ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್​ನ್ಯೂಸ್: ಋತುಚಕ್ರದ ರಜೆಗೆ ಇಲಾಖೆ ಗ್ರೀನ್​ಸಿಗ್ನಲ್

ಸುದ್ದಿ ಸಂಗ್ರಹ ಬೆಂಗಳೂರು ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ 4 ಸಾರಿಗೆ ನಿಗಮಗಳ ಮಹಿಳಾ ನೌಕರರಿಗೆ ಋತುಚಕ್ರದ ರಜೆ ನೀಡಲು ಸಾರಿಗೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಆ ಮೂಲಕ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜನವರಿ 1ರಿಂದ ಮಹಿಳಾ ಡ್ರೈವರ್, ಕಂಡಕ್ಟರ್ ಸೇರಿ ಮಹಿಳಾ ಸಿಬ್ಬಂದಿ ಋತುಚಕ್ರದ ರಜೆ ಪಡೆಯಬಹುದಾಗಿದೆ. ಕೆಎಸ್ಆರ್​​ಟಿಸಿ, ಬಿಎಂಟಿಸಿ, ಎನ್​​​​ಡಬ್ಲೂಕೆಆರ್​​ಟಿಸಿ ಮತ್ತು ಕೆಕೆಆರ್​ಟಿಸಿ ಎಂಡಿ ಅಕ್ರಂ ಪಾಷ ಈ ಬಗ್ಗೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಆ ಮೂಲಕ 4 ನಿಗಮದ ಮಹಿಳಾ ನೌಕರರಿಗೆ ಕ್ರಿಸ್ […]

Continue Reading

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ಜೀವನ ನಡೆಸೋದು ಕಷ್ಟ ಅಂತ ರಾಜೀನಾಮೆ ಕೊಟ್ಟ ವೈದ್ಯ

ಸುದ್ದಿ ಸಂಗ್ರಹ ಮಂಗಳೂರು ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಸುಳ್ಯದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸರಿಯಾಗಿ ಸಂಬಳವಾಗದ ಕಾರಣ ರಾಜಿನಾಮೆ ನೀಡಿದ್ದಾರೆ. 6 ತಿಂಗಳಿಂದ ಸಂಬಳ ಬರದಿದ್ದಕ್ಕೆ ಬೇಸತ್ತು ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ವೈದ್ಯರಾದ ಡಾ.ಕುಲದೀಪ್ ಎಂ.ಡಿ ರಾ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡುವರೆ ವರ್ಷದಿಂದ ವೈದ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಸಂಬಳ ಬಾರದೆ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತಿದೆ. ಆರ್ಥಿಕ ಸಮಸ್ಯೆ ಉಂಟಾಗುತ್ತಿದೆ ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. […]

Continue Reading

ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ಬಹುಮಾನ: ಸಿಎಂ

ಸುದ್ದಿ ಸಂಗ್ರಹ ಬೆಂಗಳೂರು ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ. ನಗದು ಬಹುಮಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿ.21 ರವಿವಾರ ಒಲಂಪಿಕ್ 2025 ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದನೆಗಳು. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ.ಗಳ ನಗದು ಬಹುಮಾನ […]

Continue Reading

ರಾಜ್ಯದಲ್ಲಿ ಹೆಚ್ಚುತ್ತಿದೆ ಅಪ್ರಾಪ್ತ ಹೆಣ್ಣು ಮಕ್ಕಳ ಗರ್ಭಧಾರಣೆ: 3 ವರ್ಷದಲ್ಲಿ 2,320 ಪ್ರಕರಣ, ಶಿವಮೊಗ್ಗದಲ್ಲಿ ಅಧಿಕ

ಸುದ್ದಿ ಸಂಗ್ರಹ ಬೆಂಗಳೂರು ರಾಜ್ಯದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳು ತಾಯಿ ಆಗುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಆಗುತ್ತಿದೆ. ಕಳೆದ 3 ವರ್ಷಗಳಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಗರ್ಭಧಾರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ 2,320 ಪ್ರಕರಣಗಳು ಬಂದಿವೆ. ಅಷ್ಟೆ ಅಲ್ಲದೆ, ಕಳೆದ 10 ತಿಂಗಳಲ್ಲಿ 749 ಪ್ರಕರಣಗಳು ವರದಿಯಾಗಿವೆ. 2,320 ಪ್ರಕರಣಗಳ ಪೈಕಿ ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲಿ 3 ವರ್ಷದಲ್ಲಿ 163 ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ […]

