ಎಲ್​ಟಿಟಿ ಮತ್ತು ಕೋನಾರ್ಕ್ ರೈಲು ನಿಲ್ಲಿಸುವಂತೆ ಬ್ಲಾಕ್ ಕಾಂಗ್ರೆಸ್ ಮುಖಂಡರಿಂದ ಡಿಆರ್‌ಎಂಗೆ ಮನವಿ

ಚಿತ್ತಾಪುರ: ರೈಲು ನಿಲ್ದಾಣದಲ್ಲಿ ಇನ್ನೂ ಕೆಲವು ರೈಲುಗಳುನಿಲ್ಲಿಸಬೇಕು, ಒಂಟಿ ಕಮಾನ್ ಬಳಿ ಕಬ್ಬಿಣದ ಗೇಟ್ ಎತ್ತುವುದು, ಪ್ಲಾಟ್ ಫಾರ್ಮ್ ಸಂಖ್ಯೆ 3 ರೈಲು ನಿಲ್ದಾಣದಲ್ಲಿ ಟಿಕೆಟ್ ಬುಕಿಂಗ್ ಕೌಂಟರ್ ತೆರೆಯಬೇಕು, ಒಂಟಿ ಕಮಾನ್’ನಿಂದ ನಿಲ್ದಾಣಕ್ಕೆ ರಸ್ತೆ ದುರಸ್ತಿ ಮಾಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಮತ್ತು ಮುಖಂಡರು ಸಿಕಂದರಾಬಾದ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಆರ್‌ಎಂ) ಡಾ. ಆರ್ ಗೋಪಾಲಕೃಷ್ಣನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಚಿತ್ತಾಪುರ ರೈಲು ನಿಲ್ದಾಣಕ್ಕೆ ಬುಧವಾರ ಆಗಮಿಸಿದ ಸಂದರ್ಭದಲ್ಲಿ ಅವರನ್ನು […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ಮಾಜಿ ಪ್ರಧಾನಿ ಅಟಲ್’ಜಿ ಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ಸ್ಮರಣೆ ಜರುಗಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ವಿಶ್ವವೇ ಅಚ್ಚರಿಯಿಂದ ನೋಡುವಂತೆ ದೇಶವನ್ನು ಮುನ್ನಡೆಸಿದ ಕೀರ್ತಿಗೆ ಪಾತ್ರರಾದ ವಾಜಪೇಯಿ ಅವರು ಮೂರು ಬಾರಿ ಪ್ರಧಾನಿ ಹುದ್ದೆಗೇರಿದ್ದರು ಎಂದರು. ಒಂದು ಬಾರಿ 13 ದಿನಕ್ಕೆ ಅಧಿಕಾರ ಕಳೆದುಕೊಂಡರೆ, ಮತ್ತೊಮ್ಮೆ 13 ತಿಂಗಳಿಗೆ ಅಧಿಕಾರ ಕಳೆದುಕೊಂಡರು. ಮೂರನೇ ಬಾರಿಗೆ ಪ್ರಧಾನಿ ಪಟ್ಟ ಅಲಂಕರಿಸಿ ಐದು ವರ್ಷ ಅಧಿಕಾರ […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು, ದೇಶಕ್ಕಾಗಿ ಹೋರಾಡಿದ ವೀರರನ್ನು ಗೌರವಿಸಿ ಅವರಿಗೆ ಕೃತಜ್ಞರಾಗಿರುವುದೆ ಈ ನೆಲದ ಗುಣವಾಗಿದೆ ಎಂದರು. ಪ್ರವಾಸಿಗರ ಸ್ವರ್ಗ ಎಂದು ಕರೆಯಲ್ಪಡುವ ಜಮ್ಮು ಕಾಶ್ಮೀರ ಪ್ರವಾಸಕ್ಕೆ ಹೋಗಿದ್ದ ಭಾರತೀಯರ ಮೇಲೆ ಪಹಲ್‌ಗಾಮ್‌ನಲ್ಲಿ ಪಾಕ್ ಉಗ್ರಗಾಮಿಗಳು ಹಾಡುಹಗಲೆ ಗುಂಡಿಟ್ಟು ಕೊಂದು ಭಾರತೀಯ ಹೆಣ್ಣು ಮಕ್ಕಳ ಹಣೆಯ ಕುಂಕುಮವನ್ನು ಅಳಿಸಿ ಹಾಕಿದ್ದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕ್ ಉಗ್ರರಿಗೆ ತಕ್ಕ ಪ್ರತ್ಯುತ್ತರ […]

