ನಾನು ಬಿಎಸ್ಸಿ ಪದವೀಧರ, ಕನ್ನಡ ಬರೆಯಲು ಬರದೆ ಇರುವಷ್ಟು ದಡ್ಡ ನಾನಲ್ಲ: ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಕನ್ನಡದಲ್ಲಿ ಶುಭವಾಗಲಿ ಎಂದು ಬರೆಯಲು ತಡಕಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಈ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಕನ್ನಡ ಬರೆಯಲು ಬರೊಲ್ಲ ಎಂಬ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟ್ರೋಲ್ ಆದ ಬಗ್ಗೆ ಮಾತಾಡಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಸುಳೇಕಲ್‌ನಲ್ಲಿ ಮಾತನಾಡಿರುವ ಅವರು, ನಾನು ಬಿಎಸ್ಸಿ ಪದವೀಧರ. ಕನ್ನಡ ಬರೆಯಲು ಬರದೆ ಇರುವಷ್ಟು ದಡ್ಡ ನಾನಲ್ಲ. […]

Continue Reading

ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕನ್ನಡ ಬರೆಯಲು ಪರದಾಡಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಶನಿವಾರ ಕೊಪ್ಪಳ ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಶಿವರಾಜ ತಂಗಡಗಿ ಭೇಟಿ ನೀಡಿದ್ದರು. ಈ ವೇಳೆ ಅಂಗನವಾಡಿ ಮಕ್ಕಳಿಗೆ ಶುಬವಾಗಲಿ ಎಂದು ಬರೆದಿದ್ದರು. ಬಳಿಕ ಬೆಂಬಲಿಗರು ತಿಳಿಸಿದಾಗ ಸರಿಯಾಗಿ ಶುಭವಾಗಲಿ ಎಂದು ತಿದ್ದುಪಡಿ ಮಾಡಿದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ, ಕನ್ನಡ ಬರೆಯಲು ಪರದಾಡಿದ ಸಚಿವರು ಎಂದು ವೈರಲ್ […]

Continue Reading

ಕಲಬುರಗಿ: ಜೈಲಿನಲ್ಲಿ ದುಡಿದ ಹಣದಿಂದ ಬಂಧಮುಕ್ತನಾದ ಕೈದಿ

ಕಲಬುರಗಿ: ಸನ್ನಡತೆ ಆಧಾರದಡಿ ಜೈಲು ಶಿಕ್ಷೆಯಿಂದವಿನಾಯಿತಿ ಪಡೆದರೂ ಬಡತನದ ಕಾರಣದಿಂದಜೈಲಿನಿಂದ ಹೊರಬರಲು ಕೈದಿಯೊಬ್ಬರು ಮೂರುತಿಂಗಳು ಕಾಯಬೇಕಾಯಿತು. ಕೊನೆಗೆ ಜೈಲಿನಲ್ಲಿ ತಾನೆದುಡಿದ ಹಣದಿಂದ ಬಿಡುಗಡೆಯ ಭಾಗ್ಯ ತಂದು ಕೊಟ್ಟಿದೆ.ಇದು ಜೈಲು ಹಕ್ಕಿ ಬಂಧಮುಕ್ತಗೊಂಡ ಯಶೋಗಾಥೆ.ಇದಕ್ಕೆ ಜೈಲಧಿಕಾರಿ ನೆರವಾಗಿ ಮಾನವೀಯ ಸ್ಪರ್ಶನೀಡಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ದುರ್ಗಪ್ಪಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರು. ಹಲವು ವರ್ಷಗಳ ಬಳಿಕ 2013ರಲ್ಲಿ ಅವರಿಗೆ ಜೀವಾವಧಿ ಶಿಕ್ಷೆ ಹಾಗೂಕೊಲೆಯಾದ ಕುಟುಂಬಕ್ಕೆ 1 ಲಕ್ಷ ರೂ. ದಂಡದ ರೂಪದಲ್ಲಿನ್ಯಾಯಾಲಯ ವಿಧಿಸಿತ್ತು. ಬಳಿಕ ಸನ್ನಡತೆ ಆಧಾರದಲ್ಲಿ 2023ರ […]

