ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಇಂದು ಮೋದಿ ಚಾಲನೆ‌

ಸುದ್ದಿ ಸಂಗ್ರಹ ನವದೆಹಲಿಕೋಲಾರದ ವೇಮಗಲ್‌ನಲ್ಲಿ ದೇಶದಲ್ಲೆ ಮೊದಲ ಖಾಸಗಿ ಮಿನಿ ಹೆಲಿಕಾಪ್ಟರ್ ನಿರ್ಮಾಣ ಘಟಕ ಕಾರ್ಯಾರಂಭ ಮಾಡಲಿದೆ. ರಕ್ಷಣಾ ಮಿನಿ ಹೆಲಿಕಾಪ್ಟರ್ ನಿರ್ಮಾಣ ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರಾನ್ ಮಂಗಳವಾರ ವರ್ಚುವಲ್‌ ಆಗಿ ಚಾಲನೆ ನೀಡಲಿದ್ದಾರೆ. ಟಾಟಾ ಕಂಪನಿಯಿಂದ ಮೊದಲ ಬಾರಿಗೆ ಮಿನಿ ಏರ್ ಬಸ್, ಹೆಲಿಕಾಪ್ಟರ್ ನಿರ್ಮಾಣ ಕಂಪನಿಯನ್ನು ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಆರಂಭಿಸುತ್ತಿದ್ದು ಇಂದಿನಿಂದ ಮಿನಿ ಹೆಲಿಕಾಪ್ಟರ್ ಘಟಕ ಕಾರ್ಯಾರಂಭ ಮಾಡಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖುದ್ದು […]

Continue Reading

ಉದ್ಯಮಿಗೆ 2 ಕೋಟಿ ರೂ ಪಂಗನಾಮ: ಕರ್ತವ್ಯ ಲೋಪ ಸಾಬೀತು, ಡಿವೈಎಸ್‌ಪಿ ಕಲ್ಪನಾ ವರ್ಮಾ ಅಮಾನತು

ಸುದ್ದಿ ಸಂಗ್ರಹ ನವದೆಹಲಿ ಛತ್ತೀಸ್‌ಗಢದಲ್ಲಿ ಉದ್ಯಮಿಯೊಬ್ಬರು ಮಾಡಿದ ಆರೋಪದ ಹಿನ್ನೆಲೆಯಲ್ಲಿ, ಡಿವೈಎಸ್‌ಪಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ತಮ್ಮ ಹುದ್ದೆ ದುರ್ಬಳಕೆ ಮಾಡಿಕೊಂಡು ಆರ್ಥಿಕ ನಷ್ಟ ಉಂಟುಮಾಡಿದ್ದಾರೆ ಎಂದು ಉದ್ಯಮಿ ದೂರು ನೀಡಿದ್ದರು. ಪ್ರಾಥಮಿಕ ತನಿಖೆಯ ನಂತರ, ಪೊಲೀಸ್ ಅಧಿಕಾರಿ ಕಲ್ಪನಾ ವರ್ಮಾ ಅವರನ್ನು ಅಮಾನತು ಮಾಡಲಾಗಿದೆ. ಡಿಸೆಂಬರ್ 16 ರಂದು ಉದ್ಯಮಿ ದೀಪಕ್ ಟೋಂಡನ್ ಅವರು ದಂತೆವಾಡ ಡಿವೈಎಸ್‌ಪಿ ಕಲ್ಪನಾ ವರ್ಮಾ ವಿರುದ್ಧ ಛತ್ತೀಸ್‌ಗಢ ಪೊಲೀಸ್ ಮಹಾನಿರ್ದೇಶಕ ಅರುಣ್ ದೇವ್ ಗೌತಮ್ ಅವರಿಗೆ ಲಿಖಿತ ದೂರು ನೀಡಿದ್ದರು. […]

Continue Reading

ಹೃದಯಾಘಾತದಿಂದ ಪುತ್ರ ನಿಧನ, ನೋವಿನಲ್ಲಿ 20 ಸಾವಿರ ಕೋಟಿ ರೂ ಆಸ್ತಿ ದಾನ ಮಾಡುವುದಾಗಿ ಉದ್ಯಮಿ ಶಪಥ

