ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್‌ ಆಯ್ಕೆ: ವಾಡಿಯಲ್ಲಿ ಬಿಜೆಪಿ ಸಂಭ್ರಮ

ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ನವದೆಹಲಿಯಲ್ಲಿ ಮಂಗಳವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆ, ಮುಖಂಡರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು, ಪ್ರಧಾನಿ ಮೋದಿ ಅವರು ಅಧ್ಯಕ್ಷ ನಿತಿನ್ ನಬಿನ್ ಪರ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. ಸ್ಥಳೀಯ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ದೇಶ ಸೇವೆ ಧ್ಯೇಯದೊಂದಿಗೆ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು, ಐದು ಬಾರಿ ಶಾಸಕರಾಗಿ, ಬಿಹಾರದ ಸಚಿವರಾಗಿ ಸೇವೆ ಸಲ್ಲಿಸಿರುವ […]

Continue Reading

ವಾಡಿ: ಸಂಕ್ರಾಂತಿ ಸ್ನಾನಕ್ಕೆ 10 ಸಾವಿರ ಉಚಿತ ಕಡಲೆ ಹಿಟ್ಟಿನ ಪ್ಯಾಕ್ ವಿತರಣೆ

ಸುದ್ದಿ ಸಂಗ್ರಹ ವಾಡಿಮಕರ ಸಂಕ್ರಾಂತಿಯಂದು ಸಾವಿರಾರು ಜನ ಪಟ್ಟಣದ ಪಕ್ಕದ ಭೀಮಾ-ಕಾಗಿಣ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಆಗಮಿಸುತ್ತಾರೆ. ಇವರಿಗೆ ನದಿಯ ಪಾವಿತ್ರೃ ಮತ್ತು ಶುದ್ಧತೆ ಬಗ್ಗೆ ಅರಿವು ಮೂಡಿಸಲು ವಿಷಮುಕ್ತ ಪುಣ್ಯಸ್ನಾನ ಅಭಿಯಾನವನ್ನು ವರದಶ್ರೀ ಫೌಂಡೇಶನ್ ಸಂಸ್ಥೆ ಹಮ್ಮಿಕೊಂಡಿದೆ‌ ಎಂದು ಸಂಸ್ಥೆಯ ಸದಸ್ಯ ವೀರಣ್ಣ ಯಾರಿ ಹೇಳಿದ್ದಾರೆ. ಬುಧವಾರ ಮತ್ತು ಗುರುವಾರ ಕುಂದನೂರಿನ ಸಂಗಮೇಶ್ವರ ದೇವಸ್ಥಾನದಲ್ಲಿನ ಸಂಗಮದಲ್ಲಿ ವಿಷಮುಕ್ತ ಪುಣ್ಯಸ್ನಾನ ಅಭಿಯಾನ ಹಮ್ಮಿಕೊಳ್ಳಲಾಗಿದೆ, ನದಿ ನೀರಿಗೆ ಶಾಂಪೂ, ಸಾಬೂನು ಸೇರಿದಂತೆ ಮುಂತಾದ ರಾಸಾಯನಿಕ ಸೇರಿಸದೆ ಪುಣ್ಯಸ್ನಾನ ಮಾಡುವ […]