Continue Reading

ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ್ದ ನರ್ಸ್ ಅಮಾನತು

ಹಾವೇರಿ: ಬಾಲಕನ ಕೆನ್ನೆಯ ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ನರ್ಸ್ ಅನ್ನು ಅಮಾನತುಗೊಳಿಸಲಾಗಿದೆ. ಸರ್ಕಾರದ ಪ್ರಧಾನಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಫೆವಿಕ್ವಿಕ್ ಅಂಟು ದ್ರಾವಣವಾಗಿದ್ದು, ವೈದ್ಯಕೀಯ ಬಳಕೆಯಲ್ಲಿಲ್ಲ. ಮಗುವಿನ ಚಿಕಿತ್ಸೆಗೆ ಫೆವಿಕ್ವಿಕ್ ಬಳಸಿ ಕರ್ತವ್ಯ ಲೋಪವೆಸಗಿದ್ದಾರೆ. ಸ್ಟಾಫ್ ನರ್ಸ್ ಬಗ್ಗೆ ಪ್ರಾಥಮಿಕ ವರದಿ ಪಡೆದು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಮಗುವಿನ ಆರೋಗ್ಯದಲ್ಲಿ ಅಡ್ಡಪರಿಣಾಮಗಳ ಬಗ್ಗೆ ನಿಗಾ ಇಡಲು ಸೂಚನೆ ನೀಡಿದೆ, ಚಿಕಿತ್ಸೆಗೆ ಒಳಪಟ್ಟಿದ್ದ ಮಗು […]

Continue Reading

ಹಗಲಿನಲ್ಲಿ ಮನೆ ಗುರುತಿಸಿ ರಾತ್ರಿ ಕಳ್ಳತನ: ಇರಾನಿ ಗ್ಯಾಂಗ್‌ನ 6 ಜನ ಅರೆಸ್ಟ್

ಬೆಂಗಳೂರು: ಹಗಲಿನಲ್ಲಿ ಮನೆ ಗುರುತಿಸಿ ರಾತ್ರಿ ಕಳ್ಳತನ ಮಾಡುತ್ತಿದ್ದ ಇರಾನಿ ಗ್ಯಾಂಗ್‌ನ್ನು ಕೋಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ, 28 ಲಕ್ಷ ರೂ. ಮೌಲ್ಯದ 450 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಧಾನಿ ಬೆಂಗಳೂರಿನಲ್ಲಿ ಆಕ್ಟಿವ್ ಆಗಿದ್ದ ಇರಾನಿ ಗ್ಯಾಂಗ್‌ನ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್‌ನವರು ನಗರದಲ್ಲಿ ಸ್ಟೋನ್ ರಿಂಗ್ಸ್ ವ್ಯಾಪಾರ ಮಾಡುತ್ತಿದ್ದರು. ರಸ್ತೆಯಲ್ಲಿ ಓಡಾಡುತ್ತಾ ಮಾರಾಟ ಮಾಡುತ್ತಿದ್ದರು. ಈ ವೇಳೆ ಒಂಟಿ ಮನೆ, ಬೀಗ ಹಾಕಿರುವ ಮನೆಗಳನ್ನ ಗುರುತಿಸುತ್ತಿದ್ದರು. ಹಗಲಿನಲ್ಲಿ ಮನೆ […]

Continue Reading

ಫೈನಾನ್ಸ್ ಕಿರುಕುಳ: 3 ವರ್ಷ ಜೈಲು, 1 ಲಕ್ಷದ ವರೆಗೆ ದಂಡ, ಗುರುವಾರ ಸರ್ಕಾರದಿಂದ ಸುಗ್ರೀವಾಜ್ಞೆ

