ವಿಶೇಷಚೇತನ ಮಗನಿಗೆ ವಿಷ ಹಾಕಿದ ತಂದೆ: ಕಾರಣ ಕೇಳಿದರೆ ಶಾಕ್ ಆಗ್ತಿರಾ

ಸುದ್ದಿ ಸಂಗ್ರಹ ಬೆಂಗಳೂರು ಹೆತ್ತ ಮಕ್ಕಳನ್ನು ಸಾಕಲು ತಂದೆ-ತಾಯಿ ಕಷ್ಟ ಪಟ್ಟು ದುಡಿಯುತ್ತಾರೆ. ತಮಗೆಷ್ಟೆ ತೊಂದರೆಗಳಿದ್ದರೂ ಮಕ್ಕಳ ಮುಖ ನೋಡಿಕೊಂಡು ನೋವು ನುಂಗಿಕೊಂಡಿರುತ್ತಾರೆ. ಆದರೆ ಇಲ್ಲೊರ್ವ ಪಾಪಿ ತಂದೆ, ಚಿಕಿತ್ಸೆಗೆ ಹಣವಿಲ್ಲದ ಕಾರಣ ಮಗನಿಗೆ ವಿಷ ಹಾಕಿರುವ ಅಮಾನವೀಯ ಘಟನೆ ಬೆಂಗಳೂರಲ್ಲಿ ನಡೆದಿದೆ. ವಿಶೇಷಚೇತನ ಮಗನ ಚಿಕಿತ್ಸೆಗಾಗಿ ಅಲೆದು ಬೇಸತ್ತಿದ್ದ ತಂದೆ, ಈ ಕುಕೃತ್ಯವೆಸಗಿದ್ದು, ಮಗು ಸಾವು-ಬದುಕಿನ ನಡುವೆ ಹೋರಾಡುತ್ತಿದೆ. ಮಗುವಿನ ಸ್ಥಿತಿ ಗಂಭೀರ ಬಾಗಲೂರು ನಿವಾಸಿಗಳಾದ ಸತ್ಯ ಮತ್ತು ಮುನಿಕೃಷ್ಣ ದಂಪತಿಯ ಮಗ ಜೋಯಲ್ ಹುಟ್ಟಿನಿಂದಲೇ […]

Continue Reading

ಸರ್ಕಾರಿ ಜೀಪ್ ಮತ್ತು ಕಾರಿನ ನಡುವೆ ಅಪಘಾತ: ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಕಾರು

ಸುದ್ದಿ ಸಂಗ್ರಹ ಆನೇಕಲ್ ಸರ್ಕಾರಿ ಜೀಪ್ ಮತ್ತು ಕಿಯಾ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿಗೆ ಸ್ಥಳದಲ್ಲಿಯೇ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಯಡವನಹಳ್ಳಿ ಗೇಟ್ ಬಳಿ ನಡೆದಿದೆ. ಬೆಳ್ಳಂಬೆಳಿಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ, ಸರ್ಕಾರಿ ಜೀಪ್ ಹಾಗೂ ಕಿಯಾ ಕಾರು ನಡುವೆ ಅಪಘಾತ ಸಂಭವಿಸಿದೆ. ಇನ್ನು ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ಬೆಂಕಿ ಹತ್ತಿಕೊಂಡಿದ್ದು, ಕಾರು ಸ್ಥಳದಲ್ಲೆ ಸುಟ್ಟು ಕರಕಲಾಗಿದೆ. […]

