆ ಪ್ರತಿ ನಗದು […]

Continue Reading

ಇನ್ನುಮುಂದೆ ಒಬ್ಬ ವ್ಯಕ್ತಿ ಹೆಸರಿಗೆ ಗರಿಷ್ಠ 9 ಸಿಮ್: ರಿಯಲ್ ಟೈಮ್ ವೆರಿಫಿಕೇಷನ್ ಕಡ್ಡಾಯ

ಸುದ್ದಿ ಸಂಗ್ರಹ ನವದೆಹಲಿಅಹಮದಾಬಾದ್‌ನಲ್ಲಿ ನಡೆದ 1.5 ಕೋಟಿ ರೂ. ಮೊತ್ತದ ‘ಬಾಸ್ ಸ್ಕ್ಯಾಮ್’ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರಿ ಸೈಬರ್ ಅಪರಾಧ ಜಾಲವೊಂದು ಪತ್ತೆಯಾಗಿದೆ. ಸೈಬರ್ ಅಪರಾಧಗಳಿಗೆ ಬಳಸಲಾಗುತ್ತಿದ್ದ ಸುಮಾರು 4,500 ಸಿಮ್ ಕಾರ್ಡ್‌ಗಳನ್ನು ಪೊಲೀಸರು ಪತ್ತೆಹಚ್ಚಿದ್ದು, ಈ ಜಾಲಕ್ಕೆ ಚೀನಾ ಮತ್ತು ಪಾಕಿಸ್ತಾನದೊಂದಿಗೆ ಸಂಪರ್ಕವಿರುವ ಶಂಕೆ ವ್ಯಕ್ತವಾಗಿದೆ. ಈ ಬೆನ್ನಲ್ಲೆ ದೇಶದಾದ್ಯಂತ ಸಿಮ್‌ ಕಾರ್ಡ್‌ಗಳನ್ನು ಖರೀದಿಸುವ ಪ್ರಕ್ರಿಯೆ ಕೇಂದ್ರ ಸರ್ಕಾರ ಮತ್ತಷ್ಟು ಬಿಗಿಗೊಳಿಸಿದೆ. ಸೈಬರ್‌ ವಂಚನೆ ತಡೆಯುವ ಸಲುವಾಗಿ ಕೇಂದ್ರ […]

Continue Reading

ಜನಗಣತಿಗೆ ಕೇಂದ್ರ ಅಧಿಸೂಚನೆ- ಜಾತಿ, ಕೋವಿಡ್ ಲಸಿಕೆ ವಿವರ: 40 ಪ್ರಶ್ನೆಗಳು ಇಲ್ಲಿದೆ

ಸುದ್ದಿ ಸಂಗ್ರಹ ನವದೆಹಲಿಮುಂಬರುವ ಜನಗಣತಿಯ ಜನಸಂಖ್ಯಾ ಗಣತಿ ಹಂತದಲ್ಲಿ ಸಾರ್ವಜನಿಕರನ್ನು ಕೇಳಲಾಗುವ 40 ಪ್ರಶ್ನೆಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಈ ಪ್ರಶ್ನಾವಳಿಯಲ್ಲಿ ವ್ಯಕ್ತಿಯ ಜಾತಿ ಮತ್ತು ಕೋವಿಡ್-19 ಲಸಿಕೆ ಪಡೆದ ಸ್ಥಳದ ವಿವರಗಳೂ ಸೇರಿವೆ. ಒಬ್ಬ ವ್ಯಕ್ತಿಯು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರೆ ಎಂಬ ವಿವರಗಳ ಜೊತೆಗೆ ಅವರ ನಿರ್ದಿಷ್ಟ ಜಾತಿಯ ಮಾಹಿತಿ ಕೇಳುವ ಪ್ರಶ್ನೆಗಳು ಒಳಗೊಂಡಿದೆ. ಲಡಾಖ್ ಹಾಗೂ ಜಮ್ಮು- ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹಿಮದಿಂದ ಆವೃತವಾಗಿರುವ […]

