ಜೂನ್ 21ರಂದು ಅಂತರರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಂದ ಸೈಕಲ್ ರ‍್ಯಾಲಿ

ಸುದ್ದಿ ಸಂಗ್ರಹ ವಾಡಿಪಟ್ಟಣದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಕುಂದನೂರ ವೃತ್ತದಿಂದ ಶ್ರೀನಿವಾಸ ಗುಡಿ ವೃತ್ತ, ಬಸವೇಶ್ವರ ವೃತ್ತ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದ ಮೂಲಕ ಆಝಾದ್ ವೃತ್ತದವರೆಗೆ ಪಟ್ಟಣದ ವಿವಿಧ ಪ್ರೌಢ ಶಾಲೆಯ ನೂರಾರು ವಿದ್ಯಾರ್ಥಿಗಳಿಂದ ಸೈಕಲ್‌ ಜಾಥಾ ನಡೆಯಿತು. ಪತಂಜಲಿ ಯೋಗ ಶಿಕ್ಷಕ ವೀರಣ್ಣ ಯಾರಿ ಮಾತನಾಡಿ, 12ನೇ ಅಂತರರಾಷ್ಟ್ರೀಯ ಯೋಗ ದಿನದ ಘೋಷ ವಾಕ್ಯವಾದ ‘ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಎಂಬ ಸಂದೇಶದ ಮಹತ್ವ ಸಾರುವುದು ಸೈಕಲ್‌ ಜಾಥಾದ ಉದ್ದೇಶವಾಗಿದೆ ಎಂದರು. ದೈಹಿಕ […]

Continue Reading

ವಾಡಿ: 16 ವರ್ಷದ ಬಾಲಕಿಯ ಮದುವೆ ಯತ್ನಕ್ಕೆ ತಡೆ

ಸುದ್ದಿ ಸಂಗ್ರಹ ವಾಡಿತಾಯಿಯ ಅನಾರೋಗ್ಯದ ಕಾರಣಕ್ಕೆ ತರಾತುರಿಯಲ್ಲಿ 16 ವರ್ಷದ ಬಾಲಕಿಗೆ ಮದುವೆ ಮಾಡಲು ಸಿದ್ಧತೆ ನಡೆಸಿದ್ದರ ಕುರಿತು ಮಕ್ಕಳ ಸಹಾಯವಾಣಿಗೆ ಬಂದ ಕರೆಯನ್ನು ಆಧರಿಸಿ ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಆ ಮದುವೆಯನ್ನು ಶುಕ್ರವಾರ ರದ್ದು ಮಾಡಿದ್ದಾರೆ. ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯ ಮನೆ ಇದೆ. ಸೇಡಂ ತಾಲೂಕಿನ ವಜ್ರಗಾಂವ ಗ್ರಾಮದಲ್ಲಿ ಅದೆ ಗ್ರಾಮದ ಯುವಕನೊಂದಿಗೆ ಬಾಲಕಿಯ ಮದುವೆ ಜೂನ್ 20ರಂದು ನಿಶ್ಚಯವಾಗಿತ್ತು. ಶುಕ್ರವಾರ ಬಾಲಕಿಯನ್ನು ಉಡಿ ತುಂಬಿ ವರನ ಮನೆಗೆ ಕಳುಹಿಸಿ ಕೊಡುವ ಕಾರ್ಯಕ್ರಮ […]

