ರಾಜೀನಾಮೆ ಕೊಟ್ಟ ರಾಮಲಿಂಗಾರೆಡ್ಡಿ ಭೇಟಿಯಾದ ಸಿಎಂ: ಮನವೊಲಿಕೆಗೆ ಯತ್ನ

ಸುದ್ದಿ ಸಂಗ್ರಹ ಬೆಂಗಳೂರುಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ಅವರನ್ನು ಸಿಎಂ ಡಿ.ಕೆ ಶಿವಕುಮಾರ್‌ ಭೇಟಿಯಾಗಿದ್ದಾರೆ. ಕೋರಮಂಗಲದ ಖಾಸಗಿ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿಯನ್ನು ಸಿಎಂ ಭೇಟಿ ಮಾಡಿದ್ದಾರೆ. ಖುದ್ದು ಮನವೊಲಿಕೆಗೆ ಪ್ರಯತ್ನಿದ್ದಾರೆ. ಇದಕ್ಕೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ಹೈಕಮಾಂಡ್ ಅವರು ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ. ನಾನು ಸಿಗೋಕೆ ಊರಲ್ಲಿ ಇರಲಿಲ್ಲ. ತಮಿಳುನಾಡಿನ ಧರ್ಮಪುರಿಗೆ ಸಮಾರಂಭಕ್ಕೆ ಹೋಗಿದ್ದೆ. ಖಾತೆ ವಿಚಾರವಾಗಿ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದರು. ತಾವು ಬಯಸಿದ ಖಾತೆಯನ್ನು ಬಿಟ್ಟು ಬೇರೆ ಖಾತೆ ಕೊಟ್ಟಿದ್ದಾರೆಂದು ಬೇಸರಗೊಂಡು […]

Continue Reading

ನೂತನ ಸಚಿವರಿಗೆ ಖಾತೆ ಹಂಚಿಕೆ ಫೈನಲ್‌ ಆಗಿದೆ: ಸಿಎಂ ಡಿಕೆಶಿ

ಸುದ್ದಿ ಸಂಗ್ರಹ ಬೆಂಗಳೂರುನೂತನ ಸಚಿವರಿಗೆ ಖಾತೆ ಹಂಚಿಕೆ ಆಗಿದ್ದು, ಪಟ್ಟಿಯನ್ನು ಹೈಕಮಾಂಡ್‌ಗೆ ಕಳಿಸಿದ್ದೆವೆ. ಶೀಘ್ರವೇ ಪಟ್ಟಿ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದರು. ಇಂದು ಸಂಜೆ ವಿಧಾನಸೌಧಕ್ಕೆ ತೆರಳಿದ್ದ ಸಿಎಂ ಹಲವು ಗಣ್ಯಾತಿಗಣ್ಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದರು. ವಿಧಾನಸೌಧದಲ್ಲಿರೊ ಭುವನೇಶ್ವರಿ ತಾಯಿ, ದಿ. ದೇವರಾಜ ಅರಸ್, ಕೆ.ಸಿ ರೆಡ್ಡಿಯವರ, ಎಸ್‌. ನಿಜಲಿಂಗಪ್ಪ, ಡಾ. ಬಾಬು ಜಗಜೀವನ್ ರಾಂ, ಕೆಂಗಲ್ ಹನುಮಂತಯ್ಯ, ಲಾಲ್ ಬಹುದ್ದೂರ್ ಶಾಸ್ತ್ರಿ ಮತ್ತು ಸುಭಾಶ್ಚಂದ್ರಭೋಸ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ವಂದಿಸಿದರು. […]

Continue Reading

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಸುಳಿವು: ಸಿಎಂ ಡಿಕೆಶಿ ಫುಲ್‌ ಆಕ್ಟೀವ್‌

