ರಾಜ್ಯದಲ್ಲಿ ಏ.6ರಿಂದ 4 ದಿನ ಮಳೆ: 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್‌ 2ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್‌ 6 ರಿಂದ 4 ದಿನಗಳು ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ 16 ಜಿಲ್ಲೆಗಳಿಗೆ ವಿವಿಧ ದಿನಗಳಂದು ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಬೇಸಿಗೆ ಬಿಸಿಲು ಜೋರಿದ್ದು, ಅಂತೆಯೇ ಪೂರ್ವ ಮುಂಗಾರು ಚುರುಕಾಗುತ್ತಿದೆ. ಏಪ್ರಿಲ್ 6 ರಿಂದ 8ವರೆಗೂ ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ […]

Continue Reading

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌: ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್ ?

ಸುದ್ದಿ ಸಂಗ್ರಹ ಅಭಿನಯ ಚಕ್ರವರ್ತಿ ನಟ ಸುದೀಪ್ ಅವರು ಮೂರು ವರ್ಷಗಳ ಹಿಂದೆ ನಿರ್ಮಾಪಕ ಎಂ.ಎನ್ ಕುಮಾರ್ ಮತ್ತು ಎಂ.ಎನ್ ಸುರೇಶ್ ವಿರುದ್ಧ ಹೂಡಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನ್ಯಾಯಾಲಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಶನಿವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ 7ನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರಾಗಿದ್ದ ನಟ ಸುದೀಪ್ ಅವರನ್ನ ನಿರ್ಮಾಪಕರ ಪರ ವಕೀಲರು ಕ್ರಾಸ್ ಎಕ್ಸಾಮಿನೇಷನ್‌ಗೆ ಒಳಪಡಿಸಿದರು. ವಕೀಲರ ಪ್ರಶ್ನೆಗಳಿಗೆ ಸುದೀಪ್ ಉತ್ತರಿಸಲು ತಡವರಿಸಿದ್ರು ಅನ್ನೋದು ಗೊತ್ತಾಗಿದೆ. ನಿರ್ಮಾಪಕರು ಸುದೀಪ್ […]

Continue Reading

SSLC ಪರೀಕ್ಷೆ ಭಾರಿ ಬದಲಾವಣೆ: ತೃತೀಯ ಭಾಷೆ ಗ್ರೇಡ್‌ಗೆ ಸೀಮಿತ, ಈ ವರ್ಷದಿಂದಲೇ ಜಾರಿ

ಸುದ್ದಿ ಸಂಗ್ರಹ ಬೆಂಗಳೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ತಂದಿದೆ. ತೃತೀಯ ಭಾಷೆ ಗ್ರೇಡ್‌ಗೆ ಸೀಮಿತಗೊಳಿಸಿದ್ದು, ಈ ವರ್ಷದಿಂದಲೆ ಜಾರಿಯಾಗಲಿದೆ. ಈ ಮೂಲಕ ಒಟ್ಟು 625 ಅಂಕಗಳಿಗೆ ಬದಲಾಗಿ 525 ಅಂಕಕ್ಕೆ ಫಲಿತಾಂಶ ನೀಡಲಾಗುತ್ತದೆ. ಈ ಬಗ್ಗೆ ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ಹಂಚಿಕೊಂಡರು. ಒಟ್ಟು ಅಂಕಗಳಲ್ಲಿ ಭಾರಿ ಕಡಿತವಾಗಲಿದ್ದು, ತೃತೀಯ ಭಾಷೆಯ ಅಂಕಗಳು ಫಲಿತಾಂಶಕ್ಕೆ ಪರಿಗಣಿಸದಿರಲು ತೀರ್ಮಾನಿಸಲಾಗಿದೆ. ಇದುವರೆಗೆ 625 ಅಂಕಗಳಿಗೆ ನಡೆಯುತ್ತಿದ್ದ ಪರೀಕ್ಷೆಯನ್ನು ಈಗ 525 ಅಂಕಗಳಿಗೆ […]

Continue Reading

ಈ ಸುದ್ದಿ ಓದಿ ಮನೆಯಲ್ಲೆ ಕುಳಿತು 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ

