ಮೈಸೂರು ರಿಯಲ್‌ ಎಸ್ಟೇಟ್‌ ಉದ್ಯಮಿ ಕಿಡ್ನ್ಯಾಪ್‌ ಮಾಡಿ 30 ಲಕ್ಷ ಬೇಡಿಕೆ: ಆರೋಪಿಗಳು ಅರೆಸ್ಟ್‌

ಸುದ್ದಿ ಸಂಗ್ರಹ ಮೈಸೂರು ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣವನ್ನು ಪೊಲೀಸರು ಸಿನಿಮಿಯ ಶೈಲಿಯಲ್ಲಿ ಭೇದಿಸಿ ಕಿಡ್ನ್ಯಾಪ್ ಆದ ಕೆಲವೆ ಗಂಟೆಗಳಲ್ಲಿ ಅರೋಪಿಗಳ ಹೆಡೆಮುರಿಕಟ್ಟಿದ್ದಾರೆ. ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ ವಿಜಯನಗರ ಮೂರನೇ ಹಂತದ ನಿವಾಸಿ ಲೋಕೇಶ್ ಎಂಬವರನ್ನು ಟಾಟಾ ಸುಮೋದಲ್ಲಿ ಬಂದು ಐದು ಜನರನ್ನು ಅಪಹರಣ ಮಾಡಿದ್ದರು. ಬಳಿಕ ಲೋಕೇಶ್ ಮೊಬೈಲ್‌ನಿಂದ ಅವರ ಪತ್ನಿಗೆ ಕರೆ ಮಾಡಿದ ಆರೋಪಿಗಳು 30 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಗಾಬರಿಗೊಂಡ ಲೋಕೇಶ್ ಪತ್ನಿ ವಿಜಯನಗರ ಪೊಲೀಸರಿಗೆ […]

Continue Reading

ಕೆಎಸ್‌ಸಿಎ ಚುನಾವಣೆ ಫಲಿತಾಂಶ ಪ್ರಕಟ: ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

ಸುದ್ದಿ ಸಂಗ್ರಹ ಬೆಂಗಳೂರು ಕಳೆದೆರೆಡು ತಿಂಗಳಿನಿಂದ ಚರ್ಚೆಯಲ್ಲಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ವೆಂಕಟೇಶ್ ಪ್ರಸಾದ್ ಬಣ ಭರ್ಜರಿ ಜಯ ಸಾಧಿಸಿದೆ. ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ, ಕನ್ನಡಿಗ ವೆಂಕಟೇಶ್ ಪ್ರಸಾದ್‌ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ಸುಜಿತ್ ಸೋಮಸುಂದರ್, ಖಜಾಂಚಿ ಆಗಿ ಮಧುಕರ್, ಜನರಲ್ ಸೆಕ್ರೆಟರಿಯಾಗಿ ಸಂತೋಷ್ ಮೆನನ್ ಆಯ್ಕೆ ಆಗಿದ್ದಾರೆ. ಇನ್ನು ಬ್ರಿಜೇಶ್ ಪಟೇಲ್ ಬಣದ ಬಿ.ಕೆ ರವಿ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆ ಆಗಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಒಟ್ಟು […]

Continue Reading

ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಕೇಸ್‌ಗೆ ಟ್ವಿಸ್ಟ್: ಉದ್ಯಮಿ ಕಿಡ್ನ್ಯಾಪ್ ಹಿಂದೆ ರಘು ಕೈವಾಡ

ಬೆಂಗಳೂರು: ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಉದ್ಯಮಿ ಮನೋಜ್ ಕಿಡ್ನ್ಯಾಪ್ ಹಿಂದೆ ಬೇಕರಿ ರಘು ಕೈವಾಡವಿರುವುದು ಸಾಬೀತಾಗಿದೆ. ಸಿನಿಮಾ ನಿರ್ದೇಶಕ ನಂದಕಿಶೋರ್‌ಗೆ ರೌಡಿಶೀಟರ್ ರಾಜೇಶ್ ಅಲಿಯಾಸ್ ಅಪ್ಪಿ ಮೂಲಕ ಸಾಲ ಕೊಟ್ಟಿದ್ದ ಉದ್ಯಮಿ ಮನೋಜ್‌ನ ಅಪಹರಣವಾಗಿತ್ತು. ಇದರ ಹಿಂದೆ ಬೇಕರಿ ರಘು ಪಾತ್ರವಿರುವ ಬಗ್ಗೆ ಕೇಳಿಬಂದಿತ್ತು. ಹೀಗಾಗಿ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದ ಪೊಲೀಸರು ಅಂದಿನಿಂದ ಹುಡುಕಾಟ ನಡೆಸಿದ್ದರು. ಬಳಿಕ ಮಂಡ್ಯ ಬಳಿ ಬೇಕರಿ ರಘುನನ್ನು ಬಂಧಿಸಿ, ವಿಚಾರಣೆ ನಡೆಸಿದ್ದರು. ಸದ್ಯ ಕಿಡ್ನ್ಯಾಪ್ […]