Continue Reading

Chinni Love U… U Must Love Me: ಇನ್ಸ್‌ಪೆಕ್ಟರ್‌ಗೆ ಲವ್ ಲೆಟರ್ ಬರೆದ ಮಹಿಳೆ

ಸುದ್ದಿ ಸಂಗ್ರಹ ಬೆಂಗಳೂರು ಚಿನ್ನಿ ಲವ್ ಯು, ಯು ಮಸ್ಟ್ ಲವ್ ಮೀ ಎಂದು ರಕ್ತದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಮಹಿಳೆಯೊಬ್ಬರು ಲವ್ ಲೆಟರ್ ಬರೆದಿರುವ ಘಟನೆ ರಾಮಮೂರ್ತಿ ನಗರದಲ್ಲಿ ನಡೆದಿದೆ. ಇನ್ಸ್‌ಪೆಕ್ಟರ್‌ ಸತೀಶ್‌ಗೆ ರಾಮಮೂರ್ತಿ ನಗರದ ನಿವಾಸಿಯಾಗಿರುವ ವನಜಾ ಎನ್ನುವವರು ಪದೆ ಪದೆ ಮಸೇಜ್ ಮಾಡಿ ಪ್ರೀತಿಸುವಂತೆ ಮಸೇಜ್ ಮಾಡುತ್ತಿದ್ದರು. ಅಲ್ಲದೆ ಠಾಣೆಯಲ್ಲಿ ಇನ್ಸ್‌ಪೆಕ್ಟರ್‌ ಇಲ್ಲದಾಗ ಅವರ ಟೇಬಲ್ ಮೇಲೆ ಲವ್ ಲೆಟರ್ ಜೊತೆಗೆ ಕಜ್ಜಾಯದ ಡಬ್ಬಿ, ಹೂ ಬೊಕ್ಕೆ ಮತ್ತು ಎರಡು ಶೀಟ್‌ನಲ್ಲಿ ಇಪ್ಪತ್ತು ಮಾತ್ರೆಗಳನ್ನು […]

Continue Reading

ಉಡುಪಿ ಮೂಲದ ಯುವತಿ ಜೊತೆ ಕೆನಡಾದಿಂದ ವಿಡಿಯೋ ಕಾಲ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಯುವಕ

ಸುದ್ದಿ ಸಂಗ್ರಹ ರಾಮನಗರ ಜಗತ್ತು ಡಿಜಿಟಲ್ ಆಗುತ್ತಿದ್ದಂತೆ ಎಲ್ಲವೂ ಆನ್‌ಲೈನ್ ಮಯವಾಗಿದೆ. ಊಟ, ಶಾಪಿಂಗ್ ಹೀಗೆ ಎಲ್ಲವು ಆನ್‌ಲೈನ್‌ನಲ್ಲೆ ಆರ್ಡರ್ ಮಾಡುವ ಕಾಲವಿದು. ಇದು ಇಷ್ಟಕ್ಕೆ ಸೀಮಿತವಾಗದೆ ನಿಶ್ಚಿತಾರ್ಥ, ಮದುವೆ ಆನ್ಲೈನ್‌ಗೆ ಕಾಲಿಟ್ಟಿದೆ. ಮಾಗಡಿ ಮೂಲದ ಯುವಕ ಹಾಗೂ ಉಡುಪಿ ಮೂಲದ ಯುವತಿ ಆನ್ಲೈನ್‌ನಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿರುವದು ಇದಕ್ಕೆ ಸಾಕ್ಷಿಯಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದ ನಿವಾಸಿ ಸುಹಾಸ್ ಹಾಗೂ ಉಡುಪಿ ಮೂಲದ ಮೇಘನಾ ಆನ್‌ಲೈನ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಉಡುಪಿಯ ಖಾಸಗಿ ಕಲ್ಯಾಣ […]

Continue Reading

ಚಳಿಗೆ ಉತ್ತರ ಕರ್ನಾಟಕ ತತ್ತರ: 9 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