Continue Reading

ಹೊಸ ವರ್ಷಕ್ಕೆ ಸಾರಿಗೆ ನೌಕರರಿಗೆ ಶಾಕ್

ಸುದ್ದಿ ಸಂಗ್ರಹ ಬೆಂಗಳೂರು ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಶಾಕ್ ನೀಡಿದೆ. 2026ರ ಜ1 ರಿಂದ ಮುಂದಿನ 6 ತಿಂಗಳವರೆಗೆ ಮುಷ್ಕರ ಮಾಡದಂತೆ ಸರ್ಕಾರ ಸಾರಿಗೆ ನೌಕರರಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೆ ಸಂದರ್ಭದಲ್ಲೂ ಕೂಡ ಮುಷ್ಕರ ಮಾಡದಂತೆ ಸೂಚನೆ ನೀಡಿದೆ. ಇದಕ್ಕೂ ಮುನ್ನ ನೀಡಿದ್ದ ಅಧಿಸೂಚನೆ 2025ರ ಡಿ.31ಕ್ಕೆ ಕೊನೆಯಾದ ಹಿನ್ನೆಲೆ ಈಗ ಮುಷ್ಕರ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ ಉಲ್ಲಂಘಿಸಿದಲ್ಲಿ ಎಸ್ಮಾ ಜಾರಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದು, ಆದೇಶದ […]

Continue Reading

ಪ್ಯಾಕೆಟ್​ ಹಾಲಿನಿಂದಲೆ ತಿಂಗಳಿಗೆ 1 ಕೆಜಿ ಬೆಣ್ಣೆ ತೆಗೆಯಬಹುದು, ಆ ಸಿಂಪಲ್​ ಟ್ರಿಕ್​​​ ಇಲ್ಲಿದೆ

ಅಡುಗೆಯಲ್ಲಿ ಬೆಣ್ಣೆಯ ಬಳಕೆ ಸಾಮಾನ್ಯ. ಬೆಳಗ್ಗೆ ತಿಂಡಿ, ರೊಟ್ಟಿ ಅಥವಾ ಇತರ ಖಾದ್ಯಗಳಲ್ಲಿ ಬೆಣ್ಣೆ ಹಚ್ಚಿ ಸವಿಯುವುದು ಎಲ್ಲರಿಗೂ ಇಷ್ಟ. ಆದರೆ ಅಂಗಡಿಯಲ್ಲಿ ಖರೀದಿಸುವ ಬೆಣ್ಣೆ ಗಟ್ಟಿಯಾಗಿರುವುದರಿಂದ ನೈಜ ರುಚಿ ಸಿಗುವುದಿಲ್ಲ. ಫ್ರಿಡ್ಜ್‌ನಲ್ಲಿ ತಿಂಗಳುಗಳ ಕಾಲ ಇಟ್ಟು ಬಳಸುವುದು ಸಹ ರುಚಿ ಕಡಿಮೆ ಮಾಡುತ್ತದೆ. ನಿತ್ಯ ಖರೀದಿಸುವ ಪ್ಯಾಕೆಟ್ ಹಾಲಿನಿಂದ ಮನೆಯಲ್ಲಿ ತಾಜಾ ಬೆಣ್ಣೆ ತಯಾರಿಸಬಹುದು, ಹೇಗೆ ಅಂತ ನೋಡಿ. ಸಾಮಾನ್ಯವಾಗಿ ಹಳ್ಳಿಗಳ ಕಡೆ ಹಸು, ಎಮ್ಮೆ ಹಾಲಿನಿಂದ ಬೆಣ್ಣೆ ಮಾಡುವುದು ನೋಡಿರುತ್ತೆವೆ. ಆದರೆ ಪ್ಯಾಕೆಟ್​ ಹಾಲಿನಿಂದಲೂ […]

Continue Reading

ರಜೆ ಕೊಡದ ಕಾರಣ ರೋಗಿಗೆ ʻO+veʼ ಬದಲು ಎ ಪಾಸಿಟಿವ್ ರಕ್ತ: ಜಯನಗರ ಆಸ್ಪತ್ರೆಯಲ್ಲಿ ಸಿಬ್ಬಂದಿ ಯಡವಟ್ಟು

