ಜ್ಞಾನದ ಊರು ಚಿತ್ತಾಪುರ, ಏಷ್ಯಾ ಖಂಡದ ಪ್ರಾಚೀನ ವಿಶ್ವವಿದ್ಯಾಲಯ ನಾಗಾವಿ

ಚಿತ್ತಾಪುರ: ಚಿತ್ತ ಎಂದರೆ ಜ್ಞಾನ, ಪುರ ಎಂದರೆ ಊರು. ಜ್ಞಾನದ ಊರು ಚಿತ್ತಾಪುರವಾಗಿದೆ. ನಾಗಾವಿ ವಿಶ್ವವಿದ್ಯಾಲಯ ವಿಶ್ವದ ಪ್ರಾಚೀನ ಮತ್ತು ದೊಡ್ಡ ವಿಶ್ವವಿದ್ಯಾಲಯವಾಗಿತ್ತು. ಆಕ್ಸಫರ್ಡ ಮತ್ತು ಕೆಂಬ್ರಿಜ್ ವಿಶ್ವವಿದ್ಯಾಲಯದಂತೆ ಮೆರೆದ ನಮ್ಮ ನಾಗಾವಿ ವಿಶ್ವವಿದ್ಯಾಲಯ ಮತ್ತು ಗತ ವೈಭವ ಪುನಃ ಮರುಕಳಿಸಬೇಕಾಗಿದೆ ಎಂದು ಸಂಶೋಧಕ ಸಾಹಿತಿ ಮುಡಬಿ ಗುಂಡೇರಾವ ಆಶಯ ವ್ಯಕ್ತಪಡಿಸಿದರು. ಪಟ್ಟಣದ ಐತಿಹಾಸಿಕ, ಪಾರಂಪರಿಕ ನಾಗಾವಿಯ ತ್ರೈಪುರುಷ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ […]

Continue Reading

ಬಸವ ಜಯಂತಿ ಪ್ರಯುಕ್ತ ಏ.19 ರಂದು ಪೂರ್ವಭಾವಿ ಸಭೆ: ನಾಗರಾಜ ಭಂಕಲಗಿ

ಚಿತ್ತಾಪುರ: ಏ.19 ರಂದು ಮಧ್ಯಾಹ್ನ 1 ಗಂಟೆಗೆ ಬಸವ ಜಯಂತಿ ಪ್ರಯುಕ್ತ ಪೂರ್ವಭಾವಿ ಸಭೆ ಕರೆಯಲಾಗಿದೆ, ಆದ್ದರಿಂದ ಮಹಾಸಭಾದ ಸರ್ವ ಪದಾಧಿಕಾರಿಗಳು ಮತ್ತು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ನಾಗರಾಜ ಭಂಕಲಗಿ ಹೇಳಿದರು. ಪಟ್ಟಣದ ಶರಣಬಸವೇಶ್ವರ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.29 ರಂದು ಕಲಬುರಗಿಯಲ್ಲಿ ಜರುಗುವ ಬಸವ ಜಯಂತಿ ಪ್ರಯುಕ್ತ ಪಟ್ಟಣದ ಶರಣಬಸವೇಶ್ವರ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ, ಸಭೆಗೆ ಅಖಿಲ ಭಾರತ ವೀರಶೈವ […]

Continue Reading

ವಾಡಿ: ಸಂವಿಧಾನ ಶಿಲ್ಪಿ ಡಾ. ಬಿ‌.ಆರ್ ಅಂಬೇಡ್ಕರ್ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ‌.ಆರ್ ಅಂಬೇಡ್ಕರ್ ರವರ ಜಯಂತಿ ಪ್ರಯುಕ್ತ ಮುಖಂಡರು ಭಾವಚಿತ್ರಕ್ಕೆ ಗೌರವ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ ಸಮಾನತೆಯ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ ಎಂದರು. ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕಾಗಿ ಪಣತೊಡಬೇಕಾಗಿದೆ. ಅಂಬೇಡ್ಕರ್ ಅವರು ಉದ್ಯೋಗಿ ಮತ್ತು ನಿರುದ್ಯೋಗಿಗಳಿಗೆ, ಪುರುಷರು ಮತ್ತು ಮಹಿಳೆಯರಿಗೆ ಉತ್ತಮ ಸೌಲಭ್ಯ ಸಿಗಬೇಕೆಂದು ಬಯಸಿದ್ದರು. ಜಾತಿ, […]

