ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್‌ಗಳು ಸಿಗಲ್ಲ, ತಜ್ಞರು ನೀಡಿದ ಆಘಾತಕಾರಿ ಎಚ್ಚರಿಕೆ ಏನು ?

ಸುದ್ದಿ ಸಂಗ್ರಹ ನವದೆಹಲಿಭಾರತದಲ್ಲಿ ಮುಂದಿನ ಐದು ವರ್ಷಗಳಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್, ಕಾರ್ಪೆಂಟರ್, ಚಾಲಕರು ಮತ್ತು ಕೇರ್‌ಟೇಕರ್‌ಗಳಂತಹ ಕೌಶಲ್ಯ ಆಧಾರಿತ ಉದ್ಯೋಗಿಗಳ ತೀವ್ರ ಕೊರತೆ ಎದುರಾಗುವ ಸಾಧ್ಯತೆ ಇದೆ ಎಂದು ಪೈನ್‌ಟ್ರೀ ಸಂಶೋಧನಾ ಸಂಸ್ಥೆಯ ಸಂಸ್ಥಾಪಕ ರಿತೇಶ್ ಜೈನ್ ಎಚ್ಚರಿಕೆ ನೀಡಿದ್ದಾರೆ. ಅವರ ಈ ವಿಶ್ಲೇಷಣಾತ್ಮಕ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕೆನಡಾ ಮೂಲದ ಸಂಶೋಧನಾ ಸಂಸ್ಥೆ ಪೈನ್‌ಟ್ರೀ ಸಂಸ್ಥಾಪಕ ರಿತೇಶ್ ಜೈನ್ ಅವರು ಲಿಂಕ್ಡ್‌ಇನ್‌ನಲ್ಲಿ ಈ ವಿಚಾರದ ಬಗ್ಗೆ ಸುದೀರ್ಘವಾಗಿ ಪೋಸ್ಟ್ ಮಾಡಿದ್ದಾರೆ. ವಿಶ್ವದ […]

Continue Reading

ಪದ್ಮ ಪ್ರಶಸ್ತಿ ಸ್ವೀಕರಿಸುವ ಮುನ್ನ ಪ್ರಧಾನಿ ಮೋದಿಗೆ ಉದ್ದಂಡ ನಮಸ್ಕಾರ ಹಾಕಿದ ಕೆ ಪಜನಿವೇಲ್: ವಿಡಿಯೋ ವೈರಲ್

ಸುದ್ದಿ ಸಂಗ್ರಹ ನವದೆಹಲಿಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ನಾಗರಿಕ ಹೂಡಿಕೆ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸುವ ಮುನ್ನ ಪುದುಚೇರಿಯ ಮಾರ್ಷಲ್ ಆರ್ಟ್ಸ್ ಸಾಧಕ ಕೆ ಪಜನಿವೇಲ್ ಅವರು ಪ್ರಧಾನಿ ಮೋದಿ ಅವರಿಗೆ ಸಾಷ್ಟಾಂಗ ನಮಸ್ಕಾರ ಹಾಕಿದ ವಿಡಿಯೋ ಇದೀಗ ವೈರಲ್ ಆಗಿದೆ. ಈ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಲೆ, ಸಮಾಜ ಸೇವೆ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ […]

Continue Reading

ನಾಳೆ ಪದ್ಮ ಪ್ರಶಸ್ತಿ ಪ್ರದಾನ: ರಾಜ್ಯದ 8 ಮಂದಿ ಸೇರಿ 131 ಸಾಧಕರಿಗೆ ರಾಷ್ಟ್ರಪತಿಗಳಿಂದ ಗೌರವ

ಸುದ್ದಿ ಸಂಗ್ರಹ ನವದೆಹಲಿಕರ್ನಾಟಕದ 8 ಸಾಧಕರು ಸೇರಿ 2026ನೇ ಸಾಲಿನ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿರುವ 131 ಮಂದಿಗೆ ನಾಳೆ (ಮೇ 25) ರಾಷ್ಟ್ರಪತಿ ದ್ರೌದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸೋಮವಾರ (ಮೇ 25) ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿಗಳು ದೇಶದ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಯನ್ನ ಸಾಧಕರಿಗೆ ಪ್ರದಾನ ಮಾಡಲಿದ್ದಾರೆ. ಈ ವರ್ಷ ಒಟ್ಟು 131 ಸಾಧಕರು ಪದ್ಮ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ. ಒಟ್ಟು 5 […]

