ಉತ್ತರ ಕನ್ನಡ ಸಂಸದ ಕಾಗೇರಿ ಮನೆಯಲ್ಲಿ ಚಿರತೆ ಪ್ರತ್ಯಕ್ಷ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ಆಹಾರ ಅರಸಿ ಬಂದ ಚಿರತೆಯೊಂದು ನುಗ್ಗಿದ್ದು, ಸಂಸದರ ಮನೆಯ ಸಾಕುನಾಯಿಯನ್ನು ಅಟ್ಟಿಸಿಕೊಂಡು ಹೋಗಿದೆ. ಈ ದೃಶ್ಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಸೋಮವಾರ ಮಧ್ಯರಾತ್ರಿ ಶಿರಸಿ ತಾಲೂಕಿನ ಕಾಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹಾಗೂ ಕುಟುಂಬದ ಸದಸ್ಯರು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರು. ಇದೆ ಸಂದರ್ಭದಲ್ಲಿ ಚಿರತೆ ದಾಳಿ ಮಾಡಿದ್ದು, ಮನೆಯ ಮುಂಭಾಗದಲ್ಲಿದ್ದ ಸಾಕುನಾಯಿಯನ್ನು ಅಟ್ಟಾಡಿಸಿಕೊಂಡು ಹೋಗಿದೆ. ಅದೃಷ್ಟವಶಾತ್ ಚಿರತೆ ದಾಳಿಯಿಂದ ಸಾಕು […]

Continue Reading

ಕಾಡಿನಿಂದ ಹೊರಬಂದ ನಕ್ಸಲರು: ಶರಣಾದವರಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ

ಬೆಂಗಳೂರು: 6 ಜನ ನಕ್ಸಲ್ ನಾಯಕರ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾಗಿದೆ, ಚಿಕ್ಕಮಗಳೂರು ಜಿಲ್ಲಾಡಳಿತ ಬದಲಾಗಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲೇ ಶರಣಾಗರಾಗುತ್ತಿದ್ದಾರೆ. ಹೀಗಾಗಿ 6 ಜನ ನಕ್ಸಲರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ಕರೆತರಲಾಗುತ್ತಿದೆ, ಸಂಜೆ ವೇಳೆಗೆ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಿದ್ದರಾಮಯ್ಯ ಸಮ್ಮುಖದಲ್ಲೇ ಶರಣಾಗಲಿದ್ದಾರೆ. ಶರಣಾಗತಿಯಾಗುತ್ತಿರುವ ನಕ್ಸಲರಿಗೆ ರಾಜ್ಯ ಸರ್ಕಾರ, ಮೂರು ಕೆಟಗರಿಯಲ್ಲಿ ಪ್ಯಾಕೇಜ್ ಘೋಷಿಸಿದೆ. ನಿನ್ನೆ ಬೆಳಗ್ಗೆಯಿಂದ ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಶಾಂತಿಗಾಗಿ ನಾಗರಿಕರ ವೇದಿಕೆ, ದಲಿತ ಸಂಘಟನೆ ಮುಖಂಡರು, ಶರಣಾಗುತ್ತಿರುವ ನಕ್ಸಕರ […]

