ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೆ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ: ನೊಂದ ಕುಟುಂಬಕ್ಕೆ ಶಾಸಕ ಸುರೇಶ್ ಕುಮಾರ್ ನೆರವು ಸುದ್ದಿ ಸಂಗ್ರಹ ಬೆಂಗಳೂರುಮಗಳ ಜೀವನಕ್ಕಾಗಿ ತಂದೆ ಕಿಡ್ನಿ ಮಾರಾಟಕ್ಕೆ ಮುಂದಾದ ಕರುಣಾಜನಕ ಕಥೆ ಬೆಂಗಳೂರಿನಲ್ಲಿ ನಡೆದಿದೆ. ಈ ವಿಚಾರ ತಿಳಿದ ತಕ್ಷಣ ಸ್ಪಂದಿಸಿದ ಶಾಸಕ ಸುರೇಶಕುಮಾರ್ ನೊಂದ ಕುಟುಂಬಕ್ಕೆ ನೆರವಾಗಿ ಮಾನವೀಯತೆ ಮರೆದಿದ್ದಾರೆ. ಕುಸುಮಾ ಎಂಬ ಮಹಿಳೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರಿದ್ದರು. ಕಾಲು ಕಳೆದುಕೊಂಡಿದ್ದರು ಇತ್ತೀಚೆಗೆ ಪರೀಕ್ಷೆ ಬರೆದಿದ್ದರು. ಅನಾರೋಗ್ಯದಿಂದ ವೈಟ್ಫೀಲ್ಡ್ನ ಎಸ್ಟರ್ ಆಸ್ಪತ್ರೆಗೆ ದಾಖಲಾಗಿದ್ದರು. […]
Continue ReadingCategory: ರಾಜ್ಯ
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು
ಸುದ್ದಿ ಸಂಗ್ರಹ ಬೆಂಗಳೂರುಧಾರವಾಡದ ಜಿ.ಪಂ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಹಿನ್ನೆಲೆ ಅವರ ಶಾಸಕ ಸ್ಥಾನ ರದ್ದಾಗಿದೆ. ಬುಧವಾರ ಶಾಸಕರು ಸೇರಿದಂತೆ 16 ಮಂದಿಯನ್ನು ದೋಷಿ ಎಂದು ತೀರ್ಪು ಪ್ರಕಟಿಸಿದ್ದ ಕೋರ್ಟ್ ಇಂದು (ಶುಕ್ರವಾರ) ಶಿಕ್ಷೆಯ ಅವಧಿ ಪ್ರಕಟಿಸಿದೆ. ಶಿಕ್ಷೆಗೆ ಗುರಿಯಾದ ಹಿನ್ನೆಲೆ ಜನಪ್ರತಿನಿಧಿಗಳ ಕಾಯ್ದೆಯ ಸೆಕ್ಷನ್ 8(4) ರ ಪ್ರಕಾರ ತಕ್ಷಣದಿಂದಲೆ ವಿನಯ್ ಕುಲಕರ್ಣಿ ಅವರ ಶಾಸಕ […]
Continue Readingರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆ: ಬೆಸ್ಕಾಂ, ಸೆಸ್ಕ್ ಬೆಲೆ ಏರಿಕೆ ಮತ್ತು ಮೆಸ್ಕಾಂ, ಜೆಸ್ಕಾಂ ಸೇರಿ ಹಲವೆಡೆ ಇಳಿಕೆ
ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದಲ್ಲಿ ವಿದ್ಯುತ್ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ಸಿ) ಆದೇಶ ಹೊರಡಿಸಿದೆ. ಬೆಸ್ಕಾಂ ದರ ಪ್ರತಿ ಯೂನಿಟ್ಗೆ 56 ಪೈಸೆ ಏರಿಕೆಯಾಗಿದೆ. ಜೊತೆಗೆ ಸೆಸ್ಕ್ 15 ಪೈಸೆ ಹೆಚ್ಚಳವಾಗಿದೆ. ಉಳಿದಂತೆ ಮೆಸ್ಕಾಂ 9 ಪೈಸೆ, ಜೆಸ್ಕಾಂ, ಹೆಸ್ಕಾಂ ದರವು 10 ಪೈಸೆ, ಎಚ್ಆರ್ಇಸಿಎಸ್ 1.55 ರೂ. ಪ್ರತಿ ಯೂನಿಟ್ಗೆ ಕಡಿಮೆಯಾಗಿದೆ. 2024-25ನೇ ಆರ್ಥಿಕ ವರ್ಷದಲ್ಲಿ ಬೆಸ್ಕಾಂಗೆ ಉಂಟಾಗಿರುವ ಸಾವಿರಾರು ಕೋಟಿ ರೂಪಾಯಿಗಳ ಆದಾಯದ ಕೊರತೆಯನ್ನು ಸರಿದೂಗಿಸಲು, ಮುಂಬರುವ 2026-27ನೇ ಸಾಲಿನಲ್ಲಿ […]
Continue Readingಚಿಕನ್ ಪ್ರಿಯರೇ ಎಚ್ಚರ: ರಾಜ್ಯಕ್ಕೆ ಕಾಲಿಟ್ಟಿದೆ ಹಕ್ಕಿ ಜ್ವರ
ಸುದ್ದಿ ಸಂಗ್ರಹ ಬೆಂಗಳೂರುಚಿಕನ್ ಪ್ರಿಯರೆ ಎಚ್ಚರವಾಗಿರಿ. ರಾಜ್ಯಕ್ಕೆ H5N1 ವೈರಸ್ ಹಕ್ಕಿ ಜ್ವರ ಕಾಲಿಟ್ಟಿದ್ದು, ಮೊದಲ ತಪಾಸಣೆಯಲ್ಲೇ ಪತ್ತೆಯಾಗಿದೆ. ಕೇಂದ್ರ ಸರ್ಕಾದ ಅನುಮತಿ ಮೇರೆಗೆ ಪೌಲ್ಟ್ರಿ ಫಾರಂನಲ್ಲಿ ತಪಾಸಣೆ ನಡೆಸಲಾಗಿದ್ದು, ಮೊದಲ ತಪಾಸಣೆಯಲ್ಲೆ ಎಚ್5ಎನ್1 ವೈರಸ್ ಪತ್ತೆಯಾಗಿದೆ. ಈ ಹಿನ್ನೆಲೆ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿರುವ ಕೋಳಿಗಳನ್ನು ಗುಂಡಿ ತೆಗೆದು ಮುಚ್ಚಲಾಗಿದೆ. ಈ ಪೌಲ್ಟ್ರಿ ಫಾರಂನಿಂದ ರಾಜ್ಯದ ನಾನಾ ಭಾಗಗಳಿಗೆ ಕೋಳಿ ಸಪ್ಲೈ ಮಾಡಲಾಗುತ್ತಿತ್ತು. ಹೀಗಾಗಿ ಸರ್ಕಾರದ ಪಶು ವೈದ್ಯಾಧಿಕಾರಿಗಳು ಸುತ್ತಮುತ್ತಲಿನ ಪಂಚಾಯಿತಿಗಳಿಗೂ ನೋಟಿಸ್ […]
Continue Readingಹೆತ್ತ ತಾಯಿಯನ್ನೇ 3ನೇ ಮಹಡಿಯಿಂದ ತಳ್ಳಿ ಕೊಂದ ಮಗ: ಪಾರ್ಶ್ವವಾಯು ಪೀಡಿತೆ ಎಂಬ ಕಾರಣಕ್ಕೆ ಕೃತ್ಯ
ಸುದ್ದಿ ಸಂಗ್ರಹ ಬೆಂಗಳೂರು75 ವರ್ಷದ ವೃದ್ಧ ಮತ್ತು ಪಾರ್ಶ್ವವಾಯು ಪೀಡಿತ ತಾಯಿಯನ್ನು ಮಗನೇ ಅವರು ವಾಸಿಸುತ್ತಿದ್ದ ಬಾಡಿಗೆ ಮನೆಯ ಕಟ್ಟಡದ 3ನೇ ಮಹಡಿಯಿಂದ ಕೆಳಗೆ ತಳ್ಳಿದ್ದು, ತಕ್ಷಣವೆ ಆಕೆ ಸಾವನ್ನಪ್ಪಿದ ಘಟನೆ ಬೆಂಗಳೂರಿನ RR ನಗರದಲ್ಲಿ ನಡೆದಿದೆ. RR ನಗರದ BMEL ಲೇಔಟ್’ನ 3ನೇ ಹಂತದಲ್ಲಿ ಈ ಘಟನೆ ನಡೆದಿದ್ದು, 75 ವರ್ಷದ ಸಾವಿತ್ರಮ್ಮ ಸಿ ಎಂಬ ವೃದ್ದ ತಾಯಿಯನ್ನು ಖಾಸಗಿ ಕಂಪನಿ ಉದ್ಯೋಗಿ ಎಂದು ಹೇಳಿಕೊಳ್ಳುವ ವೆಂಕಟೇಶ್ ತನ್ನ ತಾಯಿಯನ್ನು ನೋಡಿಕೊಳ್ಳುವುದು ಮತ್ತು ಅವರ ಚಿಕಿತ್ಸೆಗೆ […]
