ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೇದೆಗೆ ಸೀಮಂತ

ಸುದ್ದಿ ಸಂಗ್ರಹ ಆನೇಕಲ್ ಪರಪ್ಪನ ಅಗ್ರಹಾರ ಪೋಲಿಸ್ ಠಾಣೆಯಲ್ಲಿ ಮಹಿಳಾ ಪೇದೆಗೆ ಠಾಣೆಯ ಸಿಬ್ಬಂದಿ ಸೀಮಂತ ಮಾಡಿದ್ದಾರೆ. ತುಂಬು ಗರ್ಭಿಣಿಯಾಗಿದ್ದ ಉಮಾಗೆ ಠಾಣೆಯಲ್ಲೆ ಸೀಮಂತ ಮಾಡಿದ್ದು, ಠಾಣೆಯಲ್ಲಿನ ಸಿಬ್ಬಂದಿ ವರ್ಗ ಸೀಮಂತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಠಾಣೆಯಲ್ಲಿ ನಡೆದ ಈ ಕಾರ್ಯಕ್ರಮ ಭಾವನಾತ್ಮಕವಾದ ಕ್ಷಣಗಳಿಗೆ ಸಾಕ್ಷಿಯಾಗಿತ್ತು. ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ಸತೀಶ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಒಂದು ಕ್ಷಣ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಇದೆ ಸಂದರ್ಭದಲ್ಲಿ ಗರ್ಭಿಣಿ ಉಮಾ ಮಾತನಾಡಿ, ನನ್ನ ತವರು ಮನೆಯಿಂದ […]

Continue Reading

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ‌

ಸುದ್ದಿ ಸಂಗ್ರಹ ಬೆಂಗಳೂರುಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರು, ಮಾಜಿ ಸಚಿವರು, ಶಾಸಕರು, ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕಷ್ಟೆ ಅಲ್ಲದೆ ಇಡಿ ನಾಡಿಗೆ ತುಂಬಲಾರದ ನಷ್ಟವಾದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ ಸೂಚಿಸಿದ್ದಾರೆ. ಅವರ ಜೀವನೋತ್ಸಾಹಕ್ಕೆ ಅವರ ವಯಸ್ಸು ಎಂದಿಗೂ ಅಡ್ಡಿಯಾಗಲಿಲ್ಲ, ಅವರ ಸಾರ್ಥಕ ಬದುಕು ಯುವ ಸಮಾಜಕ್ಕೆ ಎಂದಿಗೂ ಮಾದರಿಯಾಗಿರುವಂತಹದ್ದು. ಶಿಕ್ಷಣ, […]

Continue Reading

ವಾಟ್ಸಾಪ್ ಬಳಕೆದಾರರೆ ಎಚ್ಚರ: ಈ 3 ತಪ್ಪುಗಳು ಮಾಡಿದ್ರೆ ಜೈಲು ಪಾಲಾಗೋದು ಫಿಕ್ಸ್

ಇತ್ತೀಚಿನ ದಿನಗಳಲ್ಲಿ, WhatsApp ನಮ್ಮ ದೈನಂದಿನ ಸಂವಹನದ ಅವಿಭಾಜ್ಯ ಅಂಗವಾಗಿದೆ. ಚಾಟಿಂಗ್, ಫೋಟೋಗಳು, ವೀಡಿಯೊಗಳನ್ನು ಹಂಚಿಕೊಳ್ಳುವುದು ಅಥವಾ ಕೆರೆಗಳು ಮಾಡುವುದು ಎಲ್ಲವೂ ಈ ಅಪ್ಲಿಕೇಶನ್ ಮೂಲಕವೇ ನಡೆಯುತ್ತದೆ. ಆದರೆ ವಾಟ್ಸಾಪ್‌ನಲ್ಲಿ ಅರಿವಿಲ್ಲದೆ ಮಾಡುವ ಕೆಲವು ಕಾರ್ಯಗಳು ಕಾನೂನಿನ ಅಡಿಯಲ್ಲಿ ಗಂಭೀರ ಅಪರಾಧಗಳೆಂದು ಪರಿಗಣಿಸಲ್ಪಡುತ್ತವೆ ಮತ್ತು ಆಕಸ್ಮಿಕವಾಗಿ ಇಂತಹ ತಪ್ಪುಗಳು ನಡೆದರೆ ನೀವು ಜೈಲು ಪಾಲಾಗಬಹುದು. ಆದ್ದರಿಂದ, ವಾಟ್ಸಾಪ್ ಬಳಸುವಾಗ ಯಾವ ಮೂರು ಪ್ರಮುಖ ವಿಷಯಗಳು ಮಾಡಬಾರದು ಎಂಬುದು ತಿಳಿದುಕೊಳ್ಳುವುದು ಅತ್ಯಗತ್ಯ. ನಕಲಿ ಸುದ್ದಿ ಮತ್ತು ವದಂತಿಗಳನ್ನು ಹರಡುವುದು […]

