ಸಂಚಾರ್ ಸಾಥಿ ಆ್ಯಪ್ ವಿವಾದದ ನಡುವೆ ಹತ್ತುಪಟ್ಟು ಹೆಚ್ಚಾಯಿತು ಡೌನ್‌ಲೋಡ್

ನವದೆಹಲಿ: ಸೈಬರ್ ಸುರಕ್ಷತೆ ಮತ್ತು ಮೊಬೈಲ್ ಸುರಕ್ಷತೆಗಾಗಿ ವಿನ್ಯಾಸಗೊಳಿಸಲಾದ ಸರ್ಕಾರದ ಸಂಚಾರ್ ಸಾಥಿ ಅಪ್ಲಿಕೇಶನ್ ಬಳಕೆ ಕಡ್ಡಾಯಗೊಳಿಸಿದ ಸರ್ಕಾರದ ಆದೇಶದ ಬೆನ್ನಲ್ಲೆ ಸಾಕಷ್ಟು ವಿವಾದ ಸೃಷ್ಟಿಯಾಗಿತ್ತು. ಈ ವಿವಾದದ ನಡುವೆಯೂ ಅಪ್ಲಿಕೇಷನ್ ಡೌನಲೋಡ್‌ಗಳು ಹೆಚ್ಚಾಗಿದೆ ಎಂದು ದೂರಸಂಪರ್ಕ ಇಲಾಖೆ ಹೇಳಿದೆ. ದೂರಸಂಪರ್ಕ ಇಲಾಖೆಯ ಮೂಲಗಳ ಪ್ರಕಾರ, ಮಂಗಳವಾರ ಸುಮಾರು 6 ಲಕ್ಷ ಜನರು ಅಪ್ಲಿಕೇಶನ್ ಡೌನ್‌ಲೋಡ್ ಮಾಡಿದ್ದಾರೆ. ಇದು ಸಾಮಾನ್ಯ ದಿನದಲ್ಲಿ ಸುಮಾರು 60 ಸಾವಿರ ಆಗಿತ್ತು. ಅಂದರೆ ಒಂದೆ ದಿನದಲ್ಲಿ ಡೌನ್‌ಲೋಡ್‌ಗಳು ಹತ್ತು ಪಟ್ಟು ಹೆಚ್ಚಾಗಿದೆ. […]

Continue Reading

ಮದುವೆಯಾಗಿ ಗಂಡನ ಮನೆಗೆ ಹೋದ 20 ನಿಮಿಷಕ್ಕೆ ಪತಿಗೆ ವಿಚ್ಛೇದನ ನೀಡಿದ ನವ ವಧು

ನವದೆಹಲಿ: ವಿವಾಹವಾಗಿ ತನ್ನ ಪತಿಯ ಮನೆಗೆ ತಲುಪಿದ ಕೇವಲ 20 ನಿಮಿಷಗಳಲ್ಲೆ ವಧು ವಿಚ್ಛೇದನ ಕೇಳಿರುವ ವಿಚಿತ್ರ ಘಟನೆಯೊಂದು ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ. ನವೆಂಬರ್ 25 ರಂದು ಭಾಲ್ವಾನಿಯ ವಿಶಾಲ್ ಮಧೇಶಿಯಾ ಮತ್ತು ಸಲೇಂಪುರದ ಪೂಜಾ ಅವರ ಮದುವೆ ನಡೆದಿತ್ತು. ಸಂಜೆ 7 ಗಂಟೆಗೆ ವರನ ಮೆರವಣಿಗೆ ವಧುವಿನ ಮನೆ ತಲುಪಿ, ರಾತ್ರಿಯಿಡಿ ವಿವಾಹದ ಎಲ್ಲಾ ಆಚರಣೆಗಳು ಮುಗಿದಿದ್ದವು. ನಂತರ ವಧು ಪೂಜಾ ಗಂಡನ ಮನೆ ಹೋಗಿದ್ದಾಳೆ. ಆದರೆ ಗಂಡನ ಮನೆಯೊಳಗೆ ಕಾಲಿಟ್ಟ 20 ನಿಮಿಷಗಳಲ್ಲೆ […]