Continue Reading

ವಾಡಿಯಲ್ಲಿ ಜೂನ್ 21ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಸುದ್ದಿ ಸಂಗ್ರಹ ವಾಡಿ ಪುರಸಭೆ, ಬೆಳಗಿನ ಬಳಗ ಮತ್ತು ಪತಂಜಲಿ ಯೋಗ ಸಮಿತಿಯ ಸಹಯೋಗದಲ್ಲಿ ಜೂನ್ 21ರಂದು ಮುನಿಯಪ್ಪ ದಾಸ ಶಾಲಾ ಆವರಣದಲ್ಲಿ ಬೆಳಿಗ್ಗೆ 6.30ರಿಂದ 7.30ರ ವರೆಗೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಬೆಳಗಿನ ಬಳಗದ ಸದಸ್ಯ ಬಸವರಾಜ ಕೇಶ್ವಾರ ಹೇಳಿದರು. ‘ಆರೋಗ್ಯಕರ ಜೀವನಕ್ಕಾಗಿ, ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಎನ್ನುವ ಘೋಷವಾಕ್ಯದೊಂದಿಗೆ 12ನೇ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಗುವುದು’ ಎಂದು ತಿಳಿಸಿದರು.‌ ಯೋಗ ಶಿಕ್ಷಕರಾದ ವೀರಣ್ಣ ಯಾರಿ, ಮಲ್ಲಯ್ಯ ಸ್ವಾಮಿ ಅವರಾದಿ ಅವರು ಯೋಗಾಭ್ಯಾಸ […]

Continue Reading

ತಾಲೂಕು ಆಸ್ಪತ್ರೆಯಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಕರವೇ ಮುಖಂಡರಿಂದ ಮನವಿ

ಸುದ್ದಿ ಸಂಗ್ರಹ ಚಿತ್ತಾಪುರ ತಾಲೂಕು ಆಸ್ಪತ್ರೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯ ಸೇರಿದಂತೆ ಆಸ್ಪತ್ರೆಯಲ್ಲಿನ ಕುಂದು ಕೊರತೆಯ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣಗೌಡ ಬಣ) ತಾಲೂಕು ಅಧ್ಯಕ್ಷ ಚಂದರ್ ಚವ್ಹಾಣ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ಇಕ್ರಮುಲ್ಲಾ ಷರೀಫ್ ಅವರಿಗೆ ಮನವಿ ಸಲ್ಲಿಸಿದರು. ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ಇಕ್ರಮುಲ್ಲಾ ಷರೀಫ್ ಅವರು ಗುರುವಾರ ಭೇಟಿ ನೀಡಿದ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷರು ಮತ್ತು ಕಾರ್ಯಕರ್ತರು ಆಸ್ಪತ್ರೆಯಲ್ಲಿನ ಮೂಲಭೂತ ಸೌಕರ್ಯ ಮತ್ತು ನೀರಿನ […]

Continue Reading

ಜೂನ್ 20 ರಂದು ವಿಶ್ವಯೋಗ ದಿನಾಚರಣೆ ನಿಮಿತ್ತ ಸೈಕಲ್‌ ಜಾಥಾ: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂನ್ 20ರಂದು ಬೆಳಗ್ಗೆ 7:30ಕ್ಕೆ ಪಟ್ಟಣದ ಕುಂದನೂರ ವೃತ್ತದಿಂದ ಶ್ರೀನಿವಾಸ ಗುಡಿ ವೃತ್ತ, ಬಸವೇಶ್ವರ ವೃತ್ತ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದ ಮೂಲಕ ಆಝಾದ್ ವೃತ್ತದ ವರೆಗೆ ಪಟ್ಟಣದ ಪುರಸಭೆ, ಬೆಳಗಿನ ಬಳಗ ಮತ್ತು ಪತಂಜಲಿ ಯೋಗ ಸಮಿತಿಯಿಂದ ಸೈಕಲ್‌ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪತಂಜಲಿ ಯೋಗ ಶಿಕ್ಷಕ ವೀರಣ್ಣ ಯಾರಿ ತಿಳಿಸಿದ್ದಾರೆ. ಪಟ್ಟಣದ ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ಯೋಗಾಸಕ್ತರು ಹೆಚ್ಚಿನ ಪ್ರಮಾಣದಲ್ಲಿ […]