Continue Reading

4 ವರ್ಷಗಳ ಬಳಿಕ ಕೊನೆಗೂ ಜಿ.ಪಂ, ತಾ.ಪಂ ಗಳಿಗೆ ಏಪ್ರಿಲ್‌ನಲ್ಲಿ ಚುನಾವಣೆ

ಸುವರ್ಣ ವಿಧಾನಸೌಧ: ಗ್ರಾ.ಪಂ, ತಾ.ಪಂ ಮತ್ತು ಜಿ.ಪಂ, ವಿವಿಧ ಪುರಸಭೆ ಹಾಗೂ ನಗರಸಭೆ ಸೇರಿದಂತೆ 6,500ಕ್ಕೂ ಹೆಚ್ಚು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು 2026ರ ಏಪ್ರಿಲ್‌ನಲ್ಲಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಯಿತು. ಕಳೆದ ನಾಲ್ಕು ವರ್ಷಗಳಿಂದ ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಚುನಾವಣೆ ನಡೆದಿರಲಿಲ್ಲ. ಜತೆಗೆ ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದಿದ್ದು, ಗ್ರಾಮ ಪಂಚಾಯ್ತಿಗಳ ಅವಧಿಯೂ ಮುಗಿಯುತ್ತಿದೆ. ಜಿ.ಪಂ, ತಾ.ಪಂ […]

Continue Reading

ಪ್ಯಾಂಟ್ ಜಿಪ್‌ನ ಪಟ್ಟಿಯಲ್ಲಿಟ್ಟು ಗಾಂಜಾ ಸಾಗಾಟ: ಓರ್ವ ವಶಕ್ಕೆ

ಸುದ್ದಿ ಸಂಗ್ರಹ ಶಿವಮೊಗ್ಗ ಜಿಲ್ಲೆಯ ಕೇಂದ್ರ ಕಾರಾಗೃಹದೊಳಗೆ ಮಾದಕ ವಸ್ತು ಕಳ್ಳಸಾಗಾಣೆ ಯತ್ನ ನಿರಂತರವಾಗಿ ನಡೆಯುತ್ತಿದೆ. ಇದೀಗ ಬಂಧಿತನನ್ನು ನೋಡಲು ಬಂದಿದ್ದ ವ್ಯಕ್ತಿಯೋರ್ವ ಪ್ಯಾಂಟಿನ ಜೇಬಿನಲ್ಲಿಟ್ಟುಕೊಂಡು ಮಾದಕ ವಸ್ತು ಸಾಗಿಸಲು ಯತ್ನಿಸಿದ ಘಟನೆ ನಡೆದಿದೆ. ಬಂಧಿತ ವ್ಯಕ್ತಿಯನ್ನು ಶಕೀಬ್ ಎಂದು ಗುರುತಿಸಲಾಗಿದೆ, ಕೈದಿ ಅಶೋಕ್ ಎಂಬಾತನನ್ನು ಭೇಟಿ ಮಾಡಲು ಬಂದಾಗ ಮಾದಕ ವಸ್ತು ಸಾಗಿಸಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಡಿ.9 ಮಂಗಳವಾರ ಸಂಜೆ ಕೈದಿ ಅಶೋಕ್‌ನನ್ನು ನೋಡಲು ಶಕೀಬ್ ಮಾರುತಿ ಸುಜುಕಿ ಕಾರಿನಲ್ಲಿ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ […]

