ಕರ್ನಾಟಕದಲ್ಲಿ ಮುಂಗಾರು ಕ್ಷೀಣಿಸಿದರೂ ಹಲವೆಡೆ 5 ದಿನ ಮಳೆ ಮುನ್ಸೂಚನೆ

ಸುದ್ದಿ ಸಂಗ್ರಹ ಬೆಂಗಳೂರುಜೂನ್ 14ರಿಂದ 5 ದಿನಗಳವರೆಗೆ ಕರ್ನಾಟಕದ ಕೆಲವೆಡೆ ವರುಣಾರ್ಭಟ ಮುಂದುವರಿಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿರಲಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮಂಗಳವಾರದಿಂದ ಮಳೆ ಕ್ಷೀಣಿಸಲಿದೆ. ಉತ್ತರ ಒಳನಾಡಿನಲ್ಲಿ ಪ್ರಸ್ತುತ ಒಣ ಹವೆ ಇದ್ದರೂ, ಮುಂದಿನ ದಿನಗಳಲ್ಲಿ ಕೆಲವು ಭಾಗಗಳಲ್ಲಿ ಗುಡುಗು […]

Continue Reading

ಐಸ್‌ಕ್ರೀಮ್ ಬೇಕಂತ ಹಠ ಮಾಡಿದ್ದಕ್ಕೆ ಮಗುವಿಗೆ ಒದ್ದು, ಉಸಿರುಗಟ್ಟಿಸಿ ಕೊಲೆ: ಪೊಲೀಸರ ಬಳಿ ಸತ್ಯ ಬಿಚ್ಚಿಟ್ಟ ಆರೋಪಿ ಮೋಹನ್

ಸುದ್ದಿ ಸಂಗ್ರಹ ಬೆಂಗಳೂರುಕಾಡುಗೋಡಿ ಠಾಣಾ ವ್ಯಾಪ್ತಿಯ ವೆನ್ನಿಲಾ ಕೊಲೆ ಪ್ರಕರಣದಲ್ಲಿ ಆರೋಪಿ ಮೋಹನ್ ತಪ್ಪೊಪ್ಪಿಕೊಂಡಿದ್ದಾನೆ. ಮಗು ಐಸ್‌ಕ್ರೀಮ್ ಬೇಕೆಂದು ಹಠ ಮಾಡಿದಕ್ಕೆ ಆಕೆಯ ಹೊಟ್ಟೆಗೆ ಬಲವಾಗಿ ಒದ್ದು, ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಕೊಲೆಯ ಬಗ್ಗೆ ತಪ್ಪೊಪ್ಪಿಗೆಪೊಲೀಸ್ ತನಿಖೆ ವೇಳೆ ಆರೋಪಿ ಮೋಹನ್ ನೀಡಿದ ಹೇಳಿಕೆ ಅಧಿಕಾರಿಗಳನ್ನೇ ಬೆಚ್ಚಿಬೀಳಿಸಿದೆ. ಮಾರ್ಚ್ 21ರಂದು ಪ್ರಿಯಾಂಕಾ ಮತ್ತು ಮೋಹನ್ ಮಧುರೈಗೆ ಮೂರು ದಿನಗಳ ದೇವಸ್ಥಾನ ಪ್ರವಾಸಕ್ಕೆ ತೆರಳಿದ್ದರು. ಮಾರ್ಚ್ 24 ರಂದು ಬೆಂಗಳೂರಿಗೆ ವಾಪಸ್ ಬಂದಿದ್ದರು. ಅದೆ […]

Continue Reading

ಬಾರ್, ಕ್ಲಬ್‌ಗಳಲ್ಲಿ ಅಪ್ರಾಪ್ತರಿಗೆ ವಯಸ್ಸಿನ ಐಡಿ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ

ಸುದ್ದಿ ಸಂಗ್ರಹ ಬೆಂಗಳೂರುಅಪ್ರಾಪ್ತ ವಯಸ್ಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ತಡೆಯಲು ಮತ್ತು ಮದ್ಯ ಸರಬರಾಜು ಮಾಡುವುದನ್ನು ನಿಷೇಧಿಸಲು ಬೆಂಗಳೂರಿನ ಎಲ್ಲಾ ಪಬ್‌ಗಳು, ಬ್ರೂವರೀಸ್‌, ಬಾರ್‌ಗಳು, ಕ್ಲಬ್‌ಗಳು, ಲಾಂಜ್‌ಗಳು ಹಾಗೂ ರೆಸ್ಟೋರೆಂಟ್‌ಗಳಿಗೆ ನೋಟಿಸ್ ಜಾರಿ ಮಾಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಆತಂಕ ಮೂಡಿಸಿದ ಸಂಶೋಧನಾ ವರದಿಬೆಂಗಳೂರಿನಲ್ಲಿ ಹದಿಹರೆಯದವರು ಮತ್ತು ಯುವಜನರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಹಾಗೂ ಮಾದಕ ದ್ರವ್ಯಗಳ ಬಳಕೆಯ ಆತಂಕದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿನ ಪ್ರಮುಖ […]

