ಶಹಾಬಾದ: ರಾಣಿ ಅಬ್ಬಕ್ಕ, ಅಹಲ್ಯಾಬಾಯಿ ಹೋಳ್ಕರ್, ಕಿತ್ತೂರ ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಸುದ್ದಿ ಸಂಗ್ರಹ ಶಹಾಬಾದ ಎಸ್’ಎಸ್ ಮರಗೋಳ ಕಾಲೇಜಿನಲ್ಲಿ ರಾಣಿ ಅಬ್ಬಕ್ಕ ದೇವಿರವರ 500ನೇ ಜನ್ಮ ಶತಾಬ್ದಿ, ಅಹಲ್ಯಾಬಾಯಿ ಹೋಳ್ಕರ್ ರವರ 300ನೇ ಜನ್ಮ ದಿನಾಚರಣೆ ಮತ್ತು ಕಿತ್ತೂರ ರಾಣಿ ಚೆನ್ನಮ್ಮ ರವರ 200ನೇ ಜಯಂತೋತ್ಸವ ನಿಮಿತ್ಯ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು. ಪಟ್ಟಣದ ಎಸ್’ಎಸ್ ಮರಗೋಳ ಕಾಲೇಜಿನಲ್ಲಿ ಎಸ್’ಎಸ್ ಮರಗೋಳ ಪದವಿ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕಾರ್ಯಕ್ರಮವನ್ನು […]

Continue Reading

ಹಿಂದೂಗಳ ತಾಳ್ಮೆ ಕೆಣಕುತ್ತಿರುವ ಸರ್ಕಾರ: ವೀರಣ್ಣ ಯಾರಿ

ವಾಡಿ: ಸೆ.7 ರಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕಲ್ಲು ತೂರಾಟದ ವೇಳೆ ಬೀದಿ ದೀಪಗಳನ್ನು ಆಫ್ ಮಾಡಿದ್ದು, ಇದು ಪೂರ್ವ ಯೋಜಿತ ಕೃತ್ಯವಾಗಿದೆ. ಇದರಲ್ಲಿ ಭಾಗಿಯಾದ ಸಮಾಜಘಾತುಕರಿಗೆ ಕಠಿಣ ಶಿಕ್ಷಗೆ ಗುರಿಪಡಿಸಬೇಕು ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಆಗ್ರಹಿಸಿದರು.‌ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂ ಹಬ್ಬಗಳು, ಗಣಪತಿ ಉತ್ಸವ ಮತ್ತು ಮೆರವಣಿಗೆಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿ ಬಿಟ್ಟಿವೆ, ಇವುಗಳಿಗೆ ಮಟ್ಟಹಾಕುವುದು ಬಿಟ್ಟು, ಅನ್ಯಾಯದ ವಿರುದ್ಧ ಹೋರಾಡಿದರೆ ಲಾಠಿ ಚಾರ್ಜ್ ಮಾಡುತ್ತಾ […]

Continue Reading

ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಅಲೆ ಸೃಷ್ಟಿಸಿದ ತೇಜಸ್ವಿ

ಕಲಬುರಗಿ: ಪರಿಸರ ಹಾಗೂ ವೈಚಾರಿಕತೆ ಪರ ಬರಹಗಳ ಮೂಲಕ ಅಸಂಖ್ಯಾತ ವ್ಯಕ್ತಿಗಳನ್ನು ಪ್ರಭಾವಿಸಿದ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರು, ನಾಡು-ನುಡಿ ಏಳಿಗೆಗೆ ತಮ್ಮದೆಯಾದ ವಿಶಿಷ್ಟ ಬರಹಗಳ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಅಲೆ ಸೃಷ್ಟಿಸಿದ ಮೇರು ಸಾಹಿತಿಯಾಗಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ಶಹಾಬಾದ ತಾಲೂಕಿನ ಭಂಕೂರ್ ಗ್ರಾಮದ ಗಣೇಶ್ ನಗರದಲ್ಲಿನ ಕೋರಿಸಿದ್ದೇಶ್ವರ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಸಾಯಂಕಾಲ ಜರುಗಿದ ‘ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರ 87ನೇ ಜನ್ಮದಿನಾಚರಣೆ’ಯಲ್ಲಿ […]