ಸುದ್ದಿ ಸಂಗ್ರಹ ಬೆಂಗಳೂರು ಇಂದಿನಿಂದ ಭಾರತದಲ್ಲಿ ರಾಷ್ಟ್ರೀಯ ಜನಗಣತಿ (Census 2027) ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಇದು ದೇಶದ ಮೊದಲ ಡಿಜಿಟಲ್ ಜನಗಣತಿಯಾಗಿದ್ದು ಜನರೇ ತಮ್ಮ ವಿವರಗಳನ್ನು ತಾವೇ ಸುಲಭವಾಗಿ ದಾಖಲಿಸಬಹುದು. ಕರ್ನಾಟಕ ಸೇರಿದಂತೆ ಗೋವಾ, ಮಿಜೋರಾಂ, ಒಡಿಶಾ, ಸಿಕ್ಕಿಂ, ದೆಹಲಿ, ಅಂಡಮಾನ್ ಮತ್ತು ನಿಕೋಬಾರ್, ಲಕ್ಷದ್ವೀಪದ ಜನರು ಏ.15ರವರೆಗೆ ಡಿಜಿಟಲ್‌ ಮೂಲಕ ತಮ್ಮ ಮನೆಯ ವಿವರಗಳನ್ನು ಸುಲಭವಾಗಿ ಎಂಟ್ರಿ ಮಾಡಬಹುದು. ಡಿಜಿಟಲ್‌ನಲ್ಲಿ ಹೇಗೆ ? ಹಂತ -1 ಮೊದಲು www.ce.census.gov.in ವೆಬ್‌ಸೈಟ್‌ಗೆ ಹೋಗಬೇಕು. ಇಲ್ಲಿ ಕುಟುಂಬದ […]

Continue Reading

ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ RCB ಜೊತೆ ಒಪ್ಪಂದ: 1 ವರ್ಷಕ್ಕೆ 4.80 ಕೋಟಿ ಕೊಟ್ಟ KMF

ಸುದ್ದಿ ಸಂಗ್ರಹ ಬೆಂಗಳೂರು ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ ಆರ್‌ಸಿಬಿ ತಂಡದ ಜೊತೆ ಕೆಎಂಎಫ್‌ ಒಪ್ಪಂದ ಮಾಡಿಕೊಂಡಿದೆ. ರನ್‌ ಮಿಷಿನ್‌ ವಿರಾಟ್‌ ಕೊಹ್ಲಿ ಸೇರಿ ಮೂರು ಆಟಗಾರರ ಭಾವಚಿತ್ರ ಬಳಸಲು 1 ವರ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದು, ಬರೋಬ್ಬರಿ 4.80 ಕೋಟಿ ರೂ. ಕೆಎಂಎಫ್‌ ವೆಚ್ಚ ಮಾಡಿದೆ. ಆರ್‌ಸಿಬಿಗೆ ಕನ್ನಡಿಗರ ಹೆಮ್ಮೆಯ ನಂದಿನಿ ಬ್ರ್ಯಾಂಡ್‌ ಅಧಿಕೃತ ಡೈರಿ ಪಾರ್ಟ್ನರ್ ಆಗಿದೆ. ಅತಿ ಹೆಚ್ಚಿನ ಫ್ಯಾನ್ಸ್ ಹೊಂದಿರುವ ಆರ್‌ಸಿಬಿ ತಂಡಕ್ಕೆ ಹೆಮ್ಮೆಯ ನಂದಿನಿ ಪಾರ್ಟ್ನರ್‌ ಆಗಿರುವ ಬಗ್ಗೆ ಕೆಎಂಎಫ್ […]

Continue Reading

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆ ಎಚ್ಚರಿಕೆ

ಸುದ್ದಿ ಸಂಗ್ರಹ ಬೆಂಗಳೂರು ಮುಂದಿನ ಮೂರು ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಕಲಬುರಗಿ, ಯಾದಗಿರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ. ಭಾರಿ ಮಳೆ ಹಿನ್ನೆಲೆ ಕಲಬುರಗಿ, ಯಾದಗಿರಿ, ರಾಯಚೂರು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Continue Reading

ರಾಜ್ಯದಲ್ಲಿ ಮಾ.29ರವರೆಗೆ ಮಳೆ

ಸುದ್ದಿ ಸಂಗ್ರಹ ಬೆಂಗಳೂರುಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ, ತೇವಾಂಶ ಭರಿತ ಮೋಡದ ಪರಿಣಾಮ ರಾಜ್ಯದ ಹಲವೆಡೆ ಮಾ.29ರವರೆಗೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮಾ.25 ರಿಂದ ಮುಂದಿನ 2 ದಿನ ಹಾಗೂ ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಾ.27ರಿಂದ ಮಾ.29ರವರೆಗೆ ವರ್ಷಧಾರೆಯಾಗಲಿದೆ. ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಯಚೂರು, ವಿಜಯಪುರ, […]