Continue Reading

ಕರ್ನಾಟಕದಲ್ಲಿ ಮುಂಗಾರು ಆರ್ಭಟ: 6 ದಿನ ಹಲವೆಡೆ ರೆಡ್ ಅಲರ್ಟ್

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಅತಿಯಾದ ಮಳೆಯಾಗುವ ಮುನ್ನೆಚ್ಚರಿಕೆ ಹವಾಮಾನ ಇಲಾಖೆ ನೀಡಿದೆ. ಇಂದಿನಿಂದ ಜೂನ್ 13ರ ವರೆಗೆ ಮಹಾ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಗಾಳಿ ಸಮೇತ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಉಡುಪಿ ಜಿಲ್ಲೆಗೆ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಎರಡು ದಿನಗಳ ಕಾಲ ಗಾಳಿ ಸಹಿತ […]

Continue Reading

ರಾಜ್ಯದ ಹಲವೆಡೆ ಮುಂಗಾರು ಅಬ್ಬರ: ಸೋರುತಿದೆ ಆಸ್ಪತ್ರೆ, ಸರ್ಕಾರಿ ಶಾಲೆ ಜಲಾವೃತ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ಕೊಟ್ಟಿದೆ. ಮುಂಗಾರು ಪ್ರವೇಶಿಸಿದ ಮೊದಲ ದಿನವೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ. ಬೆಳಗಾವಿಯ ಅಥಣಿ ಪಟ್ಟಣದ ಹಲ್ಯಾಲ ರಸ್ತೆಯಲ್ಲಿರುವ ಎರಡಂತಸ್ತಿನ ಕಟ್ಟಡ ನೆಲಕ್ಕುರುಳಿದೆ. ಕಟ್ಟಡ ಬೀಳುವ ದೃಶ್ಯಗಳು ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಡವಿಬಾವಿ ತಾಂಡದ ಸರ್ಕಾರಿ ಶಾಲೆ ಜಲಾವೃತವಾಗಿದೆ. ಚಿಕ್ಕಮಗಳೂರಿನ ಎನ್.ಆರ್ ಪುರ ತಾಲೂಕು ಆಸ್ಪತ್ರೆ ಸೋರುತ್ತಿದ್ದು, ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕ ಕರಾವಳಿ ದಕ್ಷಿಣ ಕನ್ನಡದಲ್ಲಿ ಮಳೆ […]

Continue Reading

ರಾಜೀನಾಮೆ ಕೊಟ್ಟ ರಾಮಲಿಂಗಾರೆಡ್ಡಿ ಭೇಟಿಯಾದ ಸಿಎಂ: ಮನವೊಲಿಕೆಗೆ ಯತ್ನ

ಸುದ್ದಿ ಸಂಗ್ರಹ ಬೆಂಗಳೂರುಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ಅವರನ್ನು ಸಿಎಂ ಡಿ.ಕೆ ಶಿವಕುಮಾರ್‌ ಭೇಟಿಯಾಗಿದ್ದಾರೆ. ಕೋರಮಂಗಲದ ಖಾಸಗಿ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿಯನ್ನು ಸಿಎಂ ಭೇಟಿ ಮಾಡಿದ್ದಾರೆ. ಖುದ್ದು ಮನವೊಲಿಕೆಗೆ ಪ್ರಯತ್ನಿದ್ದಾರೆ. ಇದಕ್ಕೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ಹೈಕಮಾಂಡ್ ಅವರು ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ. ನಾನು ಸಿಗೋಕೆ ಊರಲ್ಲಿ ಇರಲಿಲ್ಲ. ತಮಿಳುನಾಡಿನ ಧರ್ಮಪುರಿಗೆ ಸಮಾರಂಭಕ್ಕೆ ಹೋಗಿದ್ದೆ. ಖಾತೆ ವಿಚಾರವಾಗಿ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದರು. ತಾವು ಬಯಸಿದ ಖಾತೆಯನ್ನು ಬಿಟ್ಟು ಬೇರೆ ಖಾತೆ ಕೊಟ್ಟಿದ್ದಾರೆಂದು ಬೇಸರಗೊಂಡು […]

