ವಾಡಿ: ಪ್ರಧಾನಿ ಮೋದಿಯವರ 75ನೇ ಹುಟ್ಟು ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ

ವಾಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಹುಟ್ಟು ಹಬ್ಬದ ಪ್ರಯುಕ್ತ ಬಿಜೆಪಿ ಮುಖಂಡರು ಪಟ್ಟಣದ ಶಕ್ತಿ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಜೀವನದುದ್ದಕ್ಕೂ ದೇಶದ ಒಳಿತಿಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆರೋಗ್ಯದಿಂದ ನೂರಾರು ವರ್ಷಗಳು ಬಾಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೆವೆ ಎಂದರು. ಪುರಸಭೆ ಮಾಜಿ ವಿರೋಧ ಪಕ್ಷದ ನಾಯಕ ಭೀಮಶಾ ಜಿರೋಳ್ಳಿ ಮಾತನಾಡಿ, ದೇಶದ ಕಟ್ಟಕಡೆಯ ವ್ಯಕ್ತಿಯೂ ನಿರ್ಭೀತಿಯಿಂದ ನೆಮ್ಮದಿಯ ಜೀವನ […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ವಿಶ್ವಕರ್ಮ ಜಯಂತಿ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ವಿಶ್ವಕರ್ಮ ಜಯಂತಿಯ ಅಂಗವಾಗಿ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಮುಖಂಡರು ಪುಷ್ಪನಮನ ಸಲ್ಲಿಸಿದರು. ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ, ವಿಶ್ವಕರ್ಮ ಸಮಾಜದ ಮುಖಂಡ ಬಸವರಾಜ ಪಂಚಾಳ ಮಾತನಾಡಿ, ವಿಶ್ವಕರ್ಮ ಜಯಂತಿಯು ದೈವಿಕ ವಾಸ್ತುಶಿಲ್ಪಿಯ ಜನ್ಮವನ್ನು ಆಚರಿಸುವ ದಿನ ಮಾತ್ರವಲ್ಲ, ಕುಶಲಕರ್ಮಿಗಳು ಮತ್ತು ಕಾರ್ಮಿಕರ ಕೊಡುಗೆ ಗುರುತಿಸುವ ಸಂದರ್ಭವಾಗಿದೆ ಎಂದರು. ಜಗತ್ತನ್ನು ನಿರ್ಮಿಸಲು ಮತ್ತು ರೂಪಿಸಲು ತಮ್ಮ ಕೈಗಳಿಂದ ಕೆಲಸ ಮಾಡುವವರ ಕೌಶಲ್ಯ, ಸಮರ್ಪಣೆ ಮತ್ತು ಸೃಜನಶೀಲತೆಯನ್ನು ಶ್ಲಾಘಿಸುವ ದಿನವಿದು. ಈ ಹಬ್ಬವು ನಮ್ಮ […]

Continue Reading

ಬಿಜೆಪಿ ಕಛೇರಿಯಲ್ಲಿ ಕಲ್ಯಾಣ ಕರ್ನಾಟಕ ಸ್ವಾತಂತ್ರೋತ್ಸವ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬ್ರಿಟಿಷರು ಭಾರತವನ್ನು ಬಿಟ್ಟು ತೊಲಗುವಾಗ ಯಾವ ಕಡೆ ಹೋಗಬೇಕು ಎನ್ನುವ ಬಗ್ಗೆ ದೇಶಿಯ ಸಂಸ್ಥಾನಗಳಿಗೆ ಮುಕ್ತ ಅವಕಾಶ ನೀಡಿರುವುದು ಹೈದರಾಬಾದ್‌ ಕರ್ನಾಟಕ ಭಾಗದವರ ಸ್ಥಿತಿ ಬೆಂಕಿಯಿಂದ ಬಾಣಲೆಗೆ ಬಿದ್ದಂತಾಗಿತ್ತು. ದೇಶ ಸ್ವಾತಂತ್ರ್ಯಗೊಂಡಾಗ ಸುಮಾರು 500 ದೇಶಿಯ ಸಂಸ್ಥಾನಗಳು ಇದ್ದವು. ಅದರಲ್ಲಿ ಹೈದರಾಬಾದ್‌ ಸಂಸ್ಥಾನವೂ ಒಂದು. 1774 ರಿಂದ 1948 ರವರೆಗೆ […]