ಬೆಂಗಳೂರು: ನಾಡಿದ್ದು ಗುರುವಾರ ಮೈಕ್ರೋ ಫೈನಾನ್ಸ್ ಬಿಲ್ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕ್ಯಾಬಿನೆಟ್ ಅಜೆಂಡಾದಲ್ಲಿ ಸುಗ್ರೀವಾಜ್ಞೆ ವಿಷಯ ಸೇರ್ಪಡೆ ಮಾಡಿದೆ. ಕಾನೂನು ಇಲಾಖೆಯಿಂದ ಕರ್ನಾಟಕ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಣ ಮತ್ತು ಲೇವಾದೇವಿ ನಿಯಂತ್ರಣ 2025ರ ಕರಡು ಬಿಲ್ ಸಿದ್ಧವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಮೊದಲ ಆದ್ಯತಾ ವಿಷಯವಾಗಿ ಬಿಲ್ ಸುಗ್ರೀವಾಜ್ಞೆ ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗರಿಷ್ಠ 3 ವರ್ಷ ಜೈಲು, 1 ಲಕ್ಷದ ವರೆಗೆ ದಂಡ ವಿಧಿಸಲು ಕರಡು […]

Continue Reading

ಸಿದ್ಧಗಂಗಾ ಮಠದ ತ್ರಿವಿಧ ದಾಸೋಹದಂತೆ ನಾಲವಾರ ಮಠದ ಕಾರ್ಯ ಶ್ಲಾಘನೀಯ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಚಿತ್ತಾಪುರ: ಕರುನಾಡಿನಲ್ಲಿ ತ್ರಿವಿಧ ದಾಸೋಹದ ಮೂಲಕ ಪ್ರಸಿದ್ಧಿಯಾದ ಸಿದ್ಧಗಂಗಾದಂತೆ ಕಲ್ಯಾಣ ಕರ್ನಾಟಕದ ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾಸಂಸ್ಥಾನವು ಅನ್ನ, ಅಕ್ಷರ, ಅರಿವು ನೀಡುವ ಕಾರ್ಯ ಮಾಡುತ್ತಿರುವದು ಶ್ಲಾಘನೀಯ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದರು. ನಾಲವಾರ ಜಾತ್ರಾ ಮಹೋತ್ಸವದ ಅಂಗವಾಗಿ ಸದ್ಗುರು ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ದರ್ಶನಾಶೀರ್ವಾದ ಪಡೆಯಲು ಆಗಮಿಸಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪೀಠಾಧಿಪತಿ ಡಾ. ಸಿದ್ಧತೋಟೇಂದ್ರ ಮಹಾಸ್ವಾಮಿಗಳಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಶ್ರೇಷ್ಠ ಗುರುಪರಂಪರೆ ಹೊಂದಿರುವ ಕಲ್ಯಾಣ ಕರ್ನಾಟಕ […]

Continue Reading

ಕ್ರೀಡೆಗಳ ಮೂಲಕ ಬೌದ್ಧಿಕ ಮಟ್ಟ ಹೆಚ್ಚಿಸಲು ಸಹಕಾರಿ: ಸಚಿವ ಪ್ರಿಯಾಂಕ್ ಖರ್ಗೆ

ಚಿತ್ತಾಪುರ: ಕ್ರೀಡೆಗಳ ಮೂಲಕ ಕೇವಲ ದೈಹಿಕ ಸಮರ್ಥತೆ ರೂಪುಗೊಳ್ಳದೇ ಬೌದ್ದಿಕ ಮಟ್ಟ ಹೆಚ್ಚಿಸಲು ಸಹಕಾರಿಯಾಗುತ್ತದೆ. ಕ್ರೀಡೆಯ ಜೊತೆಗೆ ವೈಜ್ಞಾನಿಕ ಮನೋಭಾವನೆ ಬೆಳೆಸಲು ಎಲ್ಲರೂ ಶ್ರಮಪಡಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಶಾಲಾ ಶಿಕ್ಷಣ ಇಲಾಖೆ, ಅಶೋಕ ಲೈಲ್ಯಾಂಡ್ ಹಾಗೂ ಲರ್ನಿಂಗ್ ಲಿಂಕ್ ಫೌಂಡೇಶನ್ ಸಹಯೋಗದೊಂದಿಗೆ ಪಟ್ಟಣದ ಬಾಪುರಾವ್ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ “ಆಟ ನನ್ನ ಹಕ್ಕು” ಕಾರ್ಯಕ್ರಮದಲ್ಲಿ ಕ್ರೀಡಾ ಸಾಮಗ್ರಿಗಳ ವಿತರಣಾ ಹಾಗೂ ಉದ್ಘಾಟನೆ […]