Continue Reading

ವಾಡಿಯಲ್ಲಿ ಮಹಾವೀರ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಗವಾನ್ ಮಹಾವೀರ ಜಯಂತಿ ಪ್ರಯುಕ್ತ, ಮಹಾವೀರ ರ ಭಾವಚಿತ್ರಕ್ಕೆ ಮುಖಂಡರು ಪುಷ್ಪನಮನ ಸಲ್ಲಿಸಿದರು. ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಮಹಾವೀರ ರು ತಮ್ಮ ಜೀವನದಲ್ಲಿ ಸತ್ಯ ಮತ್ತು ಅಹಿಂಸೆಯ ಮರ‍್ಗವನ್ನು ಅಳವಡಿಸಿಕೊಂಡು ಇಡೀ ಸಮಾಜಕ್ಕೆ ಸತ್ಯ ಮತ್ತು ಅಹಿಂಸೆಯ ಬೆಳಕನ್ನುತೋರಿಸಿದ್ದಾರೆ. ಮನುಷ್ಯ ಶ್ರೇಷ್ಠನಾಗುವುದು ಹುಟ್ಟಿನಿಂದಲ್ಲ, ರ‍್ಮದಿಂದ ನಡೆದುಕೊಳ್ಳುವುದರಿಂದ ಎಂದರು. ಭಗವಾನ್ ಮಹಾವೀರರು ಅಹಿಂಸೆ, ಸತ್ಯನಿಷ್ಠೆ, ತಾರತಮ್ಯ, ಬ್ರಹ್ಮರ‍್ಯ ಮತ್ತು ಅಪರಿಗ್ರಹಗಳೆಂಬ ಐದು ವ್ರತಗಳನ್ನು ಪಾಲಿಸುವಂತೆ ಪ್ರತಿಯೊಬ್ಬ ವ್ಯಕ್ತಿಯನ್ನು […]

Continue Reading

ಮಳೆ-ಗಾಳಿಗೆ ನೆಲಕ್ಕುರುಳಿದ 5 ಕೋಟಿ ವೆಚ್ಚದ ರಸ್ತೆಯ ದ್ವಿಪಥ ಕಂಬಗಳು

ವಾಡಿ: ಬೇಸಿಗೆ ಕಾಲದ ಮಳೆಗೆ 5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ರಸ್ತೆಯ ದ್ವಿಪಥ ಕಂಬಗಳು ಸಣ್ಣ ಮಳೆ- ಬಿರುಗಾಳಿಗೆ ಸಾಲಾಗಿ ನೆಲಕ್ಕುರುಳಿವೆ. ಅದೃಷ್ಟವಶಾತ ಒಬ್ಬ ಮಹಿಳೆ ಸೇರಿದಂತೆ ಕೆಲವರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದು, ಭಾರಿ ಅನಾಹುತ ತಪ್ಪಿದಂತಾಗಿದೆ. ಇದನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಗುತ್ತಿಗೆದಾರ ಮತ್ತು ಅನುಷ್ಠಾನಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಒತ್ತಾಯಿಸಿದ್ದಾರೆ. ಸುಮಾರು 3-4 ವರ್ಷಗಳಿಂದ ಕುಂಟುತ್ತಾ ಕಳಪೆ ಮಟ್ಟದಿಂದ ಸಾಗುತ್ತಿದ್ದ ಈ ರಸ್ತೆ ಕಾಮಗಾರಿಯಿಂದ […]

Continue Reading

ವಾಡಿ: ಡಾ.ಬಾಬು ಜಗಜೀವನರಾಂ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ರಾಷ್ಟ್ರದ ಮಹಾನ್ ನಾಯಕರಾಗಿದ್ದ ಡಾ.ಬಾಬು ಜಗಜೀವನರಾಂ ಅವರ 118ನೇ ಜಯಂತಿ ಪ್ರಯುಕ್ತ ಭಾವಚಿತ್ರಕ್ಕೆ ಬಿಜೆಪಿ ಮುಖಂಡರು ಗೌರವ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಬಿಜೆಪಿಯ ತಾಲೂಕ ಎಸ್’ಸಿ ಮೂರ್ಚಾದ ಮಾಜಿ ಅಧ್ಯಕ್ಷ ರಾಜು ಮುಕ್ಕಣ್ಣ ಮಾತನಾಡಿ, ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವಲ್ಲಿ ಬಾಬೂಜಿ ಕೊಡುಗೆ ಅಪಾರವಾಗಿದೆ. ಜಾತಿ ವ್ಯವಸ್ಥೆ ತೊಡೆದುಹಾಕಿ ಎಲ್ಲರಲ್ಲೂ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು ಎಂದರು. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ […]

Continue Reading

ವಾಡಿ: ನಿರ್ಗತಿಕ ಮಕ್ಕಳಿಗೆ ಧರ್ಮಸ್ಥಳ ಸಂಸ್ಥೆಯಿಂದ ಮಾಶಾಸನ‌

ವಾಡಿ: ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಕಛೇರಿಯಲ್ಲಿ ಮಲ್ಲಿಕಾರ್ಜುನ ಬಡಾವಣೆಯಲ್ಲಿ ವರ್ಷಗಳ ಹಿಂದೆ ತಂದೆ-ತಾಯಿಯನ್ನು ಕಳೆದುಕೊಂಡ ಅನಾಥ ಬಡ ಮಕ್ಕಳಾದ ಭಾಗ್ಯಶ್ರೀ, ಆಕಾಶ ಅವರಿಗೆ ಧರ್ಮಸ್ಥಳ ವಾತ್ಸಲ್ಯ ಯೋಜನೆಯಡಿ ಪ್ರತಿ ತಿಂಗಳು ಮಂಜೂರಾದ ಮಾಶಾಸನ ಕೈಪಿಡಿ ಮತ್ತು 1,500 ರೂವಾಡಿ ವಲಯದ ಪತಂಜಲಿ ಯೋಗ ಸಮಿತಿ ಪ್ರಭಾರಿ ವೀರಣ್ಣ ಯಾರಿ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸೇವೆ ಶ್ಲಾಘನೀಯ, ಸರ್ಕಾರ ಮಾಡಲಾರದಂತಹ ಹಲವಾರು ಉತ್ತಮ ಕೆಲಸ ಈ […]