Continue Reading

ವಾಡಿ: ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ

ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಛೇರಿಯಲ್ಲಿ ಸ್ವಾಮಿ ವಿವೇಕಾನಂದರ 163ನೇ ಜನ್ಮದಿನಾಚರಣೆ ಅಂಗವಾಗಿ ವಿಶೇಷ ಧ್ಯಾನ, ಪ್ರಾಣಾಯಾಮ ಹಮ್ಮಿಕೊಳ್ಳಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಸ್ವಾಮಿ ವಿವೇಕಾನಂದರ ಈ ಪವಿತ್ರ ದಿನದಂದು ಅವರನ್ನು ಧ್ಯಾನಿಸಿ ಅವರ ಜಯಂತಿ ಆಚರಿಸುತ್ತಿರುವುದು ನಮ್ಮ ಆತ್ಮ ಉನ್ನತಿಗೆ ಸ್ಪೂರ್ತಿ ಸಿಕ್ಕಂತೆ ಎಂದರು. ಧ್ಯಾನವನ್ನು ಆಧ್ಯಾತ್ಮಿಕ ಬೆಳವಣಿಗೆ, ಮಾನಸಿಕ ಶಕ್ತಿ ಮತ್ತು ಆತ್ಮಸಾಕ್ಷಾತ್ಕಾರದ ಪ್ರಮುಖ ಸಾಧನವೆಂದು ಪರಿಗಣಿಸಿದರು, ಏಕಾಗ್ರತೆಯೆ ಎಲ್ಲಾ ಜ್ಞಾನದ ಸಾರ ಎಂದು ಹೇಳುತ್ತಾ, ಧ್ಯಾನವು ಏಕಾಗ್ರತೆ ಹೆಚ್ಚಿಸುತ್ತದೆ ಮತ್ತು […]

Continue Reading

ವಾಡಿ: ವಾರದಿಂದ ನೀರಿಲ್ಲದೆ ಜನರ ಪರದಾಟ

ಸುದ್ದಿ ಸಂಗ್ರಹ ವಾಡಿಪಟ್ಟಣದ ಕೆಲವು ವಾರ್ಡ್ ಗಳಲ್ಲಿ ಸುಮಾರು 10 ದಿನಗಳಿಂದ ನೀರಿಲ್ಲದೆ ಜನರು ಹನಿ ನೀರಿಗಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮನ್ನು ಯಾಕೆ ಗೋಳಾಡಿಸುತ್ತಿದ್ದಿರಿ ಎಂದು ಅಳಲು ಹೇಳಲು ಪುರಸಭೆ ಕಛೇರಿಗೆ ಖಾಲಿ ಕೊಡ ತೆಗೆದುಕೊಂಡು ಮಹಿಳೆಯರೊಂದಿಗೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಪುರಸಭೆ ವ್ಯವಸ್ಥಾಪಕ ಮಲ್ಲಿಕಾರ್ಜುನ ಹಾರಕೂಡ ಅವರನ್ನು ಭೇಟಿಯಾಗಿ ತರಾಟೆಗೆ ತೆಗೆದುಕೊಂಡರು. ಪಟ್ಟಣದ ಪಕ್ಕದಲ್ಲಿ ಎರಡು ನದಿಗಳಿದ್ದರೂ ಪುರಸಭೆ ಅನುದಾನದಲ್ಲಿ ಅನೇಕ ಬೋರವೆಲ್’ಗಳ ರಿಪೇರಿಗೊಳಿಸಿ, ಹೊಸ ಬೊರ್ವೆಲ್’ಗಳು ಹಾಕಿಸಿದ್ದೆವೆ ಎಂದು ಹೇಳುತ್ತಿರಿ ಅವು […]

Continue Reading

ಚಿಣ್ಣರ ಸಂತೆ: ಮಕ್ಕಳ ಕೈಯಲ್ಲಿ ವ್ಯಾಪಾರ, ಮನಸ್ಸಿನಲ್ಲಿ ಆತ್ಮವಿಶ್ವಾಸ

ಸುದ್ದಿ ಸಂಗ್ರಹ ಚಿತ್ತಾಪುರಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ವಿದ್ಯಾನಿಕೇತನ ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಚಿತ್ತಾಪುರದಲ್ಲಿ ಆಯೋಜಿಸಿದ್ದ ‘ಚಿಣ್ಣರ ಸಂತೆ’ ಮಕ್ಕಳಿಗೂ ಪಾಲಕರಿಗೂ ಸಂತಸ ತಂದಿತು. ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ(ರಿ) ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮ ಮಕ್ಕಳಿಗೆ ಆಟದ ಜೊತೆಗೆ ಬದುಕಿನ ಪಾಠ ಕಲಿಸಿತು. ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ ಪೆಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ಬಾಲ್ಯದಲ್ಲೆ ಶ್ರಮದ ಮೌಲ್ಯ ಮತ್ತು ಹಣದ ಅರಿವು ಮೂಡಿಸಬೇಕು. ಇಂತಹ ಕಾರ್ಯಕ್ರಮಗಳು ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸುತ್ತವೆ ಎಂದರು. […]

