ಭಾರತದಲ್ಲಿ ಲೈಸನ್ಸ್ ಅಗತ್ಯವಿಲ್ಲದ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ: ಇದರ ಬೆಲೆ ಫೋನ್​ಗಿಂತ ಕಡಿಮೆ

ಬೆಂಗಳೂರು: ಒಡಿಸ್ಸೆ ಎಲೆಕ್ಟ್ರಿಕ್ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ರೇಸರ್ ನಿಯೋವನ್ನು ಪರಿಚಯಿಸಿದೆ. ಇದನ್ನು ಕಡಿಮೆ ವೇಗದ ವಿಭಾಗದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್​ನ ಆರಂಭಿಕ ಬೆಲೆ ರೂ.52,000. ಕಡಿಮೆ ಬೆಲೆಗೆ ಉತ್ತಮ ಸ್ಕೂಟರ್ ಬಯಸುವವರಿಗಾಗಿ ಈ ಸ್ಕೂಟರ್ ವಿನ್ಯಾಸಗೊಳಿಸಲಾಗಿದೆ. ರೇಸರ್ ನಿಯೋ, ರೇಸರ್ ಸ್ಕೂಟರ್‌ನ ಹೊಸ ಮತ್ತು ಸುಧಾರಿತ ಮಾದರಿಯಾಗಿದ್ದು, ಇದು ಅನೇಕ ಹೊಸ ವೈಶಿಷ್ಟ್ಯಗಳನ್ನು ಹೊಂದಿದೆ ಮತ್ತು ಇದರ ಬ್ಯಾಟರಿ ಕೂಡ ಮೊದಲಿಗಿಂತ ಉತ್ತಮವಾಗಿದೆ. ಈ ಸ್ಕೂಟರ್ ಎರಡು ಮಾದರಿಗಳಲ್ಲಿ ಲಭ್ಯವಿರುತ್ತದೆ. […]

Continue Reading

SSLC ತೇರ್ಗಡೆಗೆ 33 ಅಂಕ ಸಾಕು: ಇನ್ನುಮುಂದೆ ಪ್ರಥಮ ಭಾಷೆ 125ರ ಬದಲು 100ಕ್ಕೆ

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ಮಕ್ಕಳು ಇನ್ನುಮುಂದೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮಾದರಿಯಲ್ಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸಲಿದ್ದಾರೆ. ಸಿಬಿಎಸ್‌ಇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಆಂತರಿಕ ಅಂಕಗಳು ಸೇರಿ ಒಟ್ಟಾರೆ ಶೇ 33 ಅಂಕ ಪಡೆದರೆ ತೇರ್ಗಡೆಯಾಗುತ್ತಾರೆ. ಪ್ರತಿ ವಿಷಯಕ್ಕೆ 20 ಆಂತರಿಕ ಅಂಕಗಳಿದ್ದು, 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಎರಡು ಸೇರಿ 100ಕ್ಕೆ ಕನಿಷ್ಠ 33 ಅಂಕ ಪಡೆದವರು ಉತ್ತೀರ್ಣರಾಗುತ್ತಾರೆ. ಇದೆ ಮಾದರಿ ಎಸ್‌ಎಸ್‌ಎಲ್‌ಸಿಯಲ್ಲೂ ಅಳವಡಿಸಲು […]

Continue Reading

ಹಠಾತ್ ಹೃದಯಾಘಾತ ಅಧ್ಯಯನ ವರದಿ ಬಿಡುಗಡೆ: ಹಠಾತ್ ಸಾವಿಗೆ ಈ 6 ಅಂಶಗಳೆ ಕಾರಣ-ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್ ಹೃದಯಾಘಾತದ ಪ್ರಕರಣಗಳಿಗೆ ಕೋವಿಡ್ ಲಸಿಕೆಗೆ ನೇರ ಸಂಬಂಧವಿಲ್ಲ ಎಂಬ ತಜ್ಞರ ವರದಿಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಡುಗಡೆ ಮಾಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದಂತೆ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಡಾ. ಕೆ.ಎಸ್ ರವೀಂದ್ರನಾಥ ನೇತೃತ್ವದ 12 ತಜ್ಞರ ತಂಡವು ಈ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡಿದೆ ಎಂದು ಮಾಹಿತಿ ನೀಡಿದರು. ಬೆಂಗಳೂರಿನಲ್ಲಿ ಹೃದಯಾಘಾತ ಸಾವಿನ ವರದಿ ಬಿಡುಗಡೆ ಮಾಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವ್ಯಾಯಾಮ ಕೊರತೆ, […]

