ಕರ್ನಾಟಕದ 2 ಸೇರಿ ಭಾರತದ 58 ಎಂಜಿನಿಯರಿಂಗ್ ಕಾಲೇಜುಗಳು ಬಂದ್: ಕಾರಣ ಗೊತ್ತಾ ?

ಸುದ್ದಿ ಸಂಗ್ರಹ ನವದೆಹಲಿವಿದ್ಯಾರ್ಥಿಗಳ ಪ್ರವೇಶಾತಿಯಲ್ಲಿ ಭಾರಿ ಕುಸಿತ ಹಾಗೂ ನಿಗದಿತ ಶೈಕ್ಷಣಿಕ ಮತ್ತು ಮೂಲಸೌಕರ್ಯ ಮಾನದಂಡ ಪಾಲಿಸಲು ವಿಫಲವಾದ ಹಿನ್ನೆಲೆಯಲ್ಲಿ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯು 2025-26ರ ಶೈಕ್ಷಣಿಕ ಸಾಲಿನಲ್ಲಿ ದೇಶಾದ್ಯಂತ ಒಟ್ಟು 58 ಎಂಜಿನಿಯರಿಂಗ್ ಮತ್ತು ತಾಂತ್ರಿಕ ಸಂಸ್ಥೆಗಳನ್ನು ಹಂತ-ಹಂತವಾಗಿ ಮುಚ್ಚಲು ಅನುಮೋದನೆ ನೀಡಿದೆ. ತಾಂತ್ರಿಕ ಶಿಕ್ಷಣದ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದರೂ, ಪ್ರಸ್ತುತ ಈ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಕೋರ್ಸ್‌ಗಳಿಗೆ ಯಾವುದೆ ಅಡ್ಡಿಯಾಗುವುದಿಲ್ಲ ಎಂದು ಕೌನ್ಸಿಲ್ ಭರವಸೆ ನೀಡಿದೆ. ಈ […]

Continue Reading

ವಾಟ್ಸಪ್‌ ಹೊಸ ಅಪ್‌ಡೇಟ್‌ ಬಗ್ಗೆ ಕಳವಳ: ಮೆಟಾಗೆ ಕೇಂದ್ರ ಸರ್ಕಾರ ನೋಟಿಸ್

ಸುದ್ದಿ ಸಂಗ್ರಹ ನವದೆಹಲಿಮೊಬೈಲ್ ಸಂಖ್ಯೆ ಹಂಚಿಕೊಳ್ಳದೆ ಯೂಸರ್‌ನೇಮ್ ಮೂಲಕ ಸಂಪರ್ಕ ಸಾಧಿಸಲು ಅವಕಾಶ ಕಲ್ಪಿಸುವ ವಾಟ್ಸಪ್‌ನ ಹೊಸ ವೈಶಿಷ್ಟ್ಯದ ಬಗ್ಗೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಈ ವೈಶಿಷ್ಟ್ಯವನ್ನು ಪರಿಚಯಿಸಿದ್ದಕ್ಕಾಗಿ ಕೇಂದ್ರ ಸರ್ಕಾರ ಮೆಟಾಗೆ ನೋಟಿಸ್‌ ಜಾರಿಗೊಳಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ವಾಟ್ಸಪ್‌ನ ಹೊಸ ವೈಶಿಷ್ಟ್ಯವು ಹೇಗೆ ಕಾರ್ಯನಿರ್ವಹಿಸುತ್ತದೆ ? ಯಾವ ಸುರಕ್ಷತಾ ಕ್ರಮಗಳನ್ನು ಒಳಗೊಂಡಿದೆ ? ಎಂಬುದರ ಕುರಿತು 3 ದಿನಗಳಲ್ಲಿ ವಿವರವಾದ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಮೆಸೇಜಿಂಗ್ ಆ್ಯಪ್ […]

Continue Reading

ರಾಜ್ಯಸಭೆ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ

ಸುದ್ದಿ ಸಂಗ್ರಹ ನವದೆಹಲಿರಾಜ್ಯಸಭಾ ಸದಸ್ಯರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಸಭೆ ಸಭಾಪತಿಯೂ ಆಗಿರುವ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಪ್ರತಿಜ್ಞಾವಿಧಿ ಬೋಧಿಸಿದರು. ಖರ್ಗೆಯವರು ಹಿಂದಿ ಭಾಷೆಯಲ್ಲಿ ಪ್ರಮಾಣ ಸ್ವೀಕರಿಸಿದರು. ಕೈಯಲ್ಲಿ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡಿದ್ದರು. ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸಿದ್ದ ಅವರು, ಅವಿರೋಧವಾಗಿ ಆಯ್ಕೆಯಾಗಿದ್ದರು. ಇದು ರಾಜ್ಯಸಭೆಯಲ್ಲಿ ಅವರದು ಎರಡನೇ ಅವಧಿ. ಪ್ರತಿಜ್ಞಾವಿಧಿ ಸ್ವೀಕರಿಸಿದ ಖರ್ಗೆಯವರನ್ನು ಅಭಿನಂಧಿಸಿದ ಉಪರಾಷ್ಟ್ರಪತಿ, ಅವರ ಅನುಭವದ ಪ್ರಯೋಜನ ಖಂಡಿತಾ ರಾಜ್ಯಸಭೆಗೆ ಲಾಭ ಉಂಟು […]