ಸುದ್ದಿ ಸಂಗ್ರಹ ಬೆಂಗಳೂರುಸಿಎಂ ಡಿಕೆ ಶಿವಕುಮಾರ್ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಪೊಲೀಸ್ ಇಲಾಖೆ ಸೇರಿ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ಮಾಡಿ ಖಡಕ್ ಸಂದೇಶ ರವಾನೆ ಮಾಡಿದ್ದಾರೆ. ಅಧಿಕಾರಿಗಳಿಗೆ ಫ್ರೀ ಹ್ಯಾಂಡ್ ಕೊಡ್ತಿವಿ, ನನ್ನ ಕಚೇರಿ, ಶಾಸಕರು, ಮಂತ್ರಿಗಳು ಯಾರದೆ ಒತ್ತಡಕ್ಕೆ ಮಣಿಯದೆ ಕಾನೂನು ಅಡಿಯಲ್ಲಿ ಕೆಲಸ ಮಾಡಿ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿ. ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಬೇಕು. ನಮ್ಮ ಸರ್ಕಾರ ಜಾತಿ, ಧರ್ಮ, ಪ್ರೆಷರ್‌ಗೆ ಬಗ್ಗಲ್ಲ. ಪಾರದರ್ಶಕತೆ ನಮ್ಮ ಸರ್ಕಾರದ ಧ್ಯೇಯವಾಕ್ಯ. […]

Continue Reading

ಅಧಿಕಾರ ಬೇಕಾದವರು ಡಿಕೆಶಿ ಹಿಂದೆ ಹೋಗಿ, ಸಂಘಟನೆ ಮಾಡೋರು ನನ್ನ ಜೊತೆ ಬನ್ನಿ: ಬಿ.ಕೆ ಹರಿಪ್ರಸಾದ್

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ಅಧಿಕಾರ ಹಾಗೂ ಸಚಿವ ಸ್ಥಾನ ಬೇಕು ಎನ್ನುವವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಹೋಗಿ. ಪಕ್ಷ, ಹೋರಾಟ, ವರಿಷ್ಠರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರ ಕೈಬಲಪಡಿಸಬೇಕು ಎನ್ನುವವರು ನನ್ನ ಜೊತೆ ಬನ್ನಿ. ಇದರಲ್ಲಿ ಯಾವುದೆ ಬಣವಿಲ್ಲ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ನೂತನ ಅಧ್ಯಕ್ಷರಾಗಿ ನೇಮಕವಾದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ […]

Continue Reading

ನಟಿ ಶುಭಾ ಪೂಂಜಾ ವೈವಾಹಿಕ ಜೀವನದಲ್ಲಿ ಬಿರುಗಾಳಿ: ವಿಚ್ಛೇದನಕ್ಕೆ ಮೊರೆ ಹೋದ ದಂಪತಿ

ಸುದ್ದಿ ಸಂಗ್ರಹ ಬೆಂಗಳೂರುಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡಲು ದಂಪತಿ ನಿರ್ಧರಿಸಿದ್ದಾರೆ. ಮದುವೆಯಾಗಿ ನಾಲ್ಕೇ ವರ್ಷಕ್ಕೆ ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಕನ್ನಡಪರ ಹೋರಾಟಗಾರ ಹಾಗೂ ಉದ್ಯಮಿಯಾಗಿರುವ ಉಡುಪಿ ಮೂಲದ ಸುಮಂತ್ ಬಿಲ್ಲವ ಮತ್ತು ನಟಿ ಶುಭಾ ಪೂಂಜಾ […]

Continue Reading

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌

ಸುದ್ದಿ ಸಂಗ್ರಹ ಬೆಂಗಳೂರುತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಡಿಕೆ ಶಿವಕುಮಾರ್‌ ಅವರಿಗೆ ಪ್ರಮಾಣವಚನ ಬೋಧಿಸಿದರು. ಸಂವಿಧಾನ ಪುಸ್ತಕ ಹಿಡಿದ ಡಿಕೆ ಶಿವಕುಮಾರ್‌ ಅವರು ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ಡಿಕೆ […]

Continue Reading

ಡಿಕೆಶಿ ಜೊತೆ 13 ಮಂದಿ ಪ್ರಮಾಣವಚನ: ಯಾರಿಗೆ ಯಾವ ಖಾತೆ ?