Continue Reading

ಸೆಟ್ಟೇರಿತು ದೆವ್ವದ ಕಥೆ

ಬೆಂಗಳೂರು: ಕೌರವ ವೆಂಕಟೇಶ್‌ ನಾಯಕನಾಗಿ ನಟಿಸುತ್ತಿರುವ ‘ಒಂದು ಸುಂದರ ದೆವ್ವದ ಕಥೆ’ ಚಿತ್ರ ಸೆಟ್ಟೇರಿದೆ. ಹಿರಿಯ ನಟಿ ಲೀಲಾವತಿ ಅವರ ಸ್ಮಾರಕದ ಮುಂದೆ ಮೊದಲ ದೃಶ್ಯಕ್ಕೆ ನಟ ವಿನೋದ್ ರಾಜ್ ಅವರು ಕ್ಲಾಪ್ ಮಾಡಿದರು. ಎಂ.ಆರ್ ಕಪಿಲ್ ಚಿತ್ರ ನಿರ್ದೇಶಿಸುತ್ತಿದ್ದಾರೆ. 35 ವರ್ಷಗಳ ಹಿಂದೆ ನಾನು ಕೌರವ ವೆಂಕಟೇಶ್ ಅವರ ವಿದ್ಯಾರ್ಥಿ ಆಗಿದ್ದೆ. ಈಗ ಅವರ ಸಿನಿಮಾ ನಿರ್ದೇಶಿಸುವ ಅವಕಾಶ ದೊರೆತಿದೆ. ಇದೊಂದು ವಿಭಿನ್ನ ಶೀರ್ಷಿಕೆ, ಸಿನಿಮಾದಲ್ಲೂ ವಿಭಿನ್ನತೆಯಿದೆ. ಶಿಕ್ಷಣ ಕುರಿತು ಒಂದು ಗಟ್ಟಿಯಾದ ಕಥೆಯಿದೆ. ವಿದ್ಯಾರ್ಥಿಗಳಿಗೆ […]

Continue Reading

ಹಾಸನದ ಹೃದಯಾಘಾತದ ಪ್ರಾಥಮಿಕ ವರದಿ ಸಿದ್ಧ: ಇದುವೆ ಮುಖ್ಯ ಕಾರಣ ಅಂತಿದ್ದಾರೆ ತಜ್ಞರು

ಬೆಂಗಳೂರು: ಹಾಸನದಲ್ಲಿ ಆಗುತ್ತಿರುವ ಸರಣಿ ಸಾವುಗಳು ಇಡಿ ಆರೋಗ್ಯ ಇಲಾಖೆ ಫೀಲ್ಡ್‌ಗೆ ಇಳಿಯುವಂತೆ ಮಾಡಿದೆ, ಸ್ವತಃ ಸಿಎಂ ಸಿದ್ದರಾಮಯ್ಯ ಕೂಡ ಕಳವಳಗೊಂಡಿದ್ದಾರೆ. ಕೇವಲ 42 ದಿನಗಳಲ್ಲಿ 26 ಜನ ಬಲಿಯಾಗಿದ್ದಾರೆ. ಸಾವಿನ ತನಿಖೆಗೆ ತಜ್ಞರ ಸಮಿತಿ ರಚಿಸಲಾಗಿದೆ. ಈ ಮಧ್ಯೆ ಹೃದಯಾಘಾತದ ಬಗ್ಗೆ ತಾಂತ್ರಿಕ ಸಮಿತಿ ಪ್ರಾಥಮಿಕ ವರದಿ ಸಿದ್ಧ ಪಡಿಸಿದೆ, ವರದಿಯಲ್ಲಿ ಶಾಕಿಂಗ್ ಅಂಶ ಪತ್ತೆಯಾಗಿದೆ. ಪ್ರಾಥಮಿಕ ವರದಿಯಲ್ಲಿ ಏನಿದೆ ? ಈ ಸರಣಿ ಸಾವುಗಳಿಂದ ಸರ್ಕಾರ ಕೂಡ ಆತಂಕಗೊಂಡಿದ್ದು, ಸಾವಿಗೆ ಕಾರಣ ಏನು ಎನ್ನುವುದನ್ನು […]

