ರಾಜ್ಯದ 254 ನಗರ ಕ್ಷೇಮ ಕೇಂದ್ರದಲ್ಲಿ ಮತ್ತು 39 ಬಸ್ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 254 ನಗರ ಕ್ಷೇಮ ಕೇಂದ್ರಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ 108.36 ಕೋಟಿ ವೆಚ್ಚದಲ್ಲಿ ನಗರ ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ 254 ಹಾಗೂ KSRTC ಬಸ್ ನಿಲ್ದಾಣಗಳಲ್ಲಿ 39 ನಮ್ಮ ಕ್ಲಿನಿಕ್ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. 39.37 ಕೋಟಿ ವೆಚ್ಚದಲ್ಲಿ ಉಡುಪಿ ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಲ್ಲಿ […]

Continue Reading

ಮಹಿಪಾಲರೆಡ್ಡಿ ನಟನೆಯ ತಮಟೆ ಸಿನಿಮಾ ನಾಳೆ ಬಿಡುಗಡೆ

ಕಲಬುರಗಿ: ಹಿರಿಯ ಚಿತ್ರನಟ ಮದನ್ ಪಟೇಲ್ ಅವರು ನಾಯಕ ನಟರಾಗಿರುವ ಕಾದಂಬರಿ ಆಧಾರಿತ `ತಮಟೆ’ ಸಿನಿಮಾ ನ.29 ರಂದು ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಪ್ರಖ್ಯಾತ ಸಿನಿಮಾ ನಾಯಕ ನಟ ಮಯೂರ್ ಪಟೇಲ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾವನ್ನು ವಂದನಾ ಎಂ ನಿರ್ಮಾಣ ಮಾಡಿದ್ದು, ಸ್ವತಃ ಮದನ್ ಪಟೇಲ್ ಅವರೇ ಸಂಗೀತ ನಿರ್ದೇಶನ ಮಾಡಿದ್ದಾರೆ. ಮೀಡಿಯಾ ಇಂಟರನ್ಯಾಷನಲ್ ಅರ್ಪಿಸುವ ಮತ್ತು ಶ್ರೀ ರೇಣುಕಾ ಯಲ್ಲಮ್ಮ ದೇವಿ ಕ್ರಿಯೇಷನ್ ರವರ `ತಮಟೆ’ ಸಿನಿಮಾವು ರಾಜ್ಯದ ಎಲ್ಲಾ ಜಿಲ್ಲೆಗಳ ಚಿತ್ರಮಂದಿರದಲ್ಲಿ ಬಿಡುಗಡೆ […]

Continue Reading

ಅಮ್ಮ ಹೆಸರಿನಲ್ಲಿ ನೀಡುವ ಪ್ರಶಸ್ತಿ ರಾಜ್ಯಕ್ಕೆ ಮಾದರಿ

ಸೇಡಂ: ಜಗತ್ತಿನಲ್ಲಿ ಎರಡು ಸುರಕ್ಷಿತ ಸ್ಥಳ ಅಪ್ಪನ ಹೆಗಲು, ಅಮ್ಮನ ಮಡಿಲು ಹೀಗಾಗಿ ತಾಯಿ, ತಂದೆಯರ ಹೆಸರಿನಲ್ಲಿ ನೀಡುವ ಪ್ರಶಸ್ತಿ ಜಗತ್ತಿನ ಎಲ್ಲಾ ಪ್ರಶಸ್ತಿಗೂ ಮಿಗಿಲಾದದ್ದು ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ ಅಭಿಪ್ರಾಯಪಟ್ಟರು. ಪಟ್ಟಣದ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ ಪ್ರತಿಷ್ಠಾನವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಮಂಗಳವಾರ ರಾತ್ರಿ ಆಯೋಜಿಸಿದ್ದ 24ನೇ ವರ್ಷದ ಅಮ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ಮಾತನಾಡಿದ ಅವರು, ದೇಶದ ಉದ್ದಗಲಕ್ಕೂ […]