Continue Reading

‘ವಂದೇ ಮಾತರಂ’ಗೆ ಅಪಮಾನ ಮಾಡಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ಅಂಕಿತ

ಸುದ್ದಿ ಸಂಗ್ರಹ ನವದೆಹಲಿವಂದೇ ಮಾತರಂ ಗೀತೆಯನ್ನು ಅವಮಾನಿಸಿದರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ ರಾಷ್ಟ್ರಗೀತೆ ‘ಜನ ಗಣ ಮನ’ದಂತೆ ಸಮಾನವಾದ ಕಾನೂನು ಸ್ಥಾನಮಾನ ನೀಡುವ ಹಾಗೂ ಗೀತೆಗೆ ಅವಮಾನ ಅಥವಾ ಅಡ್ಡಿಪಡಿಸುವುದನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸುವ ‘ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ (ತಿದ್ದುಪಡಿ) ಮಸೂದೆ, 2026’ ಸಂಸತ್ತಿನಲ್ಲಿ ಈಚೆಗೆ ಅಂಗೀಕಾರಗೊಂಡಿತ್ತು. ಲೋಕಸಭೆಯು ಜುಲೈ 30 ರಂದು ಮಸೂದೆ ಅಂಗೀಕರಿಸಿತ್ತು. ರಾಜ್ಯಸಭೆಯು ಒಂದು ದಿನ ಮುಂಚಿತವಾಗಿ ಅದನ್ನು […]

Continue Reading

2,000 ರೂ. ಗಿಂತಲೂ ಹೆಚ್ಚಿನ UPI ಪಾವತಿಗೆ ಶುಲ್ಕ: ಲೋಕಸಭೆಯಲ್ಲಿ ಮಸೂದೆ ಪಾಸ್‌

ಸುದ್ದಿ ಸಂಗ್ರಹ ನವದೆಹಲಿಏಕೀಕೃತ ಪಾವತಿ ವ್ಯವಸ್ಥೆ (UPI) ಸೇರಿದಂತೆ ಡಿಜಿಟಲ್ ಪಾವತಿ ವ್ಯವಸ್ಥೆಗಳ ಮೇಲೆ ಭವಿಷ್ಯದಲ್ಲಿ ಶುಲ್ಕ ವಿಧಿಸಲು ಕೇಂದ್ರ ಸರ್ಕಾರಕ್ಕೆ ಕಾನೂನುಬದ್ಧ ಅಧಿಕಾರ ನೀಡುವ ಮಹತ್ವದ ತಿದ್ದುಪಡಿ ಮಸೂದೆಯನ್ನು ಲೋಕಸಭೆ ಇಂದು ಅಂಗೀಕರಿಸಿದೆ. ತೆರಿಗೆ ಮತ್ತು ಇತರ ಕಾನೂನುಗಳ (ತಿದ್ದುಪಡಿ) ಮಸೂದೆ, 2026 (Taxation and Other Laws (Amendment) Bill, 2026.) ಅನ್ನು ಧ್ವನಿ ಮತದ ಮೂಲಕ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಸದನದಲ್ಲಿ ಗದ್ದಲದ ನಡುವೆಯೇ ಮಧ್ಯಾಹ್ನ 2 ಗಂಟೆಗೆ ಕಲಾಪ ಪುನರಾರಂಭವಾದ ಬಳಿಕ ಯಾವುದೆ […]