Continue Reading

ಅಪಘಾತದಲ್ಲಿ ಅಂಗವೈಕಲ್ಯ ಮಾತ್ರವಲ್ಲ, ಆದಾಯ ನಷ್ಟವನ್ನೂ ಪರಿಗಣಿಸಬೇಕು: ಸುಪ್ರೀಂ ಕೋರ್ಟ್

ಸುದ್ದಿ ಸಂಗ್ರಹ ನವದೆಹಲಿರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯೊಬ್ಬರ ಅಂಗವೈಕಲ್ಯದ ಪ್ರಮಾಣವನ್ನು ಮಾತ್ರ ಪರಿಗಣಿಸದೆ ಆ ವ್ಯಕ್ತಿಯ ವೃತ್ತಿ ಮತ್ತು ಅದರಿಂದ ಬರುತ್ತಿದ್ದ ಆದಾಯಕ್ಕೆ ಆದ ನಷ್ಟವನ್ನೂ ಗಣನೆಗೆ ತೆಗೆದುಕೊಂಡು ಪರಿಹಾರವನ್ನು ಲೆಕ್ಕಾಚಾರ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ರಸ್ತೆ ಅಪಘಾತಗಳಲ್ಲಿ ಶ್ವಾಶತವಾಗಿ ಅಂಗವಿಕಲರಾದವರಿಗೆ ಈ ತೀರ್ಪಿನಿಂದ ಬಹಳ ಅನುಕೂಲವಾಗಲಿದೆ. ಬಡಗಿ ಕೆಲಸ ಮಾಡುತ್ತಿದ್ದ ಶಂಕರ್‌ ದತ್‌ ಎಂಬುವರಿಗೆ 2004ರಲ್ಲಿ ಅಪಘಾತವಾಗಿತ್ತು. ಅತಿವೇಗವಾಗಿ ಬಂದ ಜೀಪ್‌ವೊಂದು ದತ್‌ ಅವರ ಬೈಕ್‌ಗೆ ಗುದ್ದಿತ್ತು. ಅಪಘಾತದಿಂದ ಬಲಗಾಲಿನ […]

Continue Reading

ಭಾರತಕ್ಕೂ ಬಂತು ವಾಟ್ಸಪ್‌, ಇನ್‌ಸ್ಟಾಗ್ರಾಮ್‌, ಫೇಸ್‌ಬುಕ್‌ ಪ್ಲಸ್‌: ತಿಂಗಳಿಗೆ ಎಷ್ಟು ದರ ? ಏನು ವಿಶೇಷ ಫೀಚರ್‌ ಸಿಗುತ್ತೆ ?

ಸುದ್ದಿ ಸಂಗ್ರಹ ನವದೆಹಲಿಮೆಟಾ ಸಂಸ್ಥೆಯು ಭಾರತದಲ್ಲಿ ವಾಟ್ಸಪ್, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಆಪ್‌ಗಳಿಗಾಗಿ ಹೊಸ ಪ್ಲಸ್ ಪ್ರೀಮಿಯಂ ಚಂದಾದಾರಿಕೆ ಯೋಜನೆಗಳನ್ನು ಪರಿಚಯಿಸಿದೆ. ಬಳಕೆದಾರರಿಗೆ ಹೆಚ್ಚಿನ ಪ್ರೈವೆಸಿ, ಕಸ್ಟಮೈಸೇಶನ್ ಮತ್ತು ವಿಶೇಷ ಫೀಚರ್‌ಗಳನ್ನು ನೀಡಲು ಈ ಪ್ಲಾನ್‌ಗಳನ್ನು ತರಲಾಗಿದೆ. ನಿಮ್ಮ ಫೋನ್‌ನಲ್ಲಿ ಈ ಆಯ್ಕೆಗಳು ಕಾಣಿಸಬೇಕಾದರೆ, ಗೂಗಲ್ ಪ್ಲೇ ಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್ ಮೂಲಕ ನಿಮ್ಮ ಆಪ್‌ಗಳನ್ನು ಅಪ್‌ಡೇಟ್ ಮಾಡಿಕೊಳ್ಳಬೇಕಾಗುತ್ತದೆ. ಬೆಲೆ ಎಷ್ಟು ?ಪ್ರತಿ ಆಪ್‌ಗೂ ಪ್ರತ್ಯೇಕವಾಗಿ ತಿಂಗಳ ಚಂದಾದಾರಿಕೆ ಪಾವತಿಸಬೇಕಾಗುತ್ತದೆ:ವಾಟ್ಸಪ್ ಪ್ಲಸ್: ತಿಂಗಳಿಗೆ 79 […]