Continue Reading

ಶಹಾಬಾದ: ರಾಣಿ ಅಬ್ಬಕ್ಕ, ಅಹಲ್ಯಾಬಾಯಿ ಹೋಳ್ಕರ್, ಕಿತ್ತೂರ ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಸುದ್ದಿ ಸಂಗ್ರಹ ಶಹಾಬಾದ ಎಸ್’ಎಸ್ ಮರಗೋಳ ಕಾಲೇಜಿನಲ್ಲಿ ರಾಣಿ ಅಬ್ಬಕ್ಕ ದೇವಿರವರ 500ನೇ ಜನ್ಮ ಶತಾಬ್ದಿ, ಅಹಲ್ಯಾಬಾಯಿ ಹೋಳ್ಕರ್ ರವರ 300ನೇ ಜನ್ಮ ದಿನಾಚರಣೆ ಮತ್ತು ಕಿತ್ತೂರ ರಾಣಿ ಚೆನ್ನಮ್ಮ ರವರ 200ನೇ ಜಯಂತೋತ್ಸವ ನಿಮಿತ್ಯ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು. ಪಟ್ಟಣದ ಎಸ್’ಎಸ್ ಮರಗೋಳ ಕಾಲೇಜಿನಲ್ಲಿ ಎಸ್’ಎಸ್ ಮರಗೋಳ ಪದವಿ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕಾರ್ಯಕ್ರಮವನ್ನು […]

Continue Reading

ಹಿಂದೂಗಳ ತಾಳ್ಮೆ ಕೆಣಕುತ್ತಿರುವ ಸರ್ಕಾರ: ವೀರಣ್ಣ ಯಾರಿ

ವಾಡಿ: ಸೆ.7 ರಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕಲ್ಲು ತೂರಾಟದ ವೇಳೆ ಬೀದಿ ದೀಪಗಳನ್ನು ಆಫ್ ಮಾಡಿದ್ದು, ಇದು ಪೂರ್ವ ಯೋಜಿತ ಕೃತ್ಯವಾಗಿದೆ. ಇದರಲ್ಲಿ ಭಾಗಿಯಾದ ಸಮಾಜಘಾತುಕರಿಗೆ ಕಠಿಣ ಶಿಕ್ಷಗೆ ಗುರಿಪಡಿಸಬೇಕು ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಆಗ್ರಹಿಸಿದರು.‌ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂ ಹಬ್ಬಗಳು, ಗಣಪತಿ ಉತ್ಸವ ಮತ್ತು ಮೆರವಣಿಗೆಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿ ಬಿಟ್ಟಿವೆ, ಇವುಗಳಿಗೆ ಮಟ್ಟಹಾಕುವುದು ಬಿಟ್ಟು, ಅನ್ಯಾಯದ ವಿರುದ್ಧ ಹೋರಾಡಿದರೆ ಲಾಠಿ ಚಾರ್ಜ್ ಮಾಡುತ್ತಾ […]

Continue Reading

ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಅಲೆ ಸೃಷ್ಟಿಸಿದ ತೇಜಸ್ವಿ

ಕಲಬುರಗಿ: ಪರಿಸರ ಹಾಗೂ ವೈಚಾರಿಕತೆ ಪರ ಬರಹಗಳ ಮೂಲಕ ಅಸಂಖ್ಯಾತ ವ್ಯಕ್ತಿಗಳನ್ನು ಪ್ರಭಾವಿಸಿದ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರು, ನಾಡು-ನುಡಿ ಏಳಿಗೆಗೆ ತಮ್ಮದೆಯಾದ ವಿಶಿಷ್ಟ ಬರಹಗಳ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಅಲೆ ಸೃಷ್ಟಿಸಿದ ಮೇರು ಸಾಹಿತಿಯಾಗಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ಶಹಾಬಾದ ತಾಲೂಕಿನ ಭಂಕೂರ್ ಗ್ರಾಮದ ಗಣೇಶ್ ನಗರದಲ್ಲಿನ ಕೋರಿಸಿದ್ದೇಶ್ವರ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಸಾಯಂಕಾಲ ಜರುಗಿದ ‘ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರ 87ನೇ ಜನ್ಮದಿನಾಚರಣೆ’ಯಲ್ಲಿ […]

Continue Reading

ಕಾಲೇಜಿನ ಅತಿಥಿ ಉಪನ್ಯಾಸಕರ ಶೈಕ್ಷಣಿಕ ಗೊಂದಲ ಪರಿಹರಿಸಲು ಪ್ರತಿಭಟನೆ

ಚಿತ್ತಾಪುರ: ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಬಗೆಹರಿಸಬೇಕು ಮತ್ತು ಅತಿಥಿ ಉಪನ್ಯಾಸಕರ ನೇಮಕ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಎಐಡಿಎಸ್ಓ ಸಂಘಟನೆ ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪಟ್ಟಣದ ರೇವಣಸಿದ್ದಪ್ಪ ಕಾಂತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ತಹಸೀಲ್ ಕಚೇರಿಯವರೆಗೆ ಎಐಡಿಎಸ್ಓ ತಾಲೂಕು ಪದಾಧಿಕಾರಿಗಳ ನೇತೃತ್ವದದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಸಮಿತಿ ಸದಸ್ಯ ದೇವರಾಜು ಎಸ್ ರಾಜೋಳ್ ಮಾತನಾಡಿ, ರಾಜ್ಯದಾದ್ಯಂತ ಪದವಿ […]