Continue Reading

KPSC ಅಕ್ರಮ ಆರೋಪ: ಪರೀಕ್ಷಾ ನಿಯಂತ್ರಕ ಎತ್ತಂಗಡಿ

ಸುದ್ದಿ ಸಂಗ್ರಹ ಬೆಂಗಳೂರು ಕೆಪಿಎಸ್‌ಸಿ ಅಕ್ರಮ ಆರೋಪ ಬೆನ್ನಲ್ಲೆ ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರಕುಮಾರ್ ಗಂಗಾವರ್ ಎತ್ತಂಗಡಿ ಮಾಡಲಾಗಿದೆ. ಆ ಸ್ಥಾನಕ್ಕೆ ದಿಗ್ವಿಜಯ್ ಬೋಡ್ಕೆ ಅವರನ್ನು ನೇಮಿಸಲಾಗಿದೆ. ಕೆಪಿಎಸ್‌ಸಿ ಪರೀಕ್ಷೆಗಳಲ್ಲಿ ಪದೆ ಪದೆ ಅಕ್ರಮ ಆರೋಪಗಳು ಕೇಳಿಬರುತ್ತಿದ್ದ ಹಿನ್ನೆಲೆ ಸರ್ಕಾರ ಮಹತ್ತರ ಸುಧಾರಣೆ ತಂದಿದೆ. ಕೇಂದ್ರ ಲೋಕಸೇವಾ ಆಯೋಗದ ಮಾದರಿಯಲ್ಲಿ ಇನ್ನು ಮುಂದೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕವೂ ಪ್ರತಿ ವರ್ಷ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಈ ಬಗ್ಗೆ ವಿಧಾನಸಭೆಯಲ್ಲಿ […]

Continue Reading

SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: KSRTC ಬಸ್‌ನಲ್ಲಿ ಉಚಿತ ಪ್ರಯಾಣ ಸೌಲಭ್ಯ

ಸುದ್ದಿ ಸಂಗ್ರಹ ಬೆಂಗಳೂರು ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಪರೀಕ್ಷೆ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮಹತ್ವದ ಸುದ್ದಿ ನೀಡಿದೆ. ನಾಳೆ ಮಾರ್ಚ್ 18 ಬುಧವಾರದಿಂದ ಏಪ್ರಿಲ್‌ 02 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿವೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್‌ಆರ್‌ಟಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹಾಗೂ […]

Continue Reading

ಉಂಡ ಮನೆಗೆ ಕನ್ನ ಹಾಕಿದ ಕಾರು ಚಾಲಕ: ಮಾಲೀಕ ಗಿರವಿಟ್ಟಿದ್ದ 13 ಲಕ್ಷ ಚಿನ್ನವನ್ನು ಮಾರಿದ ಭೂಪ

ಸುದ್ದಿ ಸಂಗ್ರಹ ಬೆಂಗಳೂರು ಆತ ಚಾಲಕ ಕಳೆದ ಹತ್ತು ವರ್ಷದಿಂದ ಒಂದೆ ಕಡೆ ಕೆಲಸ ಮಾಡುತ್ತಿದ್ದ. ಆತ ಮನೆ ಮಾಲೀಕರ ನಂಬಿಕೆ ಗಳಿಸಿದ್ದ. ಅವರು ಕೂಡ ಈತನನ್ನು ಬಹಳ ಆತ್ಮೀಯತೆಯಿಂದ ನೋಡಿಕೊಳ್ಳುತ್ತಿದ್ದರು. ಆದರೆ ಇದನ್ನೆ ಬಂಡವಾಳ ಮಾಡಿಕೊಂಡ ಆಸಾಮಿ ಮನೆಯಲ್ಲಿದ್ದ ಚಿನ್ನದ ಮೇಲೆ ಕಣ್ಣು ಹಾಕಿದ್ದ. ಆ ಮೂಲಕ ಉಂಡ ಮನೆಗೆ ಕನ್ನ ಹಾಕಿದ್ದ. ಚಾಲಕನ ಕಳ್ಳಾಟ ಬಯಲಾಗಿದ್ದೆ ನಿಜಕ್ಕೂ ರೋಚಕ. ಉಂಡ ಮನೆಗೆ ದ್ರೋಹಉಂಡ ಮನೆಗೆ ಕನ್ನ ಹಾಕಿದ ಕಾರು ಚಾಲಕನ ಹೆಸರು ಅಭಿಲಾಷ್. ಪ್ರತೀಕ್​​ […]

Continue Reading