ಚಿತ್ತಾಪುರ: ವೆಂಕಟೇಶ್ವರ ಕಾಲೋನಿಯಲ್ಲಿಎರಡು ಮನೆ ಕಳ್ಳತನ

ಚಿತ್ತಾಪುರ: ಪಟ್ಟಣದ ವೆಂಕಟೇಶ್ವರ ಕಾಲೋನಿಯಲ್ಲಿ ನಿನ್ನೆ (ರವಿವಾರ) ರಾತ್ರಿ 2 ಗಂಟೆ ಸುಮಾರಿಗೆ ಎರಡು ಮನೆಗಳು ಕಳ್ಳತನ ಮಾಡಿರುವ ಘಟನೆ ನಡೆದಿದೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಗುರುನಾಥ ಹಿಟ್ಟಿನ ಗೀರಿಣಿಯವರ ಮೆನೆಯಲ್ಲಿದ್ದ 2 ತೊಲೆ ಬಂಗಾರ, 15 ತೊಲೆ ಬೆಳ್ಳಿ, 10 ಸಾವಿರ ರೂ. ಕಳ್ಳತನವಾಗಿದೆ. ಧೂಳಯ್ಯಸ್ವಾಮಿ ಎನ್ನುವವರ ಮನೆಯಲ್ಲಿದ್ದ 3 ತೊಲೆ ಬಂಗಾರ, 9 ತೊಲೆ ಬೆಳ್ಳಿ, 30 ಸಾವಿರ ರೂ. ಕಳ್ಳತನವಾಗಿದೆ, ಶಂಕರ ಕೊಳಕೂ‌ ಎನ್ನುವವರ ಮನೆಯ ಕೀಲಿ ಕೈ ಮುರಿದು ಕಳ್ಳತನಕ್ಕೆ ಯತ್ನಿಸಿರುವದಾಗಿ […]

Continue Reading

ವಾಡಿ: ಬಿಜೆಪಿ ಮಾಜಿ ಅಧ್ಯಕ್ಷರಿಗೆ ಶ್ರದ್ಧಾಂಜಲಿ

ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಹಿರಿಯ ಮುಖಂಡ, ವಾಡಿ ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಹಾಗೂ ಪುರಸಭೆ ಮಾಜಿ ಸದಸ್ಯ ರಾಮಚಂದ್ರರೆಡ್ಡಿ ಮುನಿಯಪ್ಪ ದಾಸ್ ಅವರಿಗೆ ಬಿಜೆಪಿ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ನಮ್ಮ ಪಕ್ಷದ ಧೀಮಂತ ನಾಯಕರಾಗಿ ಪಕ್ಷವನ್ನು ಬೇರು ಮಟ್ಟದಲ್ಲಿ ಗಟ್ಟಿಗೊಳಿಸಿ, ಮಾಜಿ ಶಾಸಕ ವಾಲ್ಮೀಕ ನಾಯಕ ಅವರ ಜೊತೆ ಪಕ್ಷ ಸಂಘಟನೆಗೆ ಶ್ರಮಿಸಿದ್ದ ರಾಮಚಂದ್ರರೆಡ್ಡಿ ಅವರು ಅನಾರೋಗ್ಯದಿಂದ ಬುಧವಾರ ನಮ್ಮನ್ನು […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ಭಗೀರಥ ಮಹರ್ಷಿ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಗೀರಥ ಮಹರ್ಷಿ ಭಾವಚಿತ್ರಕ್ಕೆ ಮುಖಂಡರು ಪುಷ್ಪ ನಮನ ಸಲ್ಲಿಸುವ ಮೂಲಕ ಭಗೀರಥ ಮಹರ್ಷಿ ಜಯಂತಿ ಆಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಸೋಲಿನಿಂದ ಧೃತಿಗೆಡದೆ, ಸತತ ಪ್ರಯತ್ನ ಪಡಬೇಕು. ಪ್ರಯತ್ನಕ್ಕೆ ಇನ್ನೊಂದು ಹೆಸರೆ ಭಗೀರಥರು ಎಂದರು. ಅವರ ಸತತ ಯತ್ನದಿಂದ, ತಪಸ್ಸಿನಿಂದ, ಭೂಲೋಕದ ಜೀವರಾಶಿಗೆ ನೀರು ದೊರೆಯುವಂತಾಯಿತು. ಭಗೀರಥರ ಬಹುದೊಡ್ಡ ಮಹಾರಾಜ ಅವರಿಗೆ ಸಕಲ ವೈಭವಗಳಿದ್ದರೂ ಒಂದು ಕೊರಗಿತ್ತು. ಅವನ ತಂದೆ ಮತ್ತು ತಾಯಂದರಿಗೆ ದೇವಗಂಗೆ ಪಡೆಯಬೇಕು […]