Continue Reading

ಜಾತಿ, ದ್ವೇಷದ ಗೋಡೆಯನ್ನು ಒಡೆದ ಗುರು: ವೀರಣ್ಣ ಯಾರಿ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಅಂಗವಾಗಿ ಮುಖಂಡರು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಜಾತಿ, ದ್ವೇಷದ ಗೋಡೆಯನ್ನು ಒಡೆದು ಎಲ್ಲರಲ್ಲಿ ಭಾತೃತ್ವ ಬೀಜ ಬಿತ್ತಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಆದರ್ಶಪೂರ್ಣವಾದದ್ದು ಎಂದರು. ಮಹಾಭಾರತದಲ್ಲಿ ಶ್ರೀ ಕೃಷ್ಣನು ಜಗತ್ತಿನಲ್ಲಿ ಅಧರ್ಮ ಯಾವಾಗ ಹೆಚ್ಚುತ್ತದೆ ಅದನ್ನು ಮಟ್ಟ ಹಾಕಿ, ಧರ್ಮವನ್ನು ಪುನರ್ ಸ್ಥಾಪಿಸಲು ನಾನು ಮತ್ತೆ ಮತ್ತೆ ಜನ್ಮ ಎತ್ತುತ್ತೆನೆ ಎಂದು […]

Continue Reading

ಶಿಕ್ಷಕರಿಂದ ಉತ್ತಮ ಸಮಾಜ ನಿರ್ಮಾಣ

ಸುದ್ದಿ ಸಂಗ್ರಹ ಶಹಾಬಾದ್ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತಮಹತ್ವವಾದದ್ದು ಎಂದು ಮುಖ್ಯಗುರು ಸಂಗೀತಾ ದೇವರಮನಿ ಹೇಳಿದರು. ಪಟ್ಟಣದ ಚವ್ಹಾಣ್ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಅವರು ನಂದಗೋಕುಲ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿ ಮಾತನಾಡಿದ ಅವರು, ಒಬ್ಬ ಶಿಕ್ಷಕ ಜವಾಬ್ದಾರಿ ಅರಿತು ಕೆಲಸ ಮಾಡಿ ಮಕ್ಕಳ ಭವಿಷ್ಯ ರೂಪಿಸಿದರೆ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು‌. ಭಾರತೀಯ ಶಿಕ್ಷಣ ವ್ಯವಸ್ಥೆಗೆ ಗುರು-ಶಿಷ್ಯರ ಪರಂಪರೆಭದ್ರ ಅಡಿಪಾಯವಾಗಿದೆ. ಶಿಕ್ಷಕರು ಪಾಠಕ್ಕೆ […]

Continue Reading

ಭೂಮಿ ಪೂಜೆ, ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಸುದ್ದಿ ಸಂಗ್ರಹ ಶಹಾಬಾದ ರಾಯಚೋಟಿ ವೀರಭದ್ರೇಶ್ವರ ಆಶ್ರಮ ಹಾಗೂ ಭದ್ರಕಾಳಿ ದೇವಸ್ಥಾನದ ನೂತನ ಕಟ್ಟಡದ ಭೂಮಿ ಪೂಜೆಯನ್ನು ಸಮಾಜ ಸೇವಕಿ ಜಯಶ್ರೀ ಮತ್ತಿಮೂಡ ನೆರವೇರಿಸಿದರು ಮತ್ತು 501 ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು ಎಂದು ಶ್ರೀ ಮಠದ ಪೂಜ್ಯ ಶಂಕ್ರಯ್ಯ ಸ್ವಾಮಿ ಹೇಳಿದರು.  ನಗರದಲ್ಲಿ ಸೋಮುವಾರ ರಾಯಚೋಟಿ ವೀರಭದ್ರೇಶ್ವರ ಆಶ್ರಮದ ನೂತನ ಕಟ್ಟಡದ ಶಂಕು ಸ್ಥಾಪನೆ ಮತ್ತು ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀಮಠಕ್ಕೆ ಭಕ್ತರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ […]

Continue Reading