Continue Reading

ಟೆಲಿಗ್ರಾಮ್‌ ಮೇಲೆ ಕ್ರಮ – ವಾಟ್ಸಪ್‌ ಮೇಲೆ ನಿಷೇಧ ಯಾಕಿಲ್ಲ ?

ಸುದ್ದಿ ಸಂಗ್ರಹ ನವದೆಹಲಿನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಜೂನ್ 22 ವರೆಗೆ ಭಾರತದಲ್ಲಿ ಟೆಲಿಗ್ರಾಮ್ ಅಪ್ಲಿಕೇಶನ್‌ನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ನೀಟ್ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವಂಚನೆಯನ್ನು ತಡೆಯಲು ಕೇಂದ್ರ ಸರ್ಕಾರ ಈ ಕಠಿಣ ಕ್ರಮ ಕೈಗೊಂಡಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಶಿಫಾರಸಿನ ಮೇರೆಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಆದೇಶ ಹೊರಡಿಸಿದೆ. ಈ ನಿರ್ಧಾರದ ಜೊತೆ ಜೂನ್ 30ರ ವರೆಗೆ ಹಳೆಯ ಸಂದೇಶಗಳನ್ನು ಎಡಿಟ್ ಮಾಡುವ ವೈಶಿಷ್ಟ್ಯವನ್ನು ನಿಷ್ಕ್ರಿಯಗೊಳಿಸಲಾಗಿದೆ. ಜೂನ್ […]

Continue Reading

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ: ಕೇಂದ್ರ ಆದೇಶ

ಸುದ್ದಿ ಸಂಗ್ರಹ ನವದೆಹಲಿಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ವೈದ್ಯರ ಶಿಫಾರಸು ಇಲ್ಲದೆ ಯಾವುದೆ ಸಿರಪ್‌ಗಳನ್ನು ಖರೀದಿಸುವಂತಿಲ್ಲ. ಎಲ್ಲಾ ಸಿರಪ್‌ಗಳಿಗೆ ವೈದ್ಯರ ಪ್ರಿಸ್ಕ್ರಿಪ್ಷನ್ ಕಡ್ಡಾಯ. ಅದೆ ರೀತಿ ಕೆಮ್ಮಿನ ಸಿರಪ್‌ಗೂ ವೈದ್ಯರ ಶಿಫಾರಸು ಅಗತ್ಯ ಎಂದು ಕೇಂದ್ರ ಸೂಚನೆ ನೀಡಿದೆ. ಕೇಂದ್ರವು 1945ರ ಔಷಧ ನಿಯಮಗಳನ್ನು ತಿದ್ದುಪಡಿ ಮಾಡಿದೆ. ವೇಳಾಪಟ್ಟಿ K ಅಡಿಯಲ್ಲಿ ಪಟ್ಟಿ ಮಾಡಲಾದ ವಿನಾಯಿತಿ ಪಡೆದ ಔಷಧಿಗಳ ವರ್ಗದಿಂದ ‘ಸಿರಪ್‌ಗಳು’ ಎಂಬ […]