Continue Reading

ರಾಜ್ಯ ಚಲನಚಿತ್ರ ಪ್ರಶಸ್ತಿ ತಿರಸ್ಕರಿಸಿದ ಕಿಚ್ಚ ಸುದೀಪ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊಡಲಾಗುವ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯಲ್ಲಿ ಕಿಚ್ಚ ಸುದೀಪ ಅವರನ್ನು 2019ನೇ ಸಾಲಿನ ‘ಅತ್ಯುತ್ತಮ ನಟ ಪ್ರಶಸ್ತಿ’ಗೆ ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳು. ಆದರೆ ನಾನು ಈ ಪ್ರಶಸ್ತಿಯನ್ನು ಸ್ವೀಕರಿಸುವುದಿಲ್ಲ ಎಂದು ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ ತಿಳಿಸಿದ್ದಾರೆ. ಈ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿ ಪಡೆದಿರುವುದು ನಿಜಕ್ಕೂ ಒಂದು ಗೌರವದ ವಿಷಯ. ಈ ಗೌರವಕ್ಕೆ ಆಯ್ಕೆಮಾಡಿದ ತೀರ್ಪುಗಾರರಿಗೆ ಹೃತ್ಪೂರ್ವಕ ಧನ್ಯವಾದಗಳು ಅರ್ಪಿಸುತ್ತೆನೆ. […]

Continue Reading

ಹೊಸ ಕಾರು, ಬೈಕ್ ಖರೀದಿಸುವವರಿಗೆ ಸರ್ಕಾರದಿಂದ ಶಾಕ್: ಫೆಬ್ರವರಿಯಿಂದ ರಿಜಿಸ್ಟ್ರೇಷನ್ ದರ ಏರಿಕೆ

ಬೆಂಗಳೂರು: ಮುಂದಿನ ತಿಂಗಳಿನಿಂದ ಹೊಸ ದ್ವಿಚಕ್ರ ವಾಹನ ಹಾಗೂ ಕಾರು ಖರೀದಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಲಿದೆ. ಕೆಲವೇ ದಿನಗಳಲ್ಲಿ ಸೆಸ್ ಜಾರಿಯಾಗಲಿದ್ದು,ವಾಹನ ಖರೀದಿ ಮೇಲೆ ಮತ್ತಷ್ಟು ಹೊರೆ ಬಿಳಲಿದೆ. ಈಗಾಗಲೇ ಹೊಸ ವರ್ಷದಿಂದ ಅಟೊಮೊಬೈಲ್‌ ಕಂಪನಿಗಳು ತಮ್ಮ ದ್ವಿಚಕ್ರ ವಾಹನ ಮತ್ತು ಕಾರುಗಳ ದರವನ್ನು ಏರಿಕೆ ಮಾಡಿದೆ. ಈಗ ರಾಜ್ಯ ಸರ್ಕಾರ ಕಾರ್ಮಿಕ ಸಾಮಾಜಿಕ ಭದ್ರತೆ ನಿಧಿಗಾಗಿ ದ್ವಿಚಕ್ರ ವಾಹನ, ಸಾರಿಗೆತರ ಮೋಟಾರ್ ಕಾರುಗಳ ನೋಂದಣಿ ವೇಳೆ ತಲಾ 500 ರೂ. ಮತ್ತು 1,000 […]

Continue Reading