Continue Reading

ನೂತನ ಸಚಿವರಿಗೆ ಖಾತೆ ಹಂಚಿಕೆ ಫೈನಲ್‌ ಆಗಿದೆ: ಸಿಎಂ ಡಿಕೆಶಿ

ಸುದ್ದಿ ಸಂಗ್ರಹ ಬೆಂಗಳೂರುನೂತನ ಸಚಿವರಿಗೆ ಖಾತೆ ಹಂಚಿಕೆ ಆಗಿದ್ದು, ಪಟ್ಟಿಯನ್ನು ಹೈಕಮಾಂಡ್‌ಗೆ ಕಳಿಸಿದ್ದೆವೆ. ಶೀಘ್ರವೇ ಪಟ್ಟಿ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದರು. ಇಂದು ಸಂಜೆ ವಿಧಾನಸೌಧಕ್ಕೆ ತೆರಳಿದ್ದ ಸಿಎಂ ಹಲವು ಗಣ್ಯಾತಿಗಣ್ಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದರು. ವಿಧಾನಸೌಧದಲ್ಲಿರೊ ಭುವನೇಶ್ವರಿ ತಾಯಿ, ದಿ. ದೇವರಾಜ ಅರಸ್, ಕೆ.ಸಿ ರೆಡ್ಡಿಯವರ, ಎಸ್‌. ನಿಜಲಿಂಗಪ್ಪ, ಡಾ. ಬಾಬು ಜಗಜೀವನ್ ರಾಂ, ಕೆಂಗಲ್ ಹನುಮಂತಯ್ಯ, ಲಾಲ್ ಬಹುದ್ದೂರ್ ಶಾಸ್ತ್ರಿ ಮತ್ತು ಸುಭಾಶ್ಚಂದ್ರಭೋಸ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ವಂದಿಸಿದರು. […]

Continue Reading

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಸುಳಿವು: ಸಿಎಂ ಡಿಕೆಶಿ ಫುಲ್‌ ಆಕ್ಟೀವ್‌

ಸುದ್ದಿ ಸಂಗ್ರಹ ಬೆಂಗಳೂರುಸಿಎಂ ಡಿಕೆ ಶಿವಕುಮಾರ್ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಪೊಲೀಸ್ ಇಲಾಖೆ ಸೇರಿ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ಮಾಡಿ ಖಡಕ್ ಸಂದೇಶ ರವಾನೆ ಮಾಡಿದ್ದಾರೆ. ಅಧಿಕಾರಿಗಳಿಗೆ ಫ್ರೀ ಹ್ಯಾಂಡ್ ಕೊಡ್ತಿವಿ, ನನ್ನ ಕಚೇರಿ, ಶಾಸಕರು, ಮಂತ್ರಿಗಳು ಯಾರದೆ ಒತ್ತಡಕ್ಕೆ ಮಣಿಯದೆ ಕಾನೂನು ಅಡಿಯಲ್ಲಿ ಕೆಲಸ ಮಾಡಿ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿ. ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಬೇಕು. ನಮ್ಮ ಸರ್ಕಾರ ಜಾತಿ, ಧರ್ಮ, ಪ್ರೆಷರ್‌ಗೆ ಬಗ್ಗಲ್ಲ. ಪಾರದರ್ಶಕತೆ ನಮ್ಮ ಸರ್ಕಾರದ ಧ್ಯೇಯವಾಕ್ಯ. […]

Continue Reading

ಅಧಿಕಾರ ಬೇಕಾದವರು ಡಿಕೆಶಿ ಹಿಂದೆ ಹೋಗಿ, ಸಂಘಟನೆ ಮಾಡೋರು ನನ್ನ ಜೊತೆ ಬನ್ನಿ: ಬಿ.ಕೆ ಹರಿಪ್ರಸಾದ್

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ಅಧಿಕಾರ ಹಾಗೂ ಸಚಿವ ಸ್ಥಾನ ಬೇಕು ಎನ್ನುವವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಹೋಗಿ. ಪಕ್ಷ, ಹೋರಾಟ, ವರಿಷ್ಠರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರ ಕೈಬಲಪಡಿಸಬೇಕು ಎನ್ನುವವರು ನನ್ನ ಜೊತೆ ಬನ್ನಿ. ಇದರಲ್ಲಿ ಯಾವುದೆ ಬಣವಿಲ್ಲ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ನೂತನ ಅಧ್ಯಕ್ಷರಾಗಿ ನೇಮಕವಾದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ […]

Continue Reading

ನಟಿ ಶುಭಾ ಪೂಂಜಾ ವೈವಾಹಿಕ ಜೀವನದಲ್ಲಿ ಬಿರುಗಾಳಿ: ವಿಚ್ಛೇದನಕ್ಕೆ ಮೊರೆ ಹೋದ ದಂಪತಿ

ಸುದ್ದಿ ಸಂಗ್ರಹ ಬೆಂಗಳೂರುಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡಲು ದಂಪತಿ ನಿರ್ಧರಿಸಿದ್ದಾರೆ. ಮದುವೆಯಾಗಿ ನಾಲ್ಕೇ ವರ್ಷಕ್ಕೆ ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಕನ್ನಡಪರ ಹೋರಾಟಗಾರ ಹಾಗೂ ಉದ್ಯಮಿಯಾಗಿರುವ ಉಡುಪಿ ಮೂಲದ ಸುಮಂತ್ ಬಿಲ್ಲವ ಮತ್ತು ನಟಿ ಶುಭಾ ಪೂಂಜಾ […]

Continue Reading