Continue Reading

ಇನ್ನುಮುಂದೆ ಮೊಬೈಲ್’ನಲ್ಲಿ ಸಕ್ರಿಯ ಸಿಮ್‌ ಇದ್ದರೆ ಮಾತ್ರ ವಾಟ್ಸಪ್‌ ವರ್ಕ್‌ ಆಗುತ್ತೆ

ನವದೆಹಲಿ: ಇನ್ನುಮುಂದೆ ಮೊಬೈಲ್’ನಲ್ಲಿ ಸಕ್ರಿಯವಾಗಿರುವ ಸಿಮ್‌ ಇದ್ದರೆ ಮಾತ್ರ ಮೆಸೇಜಿಂಗ್‌ ಅಪ್ಲಿಕೇಶನ್‌ಗಳು ತೆರೆದುಕೊಳ್ಳಲಿದೆ. ಬಳಕೆದಾರರ ಮೊಬೈಲ್‌ನಲ್ಲಿ ಸಕ್ರಿಯವಾಗಿರುವ ಸಿಮ್‌ ಇದ್ದಾಗ ಮಾತ್ರ ವಾಟ್ಸಪ್‌ ಸೇರಿದಂತೆ ಆ್ಯಪ್‌ ಆಧಾರಿತ ಸಂವಹನ ಸೇವೆ ಕಾರ್ಯನಿರ್ವಹಿಸಬೇಕೆಂದು ಕೇಂದ್ರ ಸರ್ಕಾರ ಸೂಚಿಸಿದೆ. ಈ ಕುರಿತಂತೆ 120 ದಿನಗಳೊಳಗಾಗಿ ದೂರಸಂಪರ್ಕ ಇಲಾಖೆಗೆ (DoT) ಅನುಪಾಲನಾ ವರದಿಯನ್ನು ಸಲ್ಲಿಸಬೇಕು. ವರದಿ ಸಲ್ಲಿಸಲು ವಿಫಲವಾದಲ್ಲಿ ದೂರಸಂಪರ್ಕ ಕಾಯ್ದೆ 2023, ಟೆಲಿಕಾಂ ಸೈಬರ್ ಭದ್ರತಾ ನಿಯಮ ಮತ್ತು ಇತರ ಕಾಯ್ದೆಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಆ್ಯಪ್‌ ಆಧಾರಿತ […]

Continue Reading

ಇನ್ಮುಂದೆ ನಮೋ ಭಾರತ್ ರೈಲಲ್ಲಿ ಪಾರ್ಟಿ, ಮದುವೆ ಫೋಟೋಶೂಟ್ ಮಾಡಬಹುದು

ನವದೆಹಲಿ: ಇನ್ಮುಂದೆ ನಮೋ ಭಾರತ್ ರೈಲು ಹಾಗೂ ನಿಲ್ದಾಣದಲ್ಲಿ ಪಾರ್ಟಿ, ಪ್ರಿ-ವೆಡ್ಡಿಂಗ್ ಶೂಟ್ ಮಾಡಬಹುದು. ನಿಗದಿಪಡಿಸಿದ ಬಾಡಿಗೆ ಕೊಟ್ಟರೆ ಖಾಸಗಿ ಕಾರ್ಯಕ್ರಮ ಆಯೋಜಿಸಬಹುದು ಎಂದು ತಿಳಿಸಿದೆ. ಈ ಕುರಿತು NCRTC ಮಾಹಿತಿ ನೀಡಿದ್ದು, ನಮೋ ಭಾರತ್ ರೈಲು ಹಾಗೂ ನಿಲ್ದಾಣಗಳಲ್ಲಿ ಫೋಟೋಶೂಟ್ ಸೇರಿದಂತೆ ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ನೀಡಿದೆ. ಈ ಮೂಲಕ ಜನರು ತಮ್ಮ ವಿಶೇಷ ದಿನಗಳನ್ನು ರೈಲಿನಲ್ಲಿ ಆಚರಿಸಬಹುದಾಗಿದೆ. ಈ ನಿರ್ಧಾರದಿಂದ ಹೊಸ ಆದಾಯ ಸೃಷ್ಟಿಯಾಗಲಿದ್ದು, ಜನರಿಗೆ ವಿಭಿನ್ನ ಅನುಭವ ನೀಡಲಿದೆ. ಸದ್ಯ ಈ […]