Continue Reading

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್‌ ಆತಂಕ: ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ಸುದ್ದಿ ಸಂಗ್ರಹ ನವದೆಹಲಿ/ಬೆಂಗಳೂರುಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ. ಈಗಾಗಲೆ ರಾಷ್ಟ್ರದ ರಾಜಧಾನಿ ನವದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಬೋಲಾ ಕುರಿತು ನೀಡಲಾಗಿದ್ದು, ಹೈ-ರಿಸ್ಕ್‌ ದೇಶಗಳ ಪ್ರಯಾಣಿಕರಿಗೆ ಹಲವು ಸೂಚನೆಗಳನ್ನ ನೀಡಲಾಗಿದೆ. ಈ ಮಧ್ಯೆ ದೆಹಲಿಯಲ್ಲಿ ನಡೆಯಬೇಕಾಗಿದ್ದ ಭಾರತ-ಆಫ್ರಿಕಾ ಒಕ್ಕೂಟದ ಶೃಂಗಸಭೆಯನ್ನೂ ಮುಂದೂಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈ ಶೃಂಗಸಭೆಯನ್ನು ಮುಂದೂಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಈ ಬೆನ್ನಲ್ಲೆ ರಾಜ್ಯದಲ್ಲಿ ಕಟ್ಟೆಚ್ಚರ […]

Continue Reading

ಮೇ.26 ರಿಂದ ಕೇರಳಕ್ಕೆ ಮುಂಗಾರು ಪ್ರವೇಶ: ಎಲ್‌ ನಿನೊ ಪರಿಣಾಮದಿಂದ ದುರ್ಬಲ ಸಾಧ್ಯತೆ

ಸುದ್ದಿ ಸಂಗ್ರಹ ನವದೆಹಲಿಈ ವರ್ಷದ ನೈಋತ್ಯ ಮುಂಗಾರು ಮೇ.26 ರಿಂದ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರತಿವರ್ಷ ಸಾಮಾನ್ಯವಾಗಿ ಜೂನ್ 1ರಂದು ಕೇರಳಕ್ಕೆ ಮುಂಗಾರು ಆಗಮಿಸುತ್ತದೆ. ಆದರೆ ಈ ಬಾರಿ ಐದು ದಿನ ಮುಂಚಿತವಾಗಿ ಆರಂಭವಾಗುವ ನಿರೀಕ್ಷೆ ಇದೆ. ಹವಾಮಾನ ಇಲಾಖೆಯ ಪ್ರಕಾರ, ಮೇ 26ಕ್ಕೆ ನಾಲ್ಕು ದಿನಗಳ ವ್ಯತ್ಯಾಸದ ಸಾಧ್ಯತೆಯೊಂದಿಗೆ ಮುಂಗಾರು ಕೇರಳ ಪ್ರವೇಶಿಸಬಹುದು ಎಂದು ಅಂದಾಜಿಸಲಾಗಿದೆ. ಕಳೆದ ವರ್ಷವೂ ಮೇ 24ರಂದು ಮುಂಗಾರು ಕೇರಳ ಪ್ರವೇಶಿಸಿತ್ತು. […]