ಸುದ್ದಿ ಸಂಗ್ರಹ ಬೆಂಗಳೂರು ಕೆಲವೊಮ್ಮೆ ಆಸ್ಪತ್ರೆಗಳಲ್ಲಿ ಮಾಡುವ ಎಡವಟ್ಟುಗಳಿಗೆ ಏನು ಹೇಳಬೇಕು ಎನ್ನುವುದೆ ಗೊತ್ತಾಗಲ್ಲ. ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಅಮಾಯಕ ಜೀವಗಳು ಬಲಿಯಾಗಿಬಿಡುತ್ವೆ. ಈಗ ಅಂತಹದ್ದೆ ಒಂದು ಮಹಾ ಎಡವಟ್ಟು ಜಯನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಕಳೆದ 2 ದಿನಗಳ ಹಿಂದೆ ತಲೆ ನೋವು ಅಂತ ಜಯನಗರ ಆಸ್ಪತ್ರೆಗೆ ಬಂದಿದ್ದ ಪುನೀತ್ ಸೂರ್ಯ ಎಂಬ ವ್ಯಕ್ತಿ ಈಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದಕ್ಕೆ ಕಾರಣ ಸಿಬ್ಬಂದಿಯೊಬ್ಬ ಮಾಡಿದ ಎಡವಟ್ಟಿನ ಕೆಲಸ. ವೈದ್ಯರು ರಕ್ತಹೀನತೆ ಆಗಿದೆ, ರಕ್ತ ಕೊಡಬೇಕು […]

Continue Reading

ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯರನ್ನು ತಾಲೂಕು ಆಸ್ಪತ್ರೆಗಳಿಗೆ ಶಿಫ್ಟ್‌ ಮಾಡಲು ಮುಂದಾದ ಆರೋಗ್ಯ ಇಲಾಖೆ

ಸುದ್ದಿ ಸಂಗ್ರಹ ಬೆಂಗಳೂರು ರಾಜ್ಯದ ಜನತೆಗೆ ಆರೋಗ್ಯ ಇಲಾಖೆ ಬಿಗ್‌ ಶಾಕ್‌ ಕೊಟ್ಟಿದೆ. ಸಮುದಾಯ ಆರೋಗ್ಯ ಆಸ್ಪತ್ರೆಗಳ ವೈದ್ಯರನ್ನು ತಾಲೂಕು ಆಸ್ಪತ್ರೆಗಳಿಗೆ ಶಿಫ್ಟ್‌ ಮಾಡಲು ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ಸುಮಾರು 270 ಕ್ಕೂ ಹೆಚ್ಚು ಸಮುದಾಯ ಆರೋಗ್ಯ ಕೇಂದ್ರಗಳು ಇವೆ‌. ಈ ಆಸ್ಪತ್ರೆಗಳಲ್ಲಿ ಬೆಳಗಿನಿಂದ ಸಂಜೆವರೆಗೂ ವೈದ್ಯಕೀಯ ಸೇವೆಗಳು ಸಿಗುತ್ತಿವೆ. ಗ್ರಾಮೀಣ ಭಾಗದ ಜನರಿಗೆ ತುಂಬಾ ಅನುಕೂಲ ಆಗ್ತಿತ್ತು. ಆದರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕಡಿಮೆ ಹೆರಿಗೆ ಆಗುತ್ತಿವೆ. 30 ಕ್ಕಿಂತ ಕಡಿಮೆ ಹೆರಿಗೆ ಆಗಿರುವ ಆಸ್ಪತ್ರೆಗಳಲ್ಲಿ […]

Continue Reading

ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್​ನ್ಯೂಸ್: ಋತುಚಕ್ರದ ರಜೆಗೆ ಇಲಾಖೆ ಗ್ರೀನ್​ಸಿಗ್ನಲ್