Continue Reading

ಬೈಜು ರವೀಂದ್ರನ್‌ಗೆ 9 ಸಾವಿರ ಕೋಟಿ ದಂಡ ವಿಧಿಸಿದ ಅಮೇರಿಕ ಕೋರ್ಟ್‌

ನವದೆಹಲಿ: ಸಾಲದ ಸುಳಿಯಲ್ಲಿ ಸಿಲುಕಿರುವ ಎಜುಟೆಕ್‌ ಕಂಪನಿ ಬೈಜೂಸ್‌ನ ಸಂಸ್ಥಾಪಕ ಬೈಜು ರವೀಂದ್ರನ್ ಅವರಿಗೆ ಅಮೇರಿಕದ ನ್ಯಾಯಾಲಯ 1 ಬಿಲಿಯನ್ ಡಾಲರ್‌ಗಳಿಗಿಂತ (9,000 ಕೋಟಿ) ಹೆಚ್ಚು ದಂಡ ವಿಧಿಸಿದೆ. ಬೈಜೂಸ್ ಆಲ್ಫಾ ಮತ್ತು ಅಮೆರಿಕ ಮೂಲದ ಸಾಲದಾತ ಗ್ಲಾಸ್ ಟ್ರಸ್ಟ್ ಎಲ್‌ಎಲ್‌ಸಿ ಸಲ್ಲಿಸಿದ ಅರ್ಜಿಯ ನಂತರ ಡೆಲವೇರ್ ದಿವಾಳಿತನ ನ್ಯಾಯಾಲಯ ಈ ನಿರ್ಧಾರ ಹೊರಡಿಸಿದೆ. ಬೈಜೂಸ್ ಆಲ್ಫಾ ಒಂದು ಅಮೇರಿಕನ್ ಕಂಪನಿಯಾಗಿದ್ದು, ಭಾರತೀಯ ಎಜುಟೆಕ್‌ ದೈತ್ಯ ಬೈಜೂಸ್‌ನ ಅಂಗಸಂಸ್ಥೆಯಾಗಿದೆ. ಇದನ್ನು 2021 ರಲ್ಲಿ ಡೆಲವೇರ್ (ಯುಎಸ್‌ಎ) ನಲ್ಲಿ […]