ಸುದ್ದಿ ಸಂಗ್ರಹ ನವದೆಹಲಿ ವೇದಾಂತ ರಿಸೋರ್ಸಸ್ ಲಿಮಿಟೆಡ್‌ನ ಅಧ್ಯಕ್ಷ ಅನೀಲ್ ಅಗರ್ವಾಲ್ ಅವರು ತಮ್ಮ ಜೀವನದ ಅತ್ಯಂತ ಕಠಿಣ ಸಮಯದಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಅಮೆರಿಕದಲ್ಲಿ ತಮ್ಮ ಮಗ ಅಗ್ನಿವೇಶ್ ಅಗರ್ವಾಲ್ ಅವರ ಅಕಾಲಿಕ ಮರಣದ ನಂತರ, ಅನೀಲ್ ಅಗರ್ವಾಲ್ ಅವರು ತಮ್ಮ ಒಟ್ಟು ಸಂಪತ್ತಿನ ಶೇ. 75ಕ್ಕಿಂತ ಹೆಚ್ಚಿನ ಪಾಲನ್ನು ಸಮಾಜ ಸೇವೆಗಾಗಿ ದಾನ ಮಾಡುವ ತಮ್ಮ ಹಳೆಯ ವಾಗ್ದಾನವನ್ನು ಪುನರುಚ್ಚರಿಸಿದ್ದಾರೆ. ಫೋರ್ಬ್ಸ್‌ ಪ್ರಕಾರ ಅನೀಲ್‌ ಅಗರ್‌ವಾಲ್‌ 3 ಬಿಲಿಯನ್‌ ಡಾಲರ್‌ ಅಂದರೆ ಸುಮಾರು 27 […]

Continue Reading

ಸಿಗರೇಟ್, ಗುಟ್ಕಾ ಬಳಸುತ್ತಿರಾ ? ಮುಂದಿನ ತಿಂಗಳಿಂದ ನಿಮ್ಮ ಜೇಬಿಗೆ ಕತ್ತರಿ ಗ್ಯಾರಂಟಿ

ಸುದ್ದಿ ಸಂಗ್ರಹ ನವದೆಹಲಿ ಫೆ.1 ರಿಂದ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಹೊಸ ಸೆಸ್ ಲೆವಿಗಳನ್ನು ಜಾರಿ ಮಾಡಲಾಗುತ್ತಿದೆ. ಹೀಗಾಗಿ ಸಿಗರೇಟ್, ಬೀಡಿ, ಪಾನ್ ಮಸಾಲಾ ಮತ್ತು ಇತರ ತಂಬಾಕು ಉತ್ಪನ್ನಗಳ ಬೆಲೆ ಹೆಚ್ಚು ದುಬಾರಿಯಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರವು ಸೂಚಿಸಿದ ಹೊಸ ತೆರಿಗೆ ನೀತಿ ಫೆ.1 ರಿಂದ ಜಾರಿಗೆ ಬರಲಿದೆ. ಇದು ಆಯ್ದ ಉತ್ಪನ್ನಗಳಿಗೆ ಬೆಲೆಯ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದೀಗ ಅಸ್ತಿತ್ವದಲ್ಲಿರುವ ಜಿಎಸ್‌ಟಿ ಜೊತೆಗೆ ನಿರ್ದಿಷ್ಟ ಅಬಕಾರಿ ಸುಂಕವನ್ನು ಪರಿಚಯಿಸುವುದರಿಂದ ಸಿಗರೇಟ್‌ಗಳು ಹೆಚ್ಚಿನ ತೆರಿಗೆ ಹೊರೆ […]

Continue Reading

ಪುಟಿನ್‌ಗೆ ಮೋದಿಯಿಂದ ಚಹಾಪುಡಿ, ಬೆಳ್ಳಿ ಕುದುರೆ, ಭಗವದ್ಗೀತೆ ಉಡುಗೊರೆ

ನವದೆಹಲಿ: ಅಸ್ಸಾಂನ ಸುವಾಸನೆ ಭರಿತ ಚಹಾಪುಡಿ, ಕಾಶ್ಮೀರಿ ಕೇಸರಿ, ಕರಕುಶಲ ಬೆಳ್ಳಿಯ ಕುದುರೆ, ಬೆಳ್ಳಿಯ ಟೀ ಸೆಟ್, ಚೆಸ್‌ ಬೋರ್ಡ್‌ ಮತ್ತು ರಷ್ಯನ್ ಆವೃತ್ತಿಯ ಭಗವದ್ಗೀತೆಯ ಪ್ರತಿ ಇವೆಲ್ಲವೂ ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಪ್ರಧಾನಿ ಮೋದಿ ಉಡುಗೊರೆಯಾಗಿ ನೀಡಿದ ವಸ್ತುಗಳು. ಮುರ್ಷಿದಾಬಾದ್‌ನ ಕರಕುಶಲ ಕಲಾವಿದರು ಬೆಳ್ಳಿಯ ಟೀ ಸೆಟ್‌ ತಯಾರಿಸಿದ್ದರೆ, ಬೆಳ್ಳಿಯ ಕುದುರೆಯನ್ನು ಮಹಾರಾಷ್ಟ್ರದ ಕಲಾವಿದರು ತಯಾರಿಸಿದ್ದಾರೆ. ಅದೆ ರೀತಿ ಪುಟಿನ್ ಅವರಿಗೆ ನೀಡಲಾದ ಚೆಸ್‌ ಆಟದ ಬೋರ್ಡನ್ನು ವಿಶೇಷವಾಗಿ ಅಮೃತಶಿಲೆಯಿಂದ ತಯಾರಿಸಲಾಗಿದ್ದು, ಇದರ ಹಿಂದೆ […]