Continue Reading

ಆಸ್ತಿ ಮಾಲಿಕರಿಗೆ ಗುಡ್ ನ್ಯೂಸ್: ಪಂಚಾಯತಿಯಲ್ಲೂ ಸಿಗುತ್ತೆ ಇ-ಖಾತಾ

ಬೆಂಗಳೂರು: ಆಸ್ತಿ ಮಾಲೀಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರ ಇ-ಖಾತಾ ಅಭಿಯಾನ ಹಮ್ಮಿಕೊಂಡಿದೆ. ಕರ್ನಾಟಕ ಗ್ರಾಮ ಸ್ವರಾಜ್-ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ 2025 ಮಂಡಿಸಿದ್ದು, ಈ ಮೂಲಕ ಗ್ರಾಮೀಣ ಭಾಗದ ಅನಧಿಕೃತ ಆಸ್ತಿಗಳಿಂದ ತೆರಿಗೆ ಅಥವಾ ದಂಡ ವಸೂಲಿ ಹಾಗೂ ಆ ಸ್ವತ್ತುಗಳನ್ನು ಇ-ಖಾತಾ ವ್ಯವಸ್ಥೆಯಡಿ ತರಲಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರ ಇದ್ದಿದ್ದ ಇ-ಖಾತಾ ವಿತರಣೆ ಇನ್ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಇ-ಖಾತಾ ವಿತರಣೆಗೆ ಪ್ಲಾನ್ ಮಾಡಿದ್ದು, ಜುಲೈ 15 ರಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಇ-ಖಾತಾ […]

Continue Reading

ಗ್ರಾಮ ಪಂಚಾಯಿತಿಯಲ್ಲಿ ಇ-ಖಾತಾ: ಇದರ ಉಪಯೋಗವೇನು ?

ಬೆಂಗಳೂರು: ಆಸ್ತಿ ಮಾಲೀಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರ ಇ-ಖಾತಾ ಅಭಿಯಾನ ಹಮ್ಮಿಕೊಂಡಿದೆ. ಕರ್ನಾಟಕ ಗ್ರಾಮ ಸ್ವರಾಜ್-ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ 2025 ಮಂಡಿಸಿದ್ದು, ಈ ಮೂಲಕ ಗ್ರಾಮೀಣ ಭಾಗದ ಅನಧಿಕೃತ ಆಸ್ತಿಗಳಿಂದ ತೆರಿಗೆ ಅಥವಾ ದಂಡ ವಸೂಲಿ ಹಾಗೂ ಆ ಸ್ವತ್ತುಗಳನ್ನು ಇ-ಖಾತಾ ವ್ಯವಸ್ಥೆಯಡಿ ತರಲಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರ ಇದ್ದಿದ್ದ ಇ-ಖಾತಾ ವಿತರಣೆ ಇನ್ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಇ-ಖಾತಾ ವಿತರಣೆಗೆ ಪ್ಲಾನ್ ಮಾಡಿದ್ದು, ಜುಲೈ 15 ರಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಇ-ಖಾತಾ […]

Continue Reading

ಗಾಂಜಾ ಆರೋಪಿಗಳನ್ನು ಕರೆತರುತ್ತಿದ್ದ ಸಬ್‌ ಇನ್ಸ್‌ಪೆಕ್ಟರ್‌ಗೆ ಲಾರಿ ಡಿಕ್ಕಿಯಾಗಿ ಸಾವು: ಪ್ರಕರಣದ ಸುತ್ತ ಹಲವು ಅನುಮಾನ

