ರಾಜ್ಯದ ಹಲವೆಡೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಸುದ್ದಿ ಸಂಗ್ರಹ ಬೀದರ್/ಶಿವಮೊಗ್ಗ/ಕಾರವಾರರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಗಡಿ ಜಿಲ್ಲೆ ಬೀದರ್‌ನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಒಂದು ಗಂಟೆಯಿಂದಲೂ ಬೀದರ್‌ನಲ್ಲಿ ಸಿಡಿಲು, ಗುಡುಗು ಸಹಿತ ಭಾರಿ ಮಳೆ ಸುರಿಯುತ್ತಿದೆ. ಈ ಮೂಲಕ ಬಿಸಿಲಿನಿಂದ ಕೆಂಗೆಟ್ಟಿದ್ದ ಜಿಲ್ಲೆಯ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೀದರ್, ಔರಾದ್, ಭಾಲ್ಕಿ, ಹುಮ್ನಾಬಾದ್, ಚಿಟ್ಟಗುಪ್ಪ, ಬಸವಕಲ್ಯಾಣ ಸೇರಿದಂತೆ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಬಿರುಗಾಳಿ ಸಹಿತ […]

Continue Reading

ಸಂಭ್ರಮಾಚರಣೆ ಭರದಲ್ಲಿ RCB ಫ್ಯಾನ್ಸ್ ಹುಚ್ಚಾಟ, ಲಾರಿ ಏರಿ ಮೈಮೇಲೆ ಪಟಾಕಿ ಹಾಕೊಂಡು ಮೊಂಡಾಟ: ಲಾಠಿ ಚಾರ್ಜ್

ಸುದ್ದಿ ಸಂಗ್ರಹ ಬೆಂಗಳೂರುಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರವಿವಾರ ರಾತ್ರಿ ನಡೆದ ಐಪಿಎಲ್ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಮಣ್ಣುಮುಕ್ಕಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿಗೆ ಕಪ್ ಮುಡಿಗೇರಿಸಿಕೊಂಡಿದೆ. ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಗರ್ಜನೆ ಹಾಗೂ ರೆಡ್ ಆರ್ಮಿ ಆರ್ಭಟಕ್ಕೆ ಸಿಕ್ಕ ಜಯದ ಬೆನ್ನಲ್ಲೆ ಕರ್ನಾಟಕದಲ್ಲಿ ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿತು. ಆದರೆ ಈ ಗೆಲುವಿನ ಸಂಭ್ರಮ ಆಚರಿಸುವ ಭರದಲ್ಲಿ ರಾಜ್ಯದ ಹಲವೆಡೆ ಆರ್‌ಸಿಬಿ […]

Continue Reading

ಲೋಕಭವನದ ಗ್ಲಾಸ್‌ಹೌಸ್‌ನಲ್ಲೆ ಡಿಕೆಶಿ ಪ್ರಮಾಣ ಸ್ವೀಕಾರ: ಸಾರ್ವಜನಿಕರಿಗಿಲ್ಲ ಪ್ರವೇಶ

ಸುದ್ದಿ ಸಂಗ್ರಹ ಬೆಂಗಳೂರುಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ಬುಧವಾರ ನಡೆಯಲಿರುವ ಸರಳ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಜೆ.ಸಿ ಚಂದ್ರಶೇಖರ್‌ ತಿಳಿಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೂನ್‌ 3 ರಂದು ಪ್ರಮಾಣ ವಚನ ಕಾರ್ಯಕ್ರಮ ನಿಗದಿಯಾಗಿದೆ. ಅದೆ ದಿನ ಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ಪ್ರಮಾಣ ಸ್ವೀಕಾರ ಸಮಾರಂಭ ನಡೆಯಲಿದೆ ಎಂದರು. ಆರಂಭದಲ್ಲಿ ಬೇರೆ ಬೇರೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆದುಕೊಂಡು ಬರಬೇಕು, ಅದಕ್ಕಾಗಿ ಬಸ್‌ […]

Continue Reading

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಪದಗ್ರಹಣ: 8 ಸಚಿವರ ಜೊತೆ ಪ್ರಮಾಣವಚನ ?