Continue Reading

ಸುದೀರ್ಘ ಅವಧಿ ಪ್ರಧಾನಿಯಾಗಿ ನರೇಂದ್ರ ಮೋದಿ ಹೊಸ ದಾಖಲೆ: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೆ ಅತ್ಯಂತ ಸುದೀರ್ಘ ಅವಧಿಗೆ ಸತತವಾಗಿ ಆಯ್ಕೆಯಾದ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಭಾಜನರಾದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಪಟ್ಟಣದ ಶಕ್ತಿ ಆಂಜನೇಯ ದೇವಸ್ಥಾನದಲ್ಲಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಮೋದಿ ಅವರ ಕಟೌಟ್’ಗೆ ಹಾಲಿನ ಅಭಿಷೇಕ ಮಾಡಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹತ್ವದ ರಾಜಕೀಯ ಮೈಲಿಗಲ್ಲು ತಲುಪಿದ್ದಾರೆ ಎಂದರು. […]

Continue Reading

ವಾಡಿ: ಮೂಲಭೂತ ಸೌಕರ್ಯ ಒದಗಿಸಲು ಬಿಜೆಪಿ ಒತ್ತಾಯ

ಸುದ್ದಿ ಸಂಗ್ರಹ ವಾಡಿಪಟ್ಟಣದ ನಿವಾಸಿಗಳಿಗೆ ರಸ್ತೆ ಸೇರಿದಂತೆ ಇತರ ಮೂಲ ಸೌಲಭ್ಯಗಳನ್ನು ಒದಗಿಸಕೊಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿಮನೋಜಕುಮಾರ ಗುರಿಕಾರ ಅವರಿಗೆ‌ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಒತ್ತಾಯಿಸಿದರು. ಪಟ್ಟಣದಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ರಸ್ತೆ, ಚರಂಡಿ ನೀರು ತಗ್ಗು ಪ್ರದೇಶಗಳಲ್ಲಿ, ಅಂಗಡಿಗಳಲ್ಲಿ ಮತ್ತು ಮನೆಗಳಲ್ಲಿ ನುಗ್ಗುವುದು ಸಾಮಾನ್ಯವಾಗಿದೆ ಎಂದರು. ಪಟ್ಟಣದ ಪ್ರಮುಖ ರಸ್ತೆಗಳಾದ ಯಾದಗಿರಿ ರಸ್ತೆ, ರಾವೂರ ರಸ್ತೆ, ರೈಲ್ವೆ ಸ್ಟೇಷನ್ ರಸ್ತೆ ಸೇರಿದಂತೆ ವಿವಿಧೆಡೆ ರಸ್ತೆ, ಚರಂಡಿ ಮೇಲೆಯೇ ವ್ಯಾಪಾರ ವಹಿವಾಟು ನಡೆಸಲಾಗುತ್ತಿದೆ. ಇದರಿಂದ ಮಳೆಗಾಲದಲ್ಲಿ […]

Continue Reading

ಕಾಳಗಿ: 4.8 ಲಕ್ಷ ಮೌಲ್ಯದ 15 ಮೊಬೈಲ್‌ ಪತ್ತೆ ಹಚ್ಚಿದ ಪೊಲೀಸರು

ಸುದ್ದಿ ಸಂಗ್ರಹ ಕಾಳಗಿಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊಬೈಲ್ ಕಳೆದುಕೊಂಡು ಪ್ರಕರಣ ದಾಖಲಿಸಿದ್ದ ಅನೇಕ ವ್ಯಕ್ತಿಗಳಿಗೆ ಪೊಲೀಸರು ಮೊಬೈಲ್ ಹುಡುಕಿ ಕೊಟ್ಟಿದ್ದಾರೆ. ಸಿಇಐಆರ್ ಪೋರ್ಟಲ್ ಮೂಲಕ ಒಟ್ಟು 4.8 ಲಕ್ಷ ಮೊತ್ತದ 15 ಮೊಬೈಲ್‌ಗಳು ಪತ್ತೆ ಹಚ್ಚಿದ್ದಾರೆ. ವಾರಸುದಾರರಿಗೆ ಸೋಮವಾರ ಠಾಣೆಗೆ ಕರೆಯಿಸಿದ ಪೊಲೀಸರು ಮೊಬೈಲ್ ನೀಡಿದ್ದಾರೆ. ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ, ಕಾಳಗಿ ಸಿಪಿಐ ಜಗದೇವಪ್ಪ ಪಾಳಾ, ಪಿಎಸ್ಐ ತಿಮ್ಮಯ್ಯ ಬಿ.ಕೆ, ಹೆಡ್‌ಕಾನಸ್ಟೆಬಲ್‌ ಶ್ರೀಶೈಲ ಗೋನಾಕಿ, ಕಾನ್‌ಸ್ಟೆಬಲ್‌ ಮಾರುತಿ ರೆಡ್ಡಿ ಇದ್ದರು.