Continue Reading

ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಭವರಲಾಲ್’ಗೆ ಶಾಲು ಹೊದಿಸಿ ಸನ್ಮಾನಿಸಿದ ವೀರಣ್ಣ ಯಾರಿ

ವಾಡಿ: ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ, ಅಂತರಾಷ್ಟ್ರೀಯ ಯೋಗ ಸಾಧಕ ಭವರಲಾಲ್ ಆರ್ಯ್ ಅವರನ್ನು ವಾಡಿ ಪತಂಜಲಿ ಯೋಗ ಶಿಕ್ಷಕ ವೀರಣ್ಣ ಯಾರಿ, ನಾಗರಾಜಗೌಡ ಗೌಡಪ್ಪನೂರ ಅವರು ಶಾಲು ಹೊದಿಸಿ ಸನ್ಮಾನಿಸಿದರು. ಕಲಬುರಗಿ ನಗರದ ಅಪ್ಪಾ ಗಾರ್ಡನ್’ನಲ್ಲಿ ಪತಂಜಲಿ ಯೋಗ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಯೋಗಾಭ್ಯಾಸ‌ ಶಿಬಿರಕ್ಕೆ ಯೋಗಾಚಾರ್ಯ ಭವರ್ ಲಾಲ್ ಆರ್ಯ ಅವರು ಆಗಮಿಸಿದ್ದರು. ಯೋಗ ಶಿಕ್ಷಕ ವೀರಣ್ಣ ಯಾರಿ ಅವರು ಆರ್ಯ್ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಕಳೆದ ಜೂನ್ 21ರ ಅಂತರಾಷ್ಟ್ರೀಯ […]

Continue Reading

ಅಮೃತ್ 2.0 ಯೋಜನೆ: ಪೈಪ್‌ಲೈನ್ ಅಳವಡಿಕೆ ಕಾಮಗಾರಿ ಆರಂಭ

ಚಿತ್ತಾಪುರ: ಪಟ್ಟಣದ ಪ್ರತಿಯೊಂದು ವಾರ್ಡಿನ ಮನೆಗೂ ಅಮೃತ್ 2.0 ಯೋಜನೆಯಡಿ ಕುಡಿಯುವ ನೀರು ಪೂರೈಕೆ ಮಾಡುವ ಗುರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೊಂದಿದ್ದಾರೆ ಎಂದು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಚವ್ಹಾಣ ಹೇಳಿದರು. ಪಟ್ಟಣದ ಸ್ಟೇಷನ್ ತಾಂಡಾದಲ್ಲಿ ಸುಧಾರಿತ ಕುಡಿಯುವ ನೀರು ಸರಬರಾಜು ಅಮೃತ್‌ 2.0 ಯೋಜನೆಯಡಿ ಇತ್ತಿಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ […]