Continue Reading

ರಷ್ಯಾದ ಒಂದು ರುಬೆಲ್‌ಗೆ ಭಾರತದಲ್ಲಿ ಬೆಲೆ ಎಷ್ಟು ? ರೂಪಾಯಿ ಅಥವಾ ರುಬೆಲ್‌ ಯಾವುದರ ಮೌಲ್ಯ ಜಾಸ್ತಿ ?

ಸುದ್ದಿ ಸಂಗ್ರಹ ಬೆಂಗಳೂರು ಒಂದೆಡೆ ಡಾಲರ್‌ ಎದುರು ರೂಪಾಯಿ ಮೌಲ್ಯ ತೀವ್ರವಾಗಿ ಕುಸಿಯುತ್ತಿದೆ. 1 ಯುಎಸ್‌ ಡಾಲರ್‌ಗೆ 90 ರೂಪಾಯಿ ಗಡಿ ದಾಟಿ ರೂಪಾಯಿ ಮುಂದೆ ಸಾಗಿದೆ. ಇದರ ನಡುವೆ ಭಾರತಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಭೇಟಿ ನೀಡಿದ್ದಾರೆ. ಈ ಹಂತದಲ್ಲಿ ಭಾರತದ ರೂಪಾಯಿ ಮತ್ತು ರಷ್ಯಾದ ಕರೆನ್ಸಿಯಾಗಿರುವ ರುಬೆಲ್‌ ನಡುವೆ ನೆಟ್ಟಿಗರು ಮೌಲ್ಯದ ಲೆಕ್ಕಾಚಾರ ಮಾಡಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಭಾರತಕ್ಕೆ ಭೇಟಿ ನೀಡಿದ್ದು, ನಾಲ್ಕು ವರ್ಷಗಳ ನಂತರ ಪುಟಿನ್ ಅವರ […]

Continue Reading

ಗ್ರಾಹಕರಿಗೆ ಶಾಕ್: ನುಗ್ಗೆಕಾಯಿ ಕೆಜಿಗೆ 700 ರೂ

ಬೆಂಗಳೂರು: ಚಿಕನ್, ಮಟನ್ ರೇಟನ್ನು ನುಗ್ಗೆಕಾಯಿ ಮೀರಿಸಿಬಿಟ್ಟಿದೆ. ಕೆಜಿ ನುಗ್ಗೆಕಾಯಿ ರೇಟ್ 500 ರಿಂದ 700 ರೂಪಾಯಿಗೇರಿದೆ. ಚಳಿಗಾಲದಲ್ಲಿ ನುಗ್ಗೆಕಾಯಿ ಇಳುವರಿ ಕಡಿಮೆಯಾಗಿದ್ದು, ಬೇಡಿಕೆ ಹೆಚ್ಚಾಗಿರೋದೆ ಇದಕ್ಕೆ ಕಾರಣವಾಗಿದೆ. ಈ ಹಿಂದೆ ಕೆ.ಜಿಗೆ ಹೆಚ್ಚೆಂದರೆ 150-200 ರೂ ಮಾತ್ರ ಇರುತ್ತಿತ್ತು. ಈಗ 2 ಕಾಯಿಗೆ 100 ರೂ ಕೊಡಬೇಕಾಗಿದೆ. ಎರಡ್ಮೂರು ತಿಂಗಳು ನುಗ್ಗೆಕಾಯಿ ಬೆಲೆ ಕಡಿಮೆ ಆಗಲ್ಲ ಎನ್ನಲಾಗುತ್ತಿದೆ.