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಇಂದು ಗದ್ದುಗೆಗೇರುತ್ತಿದ್ದು, ಅವರ ಜೊತೆಗೆ ಒಟ್ಟು 13 ಮಂದಿ ಶಾಸಕರು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಸಂಪುಟ ರಚನೆಯ ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಉಪ ಮುಖ್ಯಮಂತ್ರಿಯ ಹುದ್ದೆಯ ಸಸ್ಪೆನ್ಸ್‌ಗೆ ಕೊನೆಗೂ ತೆರೆ ಬಿದ್ದಿದೆ. ಆ ಮೂಲಕ ಹೈಕಮಾಂಡ್ ಹಿರಿಯ ನಾಯಕನ ಅನುಭವಕ್ಕೆ ದೊಡ್ಡ ಮನ್ನಣೆ ನೀಡಿದೆ ಈ ಬಾರಿಯ ಸಂಪುಟ ರಚನೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅತ್ಯಂತ ನಾಜೂಕಾದ ನಡೆ ಇಟ್ಟಿದೆ. ಇಂದು ಪ್ರಮಾಣವಚನ ಸ್ವೀಕರಿಸಲಿರುವ ಒಟ್ಟು […]

Continue Reading

ರಾಜ್ಯಕ್ಕೆ ಜೂ.5 ರಂದು ಮುಂಗಾರು ಪ್ರವೇಶ: ಹಲವೆಡೆ ಇಂದಿನಿಂದ ಐದು ದಿನ ಮಳೆ ಮುನ್ಸೂಚನೆ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯಕ್ಕೆ ಜೂ.5 ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ ಆಗಲಿದೆ ಎನ್ನಲಾಗಿತ್ತು. ಆದರೆ ತಡ ಆಗಿಲ್ಲ ಸರಿಯಾದ ಸಮಯಕ್ಕೆ ಮುಂಗಾರು ಪ್ರವೇಶಿಸುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದಿನಿಂದ ಮುಂದಿನ ಐದು ದಿನಗಳ ವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಗದಗ, ಮೈಸೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂ.3 ರಂದು ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು […]

Continue Reading

ರಾಜ್ಯದ ಹಲವೆಡೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಸುದ್ದಿ ಸಂಗ್ರಹ ಬೀದರ್/ಶಿವಮೊಗ್ಗ/ಕಾರವಾರರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಗಡಿ ಜಿಲ್ಲೆ ಬೀದರ್‌ನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಒಂದು ಗಂಟೆಯಿಂದಲೂ ಬೀದರ್‌ನಲ್ಲಿ ಸಿಡಿಲು, ಗುಡುಗು ಸಹಿತ ಭಾರಿ ಮಳೆ ಸುರಿಯುತ್ತಿದೆ. ಈ ಮೂಲಕ ಬಿಸಿಲಿನಿಂದ ಕೆಂಗೆಟ್ಟಿದ್ದ ಜಿಲ್ಲೆಯ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೀದರ್, ಔರಾದ್, ಭಾಲ್ಕಿ, ಹುಮ್ನಾಬಾದ್, ಚಿಟ್ಟಗುಪ್ಪ, ಬಸವಕಲ್ಯಾಣ ಸೇರಿದಂತೆ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಬಿರುಗಾಳಿ ಸಹಿತ […]

Continue Reading

ಸಂಭ್ರಮಾಚರಣೆ ಭರದಲ್ಲಿ RCB ಫ್ಯಾನ್ಸ್ ಹುಚ್ಚಾಟ, ಲಾರಿ ಏರಿ ಮೈಮೇಲೆ ಪಟಾಕಿ ಹಾಕೊಂಡು ಮೊಂಡಾಟ: ಲಾಠಿ ಚಾರ್ಜ್

ಸುದ್ದಿ ಸಂಗ್ರಹ ಬೆಂಗಳೂರುಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರವಿವಾರ ರಾತ್ರಿ ನಡೆದ ಐಪಿಎಲ್ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಮಣ್ಣುಮುಕ್ಕಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿಗೆ ಕಪ್ ಮುಡಿಗೇರಿಸಿಕೊಂಡಿದೆ. ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಗರ್ಜನೆ ಹಾಗೂ ರೆಡ್ ಆರ್ಮಿ ಆರ್ಭಟಕ್ಕೆ ಸಿಕ್ಕ ಜಯದ ಬೆನ್ನಲ್ಲೆ ಕರ್ನಾಟಕದಲ್ಲಿ ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿತು. ಆದರೆ ಈ ಗೆಲುವಿನ ಸಂಭ್ರಮ ಆಚರಿಸುವ ಭರದಲ್ಲಿ ರಾಜ್ಯದ ಹಲವೆಡೆ ಆರ್‌ಸಿಬಿ […]

Continue Reading