Continue Reading

ಮೇ 26ರಿಂದ ಕೇರಳಕ್ಕೆ ಮುಂಗಾರು ಎಂಟ್ರಿ

ಸುದ್ದಿ ಸಂಗ್ರಹ ನವದೆಹಲಿಈ ವರ್ಷದ ನೈಋತ್ಯ ಮುಂಗಾರು ಮೇ 26ರಿಂದ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರತಿವರ್ಷ ಸಾಮಾನ್ಯವಾಗಿ ಜೂನ್ 1ರಂದು ಕೇರಳಕ್ಕೆ ಮುಂಗಾರು ಆಗಮಿಸುತ್ತದೆ. ಆದರೆ ಈ ಬಾರಿ 5 ದಿನ ಮುಂಚಿತವಾಗಿ ಆರಂಭವಾಗುವ ನಿರೀಕ್ಷೆ ಇದೆ. ಹವಾಮಾನ ಇಲಾಖೆಯ ಪ್ರಕಾರ, ಮೇ 26ಕ್ಕೆ ನಾಲ್ಕು ದಿನಗಳ ವ್ಯತ್ಯಾಸದ ಸಾಧ್ಯತೆಯೊಂದಿಗೆ ಮುಂಗಾರು ಕೇರಳ ಪ್ರವೇಶಿಸಬಹುದು ಎಂದು ಅಂದಾಜಿಸಲಾಗಿದೆ. ಕಳೆದ ವರ್ಷವೂ ಮೇ 24ರಂದು ಮುಂಗಾರು ಕೇರಳ ಪ್ರವೇಶಿಸಿತ್ತು. […]

Continue Reading

ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ಸುದ್ದಿ ಸಂಗ್ರಹ ನವದೆಹಲಿಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಆದೇಶ ಪ್ರಕಟಿಸಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ ಹೊರತು ಪಡಿಸಿ ಉಳಿದ ರಾಜ್ಯಗಳಲ್ಲಿ ಎಸ್‌ಐಆರ್‌ ನಡೆಯಲಿದೆ. ಈ ರಾಜ್ಯಗಳಲ್ಲಿ ಕಷ್ಟಕರವಾದ ಭೂಪ್ರದೇಶ, ಹವಾಮಾನ ಅಡಚಣೆಗಳು ಮತ್ತು ಕಾರ್ಯಾಚರಣೆಯ ಸವಾಲುಗಳು, ವಿಶೇಷವಾಗಿ ಹಿಮಪಾತ ಪೀಡಿತ ಮತ್ತು ಎತ್ತರದ ಪ್ರದೇಶಗಳಿರುವುದರಿಂದ ಎಸ್‌ಐಆರ್‌ ಪ್ರಕ್ರಿಯೆ ಮುಂದೂಡಿದೆ. ಜನಗಣತಿಯ ಎರಡನೇ ಹಂತದ […]

Continue Reading

ಮೇ 1ರಿಂದ ಎಲ್​ಪಿಜಿ ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ

ಸುದ್ದಿ ಸಂಗ್ರಹ ನವದೆಹಲಿ ಮೇ 1 ರಿಂದ ಭಾರತದಾದ್ಯಂತ ಎಲ್‌ಪಿಜಿ ಸಿಲಿಂಡರ್ ಬುಕ್ಕಿಂಗ್ ಮತ್ತು ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳು ಜಾರಿಗೆ ಬರಲಿದ್ದು, ಇದು ಲಕ್ಷಾಂತರ ಕುಟುಂಬಗಳ ಮೇಲೆ ಪ್ರಭಾವ ಬೀರಲಿದೆ. ಹೊಸ 3 ನಿಯಮ ಜಾರಿಗೆ ಬರಲಿದೆ. ಸಬ್ಸಿಡಿ ಗ್ಯಾಸ್ ಕಾಳಸಂತೆಕೋರರ ಪಾಲಾಗುವುದನ್ನು ಮತ್ತು ಅಕ್ರಮ ದಾಸ್ತಾನು ಮಾಡುವುದನ್ನು ತಡೆಯಲು ಪ್ರಮುಖ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ , ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಈ ಹೊಸ ನಿಯಮಗಳನ್ನು ಜಾರಿಗೆ ತರುತ್ತಿವೆ. ಸಿಲಿಂಡರ್ ಬುಕ್ಕಿಂಗ್ […]

Continue Reading

ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ: ದಕ್ಷಿಣ ಭಾರತದ ರಾಜ್ಯಗಳಲ್ಲಿ ಎಷ್ಟು ಸೀಟ್‌ ಹೆಚ್ಚಳ ?