Continue Reading

ವಾಡಿ: ಮೂಲಭೂತ ಸೌಕರ್ಯ ಒದಗಿಸಲು ಬಿಜೆಪಿ ಆಗ್ರಹ

ಸುದ್ದಿ ಸಂಗ್ರಹ ವಾಡಿಪಟ್ಟಣದ ಜನರ ಸಂಕಷ್ಟಕ್ಕೆ ಸ್ಪಂದಿಸಿ ಮೂಲಭೂತ ಸೌಕರ್ಯ ಒದಗಿಸಿ ಎಂದು ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಅವರಿಗೆ ಬಿಜೆಪಿ ಮುಖಂಡರು ಮನವಿ ಪತ್ರ ಸಲ್ಲಿಸಿ, ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಪಟ್ಟಣದ ಅಭಿವೃದ್ಧಿ ಬಗ್ಗೆ ಚರ್ಚಿಸಿ ವಾರ್ಡ್‌ ಸಂಖ್ಯೆ1 ಬಸವನ‌ ಖಣಿಯಲ್ಲಿ ವಾಸಿಸುವರಿಗೆ ಇನ್ನೂ ಹಕ್ಕು ಪತ್ರ ಇಲ್ಲ, ಸುಮಾರು 20 ವರ್ಷಗಳಿಂದ ಪುರಸಭೆ ಇದ್ದರೂ ಜನಸಾಮಾನ್ಯರಿಗೆ ಮೂಲಭೂತ ಸೌಕರ್ಯಗಳಿಲ್ಲದೆ ಇರುವುದು ದುರಾದೃಷ್ಟಕರವಾಗಿದೆ ಎಂದರು. ಬಹುತೇಕ ಕಡೆ ಸ್ಥಳೀಯರಿಗೆ […]

Continue Reading

ಚಿತ್ತಾಪುರ: ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ‌

ಸುದ್ದಿ ಸಂಗ್ರಹ ಚಿತ್ತಾಪುರ ತಹಸೀಲ್ದಾರ್ ಕಚೇರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸೃಜಿಸಿದ 2026ನೇ ಸಾಲಿನ ಕ್ಯಾಲೆಂಡರ್ ಗ್ರೇಡ್- 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್ ಹಾಗೂ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಗುರುವಾರ ಬಿಡುಗಡೆ ಮಾಡಿದರು‌. ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಅವರ ನಿರ್ದೇಶನದ ಮೇರೆಗೆ ರಾಜ್ಯ ಸಂಘದಿಂದ ತಯಾರಿಸಿದ 2026ನೇ ಸಾಲಿನ ಕ್ಯಾಲೆಂಡರ್ ಅನ್ನು ತಾಲೂಕಿನ ಎಲ್ಲಾ ಇಲಾಖೆಗಳ ನೌಕರರಿಗೆ ವಿತರಿಸಲಾಗುವುದು ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಹೇಳಿದರು.‌‌ ಇದೆ […]

Continue Reading

ವೆಂಕಟೇಶ್ವರ ಕಾಲೋನಿಯಲ್ಲಿ ಮನೆ ಮತ್ತು ಬೈಕ್ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ‌