Continue Readingದ್ವಿತೀಯ PU ಪರೀಕ್ಷೆ-2 ಪುನಾವರ್ತಿತ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಸುದ್ದಿ ಸಂಗ್ರಹ ಬೆಂಗಳೂರು2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸಲು ಬಯಸುವ ಪುನರಾವರ್ತಿತ ಅಭ್ಯರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗುಡ್ ನ್ಯೂಸ್ ನೀಡಿದೆ. ಅರ್ಜಿ ಸಲ್ಲಿಸುವ ಕಾಲಾವಧಿಯನ್ನು ಏಪ್ರಿಲ್ 18ರವರೆಗೆ ವಿಸ್ತರಿಸಿ ಮಂಡಳಿ ಗುರುವಾರ ಆದೇಶ ಹೊರಡಿಸಿದೆ. ಈ ಮೊದಲು ಅರ್ಜಿ ಸಲ್ಲಿಸಲು ಏಪ್ರಿಲ್ 17 ಕೊನೆಯ ದಿನವಾಗಿತ್ತು. ಆದರೆ ರಾಜ್ಯದ ಹಲವೆಡೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ತಾಂತ್ರಿಕ ದೋಷಗಳು ಕಾಣಿಸಿಕೊಂಡಿದ್ದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿತ್ತು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ […]
Continue Readingಈ ಬಾರಿ ಮುಂಗಾರು ಕೊರತೆ– ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ
ಸುದ್ದಿ ಸಂಗ್ರಹ ಬೆಂಗಳೂರು ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ ಕಡಿಮೆಯಾಗಲಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಡಿಸಿ-ಸಿಇಓಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಡಿಸಿ, ಸಿಇಓಗಳ ಜೊತೆ ಸಭೆ ನಡೆಸಿದರು. ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆಯಂತೆ ಮಳೆಯಾಗುವ ಸಾಧ್ಯತೆಯಿದ್ದು, […]
Continue Readingಅಲ್ಲೂರ(ಬಿ) ಗ್ರಾಮದ 2,877 ಎಕರೆ ಅರಣ್ಯ ಸಂರಕ್ಷಿತ ಮೀಸಲು: ವನ್ಯಜೀವಿ ಮಂಡಳಿ ಸಭೆ ನಿರ್ಧಾರ