Continue Reading

ಸರ್ಕಾರಿ ಶಾಲೆಗಳ LKG-UKG ಮಕ್ಕಳಿಗೂ ಬಿಸಿಯೂಟ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ಶಾಲೆಗಳ ಎಲ್‌ಕೆಜಿ-ಯುಕೆಜಿ ಮಕ್ಕಳಿಗೂ ಬಿಸಿಯೂಟ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಆದೇಶ ಹೊರಡಿಸಿದೆ. ಡಿಸೆಂಬರ್ 1 ರಿಂದ ಅನ್ವಯವಾಗುವಂತೆ ಬಿಸಿಯೂಟ, ಕ್ಷೀರಭಾಗ್ಯ, ಮೊಟ್ಟೆ, ಬಾಳೆಹಣ್ಣು ಕೊಡಲಿದೆ. ಬಿಸಿಯೂಟ ಮಾಡುವ ಅಡುಗೆಯವರಿಗೂ ಗೌರವಧನ ನೀಡುವಂತೆ ಆದೇಶದಲ್ಲಿ ಶಿಕ್ಷಣ ಇಲಾಖೆ ಉಲ್ಲೇಸಿದೆ. ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯ ಮಾರ್ಗಸೂಚಿಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳನ್ನು ಈ ಯೋಜನೆಯ ಫಲಾನುಭವಿಗಳೆಂದು ಪರಿಗಣಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ಈ ಯೋಜನೆಯ […]

Continue Reading

ಅಣ್ಣಾವ್ರು, ಡಾ.ವಿಷ್ಣುವರ್ಧನ್‌ರೊಂದಿಗೆ ಮರೆಯಲಾಗದ ಅಭಿನಯ: ಉಮೇಶ್‌ ಇನ್ನು ನೆನಪು ಪಾತ್ರ

ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯ ಕೊಂಡಿ ಕಳಚಿದೆ. ಖ್ಯಾತ ಹಾಸ್ಯನಟ ಉಮೇಶ್ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಮೇಶ್ ಅವರಿಗೆ 80 ವರ್ಷ ವಯಸ್ಸಾಗಿತ್ತು, ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಇದೆ ಅಕ್ಟೋಬರ್ 10ರಂದು ಜಾರಿಬಿದ್ದು ಉಮೇಶ್ ಪೆಟ್ಟು ಮಾಡಿಕೊಂಡಿದ್ದರು. 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಉಮೇಶ್‌ ಬಹುತೇಕ ಹಾಸ್ಯ ಪಾತ್ರಗಳಲ್ಲೆ ಮಿಂಚಿದ್ದರು. ತನ್ನ ಕಾಮಿಡಿ ಟೈಮಿಂಗ್ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದರು. ಎಂ.ಎಸ್ […]

Continue Reading

ಮಂಗಳೂರು: ತಾಯಿ ಮೇಲೆ ಮನಬಂದಂತೆ ಹಲ್ಲೆ ನಡೆಸಿ ಮಗಳು ಕ್ರೌರ್ಯ

ಮಂಗಳೂರು: ಮಗಳೊಬ್ಬಳು ತನ್ನ ತಾಯಿಯನ್ನು ಮನಬಂದಂತೆ ಥಳಿಸಿ ಕ್ರೌರ್ಯ ಮೆರೆದಿರುವ ಘಟನೆ ಮಂಗಳೂರು ಹೊರವಲಯದ ಮೂಡುಶೆಡ್ಡೆಯಲ್ಲಿ ನಡೆದಿದೆ. ಮೂಡುಶೆಡ್ಡೆಯ ಶಿವನಗರ ಎಂಬಲ್ಲಿ ಕಳೆದ ಆರೇಳು ವರ್ಷಗಳಿಂದ ವಾಸಿಸುತ್ತಿರುವ ಉತ್ತರ ಕರ್ನಾಟಕ ಮೂಲದ ನಿರ್ಮಲಾ ಎಂಬವರ ಕುಟುಂಬದ ಕದನ ಈಗ ಬೀದಿಗೆ ಬಂದಿದೆ. ಮಾನಸಿಕವಾಗಿ ಅಸ್ವಸ್ಥರಾಗಿರುವ ನಿರ್ಮಲಾ ಮತ್ತು ಮಗಳು ನೇತ್ರಾವತಿ ನಡುವೆ ಪ್ರತಿದಿನ ಜಗಳವಾಗುತ್ತಿತ್ತು. ಕಳೆದ ಬುಧವಾರ ಜಗಳ ಮಿತಿಮೀರಿದೆ. ನಿರ್ಮಲಾ ಪ್ರತಿದಿನ ಮೂಡುಶೆಡ್ಡೆ ಗ್ರಾಮ‌ ಪಂಚಾಯಿತಿಗೆ ಆಗಮಿಸಿ ಮಗಳ ವಿರುದ್ಧ ದೂರು ನೀಡುತ್ತಿದ್ದರು. ಪಂಚಾಯಿತಿಯವರು ತಾಯಿಗೆ […]

