ಮೊಂಥಾ ಎಫೆಕ್ಟ್: 100ಕ್ಕೂ ಹೆಚ್ಚು ರೈಲುಗಳು, 35 ವಿಮಾನಗಳ ಹಾರಾಟ ರದ್ದು

ನವದೆಹಲಿ: ಮೊಂಥಾ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆ ಭಾರತೀಯ ರೈಲ್ವೆ 100ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಿದೆ. ಜೊತೆಗೆ 30ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿವೆ. ಚಂಡಮಾರುತದ ಮುನ್ನೆಚ್ಚರಿಕೆ ಕ್ರಮವಾಗಿ, ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಭಾರತೀಯ ರೈಲ್ವೆ 100ಕ್ಕೂ ಹೆಚ್ಚು ರೈಲು ಸೇವೆಗಳನ್ನು ರದ್ದುಗೊಳಿಸಿದೆ. ಜೊತೆಗೆ ಹಲವಾರು ರೈಲುಗಳ ಮಾರ್ಗದಲ್ಲಿಯೂ ಬದಲಾವಣೆ ಮಾಡಿದ್ದು, ಕೆಲವು ರೈಲುಗಳ ಸಮಯವನ್ನು ಮರುನಿಗದಿಪಡಿಸಿದೆ. ಆಂಧ್ರಪ್ರದೇಶ ಕರಾವಳಿ ಪ್ರದೇಶಗಳಾದ ಕಾಕಿನಾಡ, ಭೀಮಾವರಂ, ವಿಜಯವಾಡ, ರಾಜಮಂಡ್ರಿ ಮತ್ತು ವಿಶಾಖಪಟ್ಟಣಂ ಕಡೆ ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆ […]

Continue Reading

ಮಾರ್ಚ್‌ ವೇಳೆಗೆ 3,500 ಹುದ್ದೆ ಭರ್ತಿ: ಎಸ್‌ಬಿಐ

ನವದೆಹಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಮುಂದಿನ ಐದು ತಿಂಗಳೊಳಗೆ ಸುಮಾರು 3,500 ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಯೋಜಿಸಿದೆ. ಜೂನ್ ತಿಂಗಳಿನಲ್ಲಿ 505 ಪ್ರೊಬೇಷನರಿ ಅಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿತ್ತು. ಈಗ ಇಷ್ಟೇ ಸಂಖ್ಯೆಯ ಹುದ್ದೆಗಳಿಗೆ ಮತ್ತೆ ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದ್ದು, ಅರ್ಜಿ ಸ್ವೀಕರಿಸಲಾಗಿದೆ. ದೇಶದಾದ್ಯಂತ ಬ್ಯಾಂಕ್‌ನ ಕಾರ್ಯಾಚರಣೆ ಹೆಚ್ಚಿಸಲು ಮತ್ತು ಗ್ರಾಹಕರಿಗೆ ಉತ್ತಮ ಸೇವೆ ನೀಡಲು ಈ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಬ್ಯಾಂಕ್‌ನ ಉಪ ವ್ಯವಸ್ಥಾಪಕ ನಿರ್ದೇಶಕ (ಮಾನವ ಸಂಪನ್ಮೂಲ ವಿಭಾಗ) ಮತ್ತು ಮುಖ್ಯ ಅಭಿವೃದ್ಧಿ ಅಧಿಕಾರಿ […]