Continue Reading

ನಾಗಾವಿಯಲ್ಲಿ ಉತ್ಖನನ, ಸಂಶೋಧನೆ ಅಗತ್ಯ: ತಹಸೀಲ್ದಾರ್

ಚಿತ್ತಾಪುರ: ಪುರಾತನ ಕಾಲದಲ್ಲಿ ಉತ್ತರ ಭಾರತದಲ್ಲಿದ್ದ ನಳಂದಾ, ತಕ್ಷಶಿಲಾ ವಿಶ್ವವಿದ್ಯಾಲಯ ಮಾದರಿಯಲ್ಲೇ ದಕ್ಷಿಣ ಭಾರತದ ನಾಗಾವಿಯಲ್ಲಿ ಘಟಕಾಸ್ಥಾನ ಹೆಸರಿನ ಪ್ರಸಿದ್ಧ ವಿಶ್ವವಿದ್ಯಾಲಯವಿತ್ತು, ನಾಗಾವಿಯಲ್ಲಿ ಉತ್ಖನನ, ಸ್ಥಳದ ಸಮಗ್ರ ಇತಿಹಾಸದ ಸಂಶೋಧನೆ ನಡೆಯಬೇಕು ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ತಾ.ಪಂ ಸಭಾಂಗಣದಲ್ಲಿ ನಾಗಾವಿಸಾಂಸ್ಕೃತಿಕ ಪ್ರತಿಷ್ಠಾನ ಹಮ್ಮಿಕೊಳ್ಳಲಾಗಿದ್ದ ನಾಗಾವಿ ಸಾಂಸ್ಕೃತಿಕ ರತ್ನ ಪ್ರಶಸ್ತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಉತ್ತರ ಭಾರತದಲ್ಲಿ ನಳಂದ ತಕ್ಷಶಿಲಾ ವಿಶ್ವವಿದ್ಯಾಲಯ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ನಾಗಾವಿಗೆ ಅಗ್ರಹಾರ ಹೆಸರಿನ ಪ್ರಸಿದ್ಧಿ ಪಡೆದ […]

Continue Reading

ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ದರ ಏರಿಕೆ ಬಿಸಿ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ದರ ಏರಿಕೆ ಬಿಸಿ ತಟ್ಟಿದೆ. ಉಚಿತ ಚಿಕಿತ್ಸೆ ಕೊಡುವ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಳ ದರ ಹೆಚ್ಚಳವಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ದರ ಏರಿಕೆಯಾಗಿದೆ. ಸರ್ಕಾರಿ ಸೇವೆಗಳ ದರ 10 ರಿಂದ 20% ದರ ಏರಿಕೆಯಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದರ ಏರಿಕೆಯಾಗಿರುವ ಬಗ್ಗೆ ನೋಟಿಸ್ ಹಾಕಿದ್ದಾರೆ. ಆಸ್ಪತ್ರೆಯ ಹೊರ ರೋಗಿ ವಿಭಾಗಗಳ ಮುಂದೆ ದರ ಏರಿಕೆ ಆಗಿದೆ ಎಂದು ನೋಟಿಸ್ ಅಂಟಿಸಲಾಗಿದೆ. ರಾಜ್ಯದ ಅತಿದೊಡ್ಡ ಆಸ್ಪತ್ರೆ ವಿಕ್ಟೋರಿಯಾದಲ್ಲಿ […]

Continue Reading

10 ಕೃತಿಗಳಿಗೆ ಅಮ್ಮ ಪ್ರಶಸ್ತಿ ಪ್ರದಾನ

ಕಲಬುರಗಿ: ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯ ಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗೆ ನಾಡಿನ ಹತ್ತು ಸಾಹಿತಿಗಳ ಕೃತಿಗಳು ಆಯ್ಕೆಯಾಗಿವೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ. ವಿದ್ಯಾರಶ್ಮಿ ಪೆಲತ್ತಡ್ಕ (ಕೆರೆ-ದಡ), ಪ್ರಭಾವತಿ ದೇಸಾಯಿ (ಸೆರಗಿಗಂಟಿದ ಕಂಪು), ವೀರೇಂದ್ರ ರಾವಿಹಾಳ್ (ಡಂಕಲ್ ಪೇಟೆ), ಪೂರ್ಣಿಮಾ ಮಾಳಗಿಮನಿ (ಮ್ಯಾಜಿಕ್ ಸೌಟು), ದ್ವಾರನಕುಂಟೆ ಪಾತಣ್ಣ (ರಾಣಿ ಅಹಲ್ಯಾಬಾಯಿ ಹೋಳ್ಕರ್), ಗುರುಪ್ರಸಾದ ಕಂಟಲಗೆರೆ (ಅಟ್ರಾಸಿಟಿ), ಡಾ.ಪರವಿನ ಸುಲ್ತಾನಾ (ಶರಣರ ನಾಡಿನ ಸೂಫಿ ಮಾರ್ಗ), […]