ಸುದ್ದಿ ಸಂಗ್ರಹ ಬೆಂಗಳೂರುಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರದ ಸಿದ್ಧತೆಗಳು ನಡೆಯುತ್ತಿವೆ. ಬಹುತೇಕ ಸೋಮವಾರ ಗೋಧೂಳಿ ಸಮಯದಲ್ಲಿ ಡಿ.ಕೆ ಶಿವಕುಮಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳು ಹೆಚ್ಚಾಗಿವೆ. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಪ್ರಮಾಣವಚನಕ್ಕೆ ಸಿದ್ಧತೆ ನಡೆಯುತ್ತಿದೆ. ಏಕಾಂಗಿಯಾಗಿ ಪ್ರಮಾಣವಚನ ಸ್ವೀಕರಿಸಲು ಡಿಕೆಶಿ ಆಸಕ್ತಿ ತೋರಿಸಿದ್ದು, ಉಪ ಮುಖ್ಯಮಂತ್ರಿ ಸೇರಿದಂತೆ 8 ಮಂದಿ ಪ್ರಮಾಣವಚನ ಸ್ವೀಕರಿಸಲು ಅವಕಾಶ ನೀಡಬೇಕೆಂಬ ಒತ್ತಡ ಹಿರಿಯ ನಾಯಕರಿಂದ ಕೇಳಿಬರುತ್ತಿದೆ. ಅಂತಿಮವಾಗಿ ರಾಹುಲ್ ಗಾಂಧಿ […]

Continue Reading

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ

ಸುದ್ದಿ ಸಂಗ್ರಹ ಬೆಂಗಳೂರುಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೆನೆದೆ, ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು.

Continue Reading

ಎಬೋಲಾ ಎಂಟ್ರಿ ಆತಂಕದಲ್ಲಿದ್ದ ಕರ್ನಾಟವೀಗ ನಿರಾಳ: ಉಗಾಂಡಾ ಮೂಲದ ಮಹಿಳೆಯ ಸ್ಯಾಂಪಲ್​​ ವರದಿ ನೆಗೆಟಿವ್

ಸುದ್ದಿ ಸಂಗ್ರಹ ಬೆಂಗಳೂರುಎಬೋಲಾ ವೈರಸ್ ಶಂಕಿತ ಪ್ರಕರಣವೊಂದು ಬೆಂಗಳೂರಲ್ಲಿ ಪತ್ತೆಯಾಗಿರೋದು ಭಾರಿ ಆತಂಕಕ್ಕೆ ಕಾರಣವಾಗಿತ್ತು. ಆದರೆ ಉಗಾಂಡಾ ಮೂಲದ ಮಹಿಳೆಯ ಎಬೋಲಾ ಪರೀಕ್ಷೆಯ ರಿಪೋರ್ಟ್​​ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೈಸೇರಿದ್ದು, ವರದಿ ನೆಗೆಟಿವ್ ಬಂದಿದೆ. ಹೀಗಾಗಿ ರಾಜ್ಯಕ್ಕೂ ಎಬೋಲಾ ಮಾರಿ ಕಾಲಿಟ್ಟಿತಾ ಎಂಬ ಆತಂಕದಲ್ಲಿದ್ದ ಇಲಾಖೆ ನಿಟ್ಟುಸಿರು ಬಿಟ್ಟಿದೆ. ಮುಖ್ಯಾಂಶಗಳು ಉಗಾಂಡಾ ದೇಶದ ಕ್ಯಾಂಪಾಲಾ ಮೂಲದ ನಾಗಿರೆ ಲತಿಫಾ (28) ಎಂಬ ಮಹಿಳೆ ಕಳೆದ ಮೇ.23 ರಂದು ಬೆಂಗಳೂರಿಗೆ ಆಗಮಿಸಿದ್ದರು. ಇಲ್ಲಿನ ‘ರಾಯಲ್ ಏಸ್ […]

Continue Reading

ರಾಜ್ಯದಲ್ಲಿ ಮೊದಲ ಎಬೋಲಾ ಕೇಸ್ ಪತ್ತೆ ?

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ಮೊದಲ ಎಬೋಲಾ ಪ್ರಕರಣ ಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಉಗಾಂಡದಿಂದ ಬೆಂಗಳೂರಿಗೆ ಆಗಮಿಸಿದ ಮಹಿಳೆಯಲ್ಲಿ ಎಬೋಲಾ ರೋಗ ಲಕ್ಷಣಗಳು ಕಂಡುಬಂದಿದ್ದು, ರಾಜೀವ್ ಗಾಂಧಿ ಆಸ್ಪತ್ರೆಗೆ ಮಹಿಳೆಯನ್ನು ಶಿಫ್ಟ್ ಮಾಡಲಾಗಿದೆ. ಉಗಾಂಡದಿಂದ ಅಹಮದಾಬಾದ್‌ಗೆ ಆಗಮಿಸಿದ್ದ ಮಹಿಳೆ, ಅಲ್ಲಿಂದ ಬೆಂಗಳೂರಿಗೆ ಬಂದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಹಿಳೆಗೆ ಸ್ಕ್ರೀನಿಂಗ್ ಮಾಡಿದಾಗ ಎಬೋಲಾ ರೋಗ ಲಕ್ಷಣಗಳು ಕಂಡುಬಂದಿವೆ. ಸದ್ಯಕ್ಕೆ ಮಹಿಳೆಯನ್ನು 21 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಸದ್ಯ ಮಹಿಳೆಯ ಸ್ಯಾಂಪಲ್ ಕಲೆಕ್ಟ್ ಮಾಡಿ ಲ್ಯಾಬ್‌ಗೆ ರವಾನಿಸಲಾಗಿದೆ. ಟೆಸ್ಟ್‌ಗೆ ಕಳಿಸಿರುವ […]