Continue Reading

TwitterDown – ಜಗತ್ತಿನಾದ್ಯಂತ ಬಳಕೆದಾರರಿಗೆ ಸಮಸ್ಯೆ

ವಾಷಿಂಗ್ಟನ್‌/ನವದೆಹಲಿ: ಭಾರತ ಮತ್ತು ವಿಶ್ವದ ಇತರ ಭಾಗಗಳಲ್ಲಿ ಪ್ರಭಾವಶಾಲಿ ಸೋಷಿಯಲ್‌ ಮೀಡಿಯಾ ವೇದಿಕೆಯಾದ ಎಕ್ಸ್‌ ಖಾತೆ ಸುಮಾರು ಕಳೆದ 1 ಗಂಟೆಯಿಂದ ಸ್ಥಗಿತಗೊಂಡಿದೆ. ಬಳಕೆದಾರರು ಪ್ಲಾಟ್‌ಫಾರ್ಮ್‌ನಲ್ಲಿ ಮಾಡಿದ ಪೋಸ್ಟ್‌ಗಳನ್ನು ನೋಡುವುದಕ್ಕಾಗಲಿ ಅಥವಾ ಹೊಸ ಟ್ವೀಟ್‌ಗಳನ್ನು ಅಪ್‌ಲೋಡ್ ಮಾಡುವುದಕ್ಕಾಗಲಿ ಸಾಧ್ಯವಾಗುತ್ತಿಲ್ಲ. ಯಾರ ಖಾತೆಯನ್ನ ಸರ್ಚ್‌ ಮಾಡಿದ್ರೂ ರೀಟ್ರೈ (ಇಂಗ್ಲಿಷ್‌ನಲ್ಲಿ) ಎಂದೆ ತೋರಿಸುತ್ತಿದೆ. ಟ್ವಿಟರ್‌ ಎಂದು ಕರೆಯಲಾಗುತ್ತಿದ್ದ ʻಎಕ್ಸ್‌ʼ ಅಷ್ಟೇ ಅಲ್ಲದೆ ಚಾಟ್‌ ಜಿಪಿಟಿಯಲ್ಲೂ ಜಾಗತಿಕವಾಗಿ ಸಮಸ್ಯೆ ಕಾಣಿಸಿಕೊಂಡಿದೆ. ಡೌನ್ ಡಿಟೆಕ್ಟರ್ (Downdetector) ಟ್ರ್ಯಾಕಿಂಗ್ ವೆಬ್‌ಸೈಟ್‌‌ ಸಹ ಸ್ಥಗಿತಗೊಂಡಿದೆ. ಕ್ಲೌಡ್‌ಫ್ಲೇರ್‌ನಲ್ಲಿ […]

Continue Reading

ಚುನಾವಣಾ ಚಾಣಕ್ಯ ಅಮಿತ್‌ ಶಾ ಭವಿಷ್ಯ ಮತ್ತೆ ನಿಜವಾಯಿತು

ನವದೆಹಲಿ: ಚುನಾವಣಾ ಚಾಣಕ್ಯ ಅಮಿತ್‌ ಶಾ ಭವಿಷ್ಯ ಮತ್ತೆ ನಿಜವಾಗಿದ್ದು ಎನ್‌ಡಿಎ ಮೈತ್ರಿಕೂಟ 180ಕ್ಕೂ ಹೆಚ್ಚು ಸ್ಥಾನಗಳು ಗೆಲ್ಲುವತ್ತ ಮುಖ ಮಾಡಿದೆ. ನ.8 ರಂದು ಪೂರ್ಣಿಯಾದಲ್ಲಿ ಮಾತನಾಡಿದ ಅಮಿತ್‌ ಶಾ, ಒಂದು ಕಡೆ ಚುದುರಿದ ಘಟ್‌ಬಂಧನ್‌ ಇದ್ದರೆ ಮತ್ತೊಂದು ಕಡೆ ಐದು ಪಾಂಡವರಂತಿರುವ ಎನ್‌ಡಿಎ ಇದೆ. ಈಗಾಗಲೇ ಬಿಹಾರ ಅರ್ಧದಷ್ಟು ಜನ ಮತ ಚಲಾಯಿಸಿದ್ದು ಎನ್‌ಡಿಎ 160ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಸರ್ಕಾರ ರಚನೆ ಮಾಡಲಿದೆ ಎಂದು ಹೇಳಿದ್ದರು. ಇದಕ್ಕೂ ಮೊದಲು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ […]