Continue Reading

ಮಹಿಳಾ ನೌಕರರಿಗೆ ಋತುಚಕ್ರ ರಜೆ: ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಸುದ್ದಿ ಸಂಗ್ರಹ ಬೆಂಗಳೂರು ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ಋತುಚಕ್ರ ರಜೆ ನೀಡಿದ್ದ ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಸರ್ಕಾರದ ಮಹತ್ವದ ಆದೇಶ ಪ್ರಶ್ನಿಸಿ ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಅವಕಾಶ ನೀಡಿದೆ. ಚಳಿಗಾಲದ ರಜೆ ಮುಗಿದ ಬಳಿಕ ಆಕ್ಷೇಪಣೆ ಸಲ್ಲಿಸುವಂತೆ ತಿಳಿಸಿ, ಮಧ್ಯಂತರ ತಡೆ ನೀಡಿದೆ. 2025ರ ನ.20ರಂದು ರಾಜ್ಯ ಸರ್ಕಾರವು ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ಸಂಸ್ಥೆಗಳಲ್ಲಿ ಕಡ್ಡಾಯವಾಗಿ […]

Continue Reading

ಮೈಸೂರು ರಿಯಲ್‌ ಎಸ್ಟೇಟ್‌ ಉದ್ಯಮಿ ಕಿಡ್ನ್ಯಾಪ್‌ ಮಾಡಿ 30 ಲಕ್ಷ ಬೇಡಿಕೆ: ಆರೋಪಿಗಳು ಅರೆಸ್ಟ್‌

ಸುದ್ದಿ ಸಂಗ್ರಹ ಮೈಸೂರು ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣವನ್ನು ಪೊಲೀಸರು ಸಿನಿಮಿಯ ಶೈಲಿಯಲ್ಲಿ ಭೇದಿಸಿ ಕಿಡ್ನ್ಯಾಪ್ ಆದ ಕೆಲವೆ ಗಂಟೆಗಳಲ್ಲಿ ಅರೋಪಿಗಳ ಹೆಡೆಮುರಿಕಟ್ಟಿದ್ದಾರೆ. ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ ವಿಜಯನಗರ ಮೂರನೇ ಹಂತದ ನಿವಾಸಿ ಲೋಕೇಶ್ ಎಂಬವರನ್ನು ಟಾಟಾ ಸುಮೋದಲ್ಲಿ ಬಂದು ಐದು ಜನರನ್ನು ಅಪಹರಣ ಮಾಡಿದ್ದರು. ಬಳಿಕ ಲೋಕೇಶ್ ಮೊಬೈಲ್‌ನಿಂದ ಅವರ ಪತ್ನಿಗೆ ಕರೆ ಮಾಡಿದ ಆರೋಪಿಗಳು 30 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಗಾಬರಿಗೊಂಡ ಲೋಕೇಶ್ ಪತ್ನಿ ವಿಜಯನಗರ ಪೊಲೀಸರಿಗೆ […]

Continue Reading

ಕೆಎಸ್‌ಸಿಎ ಚುನಾವಣೆ ಫಲಿತಾಂಶ ಪ್ರಕಟ: ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

ಸುದ್ದಿ ಸಂಗ್ರಹ ಬೆಂಗಳೂರು ಕಳೆದೆರೆಡು ತಿಂಗಳಿನಿಂದ ಚರ್ಚೆಯಲ್ಲಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ವೆಂಕಟೇಶ್ ಪ್ರಸಾದ್ ಬಣ ಭರ್ಜರಿ ಜಯ ಸಾಧಿಸಿದೆ. ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ, ಕನ್ನಡಿಗ ವೆಂಕಟೇಶ್ ಪ್ರಸಾದ್‌ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ಸುಜಿತ್ ಸೋಮಸುಂದರ್, ಖಜಾಂಚಿ ಆಗಿ ಮಧುಕರ್, ಜನರಲ್ ಸೆಕ್ರೆಟರಿಯಾಗಿ ಸಂತೋಷ್ ಮೆನನ್ ಆಯ್ಕೆ ಆಗಿದ್ದಾರೆ. ಇನ್ನು ಬ್ರಿಜೇಶ್ ಪಟೇಲ್ ಬಣದ ಬಿ.ಕೆ ರವಿ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆ ಆಗಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಒಟ್ಟು […]