Continue Reading

ದಿಢೀರ್ 300 ಅಡಿ ಕುಸಿದ ಏರ್ ಇಂಡಿಯಾ ವಿಮಾನ: 12 ಮಂದಿಗೆ ಗಾಯ

ಸುದ್ದಿ ಸಂಗ್ರಹ ನವದೆಹಲಿಫುಕೆಟ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಮಂಗಳವಾರ ಮಧ್ಯಾಕಾಶದಲ್ಲಿ ತೀವ್ರ ಟರ್ಬುಲೆನ್ಸ್‌ಗೆ (ಪ್ರಕ್ಷುಬ್ಧತೆ) ಸಿಲುಕಿದ ಪರಿಣಾಮ ದಿಢೀರ್ 300 ಅಡಿ ಕುಸಿದು ಇಬ್ಬರು ಸಿಬ್ಬಂದಿ ಸೇರಿ ಒಟ್ಟು 12 ಜನ ಗಾಯಗೊಂಡಿದ್ದು, ವಿಮಾನಕ್ಕೂ ಸಣ್ಣ ಪ್ರಮಾಣದ ಹಾನಿಯಾಗಿದೆ. ,AI2379 ವಿಮಾನವು ಬೆಳಿಗ್ಗೆ 8:25ಕ್ಕೆ ಫುಕೆಟ್‌ನಿಂದ ಹೊರಟಿದ್ದು, ಮಧ್ಯಾಹ್ನ 11:50ಕ್ಕೆ ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ. ಹಾರಾಟದ ವೇಳೆ ವಿಮಾನ ಏಕಾಏಕಿ ಸುಮಾರು 300 ಅಡಿ ಕುಸಿದಿದೆ. ಈ […]

Continue Reading

ಪೇಪರ್ ಲೀಕ್ ತಡೆಗೆ ಐತಿಹಾಸಿಕ ಕಾನೂನು: ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಕಾಯ್ದೆ 2026ಕ್ಕೆ ರಾಷ್ಟ್ರಪತಿ ಅಂಕಿತ

ಸುದ್ದಿ ಸಂಗ್ರಹ ನವದೆಹಲಿಇತ್ತೀಚಿನ ನೀಟ್ (NEET)ಸೇರಿದಂತೆ ಪ್ರಮುಖ ಪರೀಕ್ಷಾ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ದೇಶಾದ್ಯಂತ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪೇಪರ್ ಲೀಕ್, ನಕಲು ಮತ್ತು ಅಕ್ರಮಗಳನ್ನು ಸಂಪೂರ್ಣವಾಗಿ ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ತಂದಿರುವ ‘ಸಾರ್ವಜನಿಕ ಪರೀಕ್ಷೆಗಳ (ಅನುಚಿತ ಮಾರ್ಗಗಳ ತಡೆ) ತಿದ್ದುಪಡಿ ಕಾಯ್ದೆ, 2026’ಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ಈ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಸಿಗುವುದರೊಂದಿಗೆ, ಇದು ತಕ್ಷಣದಿಂದಲೇ ದೇಶಾದ್ಯಂತ ಜಾರಿಗೆ ಬಂದಿದೆ. ಹೊಸ ಕಾಯ್ದೆಯ ಪ್ರಮುಖ ಮುಖ್ಯಾಂಶಗಳೇನು ? […]

Continue Reading

ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್‌ ಜೋಶಿ ನೇಮಕ

ಸುದ್ದಿ ಸಂಗ್ರಹ ನವದೆಹಲಿಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಉಂಟಾದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ನಂತರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ. ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ನಂತರ, ರಾಷ್ಟ್ರಪತಿಗಳ ಕಚೇರಿ ಇಂದು ಸಂಜೆ ಪ್ರಕಟಣೆಯಲ್ಲಿ ಜೋಶಿ ಅವರ ನೇಮಕಾತಿ ದೃಢಪಡಿಸಿದೆ. ಪ್ರಧಾನಿಗಳ ಶಿಫಾರಸಿನ ಮೇರೆಗೆ ಸಚಿವ ಪ್ರಲ್ಹಾದ್ ಜೋಷಿಯವರಿಗೆ ಶಿಕ್ಷಣ ಇಲಾಖೆಯ ಹೆಚ್ಚುವರಿ ಹೊಣೆ ನೀಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ. ಸದ್ಯ ಆಹಾರ ಮತ್ತು ನಾಗರಿಕ […]

Continue Reading