Continue Reading

ಬಂಧಿತ ಉಗ್ರ, ವೈದ್ಯ ಆದಿಲ್‌ಗೆ ಸಿಗುತ್ತಿತ್ತು ತಿಂಗಳಿಗೆ 5 ಲಕ್ಷ ರೂ. ಸಂಬಳ

ನವದೆಹಲಿ: ಶ್ರೀನಗರದಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯನ್ನು ಬೆಂಬಲಿಸುವ ಪೋಸ್ಟರ್‌ಗಳನ್ನು ಹಾಕಿ ಬಂಧನಕ್ಕೆ ಒಳಗಾಗಿ ಫರಿದಾಬಾದ್‌ ಟೆರರ್‌ ಗ್ಯಾಂಗ್‌ ಬಗ್ಗೆ ಬಾಯ್ಬಿಟ್ಟ ಕಾಶ್ಮೀರಿ ವೈದ್ಯ ಆದಿಲ್ ಅಹ್ಮದ್ ರಾಥರ್‌ಗೆ ತಿಂಗಳಿಗೆ 5 ಲಕ್ಷ ರೂ. ಸಂಬಳ ಸಿಗುತ್ತಿತ್ತು. ದಕ್ಷಿಣ ಕಾಶ್ಮೀರದ ಖಾಜಿಗುಂಡ್ ನಿವಾಸಿಯಾಗಿರುವ ಆದಿಲ್ ಅಹ್ಮದ್ ರಾಥರ್ ಅಕ್ಟೋಬರ್ 2024 ರವರೆಗೆ ಅನಂತನಾಗ್‌ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ (ಜಿಎಂಸಿ) ಹಿರಿಯ ರೆಸಿಡೆಂಟ್‌ ಆಗಿ ಕೆಲಸ ಮಾಡಿದ್ದ. ಬಳಿಕ ಈ ವರ್ಷದ ಮಾರ್ಚ್‌ನಲ್ಲಿ ಉತ್ತರ ಪ್ರದೇಶದ ಸಹರಾನ್‌ಪುರಕ್ಕೆ ತೆರಳಿದ್ದನು. ಮೊದಲು […]

Continue Reading

98ನೇ ವಸಂತಕ್ಕೆ ಕಾಲಿಟ್ಟ ಎಲ್‌.ಕೆ ಅಡ್ವಾಣಿಗೆ ಮೋದಿ ಶುಭ ಹಾರೈಕೆ

ನವದೆಹಲಿ: 98ನೇ ವಸಂತಕ್ಕೆ ಕಾಲಿಟ್ಟ ಮಾಜಿ ಉಪ ಪ್ರಧಾನಿ ಎಲ್.ಕೆ ಅಡ್ವಾಣಿ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಭ ಹಾರೈಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಅಡ್ವಾಣಿಯವರು ಒಬ್ಬ ಮೇದಾವಿ ರಾಜಕಾರಣಿಯಾಗಿದ್ದಾರೆ. ಅವರ ಜೀವನ ಭಾರತದ ಪ್ರಗತಿಗಾಗಿ ಸಮರ್ಪಿತವಾಗಿದೆ. ದೇಶಕ್ಕಾಗಿ ಅವರು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ ಎಂದು ಅವರ ಸೇವೆಯನ್ನು ಸ್ಮರಿಸಿದ್ದಾರೆ. ಅವರ ಕೊಡುಗೆಗಳು ಭಾರತದ ಪ್ರಜಾಪ್ರಭುತ್ವ ಮತ್ತು ಸಾಂಸ್ಕೃತಿಕ ಕೇತ್ರದಲ್ಲಿ ಅಳಿಸಲಾಗದ ಗುರುತನ್ನು ಉಳಿಸಿವೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಪ್ರಧಾನಿಗಳು […]

Continue Reading

ಕನ್ನಡಿಗರಿಗೆ ಕನ್ನಡದಲ್ಲೆ ರಾಜ್ಯೋತ್ಸವ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಎಕ್ಸ್‌ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು ನಾವು ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೆವೆ ಎಂದು ತಿಳಿಸಿದ್ದಾರೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೆವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದ ಜನರು ಸಂತೋಷ ಮತ್ತು ಆರೋಗ್ಯದಿಂದ […]

Continue Reading