Continue Reading

ಮನೆ ಆವರಣದಲ್ಲಿ ಗಾಂಜಾ ಗಿಡ: ಬೆಂಗಳೂರಿನ ಹಿರಿಯ ನಾಗರಿಕನಿಗೆ ಹೈಕೋರ್ಟ್ ರಿಲೀಫ್

ಬೆಂಗಳೂರು: ಮನೆ ಆವರಣದಲ್ಲಿ ಬೆಳೆದಿದ್ದ ಗಾಂಜಾ ಗಿಡದಿಂದಾಗಿ ಕ್ರಿಮಿನಲ್ ಕೇಸ್ ಎದುರಿಸುತ್ತಿದ್ದ 67 ವರ್ಷದ ವ್ಯಕ್ತಿಗೆ ಹೈಕೋರ್ಟ್ ರಿಲೀಫ್ ನೀಡಿದೆ. 2023ರಲ್ಲಿ ಬೆಂಗಳೂರಿನ ಜಯನಗರದ ಚಂದ್ರಶೇಖರ ಎಂಬುವರ ಮನೆ ಆವರಣದಲ್ಲಿ ಐದು ಗಾಂಜಾ ಗಿಡಗಳು ಬೆಳೆದಿದ್ದವು. ಈ ಪ್ರಕರಣ ಸಂಬಂಧ ಪೊಲೀಸರು ಚಂದ್ರಶೇಖರ​ ವಿರುದ್ಧ ಕೇಸ್ ದಾಖಲಿಸಿದ್ದರು. ಆದರೆ ಇದೀಗ ಆ ಪ್ರಕರಣವನ್ನು ಹೈಕೋರ್ಟ್ ಇಂದು (ಮೇ 05) ರದ್ದುಗೊಳಸಿದೆ. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಹಿರಿಯ ನಾಗರಿಕ ಚಂದ್ರಶೇಖರ […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ಬಸವ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ವಿಶ್ವಗುರು ಬಸವಣ್ಣನವರ 892ನೇ ಜಯಂತಿಯನ್ನು ಬಸವೇಶ್ವರ ಭಾವಚಿತ್ರಕ್ಕೆ ಬಿಜೆಪಿ ಮುಖಂಡರು ಗೌರವ ಪುಷ್ಪನಮನ ಸಲ್ಲಿಸುವುದರ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಎಸ್.ಸಿ ಮೂರ್ಚಾದ ಮಾಜಿ ಅಧ್ಯಕ್ಷ ರಾಜು ಮುಕ್ಕಣ್ಣ ಮಾತನಾಡಿ, 12ನೇ ಶತಮಾನದಲ್ಲಿಯೇ ಜಾತಿ ಎಂಬ ಕತ್ತಲೆ ಹೋಗಲಾಡಿಸಿ, ಸಾಮಾನತೆಯ ಜ್ಯೋತಿ ಬೆಳಗಿಸಿ, ಸರ್ವರಿಗೂ ಸಮ ಬಾಳು ನೀಡಿದ ಮಹಾನ ಸಮಾಜ ಸುಧಾರಕರು ಅಣ್ಣ ಬಸವಣ್ಣನವರು ಎಂದರು. ಜಾತಿ ಎಂಬ ಅನಿಷ್ಠ ಪದ್ಧತಿಯನ್ನು ನಾವಾಗಿಯೇ ಸೃಷ್ಟಿಮಾಡಿಕೊಂಡಿದ್ದೆವೆ. ಬಸವಣ್ಣನವರು ಎಲ್ಲರೂ […]