ಬೆಂಗಳೂರು: ಗಾಂಜಾ ಆರೋಪಿಗಳ ಬಂಧನಕ್ಕೆ ತೆರಳಿದಾಗ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಬ್‌ ಇನ್ಸ್‌ಪೆಕ್ಟರ್‌ ಸಾವನ್ನಪ್ಪಿದ ಘಟನೆ ಚಂದಾಪುರದ ಸೂರ್ಯಸಿಟಿಯಲ್ಲಿ ನಡೆದಿದೆ. ಮೃತರನ್ನು ತಲಘಟ್ಟಪುರ ಸಬ್‌ ಇನ್ಸ್‌ಪೆಕ್ಟರ್‌ ಮೈಬೂಬ್ ಗುಡ್ಡಳ್ಳಿ ಎಂದು ಗುರುತಿಸಲಾಗಿದೆ. ಜೂ.24 ರಂದು ಗಾಂಜಾ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕರೆತರುವಾಗ ಈ ಅಪಘಾತ ಸಂಭವಿಸಿದೆ. ಆರೋಪಿಗಳನ್ನು ಅರೆಸ್ಟ್ ಮಾಡಿ ಕಾರಲ್ಲಿ ಕರೆತರುವಾಗ ಸ್ವಲ್ಪ ದೂರ ಬಂದು, ಕಾರಿಂದ ಇಳಿದು ಕಾರಿನ ಹಿಂಭಾಗಕ್ಕೆ ಹೋಗಿ ಫೋನ್‌ನಲ್ಲಿ ಮಾತಾಡುವಾಗ, ಸಬ್ ಇನ್ಸ್‌ಪೆಕ್ಟರ್‌ಗೆ ಸೇರಿ ಕಾರಿಗೆ ಡಿಕ್ಕಿಯಾಗಿದೆ. […]

Continue Reading

ಪ್ಯಾರಾಸಿಟಮೋಲ್ ಸೇರಿದಂತೆ 15 ಔಷಧಿಗಳಿಗೆ ಆರೋಗ್ಯ ಇಲಾಖೆ ನಿಷೇಧ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಪ್ಯಾರಾಸಿಟಮೋಲ್ ಸೇರಿದಂತೆ 15 ಅಸುರಕ್ಷಿತ ಕಾಂತಿವರ್ಧಕಗಳು ಮತ್ತು ಔಷಧಿಗಳ ಬಳಕೆಗೆ ನಿರ್ಬಂಧ ಹೇರಿದೆ. ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಜ್ವರಕ್ಕೆ ಬಳಕೆ ಮಾಡುವ ಪ್ಯಾರಾಸಿಟಮೋಲ್ ಸೇರಿದಂತೆ ಹಲವು ಉತ್ಪನ್ನಗಳಿವೆ. ಅಸುರಕ್ಷಿತ ಉತ್ಪನ್ನಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ […]

Continue Reading

ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಬರೆದು 625ಕ್ಕೆ 625 ಅಂಕ ಪಡೆದು ಟಾಪರ್ ಆದ ಸಂಜನಾ

ಶಿವಮೊಗ್ಗ: ಒಂದು ಅಂಕದಿಂದ ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್ ಕನಸು ತಪ್ಪಿಸಿಕೊಂಡಿದ್ದ ಹುಡುಗಿ ಅದೆ ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಎದುರಿಸಿ 625ಕ್ಕೆ 625 ಅಂಕ ಪಡೆದು ವಿಶೇಷ ಸಾಧನೆ ಮಾಡಿದ್ದಾಳೆ. ಶಿವಮೊಗ್ಗದ ಆದಿಚುಂಚನಗಿರಿ ಪ್ರೌಢ ಶಾಲೆಯ ಸಂಜನಾ ಎಸ್ ಮೊದಲ ಪರೀಕ್ಷೆಯಲ್ಲಿ 624 ಅಂಕ ಪಡೆದಿದ್ದಳು. ಬಯಲಾಜಿಯಲ್ಲಿ ಒಂದು ಅಂಕ ಕಟ್ ಆಗಿತ್ತು. “ಥ ಇನ್ಫರ‍್ಮೇಶನ್ ಸೋರ್ಸ್ ಫಾರ್ ಮೇಕಿಂಗ್ ಪ್ರೋಟಿನ್ ಇನ್ ದ ಸೆಲ್ಸ್ ಇಸ್” ಎಂಬ ಬಹು ಆಯ್ಕೆಯ ಪ್ರಶ್ನೆಗೆ ಕೇಳಲಾಗಿತ್ತು. ಅದಕ್ಕೆ ಜೀನ್, ಕ್ರೋಮೋಜೋಮ್, […]

Continue Reading