Continue Reading

ನಾವು ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದ್ದೆವೆ: ಪುಟಿನ್‌ ಜೊತೆಗಿನ ಸಂವಾದದಲ್ಲಿ ಮೋದಿ ಮಾತು

ನವದೆಹಲಿ: ಭಾರತವು ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ. ಶಾಂತಿಯಲ್ಲಿ ಭಾರತ ನಂಬಿಕೆಯಿಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಹೈದರಾಬಾದ್‌ ಹೌಸ್‌ನಲ್ಲಿ ನಡೆದ ಭಾರತ-ರಷ್ಯಾ 23ನೇ ಶೃಂಗಸಭೆಯಲ್ಲಿ ಪುಟಿನ್‌ ಜೊತೆಗೆ ಸಂವಾದ ನಡೆಸಿದ ಪ್ರಧಾನಿ ಮೋದಿ, ಮತ್ತೊಮ್ಮೆ ಉಕ್ರೇನ್‌ ವಿರುದ್ಧದ ಯುದ್ಧ ನಿಲ್ಲಿಸುವಂತೆ ಶಾಂತಿಪಾಠ ಹೇಳಿದರು. ಸಂವಾದದಲ್ಲಿ ಮಾತನಾಡಿದ ಮೋದಿ, ಪುಟಿನ್‌ ಅವರ ಈ ಭೇಟಿಯು ಐತಿಹಾಸಿಕವಾಗಿದೆ. ಉಕ್ರೇನ್‌ ಬಿಕ್ಕಟ್ಟಿನ ಬಗ್ಗೆ ನಾವು ನಿರಂತರವಾಗಿ ಚರ್ಚಿಸುತ್ತಿದ್ದೆವೆ. ರಷ್ಯಾ ಶಾಂತಿ ಮಾರ್ಗ ಕಂಡುಕೊಳ್ಳಬೇಕಿದೆ. ಏಕೆಂದ್ರೆ ಶಾಂತಿಯ ಮಾರ್ಗದಲ್ಲಿ ಪ್ರಯಾಣಿಸಿದರೆ ಮಾತ್ರ […]

Continue Reading

ನನ್ನ ಸ್ನೇಹಿತ ಪುಟಿನ್‌ರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ: ಮೋದಿ

ನವದೆಹಲಿ: ನನ್ನ ಸ್ನೇಹಿತ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಖುಷಿ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ನನ್ನ ಸ್ನೇಹಿತ ಅಧ್ಯಕ್ಷ ಪುಟಿನ್ ಅವರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ. ಇಂದು ಸಂಜೆ ಮತ್ತು ನಾಳೆ ನಮ್ಮ ಸಂವಾದ ಎದುರು ನೋಡುತ್ತಿದ್ದೆನೆ. ಭಾರತ-ರಷ್ಯಾ ಸ್ನೇಹವು ಕಾಲಾತೀತವಾಗಿದ್ದು, ಇದು ನಮ್ಮ ಜನರಿಗೆ ಹೆಚ್ಚಿನ ಪ್ರಯೋಜನ ನೀಡಿದೆ ಎಂದು ತಿಳಿಸಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಗುರುವಾರ ಸಂಜೆ […]

