ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆದ ಕೈ ಸರ್ಕಾರ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗುತ್ತಿದೆ ಎನ್ನುವ ಅಭಿಪ್ರಾಯ ಕೇಳಿಬಂದಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲಬುರಗಿಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆದಿದೆ. ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಮನವಿ ಮೇರೆಗೆ ಈ ಕೇಸ್ ವಾಪಸ್ ಪಡೆದುಕೊಂಡಿದೆ. ಈ ಮೂಲಕ ಮುಸ್ಲಿಂ ಯುವಕರು ಹಾಗೂ ಕೆಲ ಮುಖಂಡರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಏನಾಗಿತ್ತು ?2022ರ ಶಿವರಾತ್ರಿಯಂದು ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗದ […]

Continue Reading

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಶೈಕ್ಷಣಿಕ ಪ್ರವಾಸಕ್ಕೆ ಕಟ್ಟುನಿಟ್ಟಿನ ನಿಯಮ ಜಾರಿ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಶೈಕ್ಷಣಿಕ ಪ್ರವಾಸಗಳಿಗೆ ಇದೀಗ ಕಟ್ಟುನಿಟ್ಟಿನ ನಿಯಮಗಳು ಜಾರಿಯಾಗಿವೆ. ಇತ್ತೀಚೆಗೆ ವಿದ್ಯಾರ್ಥಿಗಳ ಪ್ರವಾಸ ಬಸ್ ಅಪಘಾತವಾದ ಹಿನ್ನೆಲೆ, ಕಾಲೇಜು ಶಿಕ್ಷಣ ಇಲಾಖೆ ಸುರಕ್ಷತೆಗೆ ಆದ್ಯತೆ ನೀಡಿ ಹೊಸ ಮಾರ್ಗಸೂಚಿ ಹೊರಡಿಸಿದೆ. ಶೈಕ್ಷಣಿಕ ಪ್ರವಾಸ ವಿದ್ಯಾರ್ಥಿಗಳ ಬದುಕಿನಲ್ಲಿ ಹೊಸ ಅನುಭವ, ಸ್ನೇಹ ಮತ್ತು ಜ್ಞಾನ ನೀಡುವ ವಿಶೇಷ ಕ್ಷಣ. ಆದರೆ ಇತ್ತೀಚಿನ ಕೆಲವು ಅವಘಡಗಳು ಕಾಲೇಜು ಪ್ರವಾಸಗಳ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದ್ದವು. ಇದೆ ಕಾರಣದಿಂದಾಗಿ ರಾಜ್ಯದ ಸರ್ಕಾರಿ ಪದವಿ […]

Continue Reading

ರಾಜ್ಯದಲ್ಲಿ ಜೋರಾದ ಮುಂಗಾರು ಪೂರ್ವ ಮಳೆಯಬ್ಬರ: ಹಲವೆಡೆ ವರುಣಾರ್ಭಟಕ್ಕೆ ಅವಾಂತರ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ ಜೋರಾಗಿದ್ದು, ಗುಡುಗು ಸಹಿತ ಬಿರುಗಾಳಿ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಬೀದರ್ ತಾಲೂಕಿನ ಅಣದೂರು ವಾಡಿ ಗ್ರಾಮದ ಬಳಿ ಇರುವ ಮಾಂಜ್ರಾ ವಾಟರ್ ಪಾರ್ಕ್ನಲ್ಲಿ ಗೋಡೆ ಕುಸಿದು ಬಿದ್ದು ಅನಾಹುತ ಸಂಭವಿಸಿದೆ. ಮಕ್ಕಳು, ಮಹಿಳೆಯರು ಸೇರಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಬೀದರ್ ತಾಲೂಕಿನ ಕಮಠಾಣ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಗಾಯಗೊಂಡಿದ್ದಾರೆ. ಗದಗ ಜಿಲ್ಲೆಯಲ್ಲಿ ಬಿರುಗಾಳಿ […]