ಸುದ್ದಿ ಸಂಗ್ರಹ ಬೆಂಗಳೂರುಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ನೇತೃತ್ವದಲ್ಲಿ ಇಂದು ನಡೆದ ಕರ್ನಾಟಕ ವನ್ಯಜೀವಿ ಮಂಡಳಿಯ 6ನೇ ಸಭೆಯಲ್ಲಿ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರ(ಬಿ) ಗ್ರಾಮದ 2,877 ಎಕರೆ ಅರಣ್ಯವನ್ನು ಸಂರಕ್ಷಿತ ಮೀಸಲು ಎಂದು ಘೋಷಿಸಲು ನಿರ್ಧರಿಸಲಾಗಿದೆ. ಬೆಟ್ಟ ಗುಡ್ಡಗಳಿಂದ ಕೂಡಿದ, ಹಚ್ಚಹಸಿರಿನ ರಮಣೀಯವಾದ ಈ ಅರಣ್ಯ ಪ್ರದೇಶ ಚಿರತೆ, ಕಾಡುಹಂದಿ, ಜಿಂಕೆ, ಕಾಡುಕುರಿ, ಕಾಡುಬೆಕ್ಕು, ಚಿಪ್ಪುಹಂದಿ, ನರಿ ಮೊದಲಾದ ವನ್ಯಜೀವಿಗಳ ಆವಾಸಸ್ಥಾನವಾಗಿದ್ದು, ಈ ಪ್ರದೇಶವನ್ನು ಸಂರಕ್ಷಿತ ಮೀಸಲು ಎಂದು ಘೋಷಿಸಲು ಯೋಗ್ಯವಾಗಿದೆ ಎಂದು […]
Continue Readingಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸಾಧ್ಯತೆ: ಮುಂದಿನ 3 ಗಂಟೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಸುದ್ದಿ ಸಂಗ್ರಹ ಬೆಂಗಳೂರು ರಾಜ್ಯದಲ್ಲಿ ಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಹಿನ್ನೆಲೆ ಮುಂದಿನ 3 ಗಂಟೆ ರಾಜ್ಯದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ತುಮಕೂರು, ಶಿವಮೊಗ್ಗ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.
Continue Readingಇನ್ಮುಂದೆ ಬುಕ್ ಮಾಡಿದ ದಿನವೆ ಗೃಹ ಬಳಕೆ ಸಿಲಿಂಡರ್ ವಿತರಣೆ: ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ
ಸುದ್ದಿ ಸಂಗ್ರಹ ಬೆಂಗಳೂರು ಮಧ್ಯಪ್ರಾಚ್ಯದಲ್ಲಿ ಕದನ ವಿರಾಮದ್ದೆ ಒಂದು ಕಥೆಯಾದರೆ, ರಾಜ್ಯದಲ್ಲಿ ಗ್ಯಾಸ್ ಅಭಾವದ್ದೆ ಇನ್ನೊಂದು ಕಥೆಯಾಗಿದೆ. ಈ ಮಧ್ಯೆ ಗೃಹ ಬಳಕೆ ಸಿಲಿಂಡರ್ ಸಮಸ್ಯೆ ಬಗೆಹರಿಸಲು ಮುಂದಾಗಿರುವ ಸರ್ಕಾರ, 26 ದಿನಗಳ ಬಳಿಕ ಸಿಲಿಂಡರ್ ಬುಕ್ ಮಾಡಿದ್ದರೆ ತಕ್ಷಣ ವಿತರಿಸುವಂತೆ ಗ್ಯಾಸ್ ಏಜೆನ್ಸಿಗಳಿಗೆ ಸೂಚಿಸಿದೆ. ಯಾವುದೆ ಕಾರಣಕ್ಕೂ ಗ್ಯಾಸ್ ಏಜೆನ್ಸಿಗಳ ಮುಂದೆ ಜನ ಕ್ಯೂ ನಿಲ್ಲದಂತೆ ನೋಡಿಕೊಳ್ಳಬೇಕೆಂದು ತಿಳಿಸಿದೆ. ಇನ್ನೂ, ಕಮರ್ಷಿಯಲ್ ಸಿಲಿಂಡರ್ ವಿಚಾರದಲ್ಲಿ ಸುಧಾರಣೆ ಆಗಿದ್ದು, ಆಟೋ ಗ್ಯಾಸ್ ಸಮಸ್ಯೆ ಇದೆ. ಕೇಂದ್ರಕ್ಕೆ ಪತ್ರ […]
Continue Reading