Continue Reading

ಕರ್ನಾಟಕದ ಇತಿಹಾಸದಲ್ಲಿಯೇ ಮೊದಲು ಬಾರಿಗೆ ಸಿಎಂ ಮುಂದೆ 6 ನಕ್ಸಲರು ಶರಣಾಗತಿ

ರಾಯಚೂರು: ಕರ್ನಾಟಕದ ಇತಿಹಾಸದಲ್ಲೇ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ. ಯಾಕೆಂದರೆ ಕಳೆದ ಹಲವು ವರ್ಷಗಳಿಂದ ಕಾಡಿನೊಳಗೆ ಅಡಗಿ ಕುಳಿತು ಸದಾ ಸಂಘರ್ಷ, ರಕ್ತಚರಿತ್ರೆ ಬರೆಯುತ್ತಿದ್ದ ನಕ್ಸಲರು ಈಗ ಮುಖ್ಯವಾಹಿನಿಗೆ ಬಂದಿದ್ದಾರೆ. 6 ನಕ್ಸಲರು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ್ ಸಮ್ಮುಳದಲ್ಲೇ ಶರಣಾಗಿದ್ದಾರೆ. ಇನ್ನು ಶರಣಾದ ನಕ್ಸಲರಿಗೆ ಸಿಎಂ ಸಂವಿಧಾನದ ಪುಸ್ತಕ ನೀಡಿದರು. ಈ ಮೂಲಕ ಕರ್ನಾಟಕ ನಕ್ಸಲ ಮುಕ್ತ ರಾಜ್ಯ ಎಂದು ವ್ಯಾಖ್ಯಾನಿಸಬಹುದು. […]

Continue Reading

ವಿಮೆ ದುರಾಸೆಗೆ ತಂದೆಯನ್ನೇ ಕೊಲ್ಲಿಸಿದ ಪುತ್ರ

ಕಲಬುರಗಿ: ಸಾಲದ ಹಣ ತರೋಣವೆಂದು ನಂಬಿಸಿ ತಂದೆಯನ್ನು ಸ್ಕೂಟರ್‌ನಲ್ಲಿ ಕರೆದೊಯ್ದ ಪುತ್ರ ಮಾರ್ಗ ಮಧ್ಯದಲ್ಲಿ ಟ್ರ್ಯಾಕ್ಟರ್‌ನಿಂದ ಎರಡು ಬಾರಿ ಡಿಕ್ಕಿ ಹೊಡೆಸಿ ಆತನನ್ನು ಕೊಲ್ಲಿಸಿ ವಿಮೆಯ ಹಣದಲಿ, ಸಾಲ ತೀರಿಸಲು ಹವಣಿಸಿದ್ದವನು ಹಾಗೂ ಕೃತ್ಯಕ್ಕೆ ಕೈಜೋಡಿಸಿದ್ದ ಆರೋಪಿಗಳು ಪೊಲೀಸರ ಅತಿಥಿಯಾಗಿದ್ದಾರೆ. ಮಾಡಬೂಳ ಪೊಲೀಸ್ ಠಾಣೆಯಲ್ಲಿ ಜುಲೈ 2024ರಲ್ಲಿ ದಾಖಲಾಗಿದ್ದ ಅಪಘಾತ ಪ್ರಕರಣವನ್ನು ಭೇದಿಸಿದ್ದ ಪೊಲೀಸರಿಂದ ಕೊಲೆಯಾದ ಮಾಳಿಂಗರಾವ ಅವರ ಮಗ ಸತೀಶನ ಭೀಭತ್ಸ ಕೃತ್ಯ ಬಯಲಾಗಿದೆ. ಆರೋಪಿಗಳು ರೂಪಿಸಿದ್ದ ಕೊಲೆಯ ಸಂಚು ಅದನ್ನು ಕಾರ್ಯರೂಪಕ್ಕೆ ತಂದಿದ್ದು, ಕೃತ್ಯದ […]

Continue Reading

ನಂದಿನಿ ಇಡ್ಲಿ, ದೋಸೆ ಹಿಟ್ಟು ಬಿಡುಗಡೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ನಂದಿನಿ ವತಿಯಿಂದ ಪ್ರಥಮ ಬಾರಿಗೆ ತಯಾರಿಸಿರುವ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದರು. ಮಾರುಕಟ್ಟೆಯಲ್ಲಿ ಇನ್ನುಮುಂದೆ ನಂದಿನಿ ಇಡ್ಲಿ ಮತ್ತು ದೋಸೆ ಹಿಟ್ಟು ದೊರೆಯಲಿದೆ. ಈ ಸಂದರ್ಭದಲ್ಲಿ ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವ ವೆಂಕಟೇಶ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೆಎಂಎಫ್ ಅಧ್ಯಕ್ಷ ಭೀಮ ನಾಯ್ಕ್, […]

