ಜೂ.30ರಿಂದ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಈ ದಾಖಲೆಗಳು ಕಡ್ಡಾಯ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಚುನಾವಣಾಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ. ಈ ವೇಳೆ ಬಿಎಲ್‌ಒಗಳು ಎಸ್‌ಐಆರ್ ಅರ್ಜಿ ನೀಡಲಿದ್ದು, ಮತದಾರರು ಅರ್ಜಿಯನ್ನು ಭರ್ತಿ ಮಾಡಿ ಸಹಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕಾಗಿದೆ. ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ಪರಿಶೀಲನೆ, ತಿದ್ದುಪಡಿ, ಹೊಸ ಮತದಾರರ ಹೆಸರು ಸೇರ್ಪಡೆ, ಮೃತಪಟ್ಟವರು ಹಾಗೂ ಸ್ಥಳಾಂತರಗೊಂಡವರ ಹೆಸರುಗಳನ್ನು […]

Continue Reading

133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ನೀಡಿದೆ. ಬ್ರ್ಯಾಂಡೆಡ್‌ ಔಷಧಿ ಮಾರಾಟ ಮಾಡುತ್ತಿದ್ದಾರೆ ಎಂದು ರಾಜ್ಯದ ಔಷಧ ನಿಯಂತ್ರಣ ಇಲಾಖೆ ಕಳೆದ ಎರಡು ದಿನಗಳಲ್ಲಿ 172 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳ ಮೇಲೆ ದಾಳಿ ಮಾಡಿದ್ದು, ಇದೀಗ 133 ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಹೊರಡಿಸಿದೆ. ರಾಜ್ಯದಲ್ಲಿ 1,200ಕ್ಕೂ ಹೆಚ್ಚು ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಇವೆ. ಇದರಲ್ಲಿ 172ರ ಔಷಧಿ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದು, ಈ ಪೈಕಿ 133 ಕೇಂದ್ರಗಳಲ್ಲಿ […]

Continue Reading

ರಾಜ್ಯದ ಪ್ರವಾಸೋದ್ಯಮ ಉತ್ತೇಜನಕ್ಕೆ ನಮ್ಮ ಗೈಡ್ ವೆಬ್‌ಸೈಟ್‌ & ಆಪ್ ಅಭಿವೃದ್ಧಿ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಹಾಗೂ ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ನೂತನವಾಗಿ ‘ನಮ್ಮ ಗೈಡ್’ ಆನ್‌ಲೈನ್ ವೇದಿಕೆ ಸಿದ್ಧಪಡಿಸಲು ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ. ರಾಜ್ಯದ ಯಾವುದೆ ಪ್ರವಾಸಿ ತಾಣಕ್ಕೆ ಭೇಟಿ ನೀಡುವ ದೇಶ-ವಿದೇಶಗಳ ಪ್ರವಾಸಿಗರಿಗೆ ಆಯಾ ಪ್ರದೇಶದ ಇತಿಹಾಸ, ಸಂಸ್ಕೃತಿ ಮತ್ತು ಮಹತ್ವದ ಬಗ್ಗೆ ನಿಖರ ಮಾಹಿತಿ ನೀಡುವಲ್ಲಿ ಸ್ಥಳೀಯ ಗೈಡ್‌ಗಳ ಸೇವೆ ಅತ್ಯಂತ ಪ್ರಮುಖವಾಗಿದೆ. ಪ್ರಸ್ತುತ ವಿದೇಶಗಳಲ್ಲಿ ಪ್ರವಾಸಿಗರು ತಮಗೆ ಬೇಕಾದ ಗೈಡ್‌ಗಳನ್ನು ಆನ್‌ಲೈನ್ ಮೂಲಕವೇ ಕಾಯ್ದಿರಿಸುವ […]

Continue Reading

ಅನ್ನಭಾಗ್ಯದಿಂದ 14 ಲಕ್ಷ ಅನರ್ಹರಿಗೆ ಶಾಕ್

ಸುದ್ದಿ ಸಂಗ್ರಹ ಬೆಂಗಳೂರುಗ್ಯಾರಂಟಿ ಯೋಜನೆಗಳಿಂದ ಇಕ್ಕಟ್ಟಿನಲ್ಲಿ ಸಿಲುಕಿರುವ ಸರ್ಕಾರ, ಯೋಜನೆಗಳ ಪರಿಷ್ಕರಣೆ ಮಾಡುವದು ಖಚಿತವಾಗಿದೆ. ಗೃಹಜ್ಯೋತಿ, ಗೃಹಲಕ್ಷ್ಮಿ ಜೊತೆ ಅನ್ನಭಾಗ್ಯಕ್ಕೂ ಫಿಲ್ಟರ್ ಆಗಲಿದೆ. ಆಹಾರ ಖಾತೆ ಸಚಿವ ಮುನಿಯಪ್ಪ ಸುಳಿವು ಕೊಟ್ಟಿದ್ದು, 13-14 ಲಕ್ಷ ಅನರ್ಹರನ್ನು ತೆಗೆಯೋ ಕೆಲಸ ಮಾಡ್ತೆವೆ ಅಂದಿದ್ದಾರೆ. ಸರ್ಕಾರಿ ನೌಕರಿ ಇರುವ ಕುಟುಂಬಕ್ಕೆ ಗ್ಯಾರಂಟಿ ಕಡಿತ ಮಾಡೋದಕ್ಕೆ ಚಿಂತನೆ ನಡೆಸಿದೆ. ಈ ಬಗ್ಗೆ ನಿನ್ನೆಯಷ್ಟೆ ನೌಕರರ ಜೊತೆ ಚರ್ಚೆ ಮಾಡ್ತೆನೆ ಎಂದಿದ್ದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್‌.ಎಂ ರೇವಣ್ಣ ಇವತ್ತು ಉಲ್ಟಾ […]