ಸುದ್ದಿ ಸಂಗ್ರಹ ನವದೆಹಲಿ ಕ್ಷೇತ್ರ ಪುನರ್ ವಿಂಗಡಣೆಯ ನಂತರ ಕರ್ನಾಟಕದಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆಯು ಸದ್ಯದ 28 ರಿಂದ 42ಕ್ಕೆ ಏರಿಕೆಯಾಗಲಿದೆ ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಕ್ಷೇತ್ರ ಮರುವಿಂಗಡಣೆ ಮಸೂದೆಯಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂಬ ಆರೋಪಕ್ಕೆ ಲೋಕಸಭೆಯಲ್ಲಿ ಉತ್ತರ ನೀಡಿದ ಅವರು, ಕ್ಷೇತ್ರ ಪುನರ್ ವಿಂಗಡನೆ ಮಸೂದೆಯಿಂದಾಗಿ ಕರ್ನಾಟಕದ ಪ್ರಾತಿನಿಧ್ಯವು 14 ಸ್ಥಾನಗಳಷ್ಟು ಹೆಚ್ಚಾಗಲಿದ್ದು, ಒಟ್ಟು 42 ಸಂಸದರು ರಾಜ್ಯದಿಂದ ಆಯ್ಕೆಯಾಗಲಿದ್ದಾರೆ ಎಂದರು. ಸದ್ಯ ಲೋಕಸಭೆಯ ಒಟ್ಟು 543 ಸ್ಥಾನಗಳಲ್ಲಿ ಕರ್ನಾಟಕದ […]

Continue Reading

8,931 ದಿನಗಳ ಆಡಳಿತ: ಸಿಎಂ, ಪಿಎಂ ಆಗಿ ಮೋದಿ ಐತಿಹಾಸಿಕ ದಾಖಲೆ

ಸುದ್ದಿ ಸಂಗ್ರಹ ನವದೆಹಲಿ ದೇಶದಲ್ಲಿ ಚುನಾಯಿತ ಸರ್ಕಾರದ ಅತ್ಯಂತ ದೀರ್ಘಾವಧಿಯ ಮುಖ್ಯಸ್ಥರಾಗುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ರಾಜಕೀಯದಲ್ಲಿ ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದಾರೆ. ದಾಖಲೆಯೊಂದಿಗೆ ಪ್ರಧಾನಿ ಮೋದಿ, ಸಿಕ್ಕಿಂನ ಮುಖ್ಯಮಂತ್ರಿಯಾಗಿ 8,930 ದಿನಗಳ ಕಾಲ ಅಧಿಕಾರ ವಹಿಸಿಕೊಂಡಿದ್ದ ಪವನ್ ಕುಮಾರ್ ಚಾಮ್ಲಿಂಗ್ ಅವರನ್ನು ಹಿಂದಿಕ್ಕಿದ್ದಾರೆ. ಗುಜರಾತ್ ಸಿಎಂ ಆಗಿ ಮತ್ತು ಪ್ರಧಾನಿಯಾಗಿ ತಮ್ಮ ಒಟ್ಟು ಅಧಿಕಾರವಧಿಯಲ್ಲಿ 8,931 ದಿನ ಪೂರ್ಣಗೊಳಿಸಿದ್ದಾರೆ. ಈ ಮೈಲಿಗಲ್ಲನ್ನು ಅಪರೂಪದ ಮತ್ತು ಮಹತ್ವದ ಸಾಧನೆಯೆಂದು ಪರಿಗಣಿಸಲಾಗಿದೆ. ಅಲ್ಲದೆ ದಶಕಗಳ ನಿರಂತರ […]

Continue Reading