Continue Reading

ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಕೊಟ್ಟ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ

ಚಿಕ್ಕಮಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ ಅವರು ಎನ್.ಆರ್ ಪುರ ತಾಲೂಕಿನ ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆಯನ್ನು ಕೊಡುಗೆಯಾಗಿ ನೀಡಿದ್ದಾರೆ. ಜೀವಂತ ಆನೆಯನ್ನೂ ನಾಚಿಸುವಂತೆ ರೋಬೋಟಿಕ್ ಆನೆ ಇದೆ. ಈ ರೋಬೋಟಿಕ್ ಆನೆಯನ್ನು ರಂಭಾಪುರಿ ಶ್ರೀಗಳಾದ ವೀರ ಸೋಮೇಶ್ವರ ಜಗದ್ಗುರುಗಳು ಉದ್ಘಾಟಿಸಿ ಮಠಕ್ಕೆ ಸ್ವಾಗತಿಸಿಕೊಂಡಿದ್ದಾರೆ. ಈ ರೋಬೋಟಿಕ್ ಆನೆ ಸದಾ ಮಠದ ಆವರಣದಲ್ಲೇ ಇದ್ದು, ಭಕ್ತರನ್ನು ಆಶೀರ್ವದಿಸಲಿದೆ. ಮಠದ ಆವರಣದಲ್ಲಿ ಇದಕ್ಕಾಗಿ ಕಟ್ಟಡ ನಿರ್ಮಿಸಲಾಗಿದೆ. ಸದಾ ಕಣ್ಣು ಬಿಟ್ಟು, ಕಿವಿ, ತಲೆ, ಸೊಂಡಿಲು ಹಾಗೂ ಬಾಲವನ್ನು […]

Continue Reading

ಸಂತಾನಹರಣ ಶಸ್ತ್ರಚಿಕಿತ್ಸೆ ನಂತರವೂ ಮಗುವಿಗೆ ಜನ್ಮ ನೀಡಿದ ಮಹಿಳೆ: ವೈದ್ಯನಿಗೆ ದಂಡ

ಚಿತ್ರದುರ್ಗ: ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು 5 ವರ್ಷದ ನಂತರ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಾರೆ. ಅವರಿಗೆ ಸರಿಯಾಗಿ ಆಪರೇಷನ್ ಮಾಡದ ವೈದ್ಯನಿಗೆ ಜಿಲ್ಲಾ ಗ್ರಾಹಕರ ಆಯೋಗ 55 ಸಾವಿರ ರೂ. ದಂಡ ವಿಧಿಸಿದೆ. 28 ಏಪ್ರಿಲ್ 2014ರಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ 2 ಮಕ್ಕಳ ತಾಯಿ ಲಕ್ಷ್ಮಮ್ಮ ಎನ್ನುವವರಿಗೆ ವೈದ್ಯ ಡಾ. ಕೆ ಶಿವಕುಮಾರ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ್ದರು. ಶಸ್ತ್ರಚಿಕಿತ್ಸೆ ಮಾಡಿದ ಮೇಲೆ ಕೂಡ ಲಕ್ಷ್ಮಮ್ಮ ಗರ್ಭಿಣಿಯಾಗಿ 26 ಜನೆವರಿ 2020 ರಂದು ಮಗುವಿಗೆ ಜನ್ಮ ನೀಡಿದ್ದರು. ವೈದ್ಯರು […]

Continue Reading

ಯಶಸ್ವಿನಿ ಯೋಜನೆ: 5 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ, ಹೊಸ ಸದಸ್ಯರ ನೊಂದಣಿ ಪ್ರಾರಂಭ

