ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಅವಮಾನ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ಸುದ್ದಿ ಸಂಗ್ರಹ ಕಾಳಗಿಪಟ್ಟಣದ ಕಲಬುರಗಿ-ಚಿಂಚೋಳಿ ರಾಜ್ಯ ಹೆದ್ದಾರಿ ಸಂಪರ್ಕದ ಸಿಸಿರಸ್ತೆ ವಿಭಜಕದ ಸ್ಥಳದಲ್ಲಿ ಅಳವಡಿಸಿರುವ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರದ ಫಲಕವನ್ನು ಹರಿದುಹಾಕಿ ಅವಮಾನಿಸಿರುವ ಕಿಡಿಗೇಡಿಗಳನ್ನು ಬಂಧಿಸಿ ಕಾನೂನುಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗುರುವಾರ ಕೋಲಿ ಸಮಾಜದವರು ಪ್ರತಿಭಟನೆ ನಡೆಸಿದರು. ಕಲಬುರಗಿ-ಚಿಂಚೋಳಿ ರಾಜ್ಯ ಹೆದ್ದಾರಿ ಸಂಚಾರ ತಡೆದು ಎರಡು ಗಂಟೆಗೂ ಅಧಿಕ ಕಾಲ ಪ್ರತಿಭಟಿಸಿದರು. ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ‘ಕುಲಗುರುವಿಗೆ ಅವಮಾನ ಮಾಡಿರುವ ಘಟನೆಯು ಕೋಲಿ ಸಮಾಜದ ಜನರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ. ಸಮಾಜದಲ್ಲಿ ಅಶಾಂತಿ, […]
Continue Reading