ಸುದ್ದಿ ಸಂಗ್ರಹ ಬೆಂಗಳೂರು ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ 4 ಸಾರಿಗೆ ನಿಗಮಗಳ ಮಹಿಳಾ ನೌಕರರಿಗೆ ಋತುಚಕ್ರದ ರಜೆ ನೀಡಲು ಸಾರಿಗೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಆ ಮೂಲಕ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜನವರಿ 1ರಿಂದ ಮಹಿಳಾ ಡ್ರೈವರ್, ಕಂಡಕ್ಟರ್ ಸೇರಿ ಮಹಿಳಾ ಸಿಬ್ಬಂದಿ ಋತುಚಕ್ರದ ರಜೆ ಪಡೆಯಬಹುದಾಗಿದೆ. ಕೆಎಸ್ಆರ್​​ಟಿಸಿ, ಬಿಎಂಟಿಸಿ, ಎನ್​​​​ಡಬ್ಲೂಕೆಆರ್​​ಟಿಸಿ ಮತ್ತು ಕೆಕೆಆರ್​ಟಿಸಿ ಎಂಡಿ ಅಕ್ರಂ ಪಾಷ ಈ ಬಗ್ಗೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಆ ಮೂಲಕ 4 ನಿಗಮದ ಮಹಿಳಾ ನೌಕರರಿಗೆ ಕ್ರಿಸ್ […]

Continue Reading

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ಜೀವನ ನಡೆಸೋದು ಕಷ್ಟ ಅಂತ ರಾಜೀನಾಮೆ ಕೊಟ್ಟ ವೈದ್ಯ

ಸುದ್ದಿ ಸಂಗ್ರಹ ಮಂಗಳೂರು ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಸುಳ್ಯದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸರಿಯಾಗಿ ಸಂಬಳವಾಗದ ಕಾರಣ ರಾಜಿನಾಮೆ ನೀಡಿದ್ದಾರೆ. 6 ತಿಂಗಳಿಂದ ಸಂಬಳ ಬರದಿದ್ದಕ್ಕೆ ಬೇಸತ್ತು ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ವೈದ್ಯರಾದ ಡಾ.ಕುಲದೀಪ್ ಎಂ.ಡಿ ರಾ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡುವರೆ ವರ್ಷದಿಂದ ವೈದ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಸಂಬಳ ಬಾರದೆ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತಿದೆ. ಆರ್ಥಿಕ ಸಮಸ್ಯೆ ಉಂಟಾಗುತ್ತಿದೆ ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. […]

Continue Reading

ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ಬಹುಮಾನ: ಸಿಎಂ

ಸುದ್ದಿ ಸಂಗ್ರಹ ಬೆಂಗಳೂರು ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ. ನಗದು ಬಹುಮಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿ.21 ರವಿವಾರ ಒಲಂಪಿಕ್ 2025 ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದನೆಗಳು. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ.ಗಳ ನಗದು ಬಹುಮಾನ […]

Continue Reading

ರಾಜ್ಯದಲ್ಲಿ ಹೆಚ್ಚುತ್ತಿದೆ ಅಪ್ರಾಪ್ತ ಹೆಣ್ಣು ಮಕ್ಕಳ ಗರ್ಭಧಾರಣೆ: 3 ವರ್ಷದಲ್ಲಿ 2,320 ಪ್ರಕರಣ, ಶಿವಮೊಗ್ಗದಲ್ಲಿ ಅಧಿಕ

ಸುದ್ದಿ ಸಂಗ್ರಹ ಬೆಂಗಳೂರು ರಾಜ್ಯದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳು ತಾಯಿ ಆಗುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಆಗುತ್ತಿದೆ. ಕಳೆದ 3 ವರ್ಷಗಳಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಗರ್ಭಧಾರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ 2,320 ಪ್ರಕರಣಗಳು ಬಂದಿವೆ. ಅಷ್ಟೆ ಅಲ್ಲದೆ, ಕಳೆದ 10 ತಿಂಗಳಲ್ಲಿ 749 ಪ್ರಕರಣಗಳು ವರದಿಯಾಗಿವೆ. 2,320 ಪ್ರಕರಣಗಳ ಪೈಕಿ ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲಿ 3 ವರ್ಷದಲ್ಲಿ 163 ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ […]

Continue Reading