Continue Reading

ಶೀಘ್ರವೇ ಬಸ್‌ ಟಿಕೆಟ್ ದರ ಏರಿಕೆ: ಕೆಎಸ್ಆರ್‌ಟಿಸಿ 33%, ಬಿಎಂಟಿಸಿ 44% ರಷ್ಟು ಹೆಚ್ಚಳಕ್ಕೆ ಪ್ರಸ್ತಾಪ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಸಂಸ್ಥೆಗಳು ದರ ಏರಿಕೆಯ ಬಿಸಿ ಮುಟ್ಟಿಸಲು ಸಜ್ಜಾಗಿವೆ. ತೀವ್ರ ಆರ್ಥಿಕ ನಷ್ಟ ಹಾಗೂ ಡೀಸೆಲ್‌ ದರ ಏರಿಕೆಯಿಂದ ತತ್ತರಿಸಿರುವ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳು ಬಸ್ ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಅಧಿಕೃತ ಪ್ರಸ್ತಾವನೆ ಸಲ್ಲಿಸಿವೆ. ನಾಲ್ಕೂ ಸಾರಿಗೆ ನಿಗಮಗಳು ಪ್ರತ್ಯೇಕವಾಗಿ ದರ ಪರಿಷ್ಕರಣೆಗೆ ಬೇಡಿಕೆ ಇಟ್ಟಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಟಿಕೆಟ್ ದರದಲ್ಲಿ ಬರೋಬ್ಬರಿ […]

Continue Reading

ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಗ್ಯಾರಂಟಿ ಅನುಷ್ಠಾನ ಸಮಿತಿ ಶಿಫಾರಸು

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬೆನ್ನಲ್ಲೆ ಇದೀಗ ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ಗ್ಯಾರಂಟಿ ಅನುಷ್ಠಾನ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿದೆ. ಶುಕ್ರವಾರ ನಡೆದ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಶಿಫಾರಸು ಮಾಡಿದ್ದಾರೆ. ಶಕ್ತಿ ಯೋಜನೆಯಿಂದ ಉಂಟಾಗಿರುವ ಆರ್ಥಿಕ ಹೊರೆಯನ್ನು ಸರಿದೂಗಿಸಲು ದರ ಹೆಚ್ಚಳ ಅನಿವಾರ್ಯ ಎಂದು ಮುಖ್ಯಮಂತ್ರಿಗಳಿಗೆ ಸಮಿತಿ ಮನವಿ ಮಾಡಿದೆ. ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆಗೆ ಸದ್ಯ 5,173 ಕೋಟಿ ರೂ.ಗಳ ಬೃಹತ್ ಮೊತ್ತದ […]

Continue Reading

ಮೈಸೂರು, ಕೊಡಗು, ಮಂಡ್ಯಕ್ಕೆ ನಾಳೆ ಯೆಲ್ಲೋ ಅಲರ್ಟ್: ಜೂನ್‌ 22ರಿಂದ ಮುಂಗಾರು ಚುರುಕು

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಅಲ್ಲಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಬೆಂಗಳೂರು ಹವಾಮಾನ ಇಲಾಖೆ ನೀಡಿದೆ. ನಾಳೆಯ ಹವಾಮಾನಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ತುಮಕೂರಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬಿರುಗಾಳಿ ಸಹಿತ-ಭಾರಿ ಮಳೆಯ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಜೂನ್‌22 ರಿಂದ ಮುಂಗಾರು ಚುರುಕುಮುಂದಿನ ವಾರ ಮಳೆ ಚುರುಕು ಪಡೆಯುವ ಮುನ್ಸೂಚನೆ ಇದೆ. ಸೋಮವಾರ ಜೂನ್ 22 ರಿಂದ ಕರಾವಳಿಗೆ 4 ದಿನ ಹಾಗೂ ದಕ್ಷಿಣ […]