ಸುದ್ದಿ ಸಂಗ್ರಹ ಬೆಂಗಳೂರು ಚಳಿ ಹೆಚ್ಚಾದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ 9 ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಶೀತಗಾಳಿ ಬೀಸಲಿದೆ. ಜನರು ಆದಷ್ಟು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಈ 9 ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದೆ. ಇನ್ನೂ ತಾಪಮಾನ ಕುಸಿಯುವ ಸಾಧ್ಯತೆ ಇದೆ. ವಿಜಯಪುರ ಹಾಗೂ ಯಾದಗಿರಿ […]

Continue Reading

ಉದ್ಯಮಿಯಾಗಿ ಬಾಪೂಜಿ ಸಂಸ್ಥೆ ಕಟ್ಟಿದ ಶಾಮನೂರು ಶಿವಶಂಕರಪ್ಪ

ಸುದ್ದಿ ಸಂಗ್ರಹ ದಾವಣಗೆರೆ/ಬೆಂಗಳೂರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 1931ರಲ್ಲಿ ಜನನಶಾಮನೂರು ಶಿವಶಂಕರಪ್ಪ ಭಾರತದ ಅತ್ಯಂತ ಹಿರಿಯ ಶಾಸಕರಾಗಿ ಗುರುತಿಸಿಕೊಂಡಿದ್ದಾರೆ. ಜೂನ್ 16, 1931 ರಂದು ದಾವಣಗೆರೆಯಲ್ಲಿ ಜನಿಸಿದ ಇವರು, ಸಾಮಾನ್ಯ ಕುಟುಂಬದಿಂದ ಬಂದು ರಾಜಕೀಯ, ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತಮ್ಮದೆಯಾದ ಛಾಪು ಮೂಡಿಸಿದ್ದರು. ಉದ್ಯಮಿಯಾಗಿ ಬಾಪೂಜಿ ಸಂಸ್ಥೆ ಕಟ್ಟಿದಶಿವಶಂಕರಪ್ಪನವರು ಶಾಮನೂರು […]

Continue Reading

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೇದೆಗೆ ಸೀಮಂತ

ಸುದ್ದಿ ಸಂಗ್ರಹ ಆನೇಕಲ್ ಪರಪ್ಪನ ಅಗ್ರಹಾರ ಪೋಲಿಸ್ ಠಾಣೆಯಲ್ಲಿ ಮಹಿಳಾ ಪೇದೆಗೆ ಠಾಣೆಯ ಸಿಬ್ಬಂದಿ ಸೀಮಂತ ಮಾಡಿದ್ದಾರೆ. ತುಂಬು ಗರ್ಭಿಣಿಯಾಗಿದ್ದ ಉಮಾಗೆ ಠಾಣೆಯಲ್ಲೆ ಸೀಮಂತ ಮಾಡಿದ್ದು, ಠಾಣೆಯಲ್ಲಿನ ಸಿಬ್ಬಂದಿ ವರ್ಗ ಸೀಮಂತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಠಾಣೆಯಲ್ಲಿ ನಡೆದ ಈ ಕಾರ್ಯಕ್ರಮ ಭಾವನಾತ್ಮಕವಾದ ಕ್ಷಣಗಳಿಗೆ ಸಾಕ್ಷಿಯಾಗಿತ್ತು. ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ಸತೀಶ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಒಂದು ಕ್ಷಣ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಇದೆ ಸಂದರ್ಭದಲ್ಲಿ ಗರ್ಭಿಣಿ ಉಮಾ ಮಾತನಾಡಿ, ನನ್ನ ತವರು ಮನೆಯಿಂದ […]

Continue Reading

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ‌

ಸುದ್ದಿ ಸಂಗ್ರಹ ಬೆಂಗಳೂರುಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರು, ಮಾಜಿ ಸಚಿವರು, ಶಾಸಕರು, ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕಷ್ಟೆ ಅಲ್ಲದೆ ಇಡಿ ನಾಡಿಗೆ ತುಂಬಲಾರದ ನಷ್ಟವಾದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ ಸೂಚಿಸಿದ್ದಾರೆ. ಅವರ ಜೀವನೋತ್ಸಾಹಕ್ಕೆ ಅವರ ವಯಸ್ಸು ಎಂದಿಗೂ ಅಡ್ಡಿಯಾಗಲಿಲ್ಲ, ಅವರ ಸಾರ್ಥಕ ಬದುಕು ಯುವ ಸಮಾಜಕ್ಕೆ ಎಂದಿಗೂ ಮಾದರಿಯಾಗಿರುವಂತಹದ್ದು. ಶಿಕ್ಷಣ, […]

Continue Reading