ಮಹಿಳೆಯರ ದೂರು ಪೆಟ್ಟಿಗೆ ಅನಾವರಣ

ಸುದ್ದಿ ಸಂಗ್ರಹ ಶಹಾಬಾದ ಪಟ್ಟಣದ ಎಸ್’ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಹಂಪಮ್ಮ ಹಿರೇಮಠ ಮಹಿಳೆಯರ ದೂರು ಪೆಟ್ಟಿಗೆ ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ಡಾ.ಬಸವರಾಜ್ ಹಿರೇಮಠ, ಡಾ.ಸುರೇಖಾ ನಾಟೆಕರ್, ಡಾ.ಹಣಮಂತ ಸೇಡಂಕರ್, ಡಾ.ಗಂಗಾಧರ್ ಸ್ಥಾವರ ಮಠ, ಡಾ.ಕಾವೇರಿ, ಡಾ.ನಾಗರಾಜ ದೇವತಕಲ್, ಡಾ.ಲಕ್ಷ್ಮಣ ರಾಠೋಡ , ಪ್ರಮುಖರಾದ ಲಾಲಿತ, ಶಿವುಶಂಕರ್ ಹಿರೇಮಠ ಸೇರಿದಂತೆ ಬೋಧಕ ಬೋಧಕ್ಕೆತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

ಶಹಾಬಾದ: ನೂತನ ತಹಸೀಲ್ದಾರ್‌ ನೀಲಪ್ರಭಾ ಬಬಲಾದ ಅವರಿಗೆ ಸನ್ಮಾನ

ಸುದ್ದಿ ಸಂಗ್ರಹ ಶಹಾಬಾದ ನೂತನ ತಹಸೀಲ್ದಾರ್ ನೀಲಪ್ರಭಾ ಬಬಲಾದ ಅವರಿಗೆ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶಿವಪುತ್ರ ಕರಣಿಕ ಮತ್ತು ಪದಾಧಿಕಾರಿಗಳು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ಗುರುರಾಜ ಸಂಗಾವಿ, ನೌಕರರ ಸಂಘದ ವೀಠಾಬಾಯಿ, ಸುಶೀಲಾ, ಸುಲೋಚನಾ, ಬನ್ನಪ್ಪ ಸೈದಾಪುರ, ಈರಣ್ಣ ಸಾತಖೇಡ, ರವಿಕುಮಾರ ಮುತ್ತಗಿ, ಮುನೀರ್, ನರಸಪ್ಪ ಇದ್ದರು.

Continue Reading

ಪಪ್ಪಾಯಿ ಹಣ್ಣು ಆರೋಗ್ಯಕರ ಮತ್ತು ಲಾಭದಾಯಕ ಕೃಷಿ

ಸುದ್ದಿ ಸಂಗ್ರಹ ಕಾಳಗಿ ಪಪ್ಪಾಯಿ ಹಣ್ಣು ಕೃಷಿಗೆ ಶ್ರಮದಾಯಕ ಅಗತ್ಯ. ಸೂಕ್ತ ಕಾಲಕ್ಕೆ ಬೆಳೆ ನಿರ್ವಹಣೆ ಮಾಡಬೇಕು. ಇದರ ಸೇವನೆ ಆರೋಗ್ಯಕರ ಮತ್ತು ರೈತರಿಗೆ ಲಾಭದಾಯಕ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್. ಬಿರಾದಾರ ಹೇಳಿದರು. ತಾಲೂಕಿನ ಹೆಬ್ಬಾಳ ಸಮೀಪದ ದೇಸಾಯಿಯವರ ಪಪ್ಪಾಯಿ ತೋಟದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ತೋಟಗಾರಿಕೆ ಕ್ಷೇತ್ರಕ್ಕೆ ಭೇಟಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ಪಪ್ಪಾಯಿ ಹಣ್ಣು ಜೀರ್ಣಾಂಗದ ಆರೋಗ್ಯ ಸುಧಾರಿಸುತ್ತದೆ. […]

Continue Reading

ಎಲ್​ಟಿಟಿ ಮತ್ತು ಕೋನಾರ್ಕ್ ರೈಲು ನಿಲ್ಲಿಸುವಂತೆ ಬ್ಲಾಕ್ ಕಾಂಗ್ರೆಸ್ ಮುಖಂಡರಿಂದ ಡಿಆರ್‌ಎಂಗೆ ಮನವಿ