Continue Reading

ಕರ್ನಾಟಕದಲ್ಲಿ ಮುಂಗಾರು ಕ್ಷೀಣಿಸಿದರೂ ಹಲವೆಡೆ 5 ದಿನ ಮಳೆ ಮುನ್ಸೂಚನೆ

ಸುದ್ದಿ ಸಂಗ್ರಹ ಬೆಂಗಳೂರುಜೂನ್ 14ರಿಂದ 5 ದಿನಗಳವರೆಗೆ ಕರ್ನಾಟಕದ ಕೆಲವೆಡೆ ವರುಣಾರ್ಭಟ ಮುಂದುವರಿಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿರಲಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮಂಗಳವಾರದಿಂದ ಮಳೆ ಕ್ಷೀಣಿಸಲಿದೆ. ಉತ್ತರ ಒಳನಾಡಿನಲ್ಲಿ ಪ್ರಸ್ತುತ ಒಣ ಹವೆ ಇದ್ದರೂ, ಮುಂದಿನ ದಿನಗಳಲ್ಲಿ ಕೆಲವು ಭಾಗಗಳಲ್ಲಿ ಗುಡುಗು […]

Continue Reading

ಐಸ್‌ಕ್ರೀಮ್ ಬೇಕಂತ ಹಠ ಮಾಡಿದ್ದಕ್ಕೆ ಮಗುವಿಗೆ ಒದ್ದು, ಉಸಿರುಗಟ್ಟಿಸಿ ಕೊಲೆ: ಪೊಲೀಸರ ಬಳಿ ಸತ್ಯ ಬಿಚ್ಚಿಟ್ಟ ಆರೋಪಿ ಮೋಹನ್

ಸುದ್ದಿ ಸಂಗ್ರಹ ಬೆಂಗಳೂರುಕಾಡುಗೋಡಿ ಠಾಣಾ ವ್ಯಾಪ್ತಿಯ ವೆನ್ನಿಲಾ ಕೊಲೆ ಪ್ರಕರಣದಲ್ಲಿ ಆರೋಪಿ ಮೋಹನ್ ತಪ್ಪೊಪ್ಪಿಕೊಂಡಿದ್ದಾನೆ. ಮಗು ಐಸ್‌ಕ್ರೀಮ್ ಬೇಕೆಂದು ಹಠ ಮಾಡಿದಕ್ಕೆ ಆಕೆಯ ಹೊಟ್ಟೆಗೆ ಬಲವಾಗಿ ಒದ್ದು, ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಕೊಲೆಯ ಬಗ್ಗೆ ತಪ್ಪೊಪ್ಪಿಗೆಪೊಲೀಸ್ ತನಿಖೆ ವೇಳೆ ಆರೋಪಿ ಮೋಹನ್ ನೀಡಿದ ಹೇಳಿಕೆ ಅಧಿಕಾರಿಗಳನ್ನೇ ಬೆಚ್ಚಿಬೀಳಿಸಿದೆ. ಮಾರ್ಚ್ 21ರಂದು ಪ್ರಿಯಾಂಕಾ ಮತ್ತು ಮೋಹನ್ ಮಧುರೈಗೆ ಮೂರು ದಿನಗಳ ದೇವಸ್ಥಾನ ಪ್ರವಾಸಕ್ಕೆ ತೆರಳಿದ್ದರು. ಮಾರ್ಚ್ 24 ರಂದು ಬೆಂಗಳೂರಿಗೆ ವಾಪಸ್ ಬಂದಿದ್ದರು. ಅದೆ […]

Continue Reading

ಬಾರ್, ಕ್ಲಬ್‌ಗಳಲ್ಲಿ ಅಪ್ರಾಪ್ತರಿಗೆ ವಯಸ್ಸಿನ ಐಡಿ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ

ಸುದ್ದಿ ಸಂಗ್ರಹ ಬೆಂಗಳೂರುಅಪ್ರಾಪ್ತ ವಯಸ್ಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ತಡೆಯಲು ಮತ್ತು ಮದ್ಯ ಸರಬರಾಜು ಮಾಡುವುದನ್ನು ನಿಷೇಧಿಸಲು ಬೆಂಗಳೂರಿನ ಎಲ್ಲಾ ಪಬ್‌ಗಳು, ಬ್ರೂವರೀಸ್‌, ಬಾರ್‌ಗಳು, ಕ್ಲಬ್‌ಗಳು, ಲಾಂಜ್‌ಗಳು ಹಾಗೂ ರೆಸ್ಟೋರೆಂಟ್‌ಗಳಿಗೆ ನೋಟಿಸ್ ಜಾರಿ ಮಾಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಆತಂಕ ಮೂಡಿಸಿದ ಸಂಶೋಧನಾ ವರದಿಬೆಂಗಳೂರಿನಲ್ಲಿ ಹದಿಹರೆಯದವರು ಮತ್ತು ಯುವಜನರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಹಾಗೂ ಮಾದಕ ದ್ರವ್ಯಗಳ ಬಳಕೆಯ ಆತಂಕದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿನ ಪ್ರಮುಖ […]

Continue Reading