Continue Reading

ವಾಡಿ: ಪಹಲ್ಗಾಮ್ ಘಟನೆಯಲ್ಲಿ ಬಲಿಯಾದವರಿಗೆ ನಮನ, ಪಾಕಿಸ್ತಾನದ ವಿರುದ್ಧ ಘೋಷಣೆ

ವಾಡಿ: ಪಟ್ಟಣದ ಅಜಾದ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡು ಮೇಣದ ಬತ್ತಿ ಬೆಳಗುವ ಮೂಲಕ ಪಹಲ್ಗಾಮ್ ಘಟನೆಯಲ್ಲಿ ಉಗ್ರಗಾಮಿಗಳ ದಾಳಿಗೆ ಬಲಿಯಾದವರಿಗೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಪಹಲ್ಗಾಮ್’ದಲ್ಲಿ ಉಗ್ರಗಾಮಿಗಳು ಹಿಂದೂಗಳನ್ನು ಗುರಿಯಾಗಿಟ್ಟುಕೊಂಡು ಭೀಕರವಾಗಿ ಹತ್ಯೆ ಮಾಡಿದ್ದಾರೆ. ದಾಳಿ ವೇಳೆ ಉಗ್ರರು ಪ್ರವಾಸಿಗರ ಧರ್ಮ ಯಾವುದು ಎಂದು ಕೇಳಿ ಗುಂಡಿಕ್ಕಿ ಕೊಂದಿರುವುದು ಅತ್ಯಂತ ಹೇಯ ಕೃತ್ಯವಾಗಿದೆ ಎಂದರು. ದುಷ್ಕರ್ಮಿಗಳು ಧರ್ಮದ ಹೆಸರಿನಲ್ಲಿ ಅಮಾಯಕ, ಮುಗ್ಧ ಜನರನ್ನು ಬಲಿ ತೆಗೆದುಕೊಂಡಿದ್ದಾರೆ. […]

Continue Reading

ನಾಲವಾರ ರೈಲ್ವೆ ನಿಲ್ದಾಣದ ಸಲಹಾ ಸಮಿತಿಗೆ ನೇಮಕ

ನಾಲವಾರ: ದಕ್ಷಿಣ ಮಧ್ಯ ರೈಲ್ವೆಯ ಗುಂತಕಲ್ ವಿಭಾಗದ ನಾಲವಾರ ರೈಲ್ವೆ ನಿಲ್ದಾಣದ ಸಲಹಾ ಸಮಿತಿಯ ಸದಸ್ಯರನ್ನಾಗಿ ರಾಮರೆಡ್ಡಿ ಪಾಟೀಲ ಕೊಳ್ಳಿ, ವೀರಣ್ಣ ಯಾರಿ ಹಾಗೂ ಸರ್ವರ್ ಬೇಗ್ ಅವರನ್ನು ದಕ್ಷಿಣ ಮಧ್ಯ ರೈಲ್ವೆ ಗುಂತಕಲ್ ವಿಭಾಗದ ವ್ಯವಸ್ಥಾಪಕ ಧನಂಜಯಕುಮಾರ ಸಿಂಗ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ್ದಾರೆ. ಬಿಜೆಪಿ ಹಿರಿಯ ಮುಖಂಡ ಹಾಗೂ ರಾಜ್ಯ ತೊಗರಿ ಮಂಡಳಿ ಮಾಜಿ ಅಧ್ಯಕ್ಷ ಲಿಂಗಾರೆಡ್ಡಿ ಬಾಸರೆಡ್ಡಿ ನೂತನ ಸದಸ್ಯರುಗಳಿಗೆ ಪತ್ರ ನೀಡಿದರು. ಈ ಸಲಹಾ ಸಮಿತಿಯ ಸದಸ್ಯರುಗಳು ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ […]