Continue Reading

ವಿಶ್ವಾದ್ಯಂತ ಇನ್‌ಸ್ಟಾಗ್ರಾಮ್‌, ವಾಟ್ಸಪ್‌, ಫೇಸ್‌ಬುಕ್‌ ಡೌನ್‌

ಸುದ್ದಿ ಸಂಗ್ರಹ ನವದೆಹಲಿಸಾಮಾಜಿಕ ಜಾಲತಾಣ ದೈತ್ಯ ‘ಮೆಟಾ’ ಸಂಸ್ಥೆಯ ಒಡೆತನದ ಪ್ರಮುಖ ಆಪ್‌ಗಳಾದ ಇನ್‌ಸ್ಟಾಗ್ರಾಮ್‌, ವಾಟ್ಸಪ್‌ ಮತ್ತು ಫೇಸ್‌ಬುಕ್‌ ಸರ್ವರ್‌ಗಳು ಜಾಗತಿಕ ಮಟ್ಟದಲ್ಲಿ ಏಕಾಏಕಿ ಸ್ಥಗಿತಗೊಂಡಿದ್ದು, ಕೋಟ್ಯಂತರ ಬಳಕೆದಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ವಿಶ್ವದಾದ್ಯಂತ ಏಕಕಾಲದಲ್ಲಿ ಮೆಟಾ ಸಂಸ್ಥೆಯ ಈ ಮೂರು ಪ್ರಮುಖ ಆಪ್‌ಗಳ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ಬಳಕೆದಾರರು ಲಾಗಿನ್ ಮಾಡಲು ಅಥವಾ ಸಂದೇಶಗಳನ್ನು ಕಳುಹಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಇನ್‌ಸ್ಟಾಗ್ರಾಮ್: ಬಳಕೆದಾರರಿಗೆ ಫೀಡ್ ರಿಫ್ರೆಶ್ ಮಾಡಲು ಸಾಧ್ಯವಾಗುತ್ತಿಲ್ಲ, ಡೈರೆಕ್ಟ್ ಮೆಸೇಜ್‌ಗಳು ಹೋಗುತ್ತಿಲ್ಲ ಮತ್ತು ಸ್ಟೋರಿಗಳನ್ನು ಅಪ್‌ಲೋಡ್ […]

Continue Reading

ಡಿಕೆಶಿಯಿಂದ ಮೋದಿ ಭೇಟಿ: ರಾಜ್ಯದ ಕೆಲಸಗಳಿಗೆ ಸಹಕಾರ ಕೇಳಿದ ಸಿಎಂ

ಸುದ್ದಿ ಸಂಗ್ರಹ ನವದೆಹಲಿಕರ್ನಾಟಕದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವುದು ಇದೆ ಮೊದಲು. ಆಯೋಗದ ಮಹತ್ವದ ಸಭೆಯು ಮುಗಿದ ಬಳಿಕ ರಾಷ್ಟ್ರಪತಿ ಭವನದಲ್ಲಿ ಈ ಉನ್ನತ ಮಟ್ಟದ ಭೇಟಿ ನಡೆದಿದೆ. ಮೊದಲ ಭೇಟಿಯಲ್ಲೆ ಪ್ರಧಾನಿ ಅವರಿಗೆ ಜಗದ್ಗುರು ಬಸವಣ್ಣನವರ ಭವ್ಯವಾದ ಪುತ್ಥಳಿ ನೀಡಿ ಮುಖ್ಯಮಂತ್ರಿಗಳು ಗೌರವಿಸಿದರು. ಈ ಸೌಜನ್ಯಯುತ ಭೇಟಿಯ ಸಂದರ್ಭದಲ್ಲಿ […]

Continue Reading

ಅಪಘಾತಕ್ಕೊಳಗಾದವರಿಗೆ ಸಹಾಯ ಮಾಡಿದ್ರೆ 25,000 ರೂ. ಗಿಫ್ಟ್

ಸುದ್ದಿ ಸಂಗ್ರಹ ನವದೆಹಲಿರಸ್ತೆ ಅಪಘಾತಗಳಿಂದಾಗಿ ಪ್ರತಿವರ್ಷ ಸಾವಿರಾರು ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಅಪಘಾತಕ್ಕೊಳಗಾದವರನ್ನು ಸಕಾಲದಲ್ಲಿ ಆಸ್ಪತ್ರೆಗೆ ಸೇರಿಸಿ ನೆರವು ನೀಡುವವರಿಗೆ ಕೇಂದ್ರ ಸರ್ಕಾರ ರಹಾ-ವೀರ್ ಯೋಜನೆ ಅಡಿಯಲ್ಲಿ 25 ಸಾವಿರ ರೂ ನೀಡಲಿದೆ. ಅಲ್ಲದೆ ಅಂಥವರಿಗೆ ಕಾನೂನಿನ ರಕ್ಷಣೆಯನ್ನೂ ನೀಡಲಾಗುತ್ತದೆ. ಅಪಘಾತ ಸಂಭವಿಸಿದ ಮೊದಲ ಒಂದು ಗಂಟೆಯನ್ನು ಗೋಲ್ಡನ್ ಅವರ್ ಎನ್ನಲಾಗುತ್ತದೆ. ಈ ಸಮಯದಲ್ಲಿ ಗಾಯಾಳುವಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ದೊರೆತರೆ ಸಾವು ಅಥವಾ ಆಗಬಹುದಾದ ಅಪಾಯವನ್ನು ಕಡಿಮೆ ಮಾಡಬಹುದು. ಹೀಗಾಗಿ ರಹಾ-ವೀರ್ ಆಗಲು ಯಾವುದೆ […]

Continue Reading