Continue Reading

ಭಾರತದಲ್ಲಿ ಈ 3 ಬ್ಯಾಂಕ್’ಗಳು ಅತಿ ಸುರಕ್ಷಿತವೆಂದು ಆರ್​ಬಿಐ ಘೋಷಣೆ: ಇವುಗಳಿಗೆ ವಿಶೇಷ ಮಾರ್ಗಸೂಚಿ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಈ ದೇಶದ ಮೂರು ಬ್ಯಾಂಕುಗಳನ್ನು ಬಹಳ ಮುಖ್ಯವೆಂದು ವರ್ಗೀಕರಣ ಮಾಡಿದೆ. ಎಸ್​ಬಿಐ, ಎಚ್​ಡಿಎಫ್​ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕುಗಳನ್ನು ವ್ಯವಸ್ಥಿತವಾಗಿ ಅತ್ಯಂತ ಮುಖ್ಯ ಹಣಕಾಸು ಸಂಸ್ಥೆಗಳೆಂದು ಆರ್​ಬಿಐ ಪರಿಗಣಿಸಿದೆ. ಇವುಗಳನ್ನು ಡಿ-ಎಸ್​ಐಬಿ ಅಥವಾ ದೇಶೀಯವಾಗಿ ವ್ಯವಸ್ಥಿತವಾಗಿ ಪ್ರಮುಖ ಬ್ಯಾಂಕ್’ಗಳು ಎಂದು ವರ್ಗೀಕರಿಸಿದೆ. ಆರ್​ಬಿಐ ಪ್ರಕಾರ ದೇಶದ ಬ್ಯಾಂಕಿಂಗ್ ವಲಯದಲ್ಲಿ ಈ ಮೂರು ಬ್ಯಾಂಕ್’ಗಳು ಬಹಳ ಮುಖ್ಯಸ್ಥಾನ ಹೊಂದಿರುತ್ತವೆ. ಈ ಮೂರು ಬ್ಯಾಂಕ್’ಗಳ ಪೈಕಿ ಎಸ್​ಬಿಐ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿದೆ, ಎಚ್​ಡಿಎಫ್​ಸಿ […]

Continue Reading

ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ

ನವದೆಹಲಿ: ಅಂಗನವಾಡಿ, ಅಕ್ಷರ ದಾಸೋಹ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಅನ್ನಪೂರ್ಣ ದೇವಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಹತ್ವದ ಮಾತುಕತೆ ನಡೆಸಿದರು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನಾ ಚಳವಳಿ ನಡೆಸುತ್ತಿದ್ದ ಕರ್ನಾಟಕ ಅಂಗನವಾಡಿ, ಅಕ್ಷರ ದಾಸೋಹ ಮತ್ತು ಆಶಾ ನೌಕರರ ಪ್ರಮುಖರನ್ನು ಬುಧವಾರ ನವದೆಹಲಿಗೆ ಕರೆಸಿಕೊಂಡ ಸಚಿವ […]

Continue Reading

ಸಂಚಾರ್ ಸಾಥಿ ಆ್ಯಪ್ ಪ್ರಿ-ಇನ್ಸ್ಟಾಲ್ ಕಡ್ಡಾಯವಲ್ಲ: ಕೇಂದ್ರ ಸ್ಪಷ್ಟನೆ

ನವದೆಹಲಿ: ವಿರೋಧ ಪಕ್ಷಗಳಿಂದ ತೀವ್ರ ವಿರೋಧದ ಬಳಿಕ ಕೇಂದ್ರ ಸರ್ಕಾರದಿಂದ ‘ಸಂಚಾರ್ ಸಾಥಿ’ ಆ್ಯಪ್ ಪೂರ್ವ-ಸ್ಥಾಪನೆ ಕಡ್ಡಾಯವಲ್ಲ ಎಂದು ದೂರ ಸಂಪರ್ಕ ಇಲಾಖೆ ಹೇಳಿದೆ. ಈ ಹಿಂದೆ ಕೇಂದ್ರ ಸರ್ಕಾರ ಮೊಬೈಲ್‌ಗಳಲ್ಲಿ ಸಂಚಾರ್ ಸಾಥಿ ಆ್ಯಪ್ ಪ್ರಿ-ಇನ್ಸ್ಟಾಲ್ ಮಾಡಲು ಸ್ಮಾರ್ಟ್ಫೋನ್ ಕಂಪನಿಗಳಿಗೆ ಆದೇಶಿಸಿತ್ತು. ಇದು ಜನರ ಮೇಲೆ ನಿರಂತರ ನಿಗಾ ವಹಿಸಲಿದೆ, ಸರ್ಕಾರ ಜನರ ಮೇಲೆ ಗೂಢಚಾರಿಕೆ ಮಾಡುತ್ತಿದೆ ಎಂದು ವಿಪಕ್ಷಗಳಿಂದ ತೀವ್ರ ವಿರೋಧದ ಬಳಿಕ ಕಡ್ಡಾಯ ರದ್ದುಗೊಳಿಸಿ ಸರ್ಕಾರ ಸ್ಪಷ್ಟನೆ ನೀಡಿದೆ. ಎಲ್ಲಾ ನಾಗರಿಕರಿಗೆ ಸೈಬರ್ […]

Continue Reading