2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡುವಂತಿಲ್ಲ: ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಕುಡಿದು ಮಕ್ಕಳು ಸಾವನ್ನಪ್ಪಿದ ಬಳಿಕ ಅಲರ್ಟ್‌ ಆದ ರಾಜ್ಯ ಆರೋಗ್ಯ ಇಲಾಖೆ ಮಹತ್ವದ ಸಭೆ ನಡೆಸಿ ಕೆಮ್ಮಿನ ಸಿರಪ್ ಬಳಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆ ಮಾರ್ಗಸೂಚಿಯ ಪ್ರಕಾರ, 2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡುವಂತಿಲ್ಲ. 2-5 ವರ್ಷದ ಮಕ್ಕಳಿಗೆ ತಜ್ಞರ ಸಲಹೆ ಮೇರೆಗೆ ಔಷಧಿ ನೀಡಬೇಕು. ಅಲ್ಲದೆ 5 ವರ್ಷ ಮೇಲ್ಪಟ್ಟ ಮಕ್ಕಳಿಗೆ ವೈದ್ಯರ ಸಲಹೆ ಮೇರೆಗೆ ಔಷಧಿ ನೀಡಬೇಕು. ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಬಳಸಬೇಕು. […]

Continue Reading

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು: ಭೇಟಿಯಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದಿಂದ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟ ಸಮಸ್ಯೆ ಕಾಣಿಸಿಕೊಂಡು ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ. ಪುತ್ರ ಪ್ರಿಯಾಂಕ್ ಖರ್ಗೆ ಹೇಳಿದ್ದೆನು ? ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆಗೆ ವೈದ್ಯರು ಸೂಚಿಸಿದ್ದಾರೆ. ಅದಕ್ಕಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ, ಚೆನ್ನಾಗಿದ್ದಾರೆ. ನಿಮ್ಮೆಲ್ಲರ ಕಾಳಜಿ ಮತ್ತು ಹಾರೈಕೆಗೆ ಧನ್ಯವಾದಗಳು ಎಂದು ಸಚಿವ […]

Continue Reading

ದಂಪತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’

ತೀರ್ಥಹಳ್ಳಿ: ಕೊಠಡಿಯಲ್ಲಿ ಪತಿಯೊಂದಿಗೆ ತಂಗಿದ್ದ ಮಹಿಳೆಗೆ ಮಂಚದ ಕೆಳಗೆ ಮಲಗಿದ್ದ ಪುರುಷನೊಬ್ಬ ನಡುರಾತ್ರಿ ಮೈಕೈ ಮುಟ್ಟಿ ಆತಂಕ ಮೂಡಿಸಿದ್ದಾನೆ. ಈ ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ದಂಪತಿ ಇತ್ತೀಚೆಗೆ ಪಟ್ಟಣದ ಕುವೆಂಪು ಲೇಔಟ್’ನ ಮನೆಯಲ್ಲಿ ತಂಗಿದ್ದರು. ಕೊಠಡಿಯಲ್ಲಿ ಮಲಗಿದ್ದಾಗ ರಾತ್ರಿ 12.30ರ ಹೊತ್ತಿಗೆ ಮಂಚದ ಕೆಳಗಿನಿಂದ ವ್ಯಕ್ತಿಯೊಬ್ಬ ಮಹಿಳೆಯ ಮೈಕೈ ಮುಟ್ಟಿದ ಅನುಭವವಾಗಿದೆ. ಮಹಿಳೆ ತನ್ನ ಪತಿಗೆ ವಿಷಯ ತಿಳಿಸಿದ್ದು, ಅವರು ಪರಿಶೀಲಿಸಿದರು. ಆಗ ಮಂಚದ ಅಡಿಯಿಂದ ಎದ್ದು ಬಂದ ವ್ಯಕ್ತಿಯೊಬ್ಬ […]