Continue Reading

ವಾಡಿಯಲ್ಲಿ ಆಡೋಣ ಕೆಡಿಸೋಣ ಎಂಬಂತೆ ಸಾಗಿದ 5 ಕೋಟಿ ಕಾಮಗಾರಿ: ಯಾರಿ

ವಾಡಿ: ಪಟ್ಟಣದಲ್ಲಿ ಸುಮಾರು 3 ವರ್ಷಗಳಿಂದ ಸಾಗುತ್ತಿದ್ದ ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಳಿಸದೆ ಸಾರ್ವಜನಿಕರಿಗೆ ತೊಂದರೆ ಕೊಡುವದರಲ್ಲಿ ಇಲ್ಲಿನ ಗುತ್ತಿಗೆದಾರ ಹಾಗೂ ಲೋಕೋಪಯೋಗಿ ಅನುಷ್ಠಾನ ಅಧಿಕಾರಿಗಳು ನಿರತರಾಗಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಲ್ ಎತ್ತುವ ಸಲುವಾಗಿ ಕಾಮಗಾರಿಯ ವೆಚ್ಚದ ಬೋರ್ಡ್ ಹಾಕಿ, ಸುಮಾರ 40 ವಿದ್ಯುತ್ ದ್ವೀಪದ ಕಂಬಗಳನ್ನು ಬೇಕಾಬಿಟ್ಟಿಯಾಗಿ ಅಳವಡಿಸಿದ್ದರು. ಮೊನ್ನೆ ಗಾಳಿಗೆ ರಸ್ತೆ ಮಧ್ಯ ಚೆಲ್ಲಾಪಿಲ್ಲಿಯಾಗಿ ಬಿದ್ದಾಗ ಮತ್ತು ಈ ಕಳಪೆ ಕಾಮಗಾರಿ ಬಗ್ಗೆ ನಾವು ಜಿಲ್ಲಾಧಿಕಾರಿಗಳಿಗೆ ದೂರು […]

Continue Reading

ಜ್ಞಾನದ ಊರು ಚಿತ್ತಾಪುರ, ಏಷ್ಯಾ ಖಂಡದ ಪ್ರಾಚೀನ ವಿಶ್ವವಿದ್ಯಾಲಯ ನಾಗಾವಿ

ಚಿತ್ತಾಪುರ: ಚಿತ್ತ ಎಂದರೆ ಜ್ಞಾನ, ಪುರ ಎಂದರೆ ಊರು. ಜ್ಞಾನದ ಊರು ಚಿತ್ತಾಪುರವಾಗಿದೆ. ನಾಗಾವಿ ವಿಶ್ವವಿದ್ಯಾಲಯ ವಿಶ್ವದ ಪ್ರಾಚೀನ ಮತ್ತು ದೊಡ್ಡ ವಿಶ್ವವಿದ್ಯಾಲಯವಾಗಿತ್ತು. ಆಕ್ಸಫರ್ಡ ಮತ್ತು ಕೆಂಬ್ರಿಜ್ ವಿಶ್ವವಿದ್ಯಾಲಯದಂತೆ ಮೆರೆದ ನಮ್ಮ ನಾಗಾವಿ ವಿಶ್ವವಿದ್ಯಾಲಯ ಮತ್ತು ಗತ ವೈಭವ ಪುನಃ ಮರುಕಳಿಸಬೇಕಾಗಿದೆ ಎಂದು ಸಂಶೋಧಕ ಸಾಹಿತಿ ಮುಡಬಿ ಗುಂಡೇರಾವ ಆಶಯ ವ್ಯಕ್ತಪಡಿಸಿದರು. ಪಟ್ಟಣದ ಐತಿಹಾಸಿಕ, ಪಾರಂಪರಿಕ ನಾಗಾವಿಯ ತ್ರೈಪುರುಷ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ […]

Continue Reading

ಬಸವ ಜಯಂತಿ ಪ್ರಯುಕ್ತ ಏ.19 ರಂದು ಪೂರ್ವಭಾವಿ ಸಭೆ: ನಾಗರಾಜ ಭಂಕಲಗಿ

ಚಿತ್ತಾಪುರ: ಏ.19 ರಂದು ಮಧ್ಯಾಹ್ನ 1 ಗಂಟೆಗೆ ಬಸವ ಜಯಂತಿ ಪ್ರಯುಕ್ತ ಪೂರ್ವಭಾವಿ ಸಭೆ ಕರೆಯಲಾಗಿದೆ, ಆದ್ದರಿಂದ ಮಹಾಸಭಾದ ಸರ್ವ ಪದಾಧಿಕಾರಿಗಳು ಮತ್ತು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ನಾಗರಾಜ ಭಂಕಲಗಿ ಹೇಳಿದರು. ಪಟ್ಟಣದ ಶರಣಬಸವೇಶ್ವರ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.29 ರಂದು ಕಲಬುರಗಿಯಲ್ಲಿ ಜರುಗುವ ಬಸವ ಜಯಂತಿ ಪ್ರಯುಕ್ತ ಪಟ್ಟಣದ ಶರಣಬಸವೇಶ್ವರ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ, ಸಭೆಗೆ ಅಖಿಲ ಭಾರತ ವೀರಶೈವ […]

Continue Reading