Continue Reading

ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆದ ಕೈ ಸರ್ಕಾರ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗುತ್ತಿದೆ ಎನ್ನುವ ಅಭಿಪ್ರಾಯ ಕೇಳಿಬಂದಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲಬುರಗಿಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆದಿದೆ. ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಮನವಿ ಮೇರೆಗೆ ಈ ಕೇಸ್ ವಾಪಸ್ ಪಡೆದುಕೊಂಡಿದೆ. ಈ ಮೂಲಕ ಮುಸ್ಲಿಂ ಯುವಕರು ಹಾಗೂ ಕೆಲ ಮುಖಂಡರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಏನಾಗಿತ್ತು ?2022ರ ಶಿವರಾತ್ರಿಯಂದು ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗದ […]

Continue Reading

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಶೈಕ್ಷಣಿಕ ಪ್ರವಾಸಕ್ಕೆ ಕಟ್ಟುನಿಟ್ಟಿನ ನಿಯಮ ಜಾರಿ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಶೈಕ್ಷಣಿಕ ಪ್ರವಾಸಗಳಿಗೆ ಇದೀಗ ಕಟ್ಟುನಿಟ್ಟಿನ ನಿಯಮಗಳು ಜಾರಿಯಾಗಿವೆ. ಇತ್ತೀಚೆಗೆ ವಿದ್ಯಾರ್ಥಿಗಳ ಪ್ರವಾಸ ಬಸ್ ಅಪಘಾತವಾದ ಹಿನ್ನೆಲೆ, ಕಾಲೇಜು ಶಿಕ್ಷಣ ಇಲಾಖೆ ಸುರಕ್ಷತೆಗೆ ಆದ್ಯತೆ ನೀಡಿ ಹೊಸ ಮಾರ್ಗಸೂಚಿ ಹೊರಡಿಸಿದೆ. ಶೈಕ್ಷಣಿಕ ಪ್ರವಾಸ ವಿದ್ಯಾರ್ಥಿಗಳ ಬದುಕಿನಲ್ಲಿ ಹೊಸ ಅನುಭವ, ಸ್ನೇಹ ಮತ್ತು ಜ್ಞಾನ ನೀಡುವ ವಿಶೇಷ ಕ್ಷಣ. ಆದರೆ ಇತ್ತೀಚಿನ ಕೆಲವು ಅವಘಡಗಳು ಕಾಲೇಜು ಪ್ರವಾಸಗಳ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದ್ದವು. ಇದೆ ಕಾರಣದಿಂದಾಗಿ ರಾಜ್ಯದ ಸರ್ಕಾರಿ ಪದವಿ […]

Continue Reading

ರಾಜ್ಯದಲ್ಲಿ ಜೋರಾದ ಮುಂಗಾರು ಪೂರ್ವ ಮಳೆಯಬ್ಬರ: ಹಲವೆಡೆ ವರುಣಾರ್ಭಟಕ್ಕೆ ಅವಾಂತರ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ ಜೋರಾಗಿದ್ದು, ಗುಡುಗು ಸಹಿತ ಬಿರುಗಾಳಿ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಬೀದರ್ ತಾಲೂಕಿನ ಅಣದೂರು ವಾಡಿ ಗ್ರಾಮದ ಬಳಿ ಇರುವ ಮಾಂಜ್ರಾ ವಾಟರ್ ಪಾರ್ಕ್ನಲ್ಲಿ ಗೋಡೆ ಕುಸಿದು ಬಿದ್ದು ಅನಾಹುತ ಸಂಭವಿಸಿದೆ. ಮಕ್ಕಳು, ಮಹಿಳೆಯರು ಸೇರಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಬೀದರ್ ತಾಲೂಕಿನ ಕಮಠಾಣ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಗಾಯಗೊಂಡಿದ್ದಾರೆ. ಗದಗ ಜಿಲ್ಲೆಯಲ್ಲಿ ಬಿರುಗಾಳಿ […]

Continue Reading