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣದ ವೆಂಕಟೇಶ್ವರ ಕಾಲೋನಿಯಲ್ಲಿ ಮಂಗಳವಾರ ರಾತ್ರಿ 3 ಗಂಟೆ ಸುಮಾರಿಗೆ ಒಂದು ಬೈಕ್‌ ಮತ್ತು ಮನೆ ಕಳ್ಳತನವಾದ ಘಟನೆ ನಡೆದಿರುವದು ವರದಿಯಾಗಿದೆ. ಕಳ್ಳರ ಚಲನವಲನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾಟಮದೇವರಹಳ್ಳಿಯ ನಿವಾಸಿ ರಮೇಶ ಶರಣಪ್ಪ ಬೋವಿ ಅವರ ಮನೆಯಿಂದ 10 ಗ್ರಾಂ ಚಿನ್ನ, 16 ತೊಲೆ ಬೆಳ್ಳಿ ಮತ್ತು 1,500 ರೂ.ನಗದು ದೋಚಿದ್ದಾರೆ.ಕಾಲೋನಿಯಲ್ಲಿರುವ ಜಗನ್ನಾಥ ಗುತ್ತೇದಾರ, ಚಂದಯ್ಯ ಗುತ್ತೇದಾರ ಅವರ ಮನೆ ಮುಂಭಾಗ ನಿಲ್ಲಿಸಿದ್ದ ಪಲ್ಸರ್ ಬೈಕ್ ಕಳ್ಳತನವಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. […]

Continue Reading

ಕೋಲಿ ಕಬ್ಬಲಿಗ ಎಸ್.ಟಿ ಪ್ರಸ್ತಾವನೆ ಕಳುಹಿಸಲು ಪ್ರಿಯಾಂಕ್ ಖರ್ಗೆ ಭರವಸೆ

ಸುದ್ದಿ ಸಂಗ್ರಹ ಚಿತ್ತಾಪುರ ಕೋಲಿ, ಕಬ್ಬಲಿಗ, ಕಬ್ಬೇರ ಜಾತಿಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಬೇಕೆಂದು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲು ಸರ್ಕಾರ ಸಿದ್ಧವಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಭರವಸೆ ನೀಡಿದ್ದಾರೆ ಎಂದು ತಾಲೂಕು ಕೋಲಿ ಸಮಾಜದ ಅಧ್ಯಕ್ಷ ನಿಂಗಣ್ಣ ಹೆಗಲೇರಿ, ಗೌರವಾಧ್ಯಕ್ಷ ರಾಮಲಿಂಗ ಬಾನರ್ ಮತ್ತು ಪ್ರಧಾನ ಕಾರ್ಯದರ್ಶಿ ಕರಣಕುಮಾರ ಅಲ್ಲೂರ್ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದ ಸಮಯದಲ್ಲಿ ತಾಲೂಕು ಕೋಲಿ ಸಮಾಜದ ಮುಖಂಡರು ಸಚಿವರನ್ನು […]

Continue Reading

ವಾಡಿ: ಉತ್ತಮ ಆಡಳಿತ ದಿನ ಆಚರಣೆ

ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜಯಂತಿ ಆಚರಣೆ, ಅಟಲ್ ಸ್ಮೃತಿ ವರ್ಷ ಮತ್ತು ಸುಶಾಸನ ದಿನ ಕಾರ್ಯಕ್ರಮ ಆಚರಿಸಲಾಯಿತು. ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ,ಭಾರತದ ಸಂಸ್ಕೃತಿ ಹಾಗೂ ಪರಂಪರೆ ಧರ್ಮದ ತಳಹದಿಯ ಮೇಲೆ ನಿಂತಿದೆ. ಧರ್ಮವನ್ನು ಅತ್ಯಂತ ಭಕ್ತಿ – ಭಾವದಿಂದ ಅನುಸರಿಸಿದ ಭೂಮಿ ಯಾವುದಾದರೂ ಇದ್ದರೆ ಅದು ಭರತ ಭೂಮಿ ಎಂದು ಸದಾ ಭಾಷಣದಲ್ಲಿ ವಾಜಪೇಯಿ ಹೇಳುತ್ತಿದ್ದರು ಎಂದರು. ದೇಶ ಭಕ್ತಿ, […]

Continue Reading