Continue Reading

ನಗ್ನ ಫೋಟೋ ಕಳಿಸುವಂತೆ ಕಿರುಕುಳ ಆರೋಪ, ಪಿಎಸ್ಐ ವಿರುದ್ಧ ಕಮಿಷನರ್‌ಗೆ ದೂರು ನೀಡಿದ ವೈದ್ಯೆ

ಬೆಂಗಳೂರು: ಯುವ ವೈದ್ಯೆಗೆ ನಗ್ನ ಫೋಟೋ ಕಳುಹಿಸುವಂತೆ ಕಿರುಕುಳ ನೀಡಿರುವದಲ್ಲದೆ, ನಿರಾಕರಣೆ ಮಾಡಿದ್ದಕ್ಕೆ ಆಕೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಗಂಭೀರ ಆರೋಪ ಪಿಎಸ್ಐ ವಿರುದ್ಧ ಕೇಳಿ ಬಂದಿದೆ. ಬಸವನಗುಡಿ ಪೊಲೀಸ್ ಠಾಣೆ ಪಿಎಸ್ಐ ರಾಜಕುಮಾರ ಎಸ್ ಜೋಡಟ್ಟಿ ವಿರುದ್ದ ಖಾಸಗಿ ಆಸ್ಪತ್ರೆ ವೈದ್ಯೆಯೊಬ್ಬರು ದೂರು ನೀಡಿದ್ದಾರೆ, ತನಗೆ ನ್ಯಾಯ ಕೊಡಿಸುವಂತೆ ಪೊಲೀಸ್ ಕಮಿಷನರ್ ಬಿ ದಯಾನಂದ ಅವರಿಗೆ ನೊಂದ ವೈದ್ಯೆ ಮನವಿ ಮಾಡಿದ್ದಾರೆ. ಘಟನೆಯ ವಿವರ: ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಸಂತ್ರಸ್ತ ಯುವತಿ ಬಸವನಗುಡಿ […]

Continue Reading

ಡಾ.ತ್ರಿಮೂರ್ತಿ ಶಿವಾಚಾರ್ಯರ ಪಾದಯಾತ್ರೆ: ಮಠದ ಪಹಣಿಯಿಂದ ವಕ್ಫ್ ಹೆಸರು ಡಿಲೀಟ್

ಕಲಬುರಗಿ: ಸೇಡಂ ತಾಲೂಕಿನ ತೊಟ್ನಳ್ಳಿ ಗ್ರಾಮದ ಮಹಾಂತೇಶ್ವರ ಮಠದ ಜಮೀನು ಪಹಣಿಯಲ್ಲಿ ವಕ್ಫ್ ಮಂಡಳಿ ಹೆಸರು ನಮೂದಾಗಿರುವದನ್ನು ವಿರೋಧಿಸಿ ಡಾ. ತ್ರಿಮೂರ್ತಿ ಶಿವಾಚಾರ್ಯರು ಬುಧವಾರ ಪಾದಯಾತ್ರೆ ಆರಂಭಿಸುವ ಮುನ್ನವೇ ಪಹಣಿಯಲ್ಲಿನ ವಕ್ಫ್ ಹೆಸರು ತೆಗೆದು ಹಾಕಲಾಗಿದೆ. ಮಠದ ಡಾ. ತ್ರಿಮೂರ್ತಿ ಶಿವಾಚಾರ್ಯರ ಹೆಸರಿನಲ್ಲಿ 5.24 ಎಕರೆ ಜಮೀನು ಇದೆ. 2018ರಲ್ಲಿ ಮಠದ ಪಹಣಿಯಲ್ಲಿ ಅಶೂರಖಾನಾ ವಕ್ಸ್ ಎಂದು ಸೇರ್ಪಡೆಯಾಗಿತ್ತು. ಇದರ ವಿರುದ್ಧ ಕೆಲ ದಿನಗಳ ಹಿಂದೆಯಷ್ಟೇ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದರು. ಬುಧವಾರ ಬೆಳಿಗ್ಗೆ ಡಾ. ತ್ರಿಮೂರ್ತಿ […]

Continue Reading