Continue Reading

24 ಸಾಂಗ್ಸ್ ರೆಡಿ ಇದೆ, ಆದರೆ ‘ಪ್ರೇಮ ಲೋಕ 2’ ವಿಳಂಬಕ್ಕೆ ಕಾರಣ ತಿಳಿಸಿದ ರವಿಚಂದ್ರನ್

ಬೆಂಗಳೂರು: 1987ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆದ ‘ಪ್ರೇಮಲೋಕ’ ಚಿತ್ರಕ್ಕೆ ಸೀಕ್ವೆಲ್ ಸಿದ್ಧವಾಗುತ್ತಿದೆ ಎಂದು ರವಿಚಂದ್ರನ್ ಹೇಳಿದ್ದರು. ಆದರೆ ಸಿನಿಮಾ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ. ಎಲ್ಲವೂ ಅಂದುಕೊಂಡಂತೆ ನಡೆದರೆ ಕಳೆದ ವರ್ಷ ಮೇ ತಿಂಗಳಲ್ಲೇ ಸಿನಿಮಾದ ಶೂಟ್ ಆರಂಭ ಆಗಬೇಕಿತ್ತು. ಆದರೆ ರವಿಚಂದ್ರನ್ ಈ ಬಗ್ಗೆ ಯಾವುದೆ ಮಾಹಿತಿ ನೀಡಿಲ್ಲ. ಈಗ ಸಿನಿಮಾ ವಿಳಂಬಕ್ಕೆ ಕಾರಣ ವಿವರಿಸಿದ್ದಾರೆ. ಪ್ರೇಮಲೋಕ ಚಿತ್ರದಲ್ಲಿ ಬರೋಬ್ಬರಿ 11 ಹಾಡುಗಳು ಇದ್ದವು. ಸಾಂಗ್ ಬಗ್ಗೆ ತಿಳಿದ ಬಳಿಕ ಅನೇಕರು ನಿರ್ಮಾಣದಿಂದ […]

Continue Reading

ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗೆ ಕೊನೆಗೂ ನೇಮಕ

ಬೆಂಗಳೂರು: ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗೆ ಕೊನೆಗೂ ನೇಮಕವಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಡಬ್ಲ್ಯೂಸಿ ಸಭೆಗೆಂದು ಬಿಹಾರ್ ತೆರಳಿದ ಸಂದರ್ಭದಲ್ಲೇ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗಿದೆ. 39 ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರ ಹೈಕಮಾಂಡ್‌ ಮುದ್ರೆ ಹಾಕಿ ಇಂದು (ಸೆಪ್ಟೆಂಬರ್ 24) ರಾಜ್ಯಕ್ಕೆ ರವಾನೆ ಮಾಡಿದೆ. ಇನ್ನು ಪ್ರಕರಣದಲ್ಲಿ ಜೈಲಿನಲ್ಲಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಅವರಿಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಹಾಗಾದರೆ […]

Continue Reading

ಸರ್ಕಾರಿ ನೌಕರರು, ಕುಟುಂಬದ ಸದಸ್ಯರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿ

ಬೆಂಗಳೂರು: ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಸರ್ಕಾರಿ ನೌಕರರು ಮತ್ತು ಕುಟುಂಬದ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಲಾಗಿದೆ. ಅಕ್ಟೋಬರ್ 1 ರಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಬರಲಿದೆ. ಬಹಳ ವರ್ಷಗಳಿಂದ ಈ ಯೋಜನೆ ಮರುಜಾರಿಗೆ ಒತ್ತಾಯ ಕೇಳಿಬಂದಿತ್ತು. ಈ ಯೋಜನೆಯಡಿ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸಿಗಲಿದೆ. ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿಯೂ ನಗದು ರಹಿತ ಉಚಿತ ಚಿಕಿತ್ಸೆ ಸಿಗಲಿದೆ.