Continue Reading

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಾಗರ ಪಂಚಮಿ ಹಬ್ಬ ಆಚರಣೆ

ಚಿತ್ತಾಪುರ: ಹಿಂದೂ ಧರ್ಮದ ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿ ಹಬ್ಬವನ್ನು ನಮ್ಮ ಶಾಲೆಯಲ್ಲಿ ಶಾಲಾ ಶಿಕ್ಷಕಿಯರು ಮತ್ತು ವಿದ್ಯಾರ್ಥಿನಿಯರು ನಾಗರ ಮೂರ್ತಿಗೆ ಹಾಲನ್ನು ಎರೆಯು ಮೂಲಕ ಹಬ್ಬದ ಪರಂಪರೆಯನ್ನು ಶಾಲೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಸಹ ಕಾರ್ಯದರ್ಶಿ ಮತ್ತು ಮುಖ್ಯಗುರು ಪ್ರೀಯಾಂಕ, ಜಂಟಿ ಕಾರ್ಯದರ್ಶಿ ಬಸವರಾಜ ಪಿ.ಬಿ, ಶಿಕ್ಷಕರಾದ ಮಹಾದೇವ, ದೇವೆನ್, ಕಾಶೀಮ್ ಅಲೀ, ಸಲೀಮ್, ಅಶ್ವಿನಿ, ಶ್ರೀಮತಿ.ವಸಂತ , ನಂಧೂರಕರ್, ಅಮ್ರೀನ್ ಬೇಗಂ, ಅಂಬಿಕಾ, ಅಂಕಿತ, ಬಸಮ್ಮ, ಸಾಧನ ಶಿಲ್ಪಿ, ಬಸಮ್ಮ […]

Continue Reading

ವಾಡಿ ಪಟ್ಟಣದಲ್ಲಿ ಕಲುಷಿತ ನೀರು ಪೂರೈಕೆ: ವೀರಣ್ಣ ಯಾರಿ ಆಕ್ರೋಶ

ವಾಡಿ: ಪಟ್ಟಣದಲ್ಲಿ ಮತ್ತೆ ರಾಡಿ ನೀರು ಪೂರೈಕೆಯಾಗುತ್ತಿರುವದರಿಂದ ಸಾರ್ವಜನಿಕರು ಅನಿವಾರ್ಯವಾಗಿ ಕಲುಷಿತ ನೀರನ್ನೆ ಬಳಸುವ ಪರಿಸ್ಥಿತಿ ಮುಂದುವರೆದಿದೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಪುರಸಭೆ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಇದನ್ನು ಗಂಭೀರವಾಗಿ ಪರಿಗಣಿಸಿ, ಸಾರ್ವಜನಿಕ ಹಿತಾಸಕ್ತಿಗಾದರೂ ಕ್ರಮಕೈಗೊಳ್ಳಿ ಎಂದು ಸುಮಾರು ಸಲ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರದ ಮೂಲಕ ಗಮನಕ್ಕೆ ತಂದರು ಇದುವರೆಗೆ ಅದೆ ಪರಿಸ್ಥಿತಿ ಮುಂದುವರೆದಿದೆ. ಶಾಶ್ವತ ಕುಡಿಯುವ ನೀರಿನ ಯೋಜನೆಯಡಿ ನೀರು ಶುದ್ಧೀಕರಣ ಘಟಕ ನಿರ್ಮಾಣವಾದರು ಸಹ ಇಲ್ಲಿನ ಅಧಿಕಾರಿಗಳ ಬೇಜವಾಬ್ದಾರಿಯಿಂದ ನೀರು […]

Continue Reading

ವಾಡಿ: ರಾಷ್ಟ್ರ ಧ್ವಜದೊಂದಿಗೆ ಕಾರ್ಗಿಲ್ ವಿಜಯೋತ್ಸವ

ವಾಡಿ: ಪಟ್ಟಣದ ಮೌಲಾನಾ ಅಬ್ದುಲ್ ಕಲಾಂ ಅಜಾದ್ ವೃತ್ತದಲ್ಲಿ ಬಿಜೆಪಿ ಪಕ್ಷದ ಮುಖಂಡರು ಶನಿವಾರ 26ನೇ ಕಾರ್ಗಿಲ್ ವಿಜಯ ದಿನಾಚರಣೆ ನಿಮಿತ್ಯ ರಾಷ್ಟ್ರ ಧ್ವಜದೊಂದಿಗೆ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಪ್ರತಿ ವರ್ಷ ಜು.26 ರಂದು ನಾವೆಲ್ಲರು ಸ್ಮರಿಸಿ, ಗೌರವಿಸಬೇಕಾದ ದಿನ. ಶತ್ರುರಾಷ್ಟ್ರ ದಾಳಿಯಿಂದ ಸದಾ ನಮ್ಮ ತಾಯ್ನಾಡಿನಲ್ಲಿ ನಾವುಗಳು, ಕೆಚ್ಚೆದೆಯ ನಮ್ಮ ವೀರಸೈನಿಕರ ತ್ಯಾಗ, ಬಲಿದಾನದ ಫಲವಾಗಿ ಇಂದು ಸುರಕ್ಷಿತವಾಗಿದ್ದೆವೆ ಎಂದರು. ನಾವು ಕಾರ್ಗಿಲ್ ಯುದ್ಧವನ್ನು ಮರೆಯಲು ಸಾಧ್ಯವಿಲ್ಲ. ಈ […]