Continue Reading

ಅತಿವೃಷ್ಟಿ: ಮಹಾರಾಷ್ಟ್ರಕ್ಕೆ 1,566.40 ಕೋಟಿ ರೂ. ಕರ್ನಾಟಕಕ್ಕೆ ಕೇವಲ 384 ಕೋಟಿ

ನವದೆಹಲಿ: ಅತಿವೃಷ್ಟಿಯಿಂದ ಹಾನಿಯುಂಟಾಗಿರುವ ಹಿನ್ನೆಲೆ ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವಾಲಯವು ಎಸ್‌ಡಿಆರ್‌ಎಫ್‌ನಿಂದ 2ನೇ ಕಂತಿನ ಹಣ ಬಿಡುಗಡೆ ಮಾಡಿದೆ. ನೈಋತ್ಯ ಮುಂಗಾರಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಮಹಾರಾಷ್ಟ್ರ ಹಾಗೂ ಕರ್ನಾಟಕಕ್ಕೆ ರಾಜ್ಯ ವಿಪತ್ತು ಪರಿಹಾರ ನಿಧಿ ಅಡಿಯಲ್ಲಿ ಒಟ್ಟು 1,950 ಕೋಟಿ ಮುಂಗಡೆಯಾಗಿ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಗೃಹ ಸಚಿವ ಅಮಿತ್ ಶಾ ಅವರು ಕನ್ನಡಲ್ಲೇ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕಕ್ಕೆ ಕೇವಲ 384.40 ಕೋಟಿ ರೂ.ಸಿಕ್ಕಿದ್ದರೆ, ಮಹಾರಾಷ್ಟ್ರಕ್ಕೆ ಬರೋಬ್ಬರಿ 1,566.40 ಕೋಟಿ ರೂ. ನೀಡಲಾಗಿದೆ. […]

Continue Reading

ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ

ನವದೆಹಲಿ: ರೈಲು ಪ್ರಯಾಣ ಪ್ರಿಯರಿಗೆ ರೈಲ್ವೆ ಇಲಾಖೆ ಗುಡ್‌ನ್ಯೂಸ್ ನೀಡಿದೆ. ಇದೀಗ ಬುಕ್ ಆದ ಟಿಕೆಟ್‌ನ ದಿನಾಂಕ ಬದಲಾವಣೆಗೆ ಜನವರಿಯಿಂದ ಅವಕಾಶ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಇಲ್ಲಿಯವರೆಗೆ ಒಮ್ಮೆ ರೈಲ್ವೆ ಟಿಕೆಟ್ ಬುಕ್ ಮಾಡಿದರೆ ಪ್ರಯಾಣದ ದಿನಾಂಕ ಬದಲಾವಣೆಗೆ ಅವಕಾಶ ಇರಲಿಲ್ಲ. ಆದರೆ ಇದೀಗ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ ಇರಲಿದೆ. ಮೊದಲೆಲ್ಲ ಟಿಕೆಟ್ ಬುಕಿಂಗ್ ಆದರೆ ದಿನಾಂಕ ಬದಲಾವಣೆಗೆ ಮೊದಲಿನ ಬುಕಿಂಗ್ ರದ್ದು ಮಾಡಿ, […]

Continue Reading

ಎಲ್‌ಪಿಜಿ ಸಿಲಿಂಡರ್ ಡೆಲಿವರಿಗಾಗಿ ಬರಲಿದೆ ಹೊಸ ವ್ಯವಸ್ಥೆ: ಇದು ಗ್ರಾಹಕರಿಗೆ ಖುಷಿ ಕೊಡುವ ವಿಚಾರ

ನವದೆಹಲಿ: ಎಲ್‌ಪಿಜಿ ಸಿಲಿಂಡರ್‌ ವಿತರಣೆಯಲ್ಲಿ ವಿಳಂಬವನ್ನು ತಪ್ಪಿಸಲು ಕೇಂದ್ರ ಸರಕಾರ ಮುಂದಾಗಿದ್ದು, ಇದಕ್ಕಾಗಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳ ನಡುವೆ ಏಕೀಕೃತ ವಿತರಣಾ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ನಿಯಂತ್ರಣ ಮಂಡಳಿಯು ಹೊಸ ‘ಎಲ್‌ಪಿಜಿ ಇಂಟರ್‌- ಆಪರೆಬಲ್‌ ಸರ್ವೀಸ್ ಡೆಲಿವರಿ ಫ್ರೇಮ್‌ವರ್ಕ್’ ಪರಿಕಲ್ಪನೆಯಡಿ ಈ ಉಪಕ್ರಮ ಜಾರಿಗೊಳಿಸಲು ಮುಂದಾಗಿದ್ದು, ಇದರ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ. ಪ್ರಸ್ತಾವಿತ ನೀತಿಯ ಅಡಿಯಲ್ಲಿ, ಮೂರು ಸರಕಾರಿ ಸ್ವಾಮ್ಯದ ಕಂಪನಿಗಳಾದ ಇಂಡೇನ್‌, ಭಾರತ್‌ ಗ್ಯಾಸ್‌ […]

Continue Reading

ನ.15 ರಿಂದ ಹೊಸ ಟೋಲ್ ನಿಯಮ: ಫಾಸ್ಟ್‌ಟ್ಯಾಗ್ ಇಲ್ಲದವರಿಗೆ‌ ಗುಡ್‌ನ್ಯೂಸ್‌, UPI ಪಾವತಿದಾರರಿಗೆ ಭಾರಿ ರಿಯಾಯಿತಿ