Continue Reading

ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಕೇಸ್‌ಗೆ ಟ್ವಿಸ್ಟ್: ಉದ್ಯಮಿ ಕಿಡ್ನ್ಯಾಪ್ ಹಿಂದೆ ರಘು ಕೈವಾಡ

ಬೆಂಗಳೂರು: ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಉದ್ಯಮಿ ಮನೋಜ್ ಕಿಡ್ನ್ಯಾಪ್ ಹಿಂದೆ ಬೇಕರಿ ರಘು ಕೈವಾಡವಿರುವುದು ಸಾಬೀತಾಗಿದೆ. ಸಿನಿಮಾ ನಿರ್ದೇಶಕ ನಂದಕಿಶೋರ್‌ಗೆ ರೌಡಿಶೀಟರ್ ರಾಜೇಶ್ ಅಲಿಯಾಸ್ ಅಪ್ಪಿ ಮೂಲಕ ಸಾಲ ಕೊಟ್ಟಿದ್ದ ಉದ್ಯಮಿ ಮನೋಜ್‌ನ ಅಪಹರಣವಾಗಿತ್ತು. ಇದರ ಹಿಂದೆ ಬೇಕರಿ ರಘು ಪಾತ್ರವಿರುವ ಬಗ್ಗೆ ಕೇಳಿಬಂದಿತ್ತು. ಹೀಗಾಗಿ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದ ಪೊಲೀಸರು ಅಂದಿನಿಂದ ಹುಡುಕಾಟ ನಡೆಸಿದ್ದರು. ಬಳಿಕ ಮಂಡ್ಯ ಬಳಿ ಬೇಕರಿ ರಘುನನ್ನು ಬಂಧಿಸಿ, ವಿಚಾರಣೆ ನಡೆಸಿದ್ದರು. ಸದ್ಯ ಕಿಡ್ನ್ಯಾಪ್ […]

Continue Reading

ರಷ್ಯಾದ ಒಂದು ರುಬೆಲ್‌ಗೆ ಭಾರತದಲ್ಲಿ ಬೆಲೆ ಎಷ್ಟು ? ರೂಪಾಯಿ ಅಥವಾ ರುಬೆಲ್‌ ಯಾವುದರ ಮೌಲ್ಯ ಜಾಸ್ತಿ ?

ಸುದ್ದಿ ಸಂಗ್ರಹ ಬೆಂಗಳೂರು ಒಂದೆಡೆ ಡಾಲರ್‌ ಎದುರು ರೂಪಾಯಿ ಮೌಲ್ಯ ತೀವ್ರವಾಗಿ ಕುಸಿಯುತ್ತಿದೆ. 1 ಯುಎಸ್‌ ಡಾಲರ್‌ಗೆ 90 ರೂಪಾಯಿ ಗಡಿ ದಾಟಿ ರೂಪಾಯಿ ಮುಂದೆ ಸಾಗಿದೆ. ಇದರ ನಡುವೆ ಭಾರತಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಭೇಟಿ ನೀಡಿದ್ದಾರೆ. ಈ ಹಂತದಲ್ಲಿ ಭಾರತದ ರೂಪಾಯಿ ಮತ್ತು ರಷ್ಯಾದ ಕರೆನ್ಸಿಯಾಗಿರುವ ರುಬೆಲ್‌ ನಡುವೆ ನೆಟ್ಟಿಗರು ಮೌಲ್ಯದ ಲೆಕ್ಕಾಚಾರ ಮಾಡಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಭಾರತಕ್ಕೆ ಭೇಟಿ ನೀಡಿದ್ದು, ನಾಲ್ಕು ವರ್ಷಗಳ ನಂತರ ಪುಟಿನ್ ಅವರ […]

Continue Reading