Continue Reading

ಕಾಳಗಿ: ರಿಯಾಯಿತಿ ದರದಲ್ಲಿ ಮುಂಗಾರು ಹಂಗಾಮಿನ ಬೀಜ ವಿತರಣೆಗೆ ಚಾಲನೆ

ಸುದ್ದಿ ಸಂಗ್ರಹ ಕಾಳಗಿರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರಿಗೆ ರಿಯಾಯಿತಿ ದರದಲ್ಲಿ ಮುಂಗಾರು ಹಂಗಾಮಿನ ಬೀಜ ವಿತರಣೆಗೆ ಚಾಲನೆ ನೀಡಲಾಯಿತು. ಚಿತ್ತಾಪುರ ಸಹಾಯಕ ಕೃಷಿ ನಿರ್ದೇಶಕ ಸಂಜೀವಕುಮಾರ ಮಾನಕರ್ ಬೀಜ ವಿತರಿಸಿ ಮಾತನಾಡಿದ ಅವರು, ಮುಂಗಾರು ಹಂಗಾಮಿನಲ್ಲಿ ತಾಲೂಕಿನ 71ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಕಾಳಗಿ, ಕೋಡ್ಲಿ ಮತ್ತು ಮಾಡಬೂಳ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಬಿತ್ತನೆಗೆ ಬೇಕಾಗುವಷ್ಟು ಸೋಯಾ, ತೊಗರಿ, ಹೆಸರು, ಉದ್ದು ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ರೈತರು ಅಗತ್ಯ […]

Continue Reading

ಕಾಲುದಾರಿ ತೆರವು, ಸಂಘಟಿತ ಹೋರಾಟಕ್ಕೆ ಜಯ: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿರೈಲು ನಿಲ್ದಾಣ ಪ್ರಾರಂಭದಿಂದ ಇದ್ದ ಕಾಲುದಾರಿ ಏಕಾಏಕಿ ರೈಲ್ವೆ ಸಿಬ್ಬಂದಿ ತಡೆಯೊಡ್ಡಿದರು, ಇದಕ್ಕೆ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ ಪರಿಣಾಮ ತಕ್ಷಣ ತಡೆಯೊಡ್ಡಿದ್ದು ತೆರವುಗೊಳಿಸಿದ ಸಿಬ್ಬಂದಿ ಸಂಚಾರಕ್ಕೆ ಅನುವು ಮಾಡಿದರು. ಇದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮತ್ತು ಸಂಘಟಿತ ಹೋರಾಟಗಾರರ ಜಯವಾಗಿದೆ ಎಂದು ವೀರಣ್ಣ ಯಾರಿ ಹರ್ಷ ವ್ಯಕ್ತಪಡಿಸಿದರು. ತಡೆ ಮಾಡಿರುವ ಬಗ್ಗೆ ರೈಲು ನಿಲ್ದಾಣದ ಪ್ರಭಂದಕರಿಗೆ, ಮುಂಬಯಿ ಹಾಗೂ ಸೊಲ್ಲಾಪುರ ಕೇಂದ್ರ ವಿಭಾಗಕ್ಕೆ ಮತ್ತು ಕೇಂದ್ರ ರೈಲ್ವೆ ಸಚಿವ ವಿ ಸೋಮಣ್ಣ […]

Continue Reading