ನವದೆಹಲಿ: ಟೋಲ್ ಪಾವತಿಗಳಿಗೆ ಸಂಬಂಧಿಸಿದಂತೆ ಡಿಜಿಟಲ್‌ ಪಾವತಿಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಮತ್ತೊಂದು ಹೊಸ ನಿಯಮ ಪರಿಚಯಿಸಿದೆ. ಇದರಿಂದ ಫಾಸ್ಟ್‌ಟ್ಯಾಗ್‌ ಹೊಂದಿಲ್ಲದವರು ಯುಪಿಐ ಪಾವತಿ ಮೂಲಕವೂ ರಿಯಾಯಿತಿ ಗಳಿಸಬಹುದಾಗಿದೆ. ನವೆಂಬರ್‌ 15ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ ಹೊಂದದಿರುವ ವಾಹನಗಳು ನವೆಂಬರ್ 15ರಿಂದ ನಗದು ರೂಪದಲ್ಲಿ ಟೋಲ್ ಶುಲ್ಕ ಪಾವತಿಸಲು ಬಯಸಿದರೆ ಅವು ಎರಡುಪಟ್ಟು ಹೆಚ್ಚು ಹಣ ಪಾವತಿಸಬೇಕಾಗುತ್ತದೆ. ಆದರೆ ಯುಪಿಐ ರೂಪದಲ್ಲಿ ಶುಲ್ಕ ಪಾವತಿಸುವವರಿಗೆ ನಿಗದಿಗಿಂತ 1.25 ಪಟ್ಟು ಅಧಿಕ […]

Continue Reading

ಎಲೆಕ್ಟ್ರಿಕ್‌ ವಾಹನಗಳಿಗೆ ಶಬ್ದ ಕಡ್ಡಾಯಗೊಳಿಸಿದ ಸರಕಾರ

ಹೊಸದಿಲ್ಲಿ: ಎಲೆಕ್ಟ್ರಿಕ್‌ ವಾಹನಗಳು ಚಲಿಸುತ್ತಿರುವುದು ಪಾದಚಾರಿಗಳು ಮತ್ತು ಇತರ ವಾಹನ ಚಾಲಕರ ಗಮನಕ್ಕೆ ಬರುವಂತೆ ಮಾಡಲು ಎಲೆಕ್ಟ್ರಿಕ್‌ ವಾಹನಗಳಿಗೆ ಸ್ಪೀಕರ್‌ ಅಳವಡಿಕೆಗೆ ಕೇಂದ್ರ ಸರಕಾರ ಮುಂದಾಗಿದೆ. ಇದಕ್ಕಾಗಿ ಕರಡು ನಿಯಮ ಬಿಡುಗಡೆ ಮಾಡಿದ್ದು, 1 ಅಗಸ್ಟ್ 2027 ರಿಂದ ಎಲ್ಲ ವಾಹನಗಳಿಗೆ ಇದನ್ನು ಕಡ್ಡಾಯ ಮಾಡಲಾಗುವುದು ಎಂದು ತಿಳಿಸಿದೆ. ಎಲೆಕ್ಟ್ರಿಕ್‌ ವಾಹನಗಳು ಯಾವುದೆ ಶಬ್ದವಿಲ್ಲದೆ ಚಲಿಸುವುದರಿಂದ ಇಂತಹ ವಾಹನಗಳು ಬರುವುದು ಇತರರಿಗೆ ತಿಳಿಯುವುದಿಲ್ಲ. ಹೀಗಾಗಿ ಈ ವಾಹನಗಳಲ್ಲಿ ಸ್ಪೀಕರ್‌ ಅಳವಡಿಸಿ, ವೇಗ ಕಡಿಮೆ ಇದ್ದಾಗ ಸಾಮಾನ್ಯ ಕಾರುಗಳು […]