Continue Reading

ವಾಡಿ: ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ 118ನೇ ಜಯಂತಿ ಅಂಗವಾಗಿ ಮುಖಂಡರು ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಹಿಂದೂ, ಮುಸ್ಲಿಂ, ಕ್ರೈಸ್ತ ಮಕ್ಕಳೆನ್ನದೆ ಎಲ್ಲರಿಗೂ ತಮ್ಮ ಮಠದಲ್ಲಿ ಅನ್ನ, ಆಶ್ರಯ ನೀಡಿ, ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಟ್ಟಿದ್ದರು ಎಂದರು. ಮಾತಿನಲ್ಲಿ ಮಾತ್ರವೇ ಅಲ್ಲದೆ, ಜಗತ್ತಿಗೆ ತಮ್ಮ ಕಾಯಕದ ಮೂಲಕ ವಿಶ್ವಮಾನವ ಸಂದೇಶ ಸಾರಿದರು. ಹಳ್ಳಿಗೆ ಏಕಯಾತ್ರೆ, ಪಟ್ಟಣಕ್ಕೆ ಪಂಚಯಾತ್ರೆ ಎಂಬಂತೆ ಶಿವಶರಣರಿಗೆ ಜೋಳಿಗೆ […]

Continue Reading

ವಾಡಿ: ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಮನವಿ

ವಾಡಿ: ಪಟ್ಟಣದ ಆದಾನಿ ಒಡೆತನದ ಎಸಿಸಿ ಸಿಮೆಂಟ್ ಕಂಪನಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲು ಆಗಮಿಸಿದ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಅವರಿಗೆ ಪಟ್ಟಣದ ಜನರ ಸಂಕಷ್ಟಕ್ಕೆ ಸ್ಪಂದಿಸಿ ಮೂಲಭೂತ ಸೌಕರ್ಯ ಒದಗಿಸುವಂತೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮನವಿ ಸಲ್ಲಿಸಿದರು. ವಾರ್ಡ್‌ ಸಂಖ್ಯೆ ಒಂದರ ಬಸವನ‌ ಖಣಿಯಲ್ಲಿ ಸುಮಾರು ಇಪ್ಪತ್ತು ವರ್ಷಗಳಿಂದ ಇರುವ ಪುರಸಭೆ ಜನಸಾಮಾನ್ಯರಿಗೆ ಮೂಲಭೂತ ಸೌಕರ್ಯ ಒದಗಿಸದೆ ಇರುವುದು ದುರಾದೃಷ್ಟ, ಬಹುತೇಕ ಕಡೆ ಸ್ಥಳೀಯರಿಗೆ ವಾಸಿಸುವ ಹಕ್ಕು ಪತ್ರ ಕೂಡಾ ಕೊಟ್ಟಿಲ್ಲ, ಅಲ್ಲಿನ ನಿವಾಸಿಗಳು ತೆರಗೆ […]

Continue Reading

ಪಿಡಿಒ ಅಮಾನತಿಗೆ ಪತ್ರಕರ್ತರ ಸಂಘ ಒತ್ತಾಯ‌

ಚಿತ್ತಾಪುರ: ಪತ್ರಕರ್ತನ ಮೇಲೆ ಬೆದರಿಕೆ ಹಾಕಿದ ಅಳ್ಳೊಳ್ಳಿ ಗ್ರಾ.ಪಂ ಪಿಡಿಒ ಅವರನ್ನು ಅಮಾನತು ಮಾಡುವಂತೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ದರಾಜ ಮಲ್ಕಂಡಿ ಒತ್ತಾಯಿಸಿದರು. ಪಟ್ಟಣದಲ್ಲಿ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ಅಳ್ಳೊಳ್ಳಿ ಗ್ರಾ.ಪಂ 15ನೇ ಹಣಕಾಸು ಯೋಜನೆಯಡಿ ಕೈಗೊಂಡ ಕಾಮಗಾರಿ ಹಾಗೂ ಖರ್ಚು-ವೆಚ್ಚದ ಕುರಿತು ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೇಳಿದ ಪತ್ರಕರ್ತನಿಗೆ ಪಿಡಿಒ ಬೆದರಿಕೆ ಹಾಕಿದ್ದಾರೆ. ಗ್ರಾ.ಪಂ ನಲ್ಲಿ ಅವ್ಯವಹಾರ ನಡೆದಿದೆ ಎಂದು ದೂರುಗಳು ಬಂದಿದ್ದು, ಸಮಗ್ರ […]

Continue Reading