Continue Reading

ಕಾಲೇಜಿನ ಅತಿಥಿ ಉಪನ್ಯಾಸಕರ ಶೈಕ್ಷಣಿಕ ಗೊಂದಲ ಪರಿಹರಿಸಲು ಪ್ರತಿಭಟನೆ

ಚಿತ್ತಾಪುರ: ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಬಗೆಹರಿಸಬೇಕು ಮತ್ತು ಅತಿಥಿ ಉಪನ್ಯಾಸಕರ ನೇಮಕ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಎಐಡಿಎಸ್ಓ ಸಂಘಟನೆ ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪಟ್ಟಣದ ರೇವಣಸಿದ್ದಪ್ಪ ಕಾಂತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ತಹಸೀಲ್ ಕಚೇರಿಯವರೆಗೆ ಎಐಡಿಎಸ್ಓ ತಾಲೂಕು ಪದಾಧಿಕಾರಿಗಳ ನೇತೃತ್ವದದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಸಮಿತಿ ಸದಸ್ಯ ದೇವರಾಜು ಎಸ್ ರಾಜೋಳ್ ಮಾತನಾಡಿ, ರಾಜ್ಯದಾದ್ಯಂತ ಪದವಿ […]

Continue Reading

ಜಾತಿ, ದ್ವೇಷದ ಗೋಡೆಯನ್ನು ಒಡೆದ ಗುರು: ವೀರಣ್ಣ ಯಾರಿ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಅಂಗವಾಗಿ ಮುಖಂಡರು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಜಾತಿ, ದ್ವೇಷದ ಗೋಡೆಯನ್ನು ಒಡೆದು ಎಲ್ಲರಲ್ಲಿ ಭಾತೃತ್ವ ಬೀಜ ಬಿತ್ತಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಆದರ್ಶಪೂರ್ಣವಾದದ್ದು ಎಂದರು. ಮಹಾಭಾರತದಲ್ಲಿ ಶ್ರೀ ಕೃಷ್ಣನು ಜಗತ್ತಿನಲ್ಲಿ ಅಧರ್ಮ ಯಾವಾಗ ಹೆಚ್ಚುತ್ತದೆ ಅದನ್ನು ಮಟ್ಟ ಹಾಕಿ, ಧರ್ಮವನ್ನು ಪುನರ್ ಸ್ಥಾಪಿಸಲು ನಾನು ಮತ್ತೆ ಮತ್ತೆ ಜನ್ಮ ಎತ್ತುತ್ತೆನೆ ಎಂದು […]

Continue Reading

ಶಿಕ್ಷಕರಿಂದ ಉತ್ತಮ ಸಮಾಜ ನಿರ್ಮಾಣ

ಸುದ್ದಿ ಸಂಗ್ರಹ ಶಹಾಬಾದ್ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತಮಹತ್ವವಾದದ್ದು ಎಂದು ಮುಖ್ಯಗುರು ಸಂಗೀತಾ ದೇವರಮನಿ ಹೇಳಿದರು. ಪಟ್ಟಣದ ಚವ್ಹಾಣ್ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಅವರು ನಂದಗೋಕುಲ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿ ಮಾತನಾಡಿದ ಅವರು, ಒಬ್ಬ ಶಿಕ್ಷಕ ಜವಾಬ್ದಾರಿ ಅರಿತು ಕೆಲಸ ಮಾಡಿ ಮಕ್ಕಳ ಭವಿಷ್ಯ ರೂಪಿಸಿದರೆ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು‌. ಭಾರತೀಯ ಶಿಕ್ಷಣ ವ್ಯವಸ್ಥೆಗೆ ಗುರು-ಶಿಷ್ಯರ ಪರಂಪರೆಭದ್ರ ಅಡಿಪಾಯವಾಗಿದೆ. ಶಿಕ್ಷಕರು ಪಾಠಕ್ಕೆ […]

Continue Reading

ಭೂಮಿ ಪೂಜೆ, ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಸುದ್ದಿ ಸಂಗ್ರಹ ಶಹಾಬಾದ ರಾಯಚೋಟಿ ವೀರಭದ್ರೇಶ್ವರ ಆಶ್ರಮ ಹಾಗೂ ಭದ್ರಕಾಳಿ ದೇವಸ್ಥಾನದ ನೂತನ ಕಟ್ಟಡದ ಭೂಮಿ ಪೂಜೆಯನ್ನು ಸಮಾಜ ಸೇವಕಿ ಜಯಶ್ರೀ ಮತ್ತಿಮೂಡ ನೆರವೇರಿಸಿದರು ಮತ್ತು 501 ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು ಎಂದು ಶ್ರೀ ಮಠದ ಪೂಜ್ಯ ಶಂಕ್ರಯ್ಯ ಸ್ವಾಮಿ ಹೇಳಿದರು.  ನಗರದಲ್ಲಿ ಸೋಮುವಾರ ರಾಯಚೋಟಿ ವೀರಭದ್ರೇಶ್ವರ ಆಶ್ರಮದ ನೂತನ ಕಟ್ಟಡದ ಶಂಕು ಸ್ಥಾಪನೆ ಮತ್ತು ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀಮಠಕ್ಕೆ ಭಕ್ತರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ […]