Continue Reading

ಸಾರಿಗೆ ಸಂಘಟನೆ ನೌಕರರಲ್ಲೆ ಒಡಕು: ಮುಷ್ಕರದಿಂದ ಹಿಂದೆ ಸರಿದ KSRTC ನೌಕರರ ಸಂಘ

ಸುದ್ದಿ ಸಂಗ್ರಹ ಬೆಂಗಳೂರುಸಾರಿಗೆ ನೌಕರರು ಕರೆ ಕೊಟ್ಟ ಮುಷ್ಕರದ ಡೆಡ್‌ಲೈನ್ ಇಂದಿಗೆ ಅಂತ್ಯವಾಗುತ್ತಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರರು ಮೇ.20 ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಸರ್ಕಾರಕ್ಕೆ ಸಂಜೆಯೊಳಗೆ ಡೆಡ್‌ಲೈನ್‌ ನೀಡಲಾಗಿದೆ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಅಂದುಕೊಂಡಿರುವಾಗಲೇ ಮುಷ್ಕರಕ್ಕೆ ಕರೆಕೊಟ್ಟ ಜಂಟಿ ಕ್ರಿಯಾ ಸಮಿತಿಗೆ ಶಾಕ್‌ ಎದುರಾಗಿದೆ. ಮುಷ್ಕರದಿಂದ ಹಿಂದೆ ಸರಿಯಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ ನಿರ್ಧರಿಸಿದೆ. ಈ ಬಗ್ಗೆ ಅಧ್ಯಕ್ಷ ಕೆ.ಆರ್‌ ಜಗದೀಶ್ ಅಧಿಕೃತ ಪತ್ರಿಕಾ ಹೇಳಿಕೆ ಬಿಡುಗಡೆ […]

Continue Reading

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಎಚ್ಚರಿಕೆ

ಸುದ್ದಿ ಸಂಗ್ರಹ ಬೆಂಗಳೂರುಮುಂದಿನ 7 ದಿನಗಳ ಕಾಲ ರಾಜ್ಯದಾದ್ಯಂತ ವಾತಾವರಣದಲ್ಲಿ ಭಾರಿ ಏರುಪೇರಾಗಲಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ 35°C ಮತ್ತು ಕನಿಷ್ಠ ತಾಪಮಾನ 24°C ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮುಖ್ಯಾಂಶಗಳು ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಭಾರಿ […]

Continue Reading

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಳ

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಶೇ.14.25 ರಿಂದ ಶೇ.15.75ಕ್ಕೆ ಏರಿಕೆ ಮಾಡಿದೆ. ಶೇ.1.50 ರಷ್ಟು ತುಟ್ಟಿಭತ್ಯೆ ಹೆಚ್ಚಳವು 2026ರ ಜನವರಿ 1 ರಿಂದ ಪೂರ್ವಾನ್ವಯ ಆಗಲಿದೆ. ಇದರಿಂದ ಲಕ್ಷಾಂತರ ನೌಕರರು ಮತ್ತು ಪಿಂಚಣಿದಾರರಿಗೆ ಆರ್ಥಿಕವಾಗಿ ಅನುಕೂಲವಾಗಲಿದೆ. ಪ್ರಸ್ತುತ ಮೂಲ ವೇತನದ ಶೇ.14.25 ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇ.15.75 ಕ್ಕೆ ಪರಿಷ್ಕರಿಸಲಾಗಿದೆ. ಅಂದರೆ ಒಟ್ಟು ಶೇ.1.50 ರಷ್ಟು ತುಟ್ಟಿಭತ್ಯೆ ಹೆಚ್ಚಳವಾದಂತಾಗಿದ್ದು, 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ […]

Continue Reading

ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ಮಾರಾಟಕ್ಕೆ ಬ್ರೇಕ್: ನಿಯಮ ಉಲ್ಲಂಘಿಸಿದರೆ ಬಂಕ್‌ ವಿರುದ್ಧ ಕ್ರಮ