Continue Reading

ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ

ನವದೆಹಲಿ: ವಿಮಾನದ ಚಕ್ರ ಇರುವ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತು 13 ವರ್ಷದ ಬಾಲಕನೊಬ್ಬ ಅಫ್ಘಾನಿಸ್ತಾನದ ಕಾಬೂಲ್‌ನಿಂದ ದೆಹಲಿಗೆ ಆಗಮಿಸಿದ ಘಟನೆ ನಡೆದಿದೆ. ಭಾನುವಾರ ಬೆಳಿಗ್ಗೆ 11:10 ಕ್ಕೆ ಕಾಬೂಲಿನಿಂದ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲ್ಯಾಂಡಿಂಗ್‌ ಆದ ಕಾಮ್ ಏರ್‌ಲೈನ್ಸ್‌ನಲ್ಲಿ ಬಾಲಕ ಆಗಮಿಸಿದ್ದಾನೆ. ವಿಮಾನ ಲ್ಯಾಂಡ್‌ ಆದ ಬಳಿಕ ಟ್ಯಾಕ್ಸಿ ವೇ ಬಳಿ ಬಾಲಕ ನಡೆದುಕೊಂಡು ಹೋಗುತ್ತಿರುವುದನ್ನು ಗಮನಿಸಿದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಆತನನ್ನು ವಶಕ್ಕೆ ಪಡೆದು ಟರ್ಮಿನಲ್ -3 ರಲ್ಲಿ ವಿಚಾರಣೆ […]

Continue Reading

ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ನಡೆದ ಚುನಾವಣೆಯಲ್ಲಿಂದು ಎನ್‌ಡಿಎ ಅಭ್ಯರ್ಥಿ ಗೆಲುವು ಸಾಧಿಸಿದ್ದು, ನೂತನ ಉಪರಾಷ್ಟ್ರಪತಿ ಸಿ.ಪಿ ರಾಧಕೃಷ್ಣನ್ ಆಯ್ಕೆಯಾಗಿದ್ದಾರೆ. ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ ರಾಧಾಕೃಷ್ಣನ್‌ ಗೆಲುವು ಸಾಧಿಸಿದರು. ರಾಧಾಕೃಷ್ಣನ್‌ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಪ್ರತಿಸ್ಪರ್ಧಿ ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದು ಪರಾಭವಗೊಂಡರು. ಉಪರಾಷ್ಟ್ರಪತಿ ಆಯ್ಕೆಗೆ ಇಂದು ಬೆಳಗ್ಗೆ 10 ಗಂಟೆ ಸಂಜೆ 5 […]

Continue Reading

ಸೆ.22 ರಿಂದ ಜಿಎಸ್‌ಟಿಯಲ್ಲಿ 2‌ ಸ್ಲ್ಯಾಬ್ ಜಾರಿ, ಯಾವ ವಸ್ತುಗಳ ಬೆಲೆ ಇಳಿಕೆ ? ಯಾವುದು ಏರಿಕೆ ?

ನವದೆಹಲಿ: ಜಿಎಸ್‌ಟಿ ಕೌನ್ಸಿಲ್‌ ಸಿಹಿಸುದ್ದಿ ನೀಡಿದೆ, 8 ವರ್ಷದ ಬಳಿಕ ಜಿಎಸ್‌ಟಿ ಸ್ಲ್ಯಾಬ್‌ ಪರಿಷ್ಕರಣೆಗೆ ಒಪ್ಪಿಗೆ ನೀಡಿದೆ. ಇನ್ನುಮುಂದೆ ದೇಶದಲ್ಲಿ ಎರಡು ಜಿಎಸ್‌ಟಿ ಸ್ಲ್ಯಾಬ್‌ ಇರಲಿದೆ ಸೆ.22 ರಿಂದ ನೂತನ ದರಗಳು ಅನ್ವಯವಾಗಲಿದೆ. ನಾಲ್ಕು ಸ್ಲ್ಯಾಬ್ ಬದಲಿಗೆ 5%, 18% ಸ್ಲ್ಯಾಬ್’ಗೆ ಸರ್ವಾನುಮತದಿಂದ ಒಪ್ಪಿಗೆ ಸಿಕ್ಕಿದೆ. ಎರಡರ ಜೊತೆಗೆ ಐಷರಾಮಿ ವಸ್ತುಗಳಿಗೆ 40% ಜಿಎಸ್‌ಟಿಯ ಸ್ಲ್ಯಾಬ್ ಅನ್ವಯವಾಗಲಿದೆ. ದೆಹಲಿಯಲ್ಲಿ ಎರಡು ದಿನಗಳ ಕಾಲ ಜಿಎಸ್‌ಟಿ ಕೌನ್ಸಿಲ್‌ ಸಭೆ ನಡೆಯುತ್ತಿದ್ದು ಮೊದಲ ದಿನದ ಸಭೆಯ ಬಳಿಕ ಬುಧವಾರ ರಾತ್ರಿ […]

Continue Reading