Continue Reading

ಬರವಣಿಗೆಯಿಂದ ಸಮಾಜಪರ ಕೆಲಸ ಮಾಡಿದ್ದರು

ಚಿತ್ತಾಪುರ: ದಿ.ನಾಗಯ್ಯಸ್ವಾಮಿ ಅಲ್ಲೂರ ಅವರು ಪತ್ರಕರ್ತರಾಗಿ ಬರವಣಿಗೆಯಿಂದ ಸಮಾಜಪರ ಕೆಲಸ ಮಾಡಿದ್ದರು ಎಂದು ಜ್ಞಾನಜ್ಯೋತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಬಸವರಾಜ ಹೊಟ್ಟಿ ಹೇಳಿದರು. ತಾಲೂಕಿನ ಅಳ್ಳೊಳ್ಳಿ ಗ್ರಾಮದ ಜ್ಞಾನಜ್ಯೋತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ದಿ. ನಾಗಯ್ಯಸ್ವಾಮಿ ಅಲ್ಲೂರವರ 54ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಮಾಜಿಕ ಕಳಕಳಿ, ಸಾಮರಸ್ಯ, ಪ್ರತಿಭೆಗೆ ಪ್ರೋತ್ಸಾಹಿಸುವ ಮನಸ್ಸು ದಿ.ನಾಗಯ್ಯಸ್ವಾಮಿ ಅಲ್ಲೂರ ಅವರಿಗೆ ಇತ್ತು ಎಂದರು. ಕಾರ್ಯಕ್ರಮದ ಮೂಲಕ ದಿ.ನಾಗಯ್ಯಸ್ವಾಮಿ ಅಲ್ಲೂರ’ರವರ ಸಾಧನೆಗಳನ್ನು ಸ್ಮರಿಸಿ, […]

Continue Reading

ವಾಡಿ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಕೇಂದ್ರ ಸಚಿವರ ಭರವಸೆ

ವಾಡಿ: ಪಟ್ಟಣದ ರೈಲ್ವೆ ನಿಲ್ದಾಣದ ತ್ವರಿತ ಕಾಮಗಾರಿಗೆ ಮತ್ತು ಅಭಿವೃದ್ಧಿಗೆ ಭರವಸೆ ವ್ಯಕ್ತಪಡಿಸಿದ ಕೇಂದ್ರ ರೈಲ್ವೆ ಸಚಿವ ವಿ ಸೋಮಣ್ಣ ಅವರು ಸ್ಥಳೀಯ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಅವರಿಗೆ ಪತ್ರ ಕಳಿಸಿದ್ದಾರೆ. ಕಳೆದ ಜೂನ್ ತಿಂಗಳಲ್ಲಿ ಕಲಬುರಗಿ ನಗರಕ್ಕೆ ಆಗಮಿಸಿದ ಕೇಂದ್ರ ರೈಲ್ವೆ ಸಚಿವರನ್ನು ಲೋಕ ಸಭೆಯ ಮಾಜಿ ಸದಸ್ಯ ಡಾ.ಉಮೇಶ ಜಾಧವ ಅವರೊಂದಿಗೆ, ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಹಾಗೂ ಮುಖಂಡ ಸುಭಾಷ್ ವರ್ಮಾ ಅವರೊಂದಿಗೆ ವಾಡಿ ಮಹಾಶಕ್ತಿ ಕೇಂದ್ರದ […]

Continue Reading