Continue Reading

ನಂದಿನಿ: 20 ಉತ್ಪನ್ನಗಳ ದರ ಇಳಿಕೆ

ಬೆಂಗಳೂರು: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿಯು (ಕೆಎಂಎಫ್) ತುಪ್ಪ, ಬೆಣ್ಣೆ, ಪನೀರ್ ಸೇರಿ ‘ನಂದಿನಿ’ ಹಾಲಿನ ವಿವಿಧ ಉತ್ಪನ್ನಗಳ ದರವನ್ನು ಇಳಿಕೆ ಮಾಡಿದ್ದು, ಇದೆ ತಿಂಗಳು 22ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಶನಿವಾರ ಸುದ್ದಿಗಾರರೊಂದಿಗೆ ಈ ಬಗ್ಗೆ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ ಶಿವಸ್ವಾಮಿ, ಹಾಲಿನ ಉತ್ಪನ್ನಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಇಳಿಕೆಯ ಪರಿಣಾಮ, ಈ ಪರಿಷ್ಕರಣೆ ಮಾಡಲಾಗಿದೆ. 1 ಲೀಟ‌ರ್ ತುಪ್ಪದ ದರ ರೂ.650 ರಿಂದ 610ಕ್ಕೆ ಇಳಿಕೆ ಮಾಡಲಾಗಿದೆ. […]

Continue Reading

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ 2026ರ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಶನಿವಾರ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಜಾಲತಾಣದಲ್ಲಿ www.kseab.karnataka.gov.in ವೇಳಾಪಟ್ಟಿ ಪ್ರಕಟಿಸಲಾಗಿದೆ. 2026ರ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 09 ರವರೆಗೆ ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಯನ್ನು ಮಂಡಲಿಯ ಇ-ಮೇಲ್ ವಿಳಾಸ: chairpersonkseab@gmail.com ಗೆ ಹಾಗೂ ಹಾರ್ಡ್ ಪ್ರತಿಯನ್ನು […]

Continue Reading

ಸೆ.22 ರಿಂದ ಜಾತಿ ಜನಗಣತಿ ಆರಂಭ: ಸರ್ಕಾರದಿಂದ ಅಧಿಕೃತ ಆದೇಶ ಜಾರಿ

ಬೆಂಗಳೂರು: ಜಾತಿ ಜನಗಣತಿ ನಡೆಯುವುದು ಖಚಿತವಾಗಿದ್ದು ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ. ಸೆ.22 ರಿಂದ ಅ.7 ರವರೆಗೆ ಸಮೀಕ್ಷೆ ನಡೆಸಲಾಗುವುದು ಎಂದು ಆದೇಶಲ್ಲಿ ತಿಳಿಸಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ ನಡೆಸಲಾಗುತ್ತಿದ್ದು ಸಮೀಕ್ಷೆಗೆ ಸಿದ್ಧರಿರುವಂತೆ ರಾಜ್ಯದ ಜನತೆಗೆ ತಿಳಿಸಲಾಗಿದೆ. ಆದರೆ ಈಗ ಎದ್ದಿರುವ ಗೊಂದಲ ಬಗೆಹರಿಸುವ ಬಗ್ಗೆ ಆದೇಶದಲ್ಲಿ ಯಾವುದೆ ಸ್ಪಷ್ಟನೆ ನೀಡಿಲ್ಲ. ಈಗಾಗಲೇ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ […]

Continue Reading

ಯಾವುದೆ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುವದಿಲ್ಲ: ಕೆ.ಹೆಚ್ ಮುನಿಯಪ್ಪ

ಬೆಂಗಳೂರು: ಯಾವುದೆ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನ ರದ್ದು ಮಾಡುವದಿಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೆವೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಅನರ್ಹ ರೇಷನ್ ಕಾರ್ಡ್‌ಗಳ ರದ್ದು ವಿಚಾರವಾಗಿ ಮಾತನಾಡಿದ ಅವರು, ಬಿಪಿಎಲ್‌ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ, ಎಪಿಎಲ್‌ಗೆ ವರ್ಗಾವಣೆ ಮಾಡುತ್ತೆವೆ. ಹೊರತು ಯಾವ ಕಾರ್ಡನ್ನು ರದ್ದು ಮಾಡುವುದಿಲ್ಲ, ಎಲ್ಲಾ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡುತ್ತೆವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ […]

Continue Reading