ಚಿತ್ತಾಪುರ: ರೈಲು ನಿಲ್ದಾಣದಲ್ಲಿ ಇನ್ನೂ ಕೆಲವು ರೈಲುಗಳುನಿಲ್ಲಿಸಬೇಕು, ಒಂಟಿ ಕಮಾನ್ ಬಳಿ ಕಬ್ಬಿಣದ ಗೇಟ್ ಎತ್ತುವುದು, ಪ್ಲಾಟ್ ಫಾರ್ಮ್ ಸಂಖ್ಯೆ 3 ರೈಲು ನಿಲ್ದಾಣದಲ್ಲಿ ಟಿಕೆಟ್ ಬುಕಿಂಗ್ ಕೌಂಟರ್ ತೆರೆಯಬೇಕು, ಒಂಟಿ ಕಮಾನ್’ನಿಂದ ನಿಲ್ದಾಣಕ್ಕೆ ರಸ್ತೆ ದುರಸ್ತಿ ಮಾಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಮತ್ತು ಮುಖಂಡರು ಸಿಕಂದರಾಬಾದ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಆರ್‌ಎಂ) ಡಾ. ಆರ್ ಗೋಪಾಲಕೃಷ್ಣನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಚಿತ್ತಾಪುರ ರೈಲು ನಿಲ್ದಾಣಕ್ಕೆ ಬುಧವಾರ ಆಗಮಿಸಿದ ಸಂದರ್ಭದಲ್ಲಿ ಅವರನ್ನು […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ಮಾಜಿ ಪ್ರಧಾನಿ ಅಟಲ್’ಜಿ ಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ಸ್ಮರಣೆ ಜರುಗಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ವಿಶ್ವವೇ ಅಚ್ಚರಿಯಿಂದ ನೋಡುವಂತೆ ದೇಶವನ್ನು ಮುನ್ನಡೆಸಿದ ಕೀರ್ತಿಗೆ ಪಾತ್ರರಾದ ವಾಜಪೇಯಿ ಅವರು ಮೂರು ಬಾರಿ ಪ್ರಧಾನಿ ಹುದ್ದೆಗೇರಿದ್ದರು ಎಂದರು. ಒಂದು ಬಾರಿ 13 ದಿನಕ್ಕೆ ಅಧಿಕಾರ ಕಳೆದುಕೊಂಡರೆ, ಮತ್ತೊಮ್ಮೆ 13 ತಿಂಗಳಿಗೆ ಅಧಿಕಾರ ಕಳೆದುಕೊಂಡರು. ಮೂರನೇ ಬಾರಿಗೆ ಪ್ರಧಾನಿ ಪಟ್ಟ ಅಲಂಕರಿಸಿ ಐದು ವರ್ಷ ಅಧಿಕಾರ […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು, ದೇಶಕ್ಕಾಗಿ ಹೋರಾಡಿದ ವೀರರನ್ನು ಗೌರವಿಸಿ ಅವರಿಗೆ ಕೃತಜ್ಞರಾಗಿರುವುದೆ ಈ ನೆಲದ ಗುಣವಾಗಿದೆ ಎಂದರು. ಪ್ರವಾಸಿಗರ ಸ್ವರ್ಗ ಎಂದು ಕರೆಯಲ್ಪಡುವ ಜಮ್ಮು ಕಾಶ್ಮೀರ ಪ್ರವಾಸಕ್ಕೆ ಹೋಗಿದ್ದ ಭಾರತೀಯರ ಮೇಲೆ ಪಹಲ್‌ಗಾಮ್‌ನಲ್ಲಿ ಪಾಕ್ ಉಗ್ರಗಾಮಿಗಳು ಹಾಡುಹಗಲೆ ಗುಂಡಿಟ್ಟು ಕೊಂದು ಭಾರತೀಯ ಹೆಣ್ಣು ಮಕ್ಕಳ ಹಣೆಯ ಕುಂಕುಮವನ್ನು ಅಳಿಸಿ ಹಾಕಿದ್ದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕ್ ಉಗ್ರರಿಗೆ ತಕ್ಕ ಪ್ರತ್ಯುತ್ತರ […]

Continue Reading

ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಭವರಲಾಲ್’ಗೆ ಶಾಲು ಹೊದಿಸಿ ಸನ್ಮಾನಿಸಿದ ವೀರಣ್ಣ ಯಾರಿ

ವಾಡಿ: ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ, ಅಂತರಾಷ್ಟ್ರೀಯ ಯೋಗ ಸಾಧಕ ಭವರಲಾಲ್ ಆರ್ಯ್ ಅವರನ್ನು ವಾಡಿ ಪತಂಜಲಿ ಯೋಗ ಶಿಕ್ಷಕ ವೀರಣ್ಣ ಯಾರಿ, ನಾಗರಾಜಗೌಡ ಗೌಡಪ್ಪನೂರ ಅವರು ಶಾಲು ಹೊದಿಸಿ ಸನ್ಮಾನಿಸಿದರು. ಕಲಬುರಗಿ ನಗರದ ಅಪ್ಪಾ ಗಾರ್ಡನ್’ನಲ್ಲಿ ಪತಂಜಲಿ ಯೋಗ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಯೋಗಾಭ್ಯಾಸ‌ ಶಿಬಿರಕ್ಕೆ ಯೋಗಾಚಾರ್ಯ ಭವರ್ ಲಾಲ್ ಆರ್ಯ ಅವರು ಆಗಮಿಸಿದ್ದರು. ಯೋಗ ಶಿಕ್ಷಕ ವೀರಣ್ಣ ಯಾರಿ ಅವರು ಆರ್ಯ್ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಕಳೆದ ಜೂನ್ 21ರ ಅಂತರಾಷ್ಟ್ರೀಯ […]