Continue Reading

ಇನ್‌ಸ್ಟಾದಲ್ಲಿ ಡಾಕ್ಟರ್‌ ಆಗೋ ಹುಡುಗಿ ಪರಿಚಯ: ಪ್ರೀತಿ, ಮದುವೆ ಹೆಸರಲ್ಲಿ ಅರ್ಧ ಕೆಜಿ ಚಿನ್ನಕ್ಕೆ ಕನ್ನ ಹಾಕಿದ್ದ ಆರೋಪಿ ಅರೆಸ್ಟ್‌

ಬೆಂಗಳೂರು: ಇನ್‌ಸ್ಟಾದಲ್ಲಿ ವಿದ್ಯಾರ್ಥಿಯನ್ನು ಪರಿಚಯ ಮಾಡಿಕೊಂಡು, ಪ್ರೀತಿ-ಮದುವೆ ಅಂತ ಆಸೆ ತೋರಿಸಿ ಅರ್ಧ ಕೆಜಿ ಚಿನ್ನಕ್ಕೆ ಕನ್ನ ಹಾಕಿದ್ದ ನಕಲಿ ಬ್ಯುಸಿನೆಸ್‌ಮೆನ್ ಪೊಲೀಸರು ಬಂಧಿಸಿದ್ದಾರೆ. ಜನಾರ್ದನ ಅಲಿಯಾಸ್‌ ಸಿದ್ಧಾರ್ಥ್‌ ವೀರ್‌ ಬಂಧಿತ ಆರೋಪಿ. ನೀಟ್‌ಗೆ ತಯಾರಿ ನಡೆಸುತ್ತಿದ್ದ ಹುಡುಗಿಯನ್ನು ಈತ ಇನ್‌ಸ್ಟಾದಲ್ಲಿ ಪರಿಚಯ ಮಾಡಿಕೊಂಡಿದ್ದ. ಮದುವೆ ಆಗ್ತಿನಿ ಅಂತ ಯುವತಿ ಮನೆಗೆ ಬಂದವನು, ಅರ್ಧ ಕೆಜಿ ಚಿನ್ನ ಕಳ್ಳತನ ಮಾಡಿದ್ದ. ಈಗ ಜ್ಞಾನಭಾರತಿ ಠಾಣೆ ಪೊಲೀಸರ ಅತಿಥಿಯಾಗಿದ್ದಾನೆ. ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ರಿಕ್ವೆಸ್ಟ್ ಕಳಿಸಿದ್ದ ಆರೋಪಿ ಜನಾರ್ದನ್, ತಾನು‌ […]

Continue Reading

ಸುರಕ್ಷತೆ ಇಲ್ಲದ ಹೊರ ರಾಜ್ಯಗಳ ಖಾಸಗಿ, ಸರ್ಕಾರಿ ಬಸ್‌ಗಿಲ್ಲ ಕರ್ನಾಟಕ ಪ್ರವೇಶ

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್‌ ಬಳಿ ಬಸ್‌ ಬೆಂಕಿಗೆ ಆಹುತಿಯಾದ ಘಟನೆಯ ಬಳಿಕ ಬಸ್‌ಗಳಲ್ಲಿ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ತುರ್ತು ನಿರ್ಗಮನ ಬಾಗಿಲು ಇಲ್ಲದ ಹೊರ ರಾಜ್ಯಗಳ ಬಸ್‌ಗಳ ಮೇಲೆ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಚಿಂತನೆ ನಡೆಸಿದೆ. ಅಖಿಲ ಭಾರತ ಪರವಾನಗಿ ಹೊಂದಿರುವ ಬಸ್‌ಗಳು ದೇಶದ ವಿವಿಧೆಡೆಯಿಂದ ರಾಜ್ಯಕ್ಕೆ ಬರುತ್ತಿವೆ. ಅವುಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮಗಳಿರುವುದಿಲ್ಲ. ಕರ್ನಾಟಕದಲ್ಲಿ ಇರುವ ಸುರಕ್ಷತಾ ನಿಯಮಗಳನ್ನು ಆ ಬಸ್‌ಗಳಲ್ಲಿಯೂ ಅಳವಡಿಸಬೇಕು. ಏಕಾಏಕಿ ಕ್ರಮ ಕೈಗೊಳ್ಳುವ ಬದಲು ಆರಂಭಿಕ […]

Continue Reading