Continue Reading

ಮಹಿಳೆಯರ ದೂರು ಪೆಟ್ಟಿಗೆ ಅನಾವರಣ

ಸುದ್ದಿ ಸಂಗ್ರಹ ಶಹಾಬಾದ ಪಟ್ಟಣದ ಎಸ್’ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಹಂಪಮ್ಮ ಹಿರೇಮಠ ಮಹಿಳೆಯರ ದೂರು ಪೆಟ್ಟಿಗೆ ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ಡಾ.ಬಸವರಾಜ್ ಹಿರೇಮಠ, ಡಾ.ಸುರೇಖಾ ನಾಟೆಕರ್, ಡಾ.ಹಣಮಂತ ಸೇಡಂಕರ್, ಡಾ.ಗಂಗಾಧರ್ ಸ್ಥಾವರ ಮಠ, ಡಾ.ಕಾವೇರಿ, ಡಾ.ನಾಗರಾಜ ದೇವತಕಲ್, ಡಾ.ಲಕ್ಷ್ಮಣ ರಾಠೋಡ , ಪ್ರಮುಖರಾದ ಲಾಲಿತ, ಶಿವುಶಂಕರ್ ಹಿರೇಮಠ ಸೇರಿದಂತೆ ಬೋಧಕ ಬೋಧಕ್ಕೆತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

ಶಹಾಬಾದ: ನೂತನ ತಹಸೀಲ್ದಾರ್‌ ನೀಲಪ್ರಭಾ ಬಬಲಾದ ಅವರಿಗೆ ಸನ್ಮಾನ

ಸುದ್ದಿ ಸಂಗ್ರಹ ಶಹಾಬಾದ ನೂತನ ತಹಸೀಲ್ದಾರ್ ನೀಲಪ್ರಭಾ ಬಬಲಾದ ಅವರಿಗೆ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶಿವಪುತ್ರ ಕರಣಿಕ ಮತ್ತು ಪದಾಧಿಕಾರಿಗಳು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ಗುರುರಾಜ ಸಂಗಾವಿ, ನೌಕರರ ಸಂಘದ ವೀಠಾಬಾಯಿ, ಸುಶೀಲಾ, ಸುಲೋಚನಾ, ಬನ್ನಪ್ಪ ಸೈದಾಪುರ, ಈರಣ್ಣ ಸಾತಖೇಡ, ರವಿಕುಮಾರ ಮುತ್ತಗಿ, ಮುನೀರ್, ನರಸಪ್ಪ ಇದ್ದರು.

Continue Reading

ಪಪ್ಪಾಯಿ ಹಣ್ಣು ಆರೋಗ್ಯಕರ ಮತ್ತು ಲಾಭದಾಯಕ ಕೃಷಿ

ಸುದ್ದಿ ಸಂಗ್ರಹ ಕಾಳಗಿ ಪಪ್ಪಾಯಿ ಹಣ್ಣು ಕೃಷಿಗೆ ಶ್ರಮದಾಯಕ ಅಗತ್ಯ. ಸೂಕ್ತ ಕಾಲಕ್ಕೆ ಬೆಳೆ ನಿರ್ವಹಣೆ ಮಾಡಬೇಕು. ಇದರ ಸೇವನೆ ಆರೋಗ್ಯಕರ ಮತ್ತು ರೈತರಿಗೆ ಲಾಭದಾಯಕ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್. ಬಿರಾದಾರ ಹೇಳಿದರು. ತಾಲೂಕಿನ ಹೆಬ್ಬಾಳ ಸಮೀಪದ ದೇಸಾಯಿಯವರ ಪಪ್ಪಾಯಿ ತೋಟದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ತೋಟಗಾರಿಕೆ ಕ್ಷೇತ್ರಕ್ಕೆ ಭೇಟಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ಪಪ್ಪಾಯಿ ಹಣ್ಣು ಜೀರ್ಣಾಂಗದ ಆರೋಗ್ಯ ಸುಧಾರಿಸುತ್ತದೆ. […]

Continue Reading