Continue Reading

ಅಮೃತ್ 2.0 ಯೋಜನೆ: ಪೈಪ್‌ಲೈನ್ ಅಳವಡಿಕೆ ಕಾಮಗಾರಿ ಆರಂಭ

ಚಿತ್ತಾಪುರ: ಪಟ್ಟಣದ ಪ್ರತಿಯೊಂದು ವಾರ್ಡಿನ ಮನೆಗೂ ಅಮೃತ್ 2.0 ಯೋಜನೆಯಡಿ ಕುಡಿಯುವ ನೀರು ಪೂರೈಕೆ ಮಾಡುವ ಗುರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೊಂದಿದ್ದಾರೆ ಎಂದು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಚವ್ಹಾಣ ಹೇಳಿದರು. ಪಟ್ಟಣದ ಸ್ಟೇಷನ್ ತಾಂಡಾದಲ್ಲಿ ಸುಧಾರಿತ ಕುಡಿಯುವ ನೀರು ಸರಬರಾಜು ಅಮೃತ್‌ 2.0 ಯೋಜನೆಯಡಿ ಇತ್ತಿಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ […]

Continue Reading

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಾಗರ ಪಂಚಮಿ ಹಬ್ಬ ಆಚರಣೆ

ಚಿತ್ತಾಪುರ: ಹಿಂದೂ ಧರ್ಮದ ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿ ಹಬ್ಬವನ್ನು ನಮ್ಮ ಶಾಲೆಯಲ್ಲಿ ಶಾಲಾ ಶಿಕ್ಷಕಿಯರು ಮತ್ತು ವಿದ್ಯಾರ್ಥಿನಿಯರು ನಾಗರ ಮೂರ್ತಿಗೆ ಹಾಲನ್ನು ಎರೆಯು ಮೂಲಕ ಹಬ್ಬದ ಪರಂಪರೆಯನ್ನು ಶಾಲೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಸಹ ಕಾರ್ಯದರ್ಶಿ ಮತ್ತು ಮುಖ್ಯಗುರು ಪ್ರೀಯಾಂಕ, ಜಂಟಿ ಕಾರ್ಯದರ್ಶಿ ಬಸವರಾಜ ಪಿ.ಬಿ, ಶಿಕ್ಷಕರಾದ ಮಹಾದೇವ, ದೇವೆನ್, ಕಾಶೀಮ್ ಅಲೀ, ಸಲೀಮ್, ಅಶ್ವಿನಿ, ಶ್ರೀಮತಿ.ವಸಂತ , ನಂಧೂರಕರ್, ಅಮ್ರೀನ್ ಬೇಗಂ, ಅಂಬಿಕಾ, ಅಂಕಿತ, ಬಸಮ್ಮ, ಸಾಧನ ಶಿಲ್ಪಿ, ಬಸಮ್ಮ […]

Continue Reading

ವಾಡಿ ಪಟ್ಟಣದಲ್ಲಿ ಕಲುಷಿತ ನೀರು ಪೂರೈಕೆ: ವೀರಣ್ಣ ಯಾರಿ ಆಕ್ರೋಶ

ವಾಡಿ: ಪಟ್ಟಣದಲ್ಲಿ ಮತ್ತೆ ರಾಡಿ ನೀರು ಪೂರೈಕೆಯಾಗುತ್ತಿರುವದರಿಂದ ಸಾರ್ವಜನಿಕರು ಅನಿವಾರ್ಯವಾಗಿ ಕಲುಷಿತ ನೀರನ್ನೆ ಬಳಸುವ ಪರಿಸ್ಥಿತಿ ಮುಂದುವರೆದಿದೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಪುರಸಭೆ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಇದನ್ನು ಗಂಭೀರವಾಗಿ ಪರಿಗಣಿಸಿ, ಸಾರ್ವಜನಿಕ ಹಿತಾಸಕ್ತಿಗಾದರೂ ಕ್ರಮಕೈಗೊಳ್ಳಿ ಎಂದು ಸುಮಾರು ಸಲ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರದ ಮೂಲಕ ಗಮನಕ್ಕೆ ತಂದರು ಇದುವರೆಗೆ ಅದೆ ಪರಿಸ್ಥಿತಿ ಮುಂದುವರೆದಿದೆ. ಶಾಶ್ವತ ಕುಡಿಯುವ ನೀರಿನ ಯೋಜನೆಯಡಿ ನೀರು ಶುದ್ಧೀಕರಣ ಘಟಕ ನಿರ್ಮಾಣವಾದರು ಸಹ ಇಲ್ಲಿನ ಅಧಿಕಾರಿಗಳ ಬೇಜವಾಬ್ದಾರಿಯಿಂದ ನೀರು […]

Continue Reading