ಸುದ್ದಿ ಸಂಗ್ರಹ ಬೆಂಗಳೂರುಜಾಗತಿಕ ಮಾರುಕಟ್ಟೆಯಲ್ಲಿನ ಸನ್ನಿವೇಶ ಹಾಗೂ ರಾಜ್ಯದಲ್ಲಿ ಇಂಧನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ನಾಗರಿಕ ಹಾಗೂ ಆಹಾರ ಸರಬರಾಜು ಇಲಾಖೆಯು ಪೆಟ್ರೋಲ್ ಮತ್ತು ಡೀಸೆಲ್ ವಿತರಣೆಗೆ ಸಂಬಂಧಿಸಿದಂತೆ ಹೊಸ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದೆ. ಗ್ರಾಹಕರ ಹಿತದೃಷ್ಟಿಯಿಂದ ಮತ್ತು ಸುರಕ್ಷತೆಯ ಕಾರಣಗಳಿಗಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ಇಂಧನ ವಿತರಣಾ ಕೇಂದ್ರಗಳಿಗೆ ಪ್ರಮುಖ ಸೂಚನೆ ನೀಡಲಾಗಿದೆ. ಇಲಾಖೆಯ ಈ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ನಿಯಮ ಉಲ್ಲಂಘಿಸುವ ಪೆಟ್ರೋಲ್ ಬಂಕ್‌ಗಳ ವಿರುದ್ಧ ಕಠಿಣ […]

Continue Reading

ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ: ಕುರ್ಚಿ ಕಿತ್ತಾಟಕ್ಕೆ ಮೋದಿ ಲೇವಡಿ

ಸುದ್ದಿ ಸಂಗ್ರಹ ಬೆಂಗಳೂರುಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ಬೆನ್ನಲ್ಲೆ ಇಂದು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಕಾಂಗ್ರೆಸ್ ಸರ್ಕಾರದ ಆಂತರಿಕ ಭಿನ್ನಮತ ಮತ್ತು ಅಧಿಕಾರ ಹಂಚಿಕೆ ಕಿತ್ತಾಟ ಟೀಕಿಸಿ ವ್ಯಂಗ್ಯವಾಡಿದ್ದಾರೆ. ಎಚ್‌ಎಎಲ್ ಆವರಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಮೋದಿ, ರಾಜ್ಯ ಸರ್ಕಾರದ ನಾಯಕರ ನಡುವಿನ ಶೀತಲ ಸಮರವನ್ನು ಲೇವಡಿ ಮಾಡಿದರು. “ಕರ್ನಾಟಕದಲ್ಲಿ ಮುಖ್ಯಮಂತ್ರಿಗಳು ತಮ್ಮ ಕುರ್ಚಿಯಲ್ಲಿ ಎಷ್ಟು ದಿನ ಇರುತ್ತಾರೋ ಯಾರಿಗೂ ಗೊತ್ತಿಲ್ಲ. ಅಧಿಕಾರ ಹಂಚಿಕೆಯ ಈ […]

Continue Reading

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಮುಂದುವರಿಯಲಿದೆ. ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದ್ದು, ತಾಪಮಾನದಲ್ಲಿ ಅಲ್ಪ ಇಳಿಕೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ […]

Continue Reading

ಮೇ 9 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿ ಸಂಗ್ರಹ ಬೆಂಗಳೂರುಮೇ 5 ರಿಂದ 9 ರವರೆಗೆ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಕೆಲ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ. ಒಟ್ಟಾರೆ ಬೆಂಗಳೂರು ನಗರ ಸೇರಿದಂತೆ 23 ಜಿಲ್ಲೆಗಳಲ್ಲಿ ಮಳೆಯ ಸಿಂಚನವಾಗಲಿದೆ. ಮೇ 4ರಂದು ಎಲ್ಲೆಲ್ಲಿ ? ಮೇ 4 ಸೋಮವಾರದಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು […]

Continue Reading