ಬೆಂಗಳೂರು: ಪ್ರಸಕ್ತ ಸಾಲಿನ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಜಾರಿಗೊಳಿಸಲು ಮತ್ತು ಈ ಯೋಜನೆಯಡಿ ಹೊಸ ಸದಸ್ಯರ ನೊಂದಣೆಗೆ ರಾಜ್ಯ ಸರಕಾರದಿಂದ ಹೊಸ ಆದೇಶ ಪ್ರಕಟಿಸಲಾಗಿದೆ. ಯಶಸ್ವಿನಿ ಯೋಜನೆಯು ಸಹಕಾರಿ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರಕಾರವು ಜಾರಿಗೊಳಿಸಿರುವ ಪ್ರತಿಷ್ಠಿತ ವಿಶಿಷ್ಟ ಯೋಜನೆಯಾಗಿದೆ, ಈ ಯೋಜನೆಯನ್ನು ಅನುಷ್ಥಾನ ಮಾಡಲು ಈ ವರ್ಷದ ಅಧಿಕೃತ ಮಾರ್ಗಸೂಚಿ ಹೊರಡಿಸಲಾಗಿದೆ. ಯಶಸ್ವಿನಿ ಯೋಜನೆಯಡಿ ಪ್ರಯೋಜನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ? ಅರ್ಜಿ ಎಲ್ಲಿ ಸಲ್ಲಿಸಬೇಕು ? ಅರ್ಜಿ ಸಲ್ಲಿಸಲು ಅಗತ್ಯ […]

Continue Reading

ದೇಶದಲ್ಲೇ ಪ್ರಥಮ ಬಾರಿಗೆ ವಿಕಲಚೇತನರ ಆರೈಕೆದಾರರಿಗೆ ಮಾಸಿಕ ಸಾವಿರ ರೂ. ಭತ್ಯೆ: ಸಿಎಂ ಘೋಷಣೆ

ಬೆಂಗಳೂರು: ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ ಅವರು ಸಮಾಜದ ಆಸ್ತಿ, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸಿದ್ದೆವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ವರ್ಷ ನಾಲ್ಕು ಬಗೆಯ ವಿಕಲಚೇತನರ ಆರೈಕೆದಾರರಿಗೆ ಮಾಸಿಕ 1 ಸಾವಿರ ರೂ. ಆರೈಕೆದಾರರ ಭತ್ಯೆ ನೀಡುವ ಯೋಜನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಘೋಷಿಸಿದೆ, ಇದನ್ನು ಪ್ರಸಕ್ತ ಸಾಲಿನಿಂದ […]

Continue Reading

ಕನ್ನಡ ಸಾಹಿತ್ಯಕ್ಕೆ ಗೋರುಚ ಕೊಡುಗೆ ಅನುಪಮ: ಡಾ.ಸಿದ್ಧತೋಟೇಂದ್ರ ಶ್ರೀ

ನಾಲವಾರ: ಹಿರಿಯ ಜಾನಪದ ವಿದ್ವಾಂಸರಾಗಿ, ಶರಣ ಸಾಹಿತ್ಯ ಪ್ರಸಾರಕರಾಗಿ, ಶ್ರೇಷ್ಠ ಸಾಹಿತಿಗಳಾಗಿ ಗೋರುಚ ಅವರು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ ಕೊಡುಗೆ ಅನುಪಮವಾದದ್ದು ಎಂದು ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳು ಹೇಳಿದರು. ಇದೇ ತಿಂಗಳು ಮಂಡ್ಯದಲ್ಲಿ ಜರುಗಲಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ನಿಯೋಜಿತ ಸರ್ವಾಧ್ಯಕ್ಷರಾಗಿರುವ ಪ್ರಯುಕ್ತ ಶ್ರೀಮಠದ ದರ್ಶನಾಶೀರ್ವಾದ ಪಡೆಯಲು ಆಗಮಿಸಿದ್ದ ನಾಡೋಜ ಡಾ.ಗೋರುಚ ಅವರನ್ನು ಶ್ರೀಮಠದ ವತಿಯಿಂದ ಆತ್ಮೀಯವಾಗಿ ಸತ್ಕರಿಸಿ ಆಶೀರ್ವಚನ ನೀಡಿದರು. ಜಾನಪದ ಅಕಾಡೆಮಿ, […]

Continue Reading